ವಾಹನ ಚೋರನನ್ನು ಬಂಧಿಸಿದ ಪೊಲೀಸರು. ಪಿಕಪ್‌ ವಾಹನ ಮತ್ತು ಬೈಕ್‌ ವಶ .

ಮಂಗಳೂರು: ಅಂತರ್ ರಾಜ್ಯ ಕುಖ್ಯಾತ ವಾಹನ ಚೋರನನ್ನು ಬಂಧಿಸಿರುವ ಪೊಲೀಸರು ಪಿಕಪ್‌ ವಾಹನ ಮತ್ತು ಬೈಕ್‌ ವಶಪಡಿಸಿಕೊಂಡಿದ್ದಾರೆ. ಸುರತ್ಕಲ್‌ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಪಿಕಪ್‌ ವಾಹನ ಹಾಗೂ ಮಂಗಳೂರು ದಕ್ಷಿಣ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಬೈಕ್‌ ಕಳ್ಳತನ ಮಾಡಿದ ಕೇರಳ ರಾಜ್ಯದ ಕುಖ್ಯಾತ ಅಂತರ್ ರಾಜ್ಯ ವಾಹನ ಕಳವು ಆರೋಪಿಯೋರ್ವನನ್ನು ದಸ್ತಗಿರಿ ಮಾಡಿ ಪಿಕಪ್‌ ವಾಹನ ಹಾಗೂ ಬೈಕ್‌ನ್ನು ವಶಪಡಿಸಿಕೊಳ್ಳುವಲ್ಲಿ ಸುರತ್ಕಲ್‌ ಪೊಲೀಸರು ಯಶಸ್ವಿಯಾಗಿರುತ್ತಾರೆ. ಬಂಧಿತನನ್ನು ಕೇರಳದ ಹಂಝ ಕುಪ್ಪಿಕಂಡ @ ಹಂಸ @ ಹಂಝ ಪೊನ್ನನ್…

Read More

ಅಕ್ರಮ ಕಸಾಯಿ ಖಾನೆ ಮಾಡಿಕೊಂಡಿದ್ದ ಮನೆಯ ಮೇಲೆ ಪೊಲೀಸರ ದಾಳಿ. ಆರೋಪಿಗಳ ಬಂಧನ.

ಮಂಗಳೂರು: ಅಕ್ರಮ ಕಸಾಯಿ ಖಾನೆ ಮಾಡಿಕೊಂಡಿದ್ದ ಮನೆಯ ಮೇಲೆ ಪೊಲೀಸರು ದಾಳಿ ನಡೆಸಿ 3 ಮಂದಿಯನ್ನು ಬಂಧಿಸಿದ್ದಾರೆ. ಆರೋಪಿ ಮನೆಯನ್ನು ಮುಟ್ಟು ಗೋಲು ಹಾಕಲು ಕ್ರಮ ಕೈಗೊಂಡಿದ್ದಾರೆ. ಮಂಗಳೂರು ತಾಲೂಕು ಕಾಟಿಪಳ್ಳ ಗ್ರಾಮದ 8ನೇ ಬ್ಲಾಕ್ ಚೊಕ್ಕಬೆಟ್ಟುವಿನ ಅಂಚೆ ಕಛೇರಿ ರಸ್ತೆಯ ಅಬ್ದುಲ್ ಖಾದರ್ ತನ್ನ ಮನೆಯಲ್ಲಿ ಅಕ್ರಮವಾಗಿ ದನ ವಧೆಯನ್ನು ಮಾಡುತ್ತಿದ್ದ ಬಗ್ಗೆ ಮಾಹಿತಿಯನ್ನು ಪಡೆದ ಸುರತ್ಕಲ್ ಪೊಲೀಸ್ ಠಾಣೆ ಪಿಎಸ್‌ಐ ರಘುನಾಯಕ್ ಹಾಗೂ ಸಿಬ್ಬಂದಿಯವರು ದಾಳಿ ಮಾಡಿ ಮೂವರು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಚೊಕ್ಕಬೆಟ್ಟುವಿನ…

Read More

ಅ.11ರಂದು ಮಣಿಪಾಲದಲ್ಲಿ “ಮಾನಸಿಕ ಆರೋಗ್ಯ ಜಾಗೃತಿ ಓಟ”

ಉಡುಪಿ: ಮಣಿಪಾಲ ಮಾಹೆಯ ವಿದ್ಯಾರ್ಥಿಗಳ ವ್ಯವಹಾರ ವಿಭಾಗ, ಕೆಎಂಸಿಯ ವಿದ್ಯಾರ್ಥಿ ಕ್ರೀಡಾ ಸಮಿತಿ ಹಾಗೂ ಎಫ್ಐಟಿವಿಐಬಿ ಎಕ್ಸ್ ಸ್ಫೋರ್ಟ್ಸ್ ಕಮಿಟಿಯ ಸಂಯುಕ್ತ ಆಶ್ರಯದಲ್ಲಿ “ಮಾನಸಿಕ ಆರೋಗ್ಯ ಜಾಗೃತಿ ಓಟ”ವನ್ನು ಇದೇ ಅ.11ರಂದು ಮಣಿಪಾಲ ಮಾಹೆ ಕ್ಯಾಂಪಸ್ ನಲ್ಲಿ ಆಯೋಜಿಸಲಾಗಿದೆ ಎಂದು ಮಾಹೆಯ ವಿದ್ಯಾರ್ಥಿಗಳ ವ್ಯವಹಾರ ವಿಭಾಗದ ಮುಖ್ಯಸ್ಥೆ ಗೀತಾ ಮಯ್ಯ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, ಈ 5 ಕಿ.ಮೀ ಜಾಗೃತಿ ಓಟವು ಅ.11ರಂದು ಸಂಜೆ 5ಗಂಟೆಗೆ ಮಣಿಪಾಲ ಮಾಹೆ ಕ್ಯಾಂಪಸ್ ನಲ್ಲಿ…

Read More

ಗ್ರಾಮೀಣ ಜನರ ಆರ್ಥಿಕ ಅಭಿವೃದ್ಧಿಯೇ ಸಹಕಾರಿ ಕ್ಷೇತ್ರದ ಮುಖ್ಯ ಉದ್ದೇಶ- ಜಯಕರ ಶೆಟ್ಟಿ ಇಂದ್ರಾಳಿ

ಉಡುಪಿ: ಗ್ರಾಮೀಣ ಪ್ರದೇಶದ ಕಟ್ಟಕಡೆಯ ವ್ಯಕ್ತಿಗೂ ಆರ್ಥಿಕ ಶಕ್ತಿ ತುಂಬುವ ಉದ್ದೇಶದಿಂದ ಸಾಮಾಜಿಕ ಕಳಕಳಿಯ ಚಿಂತನೆ ಇಟ್ಟುಕೊಂಡು ಸಹಕಾರಿ ಸಂಸ್ಥೆಯ ಆಡಳಿತ ಮಂಡಳಿ ಮತ್ತು ಸಿಬ್ಬಂದಿ ವರ್ಗ ಕಾರ್ಯನಿರ್ವಹಿಸುತ್ತಿದೆ. ಇದು ಸಹಕಾರಿ ಸಂಸ್ಥೆಯ ಪ್ರಗತಿಗೆ ಪೂರಕವಾಗಿದೆ ಎಂದು ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಹೇಳಿದರು. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು, ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಹಾಗೂ ಉಡುಪಿ ಜಿಲ್ಲಾ ಸಹಕಾರ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಬುಧವಾರ ಉಡುಪಿ ಬಡಗುಬೆಟ್ಟು…

Read More

ವರ್ಕಾಡಿ ಕೊಡ್ಲಮೊಗರಿನಲ್ಲಿ ಭಾರೀ ಗಾಂಜಾ ಬೇಟೆ. 116 ಕೆ ಜಿ ಗಾಂಜಾ ಹಾಗೂ ಮಿನಿ ಲಾರಿ ವಶ.

ಮಂಜೇಶ್ವರ : ಮಂಜೇಶ್ವರ ಪೋಲೀಸ್ ಠಾಣಾ ವ್ಯಾಪ್ತಿಯ ವರ್ಕಾಡಿ ಕೊಡ್ಲಮೊಗರಿನಲ್ಲಿ ಭಾರೀ ಗಾಂಜಾ ಬೇಟೆ. 116 ಕೆ ಜಿ ಗಾಂಜಾ ಹಾಗೂ ಮಿನಿ ಲಾರಿಯೊಂದನ್ನು ಪೊಲೀಸರು ವಶಕ್ಕೆ ತೆಗೆದಿದ್ದಾರೆ. ಸುಳ್ಯಮೆ ಯಲ್ಲಿರುವ ಮನೆಯೊಂದರ ಶೆಡ್ ನಲ್ಲಿ ನಾಲ್ಕು ಗೋಣಿ ಚೀಲಗಳಲ್ಲಾಗಿ ತೆಗೆದಿರಿಸಲಾಗಿದ್ದ ರೀತಿಯಲ್ಲಿ ಗಾಂಜಾ ಪತ್ತೆ ಹಚ್ಚಲಾಗಿದೆ. ಗಾಂಜಾ ಸಾಗಾಟ ಮಾಡಲು ಉಪಯೋಗಿಸಿದ್ದೆಂದು ಶಂಕಿಸಲಾಗುತ್ತಿರುವ ಮಿನಿ ಲಾರಿ ಶೆಡ್ ನ ಸಮೀಪದಲ್ಲಿ ನಿಲುಗಡೆಯಾಗಿತ್ತು.ರಹಸ್ಯ ಮಾಹಿತಿಯಂತೆ ಎ ಎಸ್ಪಿ ನಂದ ಗೋಪಾಲ್ ರವರ ನೇತೃತ್ವದಲ್ಲಿ ಮಂಜೇಶ್ವರ ಪೊಲೀಸರು ಕಾರ್ಯಾಚರಣೆ…

Read More

ಓಟ್ ಚೋರ ಬಿಜೆಪಿಗೆ ವಿಗ್ರಹ ಚೋರ ಸಿಪಿಎಂ ಸಾಥ್- ಕಾಂಗ್ರೆಸ್ ಆರೋಪ.

ಮತದಾರ ಯಾದಿಯಲ್ಲಿ ಕ್ರಿಮಿನಲ್ ಸ್ವಭಾವದ ಹಸ್ತಕ್ಷೇಪ ನಡೆಸಿ ಅಧಿಕಾರಕ್ಕೇರಿದ ಬಿಜೆಪಿಗೆ ಕೇರಳದ ಶಬರಿಮಲೆ ಕ್ಷೇತ್ರದಲ್ಲಿ ಸ್ವರ್ಣ ಕವಾಟಗಳ ಕಳ್ಳತನದಲ್ಲಿ ಜವಾಬ್ದಾರಿಕೆಯಿರುವ ಸರಕಾರವು ಕೈ ಜೋಡಿಸಿರುವುದಾಗಿ ಅನುಮಾನಗಳಿವೆ. ಉಗಾಂಡಾದ ಯಾವುದೋ ಕುಗ್ರಾಮದಲ್ಲಿ ಎರಡು ದಿನ ನಳ್ಳಿ ನೀರು ಬರದಿದ್ದರೆ ಮೂರನೇ ದಿನ ದೆಹಲಿಯ ಉಗಾಂಡಾ ರಾಯಭಾರ ಕಚೇರಿಯ ಮುಂಭಾಗ ಹೋರಾಟ ನಡೆಸುವ ಸಿಪಿಎಂ ಈ ಓಟ್ ಕಳ್ಳತನದ ಬಗ್ಗೆ ಚಕಾರವೆತ್ತಿಲ್ಲ. ಅದೇ ರೀತಿ ಭಾರತದ ಅತ್ಯಂತ ಪವಿತ್ರ ಆರಾಧನಾ ಕೇಂದ್ರವಾಗಿರುವ ಶಬರಿಮಲೆ ಕ್ಷೇತ್ರದ ಬಾಗಿಲು, ಗೋಡೆಗಳ ಸ್ವರ್ಣ ಚೋರತನಕ್ಕೆ…

Read More

ದಕ್ಷಿಣ ಕನ್ನಡ ಜಿಲ್ಲಾ 10ನೇ ಗಮಕ ಕಲಾ ಸಮ್ಮೇಳನ ಪುತ್ತೂರಿನ ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ಅ.17 ಮತ್ತು 18ರಂದು.

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ 10ನೇ ಗಮಕ ಕಲಾ ಸಮ್ಮೇಳನ ಪುತ್ತೂರಿನ ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ಅ.17 ಮತ್ತು 18ರಂದು ನಡೆಯಲಿದೆ. ಸಮ್ಮೇಳನದ ಅಧ್ಯಕ್ಷತೆಯನ್ನು ಪ್ರವಚನಗಾರ, ಸಾಹಿತಿ, ಹಿರಿಯ ವಿದ್ವಾಂಸ ಮುಳಿಯ ಶಂಕರ ಭಟ್ಟ ಅವರು ವಹಿಸಲಿದ್ದಾರೆ ಎಂದು ಸಮ್ಮೇಳನದ ಗೌರವ ಮಾರ್ಗದರ್ಶಕ ಪ್ರದೀಪ ಕುಮಾರ ಕಲ್ಕೂರ ತಿಳಿಸಿದರು. ಅವರು ಪತ್ರಿಕಾಭವನದಲ್ಲಿ ಈ ಬಗ್ಗೆ ಮಾಹಿತಿಯನ್ನು ನೀಡಿ , ಅ.17 ರಂದು ಮಧ್ಯಾಹ್ನ 2.30ಕ್ಕೆ ಒಡಿಯೂರಿನ ಸಾಧ್ಯ ಶ್ರೀ ಮಾತಾನಂದಮಯೀ ಉಪಸ್ಥಿತಿಯಲ್ಲಿ ಡಾ.ಹರಿಕೃಷ್ಣ ಪುನರೂರು ಅವರು…

Read More

ಅ. 11 ಸದ್ಗುರು ಶ್ರೀ ಮಾತಾ ಅಮೃತಾನಂದಮಯಿ ದೇವಿಯವರ ಜನ್ಮದಿನಾಚರಣೆ

ಮಂಗಳೂರು ನಗರದ ಬೋಳೂರಿನಲ್ಲಿರುವ ಮಾತಾ ಅಮೃತಾನಂದಮಯಿ ಮಠದ ಆವರಣದಲ್ಲಿ ಅಕ್ಟೋಬರ್ 11 ರಂದು ಸದ್ಗುರು ಶ್ರೀ ಮಾತಾ ಅಮೃತಾನಂದಮಯಿ ದೇವಿಯವರ 72 ನೆಯ “ಅಮೃತೋತ್ಸವ 2025” ನ್ನು ಶದ್ಧಾ ಭಕ್ತಿಯಿಂದ ವೈವಿಧಮಯ ಕಾರ್ಯಕ್ರಮಗಳೊಂದಿಗೆ ಆಚರಿಸಲಾಗುವುದೆಂದು ಸೇವಾ ಸಮಿತಿಯ ಅಧ್ಯಕ್ಷರಾದ ಸುರೇಶ್ ಅಮೀನ್ ತಿಳಿಸಿದರು .ಅವರು ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿಯನ್ನು ನೀಡಿದರು. ಅಂದು ಪೂರ್ವಾಹ್ನ 11.45 ಕೆ.ಸಾಮಿನಿ ಮಂಗಳಾಮೃತ ಪ್ರಾಣ ರವರು ಅಮೃತ ಜ್ಯೋತಿಯನ್ನು ಬೆಳಗಿಸುವ ಮೂಲಕ ಚಾಲನೆ ನೀಡಲಿರುವರು. ಬೆಳಗ್ಗೆ 9.00…

Read More

13 ವರ್ಷಗಳಿಂದ ನಿಗೂಢವಾಗಿ ನಾಪತ್ತೆಯಾಗಿದ್ದ ಯುವಕ ಪತ್ತೆ!

ಉಡುಪಿ: 13 ವರ್ಷಗಳಿಂದ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡಿದ್ದಕ್ಕೆ ಮನೆಯವರಿಗೆ ಹೆದರಿ ನಿಗೂಢವಾಗಿ ನಾಪತ್ತೆಯಾಗಿದ್ದ ಕಾರ್ಕಳದ ಯುವಕನೋರ್ವನನ್ನು ಕೊನೆಗೂ ಪೊಲೀಸರು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.2012ರಲ್ಲಿ ಕಾಣೆಯಾಗಿದ್ದ ಅನಂತ ಕೃಷ್ಣ ಪ್ರಭು (29) ಅವರನ್ನು ಇದೀಗ ಬೆಂಗಳೂರು ನಗರದಲ್ಲಿ ಪೊಲೀಸರು ಪತ್ತೆ ಹಚ್ಚಿ ವಶಕ್ಕೆ ಪಡೆದಿದ್ದಾರೆ. ಇಲ್ಲಿನ ನಿವಾಸಿ ಪ್ರಭಾಕರ ಪ್ರಭು ಅವರ ಪುತ್ರ ಅನಂತ ಕೃಷ್ಣ ಪ್ರಭು (ಆಗ 16 ವರ್ಷ) ವಿದ್ಯಾವರ್ಧಕ ಪದವಿ ಪೂರ್ವ ಕಾಲೇಜು, ಮುಂಡ್ಕೂರು ಅಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದರು. 2012 ಡಿಸೆಂಬರ್ ತಿಂಗಳಲ್ಲಿ ದೇವಸ್ಥಾನಕ್ಕೆ…

Read More

ಪ್ರತಿಭೆಗಳ ಅನಾವರಣಕ್ಕೆ ಸೃಜನೋತ್ಸವ ಸಹಕಾರಿ : ಕಮಲಾಕ್ಷ ಡಿ

ಕೊಡ್ಲಮೊಗರು : ಗ್ರಾಮೀಣ ಪ್ರದೇಶದ ಪ್ರತಿಭೆಗಳಿಗೆ ವೇದಿಕೆಯನ್ನು ನೀಡುವುದರೊಂದಿಗೆ ಪ್ರತಿಭೆಗಳ ಅನಾವರಣಕ್ಕೆ ಸೃಜನೋತ್ಸವ ಸೂಕ್ತ ವೇದಿಕೆಯನ್ನು ನೀಡುತ್ತದೆ.ಶೈಕ್ಷಣಿಕ, ಸಾಮಾಜಿಕ ಹಾಗೂ ಸಾಂಸ್ಕೃತಿಕವಾಗಿ ಮಕ್ಕಳ ಬೆಳವಣಿಗೆಗೆ ಉತ್ತೇಜನ ನೀಡುವ ಗ್ರಂಥಾಲಯದ ಸದುಪಯೋಗವನ್ನು ಎಲ್ಲರೂ ಪಡೆದುಕೊಳ್ಳಬೇಕು ಎಂದು ಮಂಜೇಶ್ವರ ತಾಲೂಕು ಲೈಬ್ರರಿ ಕೌನ್ಸಿಲ್ ನ ಕಾರ್ಯದರ್ಶಿ ಕಮಲಾಕ್ಷ ಡಿ ರವರು ತಿಳಿಸಿದರು. ಅವರು ಮಂಜೇಶ್ವರ ತಾಲೂಕು ಲೈಬ್ರರಿ ಕೌನ್ಸಿಲ್ ನ ಸಹಕಾರದಲ್ಲಿ ವರ್ಕಾಡಿ ಪಂಚಾಯತ್ ನೇತೃತ್ವ ಸಮಿತಿಯ ಆಶ್ರಯದಲ್ಲಿ ಜರಗಿದ ವರ್ಕಾಡಿ ಪಂಚಾಯತ್ ಮಟ್ಟದ ಸೃಜನೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ಮಂಜೇಶ್ವರ…

Read More
error: Content is protected !!