ಎಂ ಎಲ್ ಸಿ ಐವನ್ ಡಿ’ಸೋಜಾರವರ ನೇತೃತ್ವದಲ್ಲಿ 11ನೇ ವರ್ಷದ ಭಾವೈಕ್ಯತೆಯ ದೀಪಾವಳಿ ಸಂಭ್ರಮಾಚರಣೆ ಮತ್ತು ಗೂಡುದೀಪ ಸ್ಪರ್ಧೆ.

ಮಂಗಳೂರು: ಕರ್ನಾಟಕ ಸರಕಾರದ ವಿಧಾನ ಪರಿಷತ್ ಶಾಸಕರಾದ ಐವನ್ ಡಿ’ಸೋಜಾರವರ ನೇತೃತ್ವದಲ್ಲಿ ಕಳೆದ 10 ವರ್ಷಗಳಿಂದ ಸರ್ವಧರ್ಮಗಳ ಭಾವೈಕ್ಯತೆಯ ಸಂಗಮವಾದ ದೀಪಾವಳಿ , ಕ್ರಿಸ್ಮಸ್ ಹಬ್ಬ ಹಾಗೂ ರಂಜಾನ್ ಹಬ್ಬಗಳನ್ನು ಸರ್ವಧರ್ಮಿಯರ ಜೊತೆಗೆ ಸೇರಿ ಆಚರಿಸುತ್ತ ಬಂದಿದ್ದು , ಇದೀಗ 11ನೇ ವರ್ಷದ ದೀಪಾವಳಿ ಸಂಭ್ರಮಾಚರಣೆ ಮತ್ತು ಗೂಡುದೀಪ ಸ್ಪರ್ಧೆಯು ಅಕ್ಟೋಬರ್ 20 ರಂದು ನರಕಚತುರ್ದಶಿ ದಿನದಂದು ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದ ಸಭಾಭವನದಲ್ಲಿ ಸಂಜೆ ಗಂಟೆ 3:00ರಿಂದ ರಾತ್ರಿಯವರೆಗೆ ನಡೆಯಲಿದೆ ಎಂದು ಸಮಿತಿಯ ಸದಸ್ಯರಾದ ಜೆ….

Read More

ಅಧಿಕೃತ ಮಾರುಕಟ್ಟೆಗೆ ಬಿಡುಗಡೆಯಾಗಲಿರುವ ‘ತುಝರ್’ ಫರ್ಪ್ಯೂಮ್ ಬ್ರಾಂಡ್

ಮಂಗಳೂರು: ಅಲ್ ನಜೀಂ ಉಸ್ ಸಕೀಬ್ ಪರ್ಪ್ಯೂಮ್ ಟ್ರೇಡರ್ಸ್ ಸಂಸ್ಥೆಯ ಹೊಸ ಫರ್ಪ್ಯೂಮ್ ಬ್ರಾಂಡ್ ‘ ತುಝರ್ (TUZHAR)’ ಬಿಡುಗಡೆ ಕಾರ್ಯಕ್ರಮವು ಅಕ್ಟೋಬರ್ 9ರಂದು ಬೆಳಿಗ್ಗೆ 11 ಗಂಟೆಗೆ ಮಂಗಳೂರು ಬೆಂಡೋರ್‌ವೆಲ್‌ನ ಅಗ್ನೆಸ್ ಕಾಲೇಜು ಪಕ್ಕದ ಸೇಂಟ್ ಸೆಬಾಸ್ಟಿಯನ್ ಮಿನಿ ಹಾಲ್ನಲ್ಲಿ ನಡೆಯಲಿದೆ ಎಂದು ಎಂಡಿ ಅಬ್ದುಲ್ ಹಮೀದ್ ತಿಳಿಸಿದರು . ಮಂಗಳೂರಿನ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು, ಕಾರ್ಯಕ್ರಮವನ್ನು ಯೆನೆಪೊಯ ಡೀಮ್ ಟು ಬಿ ಯೂನಿವರ್ಸಿಟಿಯ ಕುಲಪತಿ ಡಾ. ಯೆನೆಪಯ ಅಬ್ದುಲ್ಲಾ ಕುಂಗ್…

Read More

ವಿಶ್ವಕರ್ಮ ಸಂತ್ರಸ್ತೆಯ ಹೆಣ್ಣು ಮಗಳ ಪರವಾಗಿ ಧ್ವನಿ ಎತ್ತಿದ ವಿಶ್ವಕರ್ಮ ಯುವ ಮಿಲನ್ ಸಂಘ

ಮಂಗಳೂರು: ವಿಶ್ವ ಕರ್ಮ ಸಮಾಜದ ಹೆಣ್ಣುಮಗಳಿಗಾದ ಅನ್ಯಾಯವನ್ನು ಖಂಡಿಸುತ್ತೇನೆ , ಕಾನೂನಿನ ನಿರ್ಣಯ ಜಾರಿಗೆ ಬಂದ ಕೂಡಲೇ ಮುಂದಿನ ನಿರ್ಧಾರವನ್ನು ಕೈಗೊಳ್ಳಲಾಗುವುದು , ಸಂತ್ರಸ್ತೆಯ ಹೆಣ್ಣು ಮಗಳ ಪರವಾಗಿ ನಾವಿದ್ದೇವೆ ಎಂದು ವಿಶ್ವಕರ್ಮ ಯುವ ಮಿಲನ್ ಸ್ಥಾಪಕಾಧ್ಯಕ್ಷ ವಿಕ್ರಮ್ ಐ ಆಚಾರ್ಯ ತಿಳಿಸಿದರು. ಜಗನ್ನಿವಾಸ ರಾವ್ ಮನವೊಲಿಸಿ ಅವರ ಮಗ ಕೃಷ್ಣ ಜಿ ರಾವ್ ನ ವಿವಾಹಕ್ಕಾಗಿ ಪ್ರಯತ್ನವನ್ನು ಮಾಡುವ ಪ್ರಯತ್ನಗಳು ನಡೆದಿದೆ . ಮುಂದೆ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಶಾಸಕರ ಮೂಲಕ ಜಗನ್ನಿವಾಸ…

Read More

ಕರ್ನಾಟಕದಲ್ಲಿ ಆರ್ಥಿಕ , ಸಾಮಾಜಿಕ , ಶೈಕ್ಷಣಿಕ ಅಭಿವೃದ್ಧಿಗೆ ಸಹಕಾರಿಯಾಗಬೇಕೆಂದು ಜಾತಿ ಸಮೀಕ್ಷೆ

ಮಂಗಳೂರು: ಕರ್ನಾಟಕದಲ್ಲಿ ಆರ್ಥಿಕ , ಸಾಮಾಜಿಕ , ಶೈಕ್ಷಣಿಕ ಅಭಿವೃದ್ಧಿಗೆ ಸಹಕಾರಿಯಾಗಬೇಕೆಂದು ಜಾತಿ ಸಮೀಕ್ಷೆಯನ್ನು ಕೈಗೊಳ್ಳಗಾಗಿದೆ . ಇಂದು ಈ ಭಾಗದ ಕಾಂಗ್ರೆಸ್ ಪಕ್ಷದ ಹಿಂದುಳಿದ ಮುಖಂಡರನ್ನು ಒಗ್ಗೂಡಿಸಿಕೊಂಡು ಸಾಮಾಜಿಕ ನ್ಯಾಯ – ನಮ್ಮ ಸಂವಿಧಾನ ಬದ್ಧವಾದ ಹಕ್ಕು ನಾವೆಲ್ಲರೂ ಒಂದೇ ಎನ್ನುವ ಕಲ್ಪನೆಯಲ್ಲಿ ಸಭೆಯನ್ನು ಕೈಕೊಳ್ಳಲಾಗಿದೆ . ಅದರ ಪ್ರಕಾರ ಸಮೀಕ್ಷೆಯಲ್ಲಿ ಬರುವ ಅಂಕಿ ಅಂಶವೇ ಮಾನದಂಡವಾಗಿ ನಾವು ಸ್ವೀಕರಿಸಬೇಕೆಂದು ವಿಧಾನ ಪರಿಷತ್ತಿನ ಮಾಜಿ ಅಧ್ಯಕ್ಷರಾದ ವಿ ಆರ್ ಸುದರ್ಶನ್ ಕುಮಾರ್ ತಿಳಿಸಿದರು. ಅವರು ನಗರದ…

Read More

ಪುತ್ತೂರು: ರಸ್ತೆ ಅಪಘಾತ ಗಾಯಗೊಂಡ ಮಹಿಳೆ ಸಾವು

ಪುತ್ತೂರು,ಅ. 08: ಪುತ್ತೂರು: ಕೆಲ ತಿಂಗಳ ಹಿಂದೆ ಪುತ್ತೂರು ತಾಲೂಕಿನ ಮುರ ಎಂಬಲ್ಲಿನ ತಿರುವಿನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಕೆದಿಲ ನಿವಾಸಿ ಅಪೂರ್ವ ಕೆ. ಭಟ್ (32) ಚಿಕಿತ್ಸೆ ಫಲಿಸದೆ ಮಂಗಳವಾರ ರಾತ್ರಿ ನಿಧನರಾದರು. ಮೇ 27ರಂದು ಪುತ್ತೂರಿನ ಹೊರವಲಯದ ಮುರ ಜಂಕ್ಷನ್ ಬಳಿ ಈ ದುರ್ಘಟನೆ ನಡೆದಿತ್ತು. ಮಾಣಿ-ಮೈಸೂರು ಹೆದ್ದಾರಿಯಲ್ಲಿ ಪುತ್ತೂರು ಪೇಟೆಯಿಂದ ತಮ್ಮ ತಂದೆ ಈಶ್ವ‌ರ್ ಭಟ್ ಅವರ ಜತೆ ಕಾರಿನಲ್ಲಿ ಮನೆಗೆ ತೆರಳುತ್ತಿದ್ದಾಗ, ಪಡ್ನರಿಗೆ ತಿರುಗುವ…

Read More

ಕಾಸರಗೋಡು ಕನ್ನಡ ಗ್ರಾಮದ ಸಂಸ್ಥಾಪಕ ಶಿವರಾಮ ಕಾಸರಗೋಡು ಅವರಿಗೆ ಅನಿವಾಸಿ ಕನ್ನಡಿಗರ ಸಮ್ಮೇಳನ ಹೊರನಾಡ ಕನ್ನಡಿಗರ ಸಮ್ಮೇಳನದ ಗೌರವ ಪುರಸ್ಕಾರಕ್ಕೆ ಆಯ್ಕೆ .

ಮಂಜುನಾಥ ಎಜುಕೇಷನ್ ಟ್ರಸ್ಟ್ (ರಿ ),ಹೃದಯವಾಹಿನಿ ಕರ್ನಾಟಕ,ಮಂಗಳೂರು ಹಾಗೂ ಎಸ್. ಕೆ.ಮುನ್ಸಿಪಾಲ್ ಎಂಪ್ಲಾಯಿಸ್ ಯೂನಿಯನ್(ರಿ),ಮಂಗಳೂರು ಸಹಯೋಗದಲ್ಲಿ ಮಂಗಳೂರು ಕುದ್ಮುಲ್ ರಂಗರಾವ್ ಪುರಭವನದಲ್ಲಿ 2025 ಅಕ್ಟೋಬರ್ 9 ಗುರುವಾರದಂದು ನಡೆಯುವ ದ್ವಿತೀಯ ಅನಿವಾಸಿ ಕನ್ನಡಿಗರ ಸಮ್ಮೇಳನ ಹಾಗೂ ಹೊರನಾಡ ಕನ್ನಡಿಗರ ಸಮ್ಮೇಳನದಲ್ಲಿ ಕಾಸರಗೋಡಿನ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ ),ಕನ್ನಡ ಗ್ರಾಮ ಕಾಸರಗೋಡು,ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಕೇರಳ ರಾಜ್ಯ ಘಟಕ, ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ ಕಾಸರಗೋಡು ಕನ್ನಡ ಗ್ರಾಮದ ಸಂಸ್ಥಾಪಕ…

Read More

ಕಡಲ ತಡಿಯ ಭಾರ್ಗವ ಡಾ.ಶಿವರಾಮ ಕಾರಂತ ಅವರ 124ನೇ ವರ್ಷದ ಜನ್ಮದಿನಾಚರಣೆ ಹಾಗೂ ಕಾರಂತ ಬಾಲವನ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಅ. 10ರಂದು.

ಪುತ್ತೂರು; ಕಡಲ ತಡಿಯ ಭಾರ್ಗವ ಡಾ.ಶಿವರಾಮ ಕಾರಂತ ಅವರ 124ನೇ ವರ್ಷದ ಜನ್ಮದಿನಾಚರಣೆ ಹಾಗೂ ಕಾರಂತ ಬಾಲವನ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಅ.10ರಂದು ಪುತ್ತೂರಿನ ಬಾಲವನ ಬಯಲು ರಂಗಮಂದಿರದಲ್ಲಿ ನಡೆಯಲಿದೆ. 2024ನೇ ಸಾಲಿನ ಕಾರಂತ ಬಾಲವನ ಪ್ರಶಸ್ತಿಯನ್ನು ಹಿರಿಯ ಸಾಹಿತಿ ಜನಪದ ವಿದ್ವಾಂಸ ಡಾ.ಬಿ.ಎ.ವಿವೇಕ ರೈ ಹಾಗೂ 2025ನೇ ಸಾಲಿನ ಪ್ರಶಸ್ತಿಯನ್ನು ಶಿಕ್ಷಣ ಸಾಹಿತಿ ಮಕ್ಕಳ ಮಂಟಪದ ರೂವಾರಿ ಡಾ.ಎನ್.ಸುಕುಮಾರ ಗೌಡ ಅವರಿಗೆ ಪ್ರದಾನ ಮಾಡಲಾಗುವುದು ಎಂದು ಪುತ್ತೂರು ಉಪವಿಭಾಗಾಧಿಕಾರಿ ಸ್ಟೆಲ್ಲಾ ವರ್ಗೀಸ್ ಅವರು ತಿಳಿಸಿದರು. ಪತ್ರಿಕಾಗೋಷ್ಟಿಯಲ್ಲಿ…

Read More

ಪೆರ್ಲದ ವಾಹನ ಚಾಲಕ ಕುಂಬಳೆಯಲ್ಲಿ ರೈಲಿಗೆ ತಲೆಯೊಡ್ಡಿ ಆತ್ಮಹತ್ಯೆ.

ಕುಂಬಳೆ : ರೈಲ್ವೆ ಹಳಿಯಲ್ಲಿ ಯುವಕನೊರ್ವನ ಮೃತದೇಹ ರೈಲಿಗೆ ತಲೆ ಒಡ್ಡಿದ ಸ್ಥಿತಿಯಲ್ಲಿ ಕಂಡು ಬಂದಿದೆ. ಮೃತ ವ್ಯಕ್ತಿ ಪೆರ್ಲದಲ್ಲಿ ವಾಹನ ಚಾಲಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಕಾಟುಕುಕ್ಕೆ ಸಮೀಪ ಸೂರ್ಡೇಲು ನಿವಾಸಿ ದಿ.ಶೀನಪ್ಪ ರೈಗಳ ಪುತ್ರ ತಾರನಾಥ ರೈ (46) ಎಂದು ಗುರುತಿಸಲಾಗಿದೆ. ಈ ಹಿಂದೆ ಪೆರ್ಲದಲ್ಲಿ ಬಾಡಿಗೆ ವಾಹನ ಚಲಾಯಿಸುತ್ತಿದ್ದ ಇವರು ಇದೀಗ ಸ್ವಲ್ಪ ಸಮಯಗಳ ಹಿಂದೆ ತನ್ನ ವಾಹನಗಳನ್ನು ಮಾರಿದ್ದು ಬಳಿಕ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದರು. ಈ ಹಿಂದೆಯೂ ಆತ್ಮಹತ್ಯೆಗೆ ಯತ್ನಿಸಿದ್ದರೆಂದು ತಿಳಿದು ಬಂದಿದೆ….

Read More

ಸಂಘಟಿತ ಮತ್ತು ಅಸಂಘಟಿಕ ಕಾರ್ಮಿಕ ವಲಯಗಳಲ್ಲಿ ಕನಿಷ್ಠ ವೇತನ ಜಾರಿಗೆ ಬರುವುದರಿಂದ ಸಾಕಷ್ಟು ಪ್ರಮಾಣದಲ್ಲಿ ಸುಧಾರಣೆಯನ್ನು ಕಾಣಲಿದೆ-ಟಿ.ಎಂ ಶಹೀದ್ ತೆಕ್ಕಿಲ್

ಮಂಗಳೂರು: ರಾಜ್ಯ ಕಾರ್ಮಿಕ ವಲಯವನ್ನು ಸುಧಾರಣೆಯನ್ನು ತರುವಲ್ಲಿ ಕನಿಷ್ಠ ವೇತನ ಸಲಹಾ ಮಂಡಳಿಯು ಪ್ರಧಾನ ಪಾತ್ರವನ್ನು ವಹಿಸಲಿದೆ . ರಾಜ್ಯದಲ್ಲಿ ಸರಿಯಾದ ಪ್ರಮಾಣದಲ್ಲಿ ಸಂಘಟಿತ ಮತ್ತು ಅಸಂಘಟಿಕ ಕಾರ್ಮಿಕ ವಲಯಗಳಲ್ಲಿ ಕನಿಷ್ಠ ವೇತನ ಜಾರಿಗೆ ಬರುವುದರಿಂದ ಅವರ ಜೀವನ ಸಾಕಷ್ಟು ಪ್ರಮಾಣದಲ್ಲಿ ಸುಧಾರಣೆಯನ್ನು ಕಾಣಲಿದೆ ಎಂದು ರಾಜ್ಯ ಕಾರ್ಮಿಕ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷರು ,, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾದ ಟಿ.ಎಂ ಶಹೀದ್ ತೆಕ್ಕಿಲ್ ತಿಳಿಸಿದರು . ಅವರು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ…

Read More

ಉಡುಪಿ ಕೋಚಿನ್ ಶಿಪ್‌ಯಾರ್ಡ್ ಲಿಮಿಟೆಡ್ ಕಂಪೆನಿಯು 70 ಟನ್ ನ ಮೂರು ಬೋಲಾರ್ಡ್ ಪುಲ್ ಟಗ್‌ಗಳ ಸರಣಿಯ ಮೊದಲ ನೌಕೆ ಗೆ ಹಸಿರು ನಿಶಾನೆ.

ಉಡುಪಿ: ಭಾರತದ ಪ್ರಮುಖ ಶಿಪ್‌ಯಾರ್ಡ್ ಆಗಿರುವ ಕೋಚಿನ್ ಶಿಪ್‌ಯಾರ್ಡ್ ಲಿಮಿಟೆಡ್‌ನ ಮಾಲೀಕತ್ವದ ಅಂಗಸಂಸ್ಥೆಯಾದ ಉಡುಪಿ ಕೋಚಿನ್ ಶಿಪ್‌ಯಾರ್ಡ್ ಲಿಮಿಟೆಡ್ ಕಂಪೆನಿಯು ಎಂ/ಸ್ ಓಷನ್ ಸ್ಪಾರ್ಕಲ್ ಲಿಮಿಟೆಡ್ ಗಾಗಿ ನಿರ್ಮಿಸುತ್ತಿರುವ ಮೂರು 70 ಟನ್ ಬೋಲಾರ್ಡ್ ಪುಲ್ ಟಗ್‌ಗಳ ಸರಣಿಯ ಮೊದಲ ನೌಕೆಯನ್ನು ಯಶಸ್ವಿಯಾಗಿ ಪ್ರಾರಂಭಿಸಿದೆ. ಈ ಟಗ್‌ನ ಪ್ರಾರಂಭವನ್ನು ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಸಂಸದರಾದ ಕೋಟಾ ಶ್ರೀನಿವಾಸ ಪೂಜಾರಿ ಅವರು ಕೋಚಿನ್ ಶಿಪ್‌ಯಾರ್ಡ್ ಲಿಮಿಟೆಡ್‌ನ ತಾಂತ್ರಿಕ ನಿರ್ದೇಶಕರು, ಉಡುಪಿ ಕೋಚಿನ್ ಶಿಪ್‌ಯಾರ್ಡ್ ಲಿಮಿಟೆಡ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಇತರ…

Read More
error: Content is protected !!