ಸಂಪೂರ್ಣ ಹದಗೆಟ್ಟಿದ ವರ್ಕಾಡಿ ರಸ್ತೆ ಸ್ಥಳೀಯರ ಆಕ್ರೋಶ

ಮಂಜೇಶ್ವರ: ವರ್ಕಾಡಿ ಪಂಚಾಯತ್‌ ವ್ಯಾಪ್ತಿಯ 2 ಹಾಗೂ 15 ನೇ ವಾರ್ಡ್‌ಗಳಿಗೆ ಸೇರಿದ ಮುಡಿಮಾರ್ ಮತ್ತು ಸುಂಕದಕಟ್ಟೆಯನ್ನು ಹಾಗೂ ಕರ್ನಾಟಕದ ಗಡಿಯನ್ನು ಸುಲಭವಾಗಿ ಸಂಪರ್ಕಿಸುವ ರಸ್ತೆ ಸಂಪೂರ್ಣವಾಗಿ ಹದೆಗೆಟ್ಟಿದ್ದರೂ ಅಧಿಕಾರಿಗಳಾಗಲೀ ಜನಪ್ರತಿನಿಧಿಗಳಾಗಲೀ ಯಾರೂ ಇತ್ತ ಗಮನ ಹರಿಸದೆ ಇರುವುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ. ಈ ರಸ್ತೆಯನ್ನು ಅವಲಂಬಿಸಿ ಸುಮಾರು 250 ಕುಟುಂಬಗಳು ಇಲ್ಲಿ ವಾಸಿಸುತ್ತಿದೆ. ಈ ರಸ್ತೆ ಭಾರೀ ಶೋಚನೀಯಾವಸ್ಥೆಗೆ ತಲುಪಿದೆ. 15 ವರ್ಷಗಳ ಹಿಂದೆ ನಿರ್ಮಿಸಲಾದ ಈ ರಸ್ತೆಗೆ ಮರು ಡಾಮಾರೀಕರಣ ಮಾಡುವ ಎಲ್ಲಾ ಸಿದ್ಧತೆಗಳು…

Read More

ಉಪ್ಪಳ ತಾಲೂಕು ಆಸ್ಪತ್ರೆ ಯಲ್ಲಿ ವೈದ್ಯರ ಸಿಬ್ಬಂದಿಗಳ ಕೊರತೆ: ಆಸ್ಪತ್ರೆ ಮುಂಭಾಗದಲ್ಲಿ ಯೂತ್ ಕಾಂಗ್ರೆಸ್ ಧರಣಿ

ವೈದ್ಯರು ಹಾಗೂ ಸಿಬ್ಬಂದಿಗಳು ಸಾಕಷ್ಟು ಇಲ್ಲದೆ ರಾತ್ರಿ ಹೊತ್ತಿನ ಚಿಕಿತ್ಸೆಯನ್ನು ಸ್ಥಗಿತಗೊಳಿಸಿರುವ ಮಂಜೇಶ್ವರ ತಾಲೂಕು ಹೆಡ್ ಕ್ವಾಟರ್ಸ್ ಆಸ್ಪತ್ರೆಗೆ ಇಂಡಿಯನ್ ಯೂತ್ ಕಾಂಗ್ರೆಸ್ ಮಂಜೇಶ್ವರ ಅಸೆಂಬ್ಲಿ ಸಮಿತಿಯ ನೇತೃತ್ವದಲ್ಲಿ ಇಂದು ಪ್ರತಿಭಟನಾ ಮಾರ್ಚ್ ಹಾಗೂ ಧರಣಿ ನಡೆಯಿತು. ನಾಯಬಜಾರ್ ನಲ್ಲಿರುವಆಸ್ಪತ್ರೆ ಗೆ ಯೂತ್ ಕಾಂಗ್ರೆಸ್ ಅಸೆಂಬ್ಲಿ ಸಮಿತಿಯ ಅಧ್ಯಕ್ಷ ಜುನೈದ್ ಉರ್ಮಿ ಇವರ ಅಧ್ಯಕ್ಷತೆಯಲ್ಲಿ ಕೆಪಿಸಿಸಿ ಸದಸ್ಯ ಹಕ್ಕಿಂ ಕುನ್ನಿಲ್ ಧರಣಿಯನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಕೇರಳ ರಾಜ್ಯ ಸರ್ಕಾರ ಆರೋಗ್ಯ ರಂಗದಲ್ಲಿ ಪೂರ್ಣ ವಿಫಲಗೊಂಡಿದ್ದು,…

Read More

ದೇಲಂಪಾಡಿ ಪ್ರದೇಶದಲ್ಲಿ ಜನರ ಜೀವ ಮತ್ತು ಆಸ್ತಿಯನ್ನು ಸಂರಕ್ಷಿಸಲು ಎಂ.ಎಲ್. ಅಶ್ವಿನಿ ಒತ್ತಾಯ.

ವನ್ಯಜೀವಿಗಳ ಹಾವಳಿ ಹೆಚ್ಚಾಗಿ ಕಂಡುಬರುವ ದೇಲಂಬಾಡಿ ಪಂಚಾಯಿತಿನ ಜನರ ಜೀವ ಮತ್ತು ಆಸ್ತಿಯನ್ನು ರಕ್ಷಿಸಿ, ಸೌರ ಬೇಲಿ, ಬೀದಿ ದೀಪ ಮತ್ತು ಎಚ್ಚರಿಕೆ ವ್ಯವಸ್ಥೆಗಳನ್ನು ಅಳವಡಿಸಬೇಕೆಂದು ಬಿಜೆಪಿ ಕಾಸರಗೋಡು ಜಿಲ್ಲಾಧ್ಯಕ್ಷೆ ಎಂ.ಎಲ್.ಅಶ್ವಿನಿ ಒತ್ತಾಯಿಸಿದ್ದಾರೆ.ಬಿಜೆಪಿ ದೇಲಂಪಾಡಿ ಪ್ರಾದೇಶಿಕ ಸಮಿತಿ ನೇತೃತ್ವದಲ್ಲಿ ಪರಪ್ಪದಲ್ಲಿರುವ ಅರಣ್ಯ ಇಲಾಖೆ ಮರದ ಡಿಪೋದಲ್ಲಿ ನಡೆದ ಧರಣಿಯನ್ನು ಅವರು ಉದ್ಘಾಟಿಸಿ ಮಾತನಾಡಿದರು . ಕಾಡು ಪ್ರಾಣಿಗಳ ದಾಳಿಯಿಂದ ಬೆಳೆಗಳು ಹಾನಿಗೊಳಗಾದಾಗ, ಕೇವಲ ಅತ್ಯಲ್ಪ ಪರಿಹಾರವನ್ನು ಮಾತ್ರ ನೀಡಲಾಗುತ್ತದೆ. ಈ ಮೊತ್ತ ಫಲಾನುಭವಿಗಳಿಗೆ ಸಿಗುವಾಗ ಬಹಳಷ್ಟು ವಿಳಂಬವು…

Read More

ಮೂಡಂಬೈಲ್ ಶಾಲೆಯಲ್ಲಿ ನೂತನವಾಗಿ ನಿರ್ಮಿಸಿದ ಶೌಚಾಲಯ ಮತ್ತು ಶುದ್ಧ ಕುಡಿಯುವ ನೀರಿನ ಯೋಜನೆಯ ಉದ್ಘಾಟನೆ.

ಸರಕಾರಿ ಪ್ರೌಢಶಾಲೆ ಮೂಡಂಬೈಲ್ ನಲ್ಲಿ ಜಿಲ್ಲಾ ಪಂಚಾಯತಿನ ವತಿಯಿಂದ ಒದಗಿಸಲಾದ ಆಧುನಿಕ ವ್ಯವಸ್ಥೆಯನ್ನು ಒಳಗೊಂಡಿರುವ ಶೌಚಾಲಯವನ್ನು ಹಾಗೂ ಶುದ್ಧ ಜಲ ನೀರಿನ ಯೋಜನೆಯನ್ನು ಕಾಸರಗೋಡು ಜಿಲ್ಲಾ ಪಂಚಾಯತ್ ಸದಸ್ಯೆಯಾದ ಶ್ರೀಮತಿ ಕಮಲಾಕ್ಷಿ ಅವರು ನಿರ್ವಹಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಅಬ್ದುಲ್ಲಾ ಪಜಿಂಗರ್ ಅವರು ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ಮಿಂಚಾಯತ್ ಉಪಾಧ್ಯಕ್ಷರಾದ ಜಯರಾಮ ಬಲ್ಲಂಗುಡೆಯಲು ಹಾಗೂ ಮಂಜೇಶ್ವರ ಉಪಜಿಲ್ಲಾ ವಿದ್ಯಾಧಿಕಾರಿಯಾದ ಜಾರ್ಜ್ ಕ್ರಾಸ್ತಾರವರು ಸಭೆಯಲ್ಲಿ ಉಪಸ್ಥಿತರಿದ್ದರು. ಶಾಲಾ ಮುಖ್ಯೋಪಾಧ್ಯಾಯನಿ ಶ್ರೀಮತಿ ದಯಾವತಿ ಅವರು ಅತಿಥಿಗಳನ್ನು…

Read More

ಕನ್ನಡ ಭಾಷೆಗೆ ಅಪಮಾನ ಕಮಲ್ ಹಾಸನ್ ಗೆ ಚಾಟಿ ಬೀಸಿದ ಕರ್ನಾಟಕ ಹೈಕೋರ್ಟ್

ನೀವು ಇತಿಹಾಸಗಾರರೇ ? ಸಂಶೋದಕರೇ ? ಕಮಲ್ ಗೆ ಪ್ರಶ್ನೆ ಹಾಕಿದ ಹೈಕೋರ್ಟ್ ಇತ್ತೀಚಿಗೆ ಕಾರ್ಯಕ್ರಮವೊಂದರಲ್ಲಿ ಕನ್ನಡ ಭಾಷೆಯ ಬಗ್ಗೆ ಹಗುರವಾಗಿ ಮಾತನಾಡಿ ಕನ್ನಡಿಗರ ಆಕ್ರೋಶಕ್ಕೆ ಕಾರಣರಾದ ಚಿತ್ರನಟ ಕಮಲ್ ಹಾಸನ್ ಗೆ ಕರ್ನಾಟಕ ಉಚ್ಚ ನ್ಯಾಯಾಲಯ ಸರಿಯಾದ ಚಾಟಿ ಬೀಸಿದೆ. ಕನ್ನಡ ಭಾಷೆ ತಮಿಳು ಭಾಷೆಯಿಂದ ಹುಟ್ಟಿದೆ ಎಂಬ ವಿವಾದಾತ್ಮಕ ಹೇಳಿಕೆ ನೀಡಿದ ನಂತರ ಕನ್ನಡ ಪರ ಸಂಘಟನೆಗಳ ಸಹಿತ ಕೋಟ್ಯಂತರ ಕನ್ನಡಿಗರು ಬಹಿರಂಗ ಕ್ಷಮೆ ಕೇಳಲು ಕಮಲ್ ಗೆ ಹೇಳಿದರೂ ನಾನು ಕ್ಷಮೆ ಕೇಳುವ…

Read More

ವಿವಿಧ ನೂತನ ಸೌಕರ್ಯ ಉದ್ಘಾಟನೆಯೊಂದಿಗೆ ವಾಮಂಜೂರು ಜಿ.ಎಲ್ ಪಿ ಶಾಲೆಯ ಶಾಲಾ ಪ್ರವೇಶೋತ್ಸವ

ಜಿ.ಎಲ್ ಪಿ ಶಾಲೆ ವಾಮಂಜೂರಿನಲ್ಲಿ ಶಾಲಾ ಮಟ್ಟದ ಪ್ರವೇಶೋತ್ಸವ ಬಹಳ ವಿಜೃಂಭಣೆಯಿಂದ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಾರ್ಡು ಸದಸ್ಯರಾದ ಶ್ರೀಯುತ ಆದರ್ಶ್ ಬಿ.ಎಂ ವಹಿಸಿದ್ದರು. ಪ್ರವೇಶೋತ್ಸವದ ಉದ್ಘಾಟನೆಯನ್ನು ಮಂಜೇಶ್ವರ ಬ್ಲಾಕ್ ಪಂಚಾಯತ್ ಮೆಂಬರ್ ಆದ ಶ್ರೀಯುತ ಅಬ್ದುಲ್ ಹಮೀದ್ ಅವರು ನೆರವೇರಿಸಿದರು. ವಾಮಂಜೂರು ಶಾಲಾ ಹಳೆ ವಿದ್ಯಾರ್ಥಿಯಾದ ಶ್ರೀಯುತ ಮುಜಿಬು ರಹಿಮಾನ್ ಇವರು ಕೊಡುಗೆಯಾಗಿ ನೀಡಿದ ಇಂಗಿಷ್ ಭಾಷೆಯ ಲ್ಯಾಬ್ ಹಾಗೂ ಇಂಟರಾಕ್ಟಿವ್ ಪ್ಲಾಟ್ ಪ್ಯಾನಲ್ನ ಉದ್ಘಾಟನೆಯನ್ನು ನಿವೃತ್ತ ಡಿಡಿಇ ಶ್ರೀಯುತ ದಿನೇಶ್ ನೆರವೇರಿಸಿದರು. ಯುಕೆಜಿ ತರಗತಿಯನ್ನು…

Read More

ನಿಲಂಬೂರ್ ಉಪ ಚುನಾವಣೆ : ಚತುಷ್ಕೋನ ಸ್ಪರ್ಧೆಗೆ ಅಖಾಡ ಸಜ್ಜು.

ತಿರುವನಂತಪುರಂ :ತೀವ್ರ ಕುತೂಹಲ ಕೆರಳಿಸಿರುವ ರಾಜ್ಯದ ನಿಲಂಬೂರ್ ವಿಧಾನ ಸಭಾ ಕ್ಷೇತ್ರದ ಉಪ ಚುನಾವಣೆಗೆ ಅಂತೂ ಇಂತೂ ಅಖಾಡ ಸಜ್ಜು ಗೊಂಡಿದ್ದು ಯು ಡಿ ಎಫ್ ನಿಂದ ಆರ್ಯಾಡನ್ ಸೌಕತ್ ಎಲ್ ಡಿ ಎಫ್ ನಿಂದ ಎಂ ಸ್ವರಾಜ್ ಎನ್ ಡಿ ಎ ಯಿಂದ ಮೋಹನ್ ಜೋರ್ಜ್ ಹಾಗೂ ಸ್ವತಂತ್ರ ಅಭ್ಯರ್ಥಿ ಯಾಗಿ ಪಿ ವಿ ಅನ್ವರ್ ನಾಮಪತ್ರ ಸಲ್ಲಿಸಿ ಚುನಾವಣಾ ಪ್ರಚಾರದಲ್ಲಿ ನಿರತರಾಗಿದ್ದಾರೆ. ನಾಮಪತ್ರ ಸೂಕ್ಷ್ಮ ಪರಿಶೀಲನೆಯ ನಂತರ ಇಲ್ಲಿ ಒಟ್ಟು 14 ಸ್ಪರ್ಧಿಗಳು ಕಣದಲ್ಲಿದ್ದಾರೆ….

Read More

ತುಳುನಾಡ ಕೊಡುಗೈ ದಾನಿಯ ಹುಟ್ಟೂರ ಪ್ರೇಮ; ತನ್ನೂರ ಶಾಲೆಯ ಎಲ್.ಕೆ.ಜಿ., ಯು.ಕೆ.ಜಿ. ವಿಭಾಗವನ್ನು ದತ್ತು ಪಡೆದ ಡಾ. ಸದಾಶಿವ ಕೆ. ಶೆಟ್ಟಿ ಕುಳೂರು ಕನ್ಯಾನ

ಮಂಜೇಶ್ವರ : ಸಮಾಜದಲ್ಲಿ ಕಷ್ಟ ಕಾರ್ಪಣ್ಯಗಳಿಂದ ಬಳಲಿ ಬೆಂಡಾಗಿರುವ ಅದೆಷ್ಟೋ ಜೀವಗಳಿವೆ. ಬಡತನ ಇನ್ನಷ್ಟು ಅವರ ಜೀವ ಹಿಂಡುತ್ತದೆ. ಯಾವುದಾದರೂ ಕಾಣುವ ಕೈಗಳ ಸಹಾಯಕ್ಕೆ ಕಾಯುತ್ತವೆ. ಆದರೆ ಎಲ್ಲರೂ ಮರುಗುವರೇ ಹೊರತು ಸಹಾಯಕ್ಕಾಗಿ ಮುಂದೆ ಬರುವುದು ವಿರಳ. ಇಂತಹ ಸಂದರ್ಭಗಳಲ್ಲಿ ನಮಗೆ ಹೊಳೆಯುವ ಹೆಸರೆಂದರೆ‌ ಅದು ಡಾ. ಸದಾಶಿವ ಕೆ ಶೆಟ್ಟಿ ಕುಳೂರು ಕನ್ಯಾನ. ತಮ್ಮ ನಿಸ್ವಾರ್ಥವಾದ ಸಮಾಜ ಸೇವೆ ಇಂದು ಅವರನ್ನು ಬಹಳ ಎತ್ತರಕ್ಕೆ ತಂದು ನಿಲ್ಲಿಸಿದೆ.‌ ಜಾತಿ-ಮತ-ಧರ್ಮ ಎನ್ನುವ ಯಾವುದೇ ಭೇದವಿಲ್ಲದೆ ಸಮಾಜದಲ್ಲಿನ ಅಸಕ್ತರಿಗೆ…

Read More

ಪ್ರಶಾಂತಿಯಲ್ಲಿ ದೈವಿಕ ಅನುಗ್ರಹದೊಂದಿಗೆ ಹೊಸ ಶೈಕ್ಷಣಿಕ ವರ್ಷದ ಪ್ರಾರಂಭ

ಬಾಯಾರು, ಜೂನ್ 2: ಬಾಯಾರಿನ ಪ್ರಶಾಂತಿ ವಿದ್ಯಾ ಕೇಂದ್ರವು ತನ್ನ 2025-2026ನೇ ಶೈಕ್ಷಣಿಕ ವರ್ಷದ ಪ್ರವೇಶೋತ್ಸವವನ್ನು ಸಾಂಪ್ರದಾಯಿಕ ಸಂಸ್ಕೃತಿ ಆಚಾರಗಳ ವಿಧಿವಿಧಾನ ದೊಂದಿಗೆ ಉತ್ಸಾಹ ಮತ್ತು ಆಧ್ಯಾತ್ಮಿಕ ವೈಭವದೊಂದಿಗೆ ಆಚರಿಸಲಾಯಿತು. ಹೊಸ ಶೈಕ್ಷಣಿಕ ವರ್ಷಕ್ಕೆ ದೈವಿಕ ಆಶೀರ್ವಾದವನ್ನು ಕೋರುತ್ತಾ, ಅರ್ಚಕ ವೇದಮೂರ್ತಿ ಶ್ರೀ ನವನೀತ ಕೃಷ್ಣ ಬೋಳoತಕೋಡಿ ಮತ್ತು ಸಹ-ಅರ್ಚಕರ ನೇತೃತ್ವದಲ್ಲಿ ಗಣಪತಿ ಹವನ ಮತ್ತು ಸರಸ್ವತಿ ಹವನದೊಂದಿಗೆ ಶುಭಾರಂಭಗೊಂಡಿತು. ಈ ಸಂದರ್ಭದಲ್ಲಿವಿದ್ಯಾರ್ಥಿಗಳು ಮತ್ತು ಶಿಕ್ಷಕರು ನೀಡಿದ ಭಾವಪೂರ್ಣ ಭಕ್ತಿಪೂರ್ವ ಭಜನೆಗಳಿಂದ ಪ್ರಶಾಂತ ವಾತಾವರಣವು ಸಮೃದ್ಧವಾಗಿತ್ತು. ನಂತರ…

Read More

ದುರ್ಗಾ ಶಕ್ತಿ ಕುಣಿತ ಭಜನಾ ತಂಡ ಪರಂಬಳ ಕಯ್ಯಾರು ಇದರ ವತಿಯಿಂದ ಅಭಿನಂದನಾ ಸಭೆ

ಉಪ್ಪಳ : ದುರ್ಗಾ ಶಕ್ತಿ ಕುಣಿತ ಭಜನಾ ತಂಡ ಪರಂಬಳ ಕಯ್ಯಾರು ಇದರ ವತಿಯಿಂದ ಅಭಿನಂದನಾ ಸಭೆಯು ಇತ್ತೀಚೆಗೆ ಕಯ್ಯಾರು ಪರಂಬಳ ಭಾರತಾ ಮಾತಾ ಸೇವಾ ಟ್ರಸ್ಟ್ ಸಭಾ ಭವನದಲ್ಲಿ ದಲ್ಲಿ ನಡೆಯಿತು ಸಭೆಯ ಅಧ್ಯಕ್ಷತೆಯನ್ನು ಶ್ರೀಮತಿ ರಮ್ಯಾ .ಯನ್ ಸೀತಾ0ಗೊಳಿ ಮಕ್ಕಳ ಸಹಾಯ ವಾಣಿ ಕೇಂದ್ರದ ಮುಖ್ಯಸ್ಥೆ , ಗೌರವ ಮಾರ್ಗದರ್ಶಕಿ ದುರ್ಗಾ ಶಕ್ತಿ ಕುಣಿತ ಭಜನಾ ತಂಡ ಪರಂಬಳ ಕಯ್ಯಾರು ಇವರು ವಹಿಸಿದರು. ಸಭೆಯನ್ನು ಕುಂಬಳೆ ಪೊಲೀಸ್ ಸ್ಟೇಷನ್ ಇದರ ಸರ್ಕಲ್ ಇನ್ಸ್ಪೆಕ್ಟರ್ ಶ್ರೀ…

Read More
error: Content is protected !!