ತಲೆಯ ನೋವಿನಿಂದ ಬಳಲುತ್ತಿದ್ದ ವೃದ್ಧ ಗುಂಡು ಹಾರಿಸಿಕೊಂಡು ಆತ್ಮಹತ್ಯೆ
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನಿಟ್ಟೂರು ಸಮೀಪದ ತಟ್ಟೆಕೊಡ್ಲು ಗ್ರಾಮದಲ್ಲಿ 85 ವರ್ಷದ ವೃದ್ಧರೊಬ್ಬರು ಗನ್ನಿಂದ ಗುಂಡು ಹಾರಿಸಿಕೊಂಡು ಮೃತಪಟ್ಟಿರುವ ಘಟನೆ ಬೆಳಕಿಗೆ ಬಂದಿದೆ. ಮೃತರನ್ನು ತಟ್ಟೆಕೊಡ್ಲು ರಾಮಚಂದ್ರ ರಾವ್ (85) ಎಂದು ಗುರುತಿಸಲಾಗಿದೆ. ಮಂಗಳವಾರ ಮಧ್ಯರಾತ್ರಿ ಸುಮಾರು 1.30ರ ವೇಳೆಗೆ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಮಾಹಿತಿಯ ಪ್ರಕಾರ, ರಾಮಚಂದ್ರ ರಾವ್ ಅವರು ತಮ್ಮ ಬಳಿಯಿದ್ದ ಸಿಂಗಲ್ ಬ್ಯಾರಲ್ ಗನ್ ಬಳಸಿ ಕುತ್ತಿಗೆ ಸಮೀಪ ಗುಂಡು ಹಾರಿಸಿಕೊಂಡಿದ್ದು, ಪರಿಣಾಮ ತಲೆಯ ಭಾಗ ತೀವ್ರವಾಗಿ ಛಿದ್ರಗೊಂಡಿದೆ ಎಂದು…