ಮೀನು ವ್ಯಾಪಾರಿಯ ಕುತ್ತಿಗೆಗೆ ಚಾಕುವಿನಿಂದ ಇರಿದು ಹತ್ಯೆಗೈಯ್ಯಲೆತ್ನಿಸಿದ ಪ್ರಕರಣದ ನಾಲ್ಕು ಮಂದಿ ಆರೋಪಿಗಳು ಬಂಧನ.
ಮಂಜೇಶ್ವರ : ಬಾನುವಾರ ರಾತ್ರಿ 12 ಗಂಟೆಯ ಸುಮಾರಿಗೆ ಬದಿಯಡ್ಕ ಸೀತಾಂಗೋಳಿ ಸಮೀಪ ಸ್ಥಳೀಯ ನಿವಾಸಿ ಹಾಗೂ ಮೀನು ವ್ಯಾಪಾರಿ ಅನಿಲ್ ಕುಮಾರ್ (40) ರ ಕುತ್ತಿಗೆಗೆ ಚಾಕುವಿನಿಂದ ಇರಿದು ಹತ್ಯೆಗೈಯ್ಯಲೆತ್ನಿಸಿದ ಪ್ರಕರಣದ ನಾಲ್ಕು ಮಂದಿ ಆರೋಪಿಗಳು ಕುಂಬಳೆ ಪೊಲೀಸ್ ಠಾಣೆಯಲ್ಲಿ ನೇರವಾಗಿ ಪೊಲೀಸರ ಮುಂದೆ ಶರಣಾಗಿದ್ದಾರೆ. ಬಳಿಕ ಪೊಲೀಸರು ಅವರನ್ನು ಬಂಧಿಸಿದ್ದಾರೆ.ಬದಿಯಡ್ಕ ಕುದ್ರೆಪ್ಪಾಡಿ ನಿವಾಸಿಗಳಾದ ಮಹೇಶ್, ರಜೀಶ್ ಅಲಿಯಾಸ್ ಮೋಣು, ಅಜಿತ್ ಕುಮಾರ್ ಹಾಗೂ ಹರಿಕೃಷ್ಣ ಬಂಧಿತ ಆರೋಪಿಗಳು. ಈ ಪ್ರಕರಣದ ಆರೋಪಿಗಳ ಪತ್ತೆಗಾಗಿ ಪೊಲೀಸರು…
