ಗರ್ಭಿಣಿ ಹಸುವನ್ನು ಮಾಂಸ ಮಾಡಿ ಕಳೆಬರವನ್ನು ಉಪೇಕ್ಷಿಸಿ ಪರಾರಿಯಾದ ಕಟುಕರಿಗೆ ತಕ್ಕ ಶಾಸ್ತಿ ನೀಡಲು ದೇವರ ಮೊರೆ ಹೋದ ಕುಟುಂಬಸ್ಥರು
ಮಂಜೇಶ್ವರ: ಕಟುಕರು ಹಟ್ಟಿಯಿಂದ ಗರ್ಭಿಣಿ ದನವನ್ನು ರಾತ್ರೋರಾತ್ರಿ ಕದ್ದೋಯ್ದು ಪರಿಸರದಲ್ಲೆ ಮಾಂಸ ಮಾಡಿ ಕಳೆಬರವನ್ನು ಸ್ಥಳದಲ್ಲೇ ಉಪೇಕ್ಷಿಸಿ ಪರಾರಿಯಾದ ಘಟನೆ ಮಂಜೇಶ್ವರ ಹೊಸಬೆಟ್ಟುವಿನಲ್ಲಿ ನಡೆದಿದೆ. ಪ್ರಕರಣ ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ಮನೆ ಮಂದಿ ಇದೀಗ ದನ ಕದ್ದ ಕಟುಕರಿಗೆ ತಕ್ಕ ಶಾಸ್ತಿಯಾಗಲೆಂದು ಕುಂಬ್ಳೆ ಶ್ರೀ ಗೋಪಾಲಕೃಷ್ಣ ದೇವರಲ್ಲಿ ಪ್ರಾರ್ಥಸಿದ್ದಾರೆ. ಮಂಜೇಶ್ವರ ಗ್ರಾಮ ಪಂಚಾಯತ್ ಗೊಳಪಟ್ಟ 7 ನೇ ವಾರ್ಡ್ ಹೊಸಬೆಟ್ಟುವಿನಲ್ಲಿ ಈ ಘಟನೆ ನಡೆದಿದೆ. ಇಲ್ಲಿನ “ಗಿರೀಶ್ ನಿಲಯ” ನಿವಾಸಿ, ಪ್ರಗತಿಪರ ಕೃಷಿಕರೂ, ಹೈನುಗಾರಿಕೆ ವೃತ್ತಿಯಲ್ಲಿ…