ಮುಂಗಾರಿಗೆ ದ.ಕ. ಜಿಲ್ಲಾಡಳಿತ ಸಜ್ಜು: 115 ಕಾಳಜಿ ಕೇಂದ್ರಗಳ ಸಿದ್ಧತೆ
ಮಂಗಳೂರು : ಮುಂಗಾರು ಈಗಾಗಲೇ ಕೇರಳಕ್ಕೆ ಪ್ರವೇಶಿಸಿದ್ದು ಜೂ. 4ರಿಂದ ಕರಾವಳಿಗೂ ಪ್ರವೇಶ ವಾಗುವ ಸಾಧ್ಯತೆ ಇರುವುದರಿಂದ ಕೃತಕ ನೆರೆ, ಪ್ರವಾಹ ಸೇರಿದಂತೆ ಪ್ರಾಕೃತಿಕ ವಿಕೋಪದ ಪರಿಸ್ಥಿತಿಗಳನ್ನು ಎದುರಿಸಲು ಜಿಲ್ಲಾಡಳಿತ ಸಕಲ ಸಿದ್ಧತೆ ನಡೆಸಿದೆ ಎಂದು ದ.ಕ. ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ತಿಳಿಸಿದರು. ಪಡೀಲ್ನ ಪ್ರಜಾಸೌಧದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ ಅವರು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು 115 ಕಾಳಜಿ ಕೇಂದ್ರಗಳನ್ನು ಗುರುತಿಸಲಾಗಿದೆ. ತಹಶೀಲ್ದಾರ್ ಹಂತದಲ್ಲಿ ವಿವಿಧ ತಾಲೂಕುಗಳಲ್ಲಿ ತುರ್ತು ಪರಿಹಾರ ಕ್ರಮಗಳಿಗಾಗಿ ಒಟ್ಟು 3.25 ಕೋಟಿ…