ಕರ್ನಾಟಕದಿಂದ ಕೇರಳಕ್ಕೆ ಅನಧಿಕೃತವಾಗಿ ಸಾಗಾಟ ಮಾಡುತಿದ್ದ ನಿಷೇಧಿತ ತಂಬಾಕು ಉತ್ಪನ್ನಗಳನ್ನು ಸೆರೆ ಹಿಡಿದ ಅಬಕಾರಿ ಪೊಲೀಸರು.ಇಬ್ಬರ ಬಂಧನ .

ಮಂಜೇಶ್ವರ : ಮಂಜೇಶ್ವರ ಅಬಕಾರಿ ಇಲಾಖೆ ಕರ್ನಾಟಕದಿಂದ ಕೇರಳಕ್ಕೆ ಅನಧಿಕೃತವಾಗಿ ಸಾಗಾಟ ಮಾಡುತಿದ್ದ ನಿಷೇಧಿತ ತಂಬಾಕು ಉತ್ಪನ್ನಗಳನ್ನು ಸಾಗಿಸುತ್ತಿದ್ದ ಇಬ್ಬರನ್ನು ಬಂಧಿಸಿದ್ದಾರೆ. ಆಫ್ಸಲ್ (32) ಹಾಗೂ ಅಶ್ರಫ್ (30) ಎಂಬ ಇಬ್ಬರನ್ನು ಬುಧವಾರ ಮುಂಜಾನೆ 5 ಗಂಟೆ ಸುಮಾರಿಗೆ ವಾಮಂಜೂರು ಚೆಕ್‌ಪೋಸ್ಟ್ ನಲ್ಲಿ ಕಾರು ತಪಾಸಣೆ ವೇಳೆ ಸೆರೆ ಹಿಡಿಯಲಾಗಿದೆ.. ಸಾಗಾಟ ಮಾಡುತ್ತಿದ್ದ ಕಾರಿನಿಂದ 214 ಕಿಲೋ ತೂಕದ ನಿಷಿದ್ಧ ತಂಬಾಕು ಉತ್ಪನ್ನಗಳು ಪತ್ತೆಯಾಗಿದ್ದು, ಇವುಗಳ ಮೌಲ್ಯ ಸುಮಾರು ರೂ. 2 ಲಕ್ಷ ಎಂದು ಅಂದಾಜಿಸಲಾಗಿದೆ.ಇದೇ ರೀತಿ…

Read More

ಮತಗಳ ಲೂಟಿ ವಿಚಾರ ಪುತ್ತಿಗೆ ಮಂಡಲ ಯುವ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ಹಾಗೂ ಚುನಾವಣಾ ಆಯೋಗಕ್ಕೆ ಪತ್ರ.

ಮತಗಳ ಲೂಟಿ ವಿಷಯದಲ್ಲಿ ಚುನಾವಣಾ ಆಯೋಗದ ಪಾರದರ್ಶಕತೆಯನ್ನು ಕೋರಿ ಲೋಕಸಭೆಯ ವಿರೋಧ ಪಕ್ಷ ನಾಯಕ ಶ್ರೀ ರಾಹುಲ್ ಗಾಂಧಿ ಅವರು ಎತ್ತಿದ ಐದು ಪ್ರಶ್ನೆಗಳಿಗೆ ಉತ್ತರಗಳನ್ನು ಕೋರಿ ಪುತ್ತಿಗೆ ಮಂಡಲಂ ಯುವ ಕಾಂಗ್ರೆಸ್ ಚುನಾವಣಾ ಆಯುಕ್ತರಿಗೆ ಪುತ್ತಿಗೆ ಅಂಚೆ ಕಛೇರಿಯಿಂದ ಪತ್ರ ಕಳುಹಿಸಿ ಪ್ರತಿಭಟನೆ ಮಾಡಿದರು . ಯುವ ಕಾಂಗ್ರೆಸ್ ಪುತ್ತಿಗೆ ಮಂಡಲ ಅಧ್ಯಕ್ಷ ದಯಾನಂದ ಬಾಡೂರು ಅವರ ಅಧ್ಯಕ್ಷತೆಯಲ್ಲಿ ಜರಗಿದ ಕಾರ್ಯಕ್ರಮವನ್ನು ಪಂಚಾಯತ್ ಸದಸ್ಯ ಕೇಶವ SR ಉದ್ಘಾಟಿಸಿದರು.ನೇತಾರರಾದ ಮಂಜೇಶ್ವರ ಮಂಡಲ ಅಧ್ಯಕ್ಷ ಜುನೈದ್ ಉರ್ಮಿ,…

Read More

ಮನೆಯ ಆವರಣ ಗೋಡೆಗೆ ನಿಯಂತ್ರಣ ತಪ್ಪಿ ಢಿಕ್ಕಿ ಹೊಡೆದ ಸ್ಕೂಟರ್ -ಸವಾರ ಸಾವು

ಉಳ್ಳಾಲ, ಆ. 13 : ಸ್ಕಿಡ್ ಆಗಿ ನಿಯಂತ್ರಣ ತಪ್ಪಿದ ಸ್ಕೂಟರೊಂದು ರಸ್ತೆ ಬದಿಯ ಮನೆಯ ಆವರಣ ಗೋಡೆಗೆ ಢಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡ ಸವಾರ ಸಾವನ್ನಪ್ಪಿದ ಘಟನೆ ಆಗಸ್ಟ್ 12ರ ರಾತ್ರಿ ಸೋಮೇಶ್ವರ ಪುರಸಭಾ ವ್ಯಾಪ್ತಿಯ ಅಂಬಿಕಾ ರಸ್ತೆ ಎಂಬಲ್ಲಿ ಸಂಭವಿಸಿದೆ. ಮೃತ ವ್ಯಕ್ತಿಯನ್ನು ಸೋಮೇಶ್ವರ ಪುರಸಭಾ ವ್ಯಾಪ್ತಿಯ ಪಿಲಾರು ಮಹಾಲಕ್ಷ್ಮೀ ಮಂದಿರ ಬಳಿಯ ನಿವಾಸಿ ರಾಘವೇಂದ್ರ ಸಾಲ್ಯಾನ್ ಯಾನೆ ರಘು (44) ಎಂದು ಗುರುತಿಸಲಾಗಿದೆ.ಖಾಸಗಿ ಕಂಪನಿಯೊಂದರಲ್ಲಿ ಇಲೆಕ್ಟಿಕಲ್ ಗುತ್ತಿಗೆದಾರರಾಗಿದ್ದ ರಾಘವೇಂದ್ರ ರಾಘವೇಂದ್ರ ಅವರು ಆ.12ರ…

Read More

ಕುಂಬಳೆ ರೈಲ್ವೆ ನಿಲ್ದಾಣ ಪರಿಸರ ಸ್ವಚ್ಛಗೊಳಿಸಿದ ಮೂಹಿಮತ್ ಶಾಲಾ ವಿದ್ಯಾರ್ಥಿಗಳು.

ಕುಂಬಳೆ: ಕುಂಬಳೆ ರೈಲು ನಿಲ್ದಾಣ ಸಮೀಪವಿದ್ದ ಕಾಡು, ಪೊದೆಗಳನ್ನು ಪುತ್ತಿಗೆ ಮೂಹಿಮತ್ ಹೈಯರ್ ಸೆಕೆಂಡರಿ ಶಾಲೆಯ ಲ್ಯಾಂಗ್ವೇಜ್ ಕ್ಲಬ್ ನ ವಿದ್ಯಾರ್ಥಿಗಳು ಸಂಪೂರ್ಣ ಸ್ವಚ್ಛಗೊಳಿಸಿದರು. ನಿಲ್ದಾಣ ಪರಿಸರದಲ್ಲಿ ಸುತ್ತಲೂ ಕಾಡು ಪೊದೆ ಅವರಿಸಿದ ಕಾರಣ ಪ್ರಯಾಣಿಕರಿಗೆ ನಿಲ್ಲಲು ಕಷ್ಟವಾಗುತ್ತಿತ್ತು. ಇದನ್ನು ಮನಗಂಡು ಈ ವಿದ್ಯಾರ್ಥಿಗಳು ಸ್ವಯಂ ಪ್ರೇರಿತರಾಗಿ ಸ್ವಚ್ಛಗೊಳಿಸಿದ್ದಾರೆ. ವಿದ್ಯಾರ್ಥಿಗಳ ಈ ಕಾರ್ಯವನ್ನು ರೈಲ್ವೆ ಅಧಿಕಾರಿಗಳು ಮತ್ತು ಪ್ರಯಾಣಿಕರು ಶ್ಲಾಗಿಸಿದರು. ವಿದ್ಯಾರ್ಥಿಗಳ ಜೊತೆ ಶಿಕ್ಷಕರಾದ ದೇವರಾಜ್, ಆಶಾಲತಾ, ರಾಜೇಶ್ವರಿ ಜೊತೆಗಿದ್ದರು.

Read More

ಸ್ಥಳೀಯಾಡಳಿತ ಚುನಾವಣೆ ವಾರ್ಡ್ ವಿಭಜನೆ ಪೂರ್ಣ -ಕಾಸರಗೋಡಿನಲ್ಲಿ ವಾರ್ಡುಗಳ ಸಂಖ್ಯೆ 725ಕ್ಕೆ ಏರಿಕೆ

ಕಾಸರಗೋಡು : ಸ್ಥಳೀಯಾಡಳಿತ ಚುನಾವಣಾ ಪೂರ್ವಭಾವಿ ವಾರ್ಡು ವಿಭಜನೆ ಪ್ರಕ್ರಿಯೆ ಅಂತಿಮಗೊಂಡಿದೆ. ಇದರಂತೆ ಕಾಸರಗೋಡು ಜಿಲ್ಲೆಯಲ್ಲಿ ವಾರ್ಡುಗಳ ಸಂಖ್ಯೆ 725ಕ್ಕೇರಿದೆ. ಈ ಹಿಂದೆ ಜಿಲ್ಲೆಯಲ್ಲಿ 664 ವಾರ್ಡುಗಳಿದ್ದುವು. ವಾರ್ಡು ವಿಭಜನೆಯ ಬಳಿಕ ನೂತನವಾಗಿ 61ವಾರ್ಡುಗಳು ಹೆಚ್ಚಳಗೊಂಡಿವೆ. ನೂತನ ವಾರ್ಡುಗಳ ಡಿಜಿಟಲ್ ಭೂಪಟವನ್ನೂ ಪ್ರಕಟಿಸಲಾಗಿದೆ. ಜಿಲ್ಲೆಯಲ್ಲಿದ್ದ 83 ಬ್ಲಾಕ್ ಪಂ. ವಾರ್ಡುಗಳ ಸಂಖ್ಯೆ 92ಕ್ಕೇರಿದೆ. 113ನಗರಸಭಾ ವಾರ್ಡುಗಳು 120ಕ್ಕೇರಿವೆ. 17ಜಿ.ಪಂ.ವಾರಡುಗಳು 18 ಆಗಿವೆ. ಒಟ್ಟು ಜಿಲ್ಲೆಯ ತ್ರಿಸ್ತರ ಪಂಚಾಯತಿನಲ್ಲಿ ಹಿಂದೆ 877ವಾರ್ಡುಗಳಿದ್ದುವು. ಈಗ ಇದು 955ಕ್ಕೇರಿದೆ. ಒಟ್ಟು ಕೇರಳದಲ್ಲಿ…

Read More

ಶ್ರೀ ಚಾಮುಂಡೇಶ್ವರಿ ಭಜನಾ ಮಂಡಳಿ (ರಿ) ಪಾವೂರು.ಮೊಸರು ಕುಡಿಕೆ ಉತ್ಸವ 15 ರಂದು.

ಪಾವೂರು: ಶ್ರೀ ಚಾಮುಂಡೇಶ್ವರಿ ಭಜನಾ ಮಂಡಳಿ (ರಿ) ಬಜಾಲ್, ಪಾವೂರು ಹಾಗೂ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ಪಾವೂರು ಇದರ ಜಂಟಿ ಆಶ್ರಯದಲ್ಲಿ ತಾರೀಕು 15/೦8/25ರಂದು ಶುಕ್ರವಾರ ಶ್ರೀ ಚಾಮುಂಡೇಶ್ವರಿ ಕ್ಷೇತ್ರದ ವಠಾರದಲ್ಲಿ ಮೊಸರು ಕುಡಿಕೆ ಉತ್ಸವ ನಡೆಯಲಿರುವುದು. ಬೆಳಿಗ್ಗೆ 10 ಗಂಟೆಗೆ ಮೊಸರು ಕುಡಿಕೆ ಕಾರ್ಯಕ್ರಮವನ್ನು ಶ್ರೀ ಚಾಮುಂಡೇಶ್ವರಿ ಕ್ಷೇತ್ರದ ಆಡಳಿತ ಸಮಿತಿಯ ಅಧ್ಯಕ್ಷರಾದ ಶ್ರೀ ಮನೋಹರ್ ಶೆಟ್ಟಿ ಕೆದುಂಬಾಡಿ ಉದ್ಘಾಟಿಸಲಿರುವರು. ನಂತರ ವಿವಿಧ ಆಟೋಟ ಸ್ಪರ್ಧೆಗಳು ನಡೆಯಲಿರುವುದು. ಸಂಜೆ 5ಕ್ಕೆ ಸಮರೋಪ ಸಭಾ ಕಾರ್ಯಕ್ರಮದಲ್ಲಿ…

Read More

‘ಅಪ್ಪೆ ಪಾಷಣಮೂರ್ತಿಗ್ ಸುಗಿಪುದ ತುಡರ ಬೊಲ್ಪು’ ತುಳು ಭಕ್ತಿಗೀತೆ ಶೀಘ್ರದಲ್ಲಿ ಬಿಡುಗಡೆ

‘ಸು ಫ್ರಮ್ ಸೊ’ ಖ್ಯಾತಿಯ ಪುಷ್ಪರಾಜ್ ಬೊಳ್ಳಾರ್ ಅಭಿನಯದ ಶಿವಂ ಕ್ರಿಯೇಷನ್ಸ್ ಅರ್ಪಣೆ ಮಾಡುವ, ಶೆಟ್ಟಿ ಅಜಯ್ ರಾಜ್ ಸಾಹಿತ್ಯದ,ಭರತ್ ಗಟ್ಟಿ ಗಾಯನದ,ಉದಯ್ ಕುಮಾರ್ ಬೇಕೂರು ನಿರ್ದೇಶನದ ‘ಅಪ್ಪೆ ಪಾಷಣಮೂರ್ತಿಗ್ ಸುಗಿಪುದ ತುಡರ ಬೊಲ್ಪು’ ತುಳು ಭಕ್ತಿಗೀತೆ ಶೀಘ್ರದಲ್ಲಿ ಬಿಡುಗಡೆ ಗೊಳ್ಳಲಿದೆ.ರಕ್ಷಿತ್ ಇದರ ಸಂಕಲನ ಮತ್ತು ಛಾಯಾಗ್ರಹಣ ಮಾಡಿದ್ದಾರೆ.

Read More

ಮಂಜೇಶ್ವರ-ವಾಮಂಜೂರು ಹೆದ್ದಾರಿ: ಚೆಕ್‌ಪೋಸ್ಟ್ ಬಳಿ ಸೇತುವೆ ಭಾಗದಲ್ಲಿ ಧ್ವಿಪಥ ಮಾತ್ರ – ಸಾರ್ವಜನಿಕರ ಆಕ್ರೋಶ

ಮಂಜೇಶ್ವರ – ನೂತನವಾಗಿ ನಿರ್ಮಾಣಗೊಂಡ ತಲಪಾಡಿ–ಕಾಲಿಕಡವ್ ರಾಷ್ಟ್ರೀಯ ಹೆದ್ದಾರಿ (ಷಟ್ಪಥ ರಸ್ತೆ)ಯ ಮಂಜೇಶ್ವರ ವಾಮಂಜೂರು ಚೆಕ್‌ಪೋಸ್ಟ್ ಸಮೀಪದ ಸೇತುವೆ ಭಾಗವನ್ನು ಮಾತ್ರ ಧ್ವಿಪಥ ರಸ್ತೆಗೆ ಸೀಮಿತಗೊಳಿಸಿ ನಿರ್ಮಿಸಿರುವುದು ಸಾರ್ವಜನಿಕರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ಭಾಗದಲ್ಲಿ ಸರ್ವೀಸ್ ರಸ್ತೆ ಕೂಡಾ ಅಳವಡಿಕೆ ಮಾಡದೇ ಇರುವ ನಿರ್ಲಕ್ಷ್ಯ ಕಾಮಗಾರಿ ಜನರ ದಿನನಿತ್ಯದ ಸಂಚಾರಕ್ಕೆ ಭಾರೀ ತೊಂದರೆಯನ್ನು ಉಂಟುಮಾಡಿದೆ. ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಶ್ರೇಣಿಯೊಳಗೆ ಹೆಚ್ಚಿನ ಭಾಗಗಳನ್ನು ಷಟ್ಪಥ ರೀತಿಯಲ್ಲಿ ರೂಪಿಸಲಾಗಿದ್ದು, ಆದರೆ ಮಂಜೇಶ್ವರ ಚೆಕ್‌ಪೋಸ್ಟ್ ಸಮೀಪದ ಸೇತುವೆ ಪ್ರದೇಶದಲ್ಲಿ…

Read More

ದ.ಕ ಜಿಲ್ಲೆಯಲ್ಲಿ ಹಿಂದೂ ವಿರೋಧಿ ಕಾರ್ಯಪಡೆ ವ್ಯಾಪಕ . ಶಾಸಕ ವೇದವ್ಯಾಸ ಕಾಮತ್ ಆರೋಪ.

ದ.ಕ ಜಿಲ್ಲೆಯನ್ನು ಕೇಂದ್ರವಾಗಿರಿಸಿಕೊಂಡು ರಾಜ್ಯ ಕಾಂಗ್ರೆಸ್ ಸರ್ಕಾರ ಮಂಗಳೂರಿನಲ್ಲಿ ಅಸ್ಥಿತ್ವಕ್ಕೆ ತಂದಿರುವ ಕೋಮು ವಿರೋಧಿ ಕಾರ್ಯಪಡೆಯು ಹಿಂದೂ ವಿರೋಧಿ ಕಾರ್ಯಪಡೆಯಾಗಿ ಕಾರ್ಯನಿರ್ವಹಿಸುತ್ತಿರುವಂತೆ ಭಾಸವಾಗುತ್ತಿದೆ ಎಂದು ಶಾಸಕ ವೇದವ್ಯಾಸ ಕಾಮತ್ ರವರು ಅಧಿವೇಶನದಲ್ಲಿ ಪ್ರಸ್ತಾಪಿಸಿದರು. ಕರಾವಳಿ ಭಾಗದಲ್ಲಿ ಗೋಕಳ್ಳರು ರಾಜಾರೋಷವಾಗಿ ತಲವಾರು ಸಹಿತ ಹಟ್ಟಿಗೆ ನುಗ್ಗಿ ಗೋವುಗಳನ್ನು ಕದ್ದುಕೊಂಡು ಹೋಗಿ ಹತ್ಯೆ ಮಾಡುತ್ತಿದ್ದಾರೆ. ಲವ್ ಜಿಹಾದ್ ಪ್ರಕರಣಗಳು ಹೆಚ್ಚುತ್ತಿವೆ. ಅತೀ ಹೆಚ್ಚು ಶಿಕ್ಷಣ ಸಂಸ್ಥೆಯಿರುವ ಮಂಗಳೂರು, ಕೇರಳದ ಗಡಿಭಾಗವಾದ್ದರಿಂದ ವ್ಯಾಪಕವಾಗಿ ಡ್ರಗ್ಸ್ ಪ್ರಕರಣಗಳು ಕಂಡು ಬರುತ್ತಿವೆ. ಇವುಗಳೇ ಇಲ್ಲಿನ…

Read More

ಪಿಲಿಕುಳ ಜೈವಿಕ ಉದ್ಯಾನವನದ ಪ್ರಾಣಿಗಳಿಗೆ ಪೂರೈಸುವ ಮಾಂಸಕ್ಕೆ ಕೊಳೆತ ಮತ್ತು ವಿಷಪೂರಿತ ಮಾಂಸ ಪೂರೈಕೆಯ ಆರೋಪ .ದೂರು ದಾಖಲು.

ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದ ಪ್ರಾಣಿಗಳಿಗೆ ಪೂರೈಸುವ ಮಾಂಸಕ್ಕೆ ಕೊಳೆತ ಮತ್ತು ವಿಷಪೂರಿತ ಮಾಂಸವನ್ನು ಬೆರೆಸಿ ಪ್ರಾಣಿಗಳನ್ನು ಕೊಲ್ಲುವ ಹುನ್ನಾರ ನಡೆದಿದೆ ಎಂದು ಆರೋಪಿಸಿ ಪಿಲಿಕುಳ ಜೈವಿಕ ಉದ್ಯಾನದ ನಿರ್ದೇಶಕ ಡಾ.ಪ್ರಶಾಂತ್ ಪೈಯವರು ಕಾವೂರು ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ಸದ್ಯ ಹೊಸ ಗುತ್ತಿಗೆದಾರರೊಬ್ಬರು ಉದ್ಯಾನವನದ ಪ್ರಾಣಿಗಳಿಗೆ ಮಾಂಸ ಪೂರೈಕೆಯ ಗುತ್ತಿಗೆ ಪಡೆದಿದ್ದಾರೆ. ಮಾಂಸಕ್ಕೆ ಕೊಳೆತ ಅಥವಾ ವಿಷಪೂರಿತ ಮಾಂಸ ಬೆರೆಸಿ ಹೊಸ ಟೆಂಡರುದಾರರ ಮಾಂಸವನ್ನು ತಿರಸ್ಕರಿಸುವಂತೆ ಮಾಡುವ ಹುನ್ನಾರವನ್ನು ಹಿಂದಿನ ಟೆಂಡರುದಾರ ಮಾಡಿದ್ದಾನೆಂದು ಆತನ ನೌಕರನೊಬ್ಬ…

Read More
error: Content is protected !!