ಬಿಲ್ಡಿಂಗ್ ಕಂಟ್ರಾಕ್ಟರ್ ಕಟ್ಟೆಬಜಾರ್ ನಿವಾಸಿ ವೆಂಕಟೇಶ್ ಹೃದಯಾಘಾತಕ್ಕೆ ಬಲಿ
ಮಂಜೇಶ್ವರ; ಹೊಸಂಗಡಿ ಕಟ್ಟೆಬಜಾರ್ ನಿವಾಸಿ ಬಿಲ್ಡಿಂಗ್ ಕಂಟ್ರಾಕ್ಟರ್ ಆಗಿ ಖ್ಯಾತಿ ಪಡೆದಿರುವ ವೆಂಕಟೇಶ್ (58) ಇಂದು ಬೆಳಗ್ಗಿನ ಜಾವಾ ಹೃದಯಾಘಾತದಿಂದ ನಿಧನಹೊಂದಿದ್ದಾರೆ. ನಿನ್ನೆ ರಾತ್ರಿ ಎಂದಿನಂತೆ ಊಟ ಮಾಡಿ ಮಲಗಿದ್ದು ಇಂದು ಬೆಳಗ್ಗೆ ಮಂಚದಿಂದ ಕೆಳಗೆ ಕುಸಿದು ಬಿದ್ದಿದ್ದಾರೆ. ತಕ್ಷಣ ಸ್ಥಳೀಯರು ಹೊಸಂಗಡಿ ಖಾಸಗಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಮುಂದಿನ ಚಿಕಿತ್ಸೆಗೆ ಮಂಗಳೂರಿನ ದೇರಳಕಟ್ಟೆ ಆಸ್ಪತ್ರೆಗೆ ಸಾಗಿಸುವ ಮಧ್ಯೆ ನಿಧನರಾದರು. ಇವರು ಕಟ್ಟೆಬಜಾರ್ ನಿವಾಸಿ ದಿ. ಸೀತಾರಾಮ ಮತ್ತು ದಿ. ಲೀಲಾವತಿ ಪುತ್ರನಾದ ಇವರು ಪತ್ನಿ…