ಮಂಚಿ ಕೊಳ್ನಾಡು ಪ್ರೌಢಶಾಲೆಯಲ್ಲಿ – ಬಂಟ್ವಾಳ ತಾಲೂಕು ಮಟ್ಟದ ಶಾಲಾ ಪ್ರಾರಂಭೋತ್ಸವ

ಜೂನ್ – 1 ಶಾಲಾರಂಭ… ಬಣ್ಣದ ಕನಸುಗಳನ್ನು ಹೊತ್ತ ಪುಟಾಣಿಗಳ ಕಣ್ಣುಗಳಲ್ಲಿ ಏನೋ ಒಂದು ಆನಂದ.. ಉತ್ತಮ ಕಲಿಕೆ ಉಜ್ವಲ ಭವಿಷ್ಯವೆನ್ನುವ ಧ್ಯೇಯ ವಾಕ್ಯದಡಿಯಲ್ಲಿ ರಾಜ್ಯದ ಎಲ್ಲೆಡೆ ಶಾಲಾ ಶೈಕ್ಷಣಿಕ ವರ್ಷದ ಆರಂಭಕ್ಕೆ ಮುನ್ನುಡಿ ಬರೆಯಿತು. ಸಂಭ್ರಮದ ಕಲಿಕೆಗೆ ಸ್ವಾಗತಿಸಿದ ಮಂಚಿ – ಕೊಳ್ನಾಡು ಪ್ರೌಢಶಾಲೆಯಲ್ಲಿ ಇಂದು ಮಕ್ಕಳದೇ ಕಲರವ. ಇಲ್ಲಿ ಆಯೋಜಿಸಲಾದ ಬಂಟ್ವಾಳ ತಾಲೂಕು ಮಟ್ಟದ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿದ ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ಮಾಲತಿ ಮಾತನಾಡಿ, “ಮಕ್ಕಳ ಮನದಲ್ಲಿ ಬಿತ್ತಿದ ಉಜ್ವಲ…

Read More

ಕಟ್ಟೆ ಪ್ರೆಂಡ್ಸ್ (ರಿ) ನೇತೃತ್ವದಲ್ಲಿ ಎಸ್‌ಸಿ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

ಕಟ್ಟೆ ಪ್ರೆಂಡ್ಸ್ (ರಿ)& ಅಡ್ಕ ಕಟ್ಟೆ sc ಗ್ರಾಮ ಕ್ಷೇಮ ಸಮಿತಿ ನೆತೃತ್ವದಲ್ಲಿ scವಿಭಾಗದ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ ಕಾರ್ಯಕ್ರಮ ನಡೆಯಿತು ವಿಜಯ್ ಕುಮಾರ್ ರವರ ಅಧ್ಯಕ್ಷತೆಯಲ್ಲಿ ದೈವದ ಪಾತ್ರಿ ಮಾದವ ಅಡ್ಕ, ರಾಧಾಕೃಷ್ಣ ಕಾರ್ನವರು ಅಡ್ಕ ದೀಪ ಬೆಳಗಿಸಿ ಉದ್ಘಾಟಿಸಿದರು .ಸಾಮೂಹಿಕ ವಂದೆ ಮಾತರಂ ಆಲಾಪಿಸಲಾಯಿತು. ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಬಾಲಕೃಷ್ಣ ವಿ ಎನ್ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು ಉತ್ತಮ ಸಂಸ್ಕಾರವಂತ ವಿದ್ಯಾರ್ಥಿಗಳಾಗಿ ಎಲ್ಲಾ ಶಾಲಾ ವಿಷಯದಲ್ಲಿ ಮೂಂಚೂನಿಯಲ್ಲಿ ನಾವಿರ ಬೇಕು ಎಂದು ಕರೆಯಿತ್ತರು…

Read More

ಪಂಚಾಯತ್ ರಾಜ್ ಉಳಿವಿಗಾಗಿ ಬಂಟ್ವಾಳದಲ್ಲಿ ನಡೆದ ಪ್ರತಿಭಟನೆ ಯಶಸ್ವಿ: ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದ – ಕುಳಾಲು ಸುಭಾಶ್ಚಂದ್ರ ಶೆಟ್ಟಿ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಆಶ್ರಯದಲ್ಲಿ, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ದ.ಕ. ವತಿಯಿಂದ ಪಾಣೆಮಂಗಳೂರು ಬ್ಲಾಕ್ ಹಾಗೂ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಸಹಕಾರದೊಂದಿಗೆ, ಹಿರಿಯ ನಾಯಕರೂ ಮಾಜಿ ಸಚಿವರಾದ ಶ್ರೀ ಬಿ. ರಮನಾಥ ರೈ ಹಾಗೂ ಜಿಲ್ಲಾದ್ಯಕ್ಷರಾದ ಹರೀಶ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ಕೇಂದ್ರ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಬೃಹತ್ ಪ್ರತಿಭಟನೆ ಯಶಸ್ವಿಯಾಗಿ ನಡೆಯಿತು.ಪಂಚಾಯತ್ ರಾಜ್ ಸಂಸ್ಥೆಗಳನ್ನು ಆರ್ಥಿಕವಾಗಿ ದುರ್ಬಲಗೊಳಿಸುವ ಕೇಂದ್ರ ಸರ್ಕಾರದ ಕ್ರಮಗಳು ಹಾಗೂ ವಿವಿಧ ವೈಫಲ್ಯಗಳನ್ನು ಖಂಡಿಸಿ ನಡೆದ…

Read More

ಎಜೆಐ ಎಯುಪಿಎಸ್‌ ಉಪ್ಪಳದಲ್ಲಿ ಅದ್ದೂರಿ ಪ್ರವೇಶೋತ್ಸವ

ಈ ಸಾಲಿನ ಪ್ರವೇಶೋತ್ಸವ ಕಾರ್ಯಕ್ರಮವು ಬಣ್ಣಗಳ ವೈಭವದೊಂದಿಗೆ AJI AUPS ಉಪ್ಪಳದಲ್ಲಿ ಅದ್ದೂರಿಯಾಗಿ ನಡೆಯಿತು. ಶಾಲೆಯ ವ್ಯವಸ್ಥಾಪಕ ಇನ್‌ಚಾರ್ಜ್ ಹಾಗೂ AJI ಸಂಘದ ಪ್ರಧಾನ ಕಾರ್ಯದರ್ಶಿ ಅಬ್ದುಲ್ಲಾ ಮಾಳಿಗಾ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಮಂಗಲ್ಪಾಡಿ ಪಂಚಾಯತ್ ಅಧ್ಯಕ್ಷ ಗೋಲ್ಡನ್ ರಹ್ಮಾನ್ ಉದ್ಘಾಟಿಸಿದರು. ಮುಖ್ಯ ಶಿಕ್ಷಕಿ ಶ್ರೀವಿದ್ಯಾ ಟೀಚರ್ ಸ್ವಾಗತ ಭಾಷಣ ಮಾಡಿದರು ಹಾಗೂ ಅಬ್ದುಲ್ಲಾ ಮಾದೇರಿ ಮುಖ್ಯ ಭಾಷಣ ಮಾಡಿದರು. ಈ ವರ್ಷ USS ವಿದ್ಯಾರ್ಥಿವೇತನ ಪಡೆದ ಶಜಾ ಹಾಗೂ SSLC ಪರೀಕ್ಷೆಯಲ್ಲಿ ಎಲ್ಲಾ ವಿಷಯಗಳಲ್ಲಿ…

Read More

‘ನನ್ನ ಮತ ನನ್ನ ಹಕ್ಕು’ ಅಭಿಯಾನದ ಅಂಗವಾಗಿ ಜನಜಾಗೃತಿ ಹೋರಾಟ

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ‘ನನ್ನ ಮತ ನನ್ನ ಹಕ್ಕು’ ಸಂಘಟನೆ ಹಾಗೂ ಸಮಾನ ಮನಸ್ಕ ಸಂಘಟನೆಗಳ ನೇತೃತ್ವದಲ್ಲಿ ನಗರದ ಕ್ಲಾಕ್ ಟವರ್ ಬಳಿ ಶನಿವಾರ ಪ್ರತಿಭಟನೆ ನಡೆಯಿತು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಸಾಮಾಜಿಕ ಹೋರಾಟಗಾರ ವಿನೋದ್ ಎಂ., ಎಸ್‌ಐಆರ್ ಪ್ರಕ್ರಿಯೆಯು ಜನರ ಪ್ರಜಾಪ್ರಭುತ್ವದ ಹಕ್ಕುಗಳನ್ನು ಕಸಿಯುವ ಹುನ್ನಾರವಾಗಿದೆ ಎಂದು ಆರೋಪಿಸಿದರು. ಚುನಾವಣಾ ಆಯೋಗವು ಕ್ಷುಲ್ಲಕ ಕಾರಣಗಳನ್ನು ಮುಂದಿಟ್ಟುಕೊಂಡು ಅರ್ಹ ಮತದಾರರನ್ನು ಚುನಾವಣಾ ಪ್ರಕ್ರಿಯೆಯಿಂದ ವಂಚಿಸುತ್ತಿದ್ದು, ಇದು ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುವ ಪ್ರಯತ್ನವಾಗಿದೆ…

Read More

ಉಪ್ಪಳದಲ್ಲಿ ಪತ್ರಕರ್ತರ ಮಕ್ಕಳಿಗೆ ಕಲಿಕೋಪಕರಣ ವಿತರಣೆ

ಮಂಜೇಶ್ವರ: ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ (ರಿ), ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ಕಾಸರಗೋಡು ಜಿಲ್ಲಾ ಸಮಿತಿ ಆಶ್ರಯದಲ್ಲಿ ಪತ್ರಕರ್ತರ ಮಕ್ಕಳಿಗೆ ಕಲಿಕೋಪಕರಣ ವಿತರಣೆ ಹಾಗೂ ಶಾಫಿ ಬಂಡಸಾಲೆ ಅವರ ಕೃತಿ ಪರಿಚಯ ಕಾರ್ಯಕ್ರಮ ಶನಿವಾರ ಉಪ್ಪಳ ವ್ಯಾಪಾರಿ ಭವನದಲ್ಲಿ ನಡೆಯಿತು. ಸಮಾರಂಭವನ್ನು ಕಲಿಕೋಪಕರಣ ವಿತರಿಸಿ ಮಾತನಾಡಿದ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ ಅವರು, ರಾಷ್ಟಿçÃಯತೆ ಬೆಳೆದಂತೆ ಗಡಿಗಳಿಗೆ ಹೆಚ್ಚು ಮಹತ್ವವಿಲ್ಲ. ಆದರೂ ಸ್ಥಳೀಯ ಸಂಸ್ಕೃತಿ ಉಳಿಸಲು ಪ್ರಯತ್ನಗಳು ಬೇಕು. ಈ ನಿಟ್ಟಿನಲ್ಲಿ…

Read More

ಚುನಾವಣಾ ಗೆಲುವು ಸೋಲು ಪ್ರಕ್ರಿಯೆಯ ಭಾಗ.. ಸಮಾಜ ಸೇವೆ ನಿರಂತರ ವಾಗಬೇಕು-ಆದರ್ಶ ಬಿ ಎಂ

ಉದ್ಯಾವರ : ಸಮಾಜ ಸೇವೆ ಸಮಾಜಕ್ಕೆ ಮಾದರಿಯಾಗುವಂತಹ ಕಾರ್ಯ, ಅದು ಸ್ಥಳೀಯ ಜನತೆಯ ಅಗ್ರಹ, ಬೇಡಿಕೆ, ನಂಬಿಕೆ,ಮತ್ತು ವಿಶ್ವಾಸ ಪ್ರಕ್ರಿಯೆ ಆಗಬೇಕು, ಚುನಾವಣೆಯಲ್ಲಿ ಸೋಲು, ಗೆಲುವು ಪ್ರಕ್ರಿಯೆ ಯ ಭಾಗ ಆದರೆ ಸಮಾಜ ಸೇವೆ ನಿರಂತರ ವಾಗಿರಬೇಕೆಂದು ಬಿಜೆಪಿ ಮಂಜೇಶ್ವರ ಮಂಡಲ ಅಧ್ಯಕ್ಷ ಆದರ್ಶ ಬಿ ಎಂ ಹೇಳಿದರು. ಮಂಜೇಶ್ವರ ಪಂಚಾಯತ್ ಬೂತ್ 14ರ ವತಿಯಿಂದ ಸ್ಥಳೀಯ ವಿದ್ಯಾರ್ಥಿಗಳಿಗೆ ಬ್ಯಾಗ್ ಹಾಗೂ ಪುಸ್ತಕ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಆದರ್ಶ ಬಿ ಎಂ ಮಾತನಾಡಿದರು.ಸಮಾಜ ಸೇವಕ ನ್ಯಾ ನವೀನ್…

Read More

ಆರ್ಥಿಕ ಸಂಕಷ್ಟದ ನಡುವೆ ಕೃಷಿಕ ಕೆರೆಗೆ ಹಾರಿ ಆತ್ಮಹತ್ಯೆ

ಮಂಜೇಶ್ವರ : ಕೊಟ್ಟಂಗುಳಿಯಲ್ಲಿ ಕೃಷಿಕರೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೊಟ್ಟಂಗುಳಿಯ ಅಜಿತ್ ಕುಮಾರ್ (43) ಸಾವನ್ನಪ್ಪಿದ ದುರ್ದೈವಿ. ಶನಿವಾರ ಬೆಳಿಗ್ಗೆ ಅಜಿತ್ ನಾಪತ್ತೆಯಾಗಿದ್ದರಿಂದ ಕುಟುಂಬಸ್ಥರು ಹುಡುಕಾಟ ನಡೆಸಿದಾಗ, ಮನೆ ಸಮೀಪದ ಅಡಿಕೆ ತೋಟದ ಕೆರೆಯಲ್ಲಿ ಶವ ಪತ್ತೆಯಾಗಿದೆ. ಕೆರೆಗೆ ಹಾರುವ ಮುನ್ನ ಅವರು ಕೈಯ ನರ ಕತ್ತರಿಸಿಕೊಂಡಿರುವ ಸಾಧ್ಯತೆಯೂ ಇದೆ ಎಂದು ಶಂಕಿಸಲಾಗಿದೆ. ​ಮಡಿಕೇರಿಯಲ್ಲಿ ಹೋಟೆಲ್ ಉದ್ಯಮ ನಡೆಸುತ್ತಿದ್ದ ಅಜಿತ್, ವ್ಯಾಪಾರದಲ್ಲಿ ಉಂಟಾದ ಭಾರಿ ನಷ್ಟದಿಂದ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದರು. ಬಳಿಕ ಊರಿಗೆ ಮರಳಿ ಕೃಷಿ…

Read More

​ಮಂಜೇಶ್ವರ ಗ್ರಾಮ ಪಂಚಾಯತ್ ಅಧಿಕೃತ ವೆಬ್‌ಸೈಟ್ ಲೋಕಾರ್ಪಣೆ: ಇನ್ನು ಮುಂದೆ ಸಾರ್ವಜನಿಕ ಸೇವೆಗಳು ಆನ್‌ಲೈನ್‌ನಲ್ಲಿ ಲಭ್ಯ

​ಮಂಜೇಶ್ವರ: ಮಂಜೇಶ್ವರ ಗ್ರಾಮ ಪಂಚಾಯತ್‌ನ ಆಡಳಿತವನ್ನು ಮತ್ತಷ್ಟು ಪಾರದರ್ಶಕಗೊಳಿಸುವ ಮತ್ತು ಸಾರ್ವಜನಿಕರಿಗೆ ಸೇವೆಗಳನ್ನು ಸುಲಭವಾಗಿ ತಲುಪಿಸುವ ನಿಟ್ಟಿನಲ್ಲಿ, ಪಂಚಾಯತ್‌ನ ಅಧಿಕೃತ ವೆಬ್‌ಸೈಟ್ ಅನ್ನು ಪಂಚಾಯತು ಅಧ್ಯಕ್ಷ ಬಶೀರ್ ಕನಿಲ ಅಧಿಕೃತವಾಗಿ ಲೋಕಾರ್ಪಣೆ ಗೊಳಿಸಿದರು. ಈ ಸಂದರ್ಭ ಉಪಾಧ್ಯಕ್ಷೆ ಫಾತಿಮತ್ ಝವುರಾ ಹಾಗೂ ಪಂಚಾಯತ್ ಸದಸ್ಯರುಗಳು ಸಿಬ್ಬಂದಿಗಳು ಸೇರಿದಂತೆ ಹಲವಾರು ಮಂದಿ ಪಾಲ್ಗೊಂಡರು. ​ಈ ಡಿಜಿಟಲ್ ಉಪಕ್ರಮದ ಮೂಲಕ ಇನ್ನು ಮುಂದೆ ಪಂಚಾಯತ್‌ಗೆ ಸಂಬಂಧಿಸಿದ ವಿವಿಧ ಸೇವೆಗಳನ್ನು ನಾಗರಿಕರು ಮನೆಯಲ್ಲೇ ಕುಳಿತು ಪಡೆಯಬಹುದಾಗಿದೆ.ಪ್ರಮುಖವಾಗಿ ಜನನ ಪ್ರಮಾಣಪತ್ರ, ಮರಣ ಪ್ರಮಾಣಪತ್ರ…

Read More

ಮಂಜೇಶ್ವರದ ಸರ್ಕಾರಿ ಎಲ್.ಪಿ. ಶಾಲೆಯಲ್ಲಿ ವರ್ಣರಂಜಿತ ಶಾಲಾ ಪ್ರವೇಶೋತ್ಸವ

​ಮಂಜೇಶ್ವರ: ಸಾರ್ವಜನಿಕ ಶಿಕ್ಷಣ ಸಂರಕ್ಷಣಾ ಅಭಿಯಾನದ ಭಾಗವಾಗಿ ‘ಸಮಗ್ರ ಶಿಕ್ಷಾ ಕೇರಳ’ದ ನೇತೃತ್ವದಲ್ಲಿ ಮಂಜೇಶ್ವರದ ಹೊಸಬೆಟ್ಟು ಸರ್ಕಾರಿ ಎಲ್.ಪಿ. ಶಾಲೆಯಲ್ಲಿ ಶಾಲಾ ಪ್ರವೇಶೋತ್ಸವವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಯಿತು. ​ಶಾಲಾ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಶಾಲೆಗೆ ಹೊಸದಾಗಿ ಪ್ರವೇಶ ಪಡೆದ ವಿದ್ಯಾರ್ಥಿಗಳನ್ನು ಆತ್ಮೀಯವಾಗಿ ಸ್ವಾಗತಿಸಲಾಯಿತು. ಕಾರ್ಯಕ್ರಮವು ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ ಪ್ರಾರಂಭವಾಯಿತು. ಮಂಜೇಶ್ವರ ಗ್ರಾಮ ಪಂಚಾಯಿತಿ ಅಧ್ಯಕ್ಷ ಬಶೀರ್ ಕನಿಲ ಅವರು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಬ್ಲಾಕ್ ಪಂಚಾಯಿತಿ ಅಧ್ಯಕ್ಷ ಸಯ್ಯದ್ ಯು.ಕೆ. ಸೈಫುಲ್ಲಾ ತಂಙಳ್ ಅವರು ಪ್ರವೇಶೋತ್ಸವವನ್ನು ಉದ್ಘಾಟಿಸಿದರು….

Read More
error: Content is protected !!