ಪುತ್ತೂರು ತಾಲ್ಲೂಕು ಮುಂಡೂರು ಗ್ರಾಮ ಪಂಚಾಯತ್ ವಠಾರದಲ್ಲಿ ತ್ಯಾಜ್ಯರಾಶಿ.ಕಾಂಗ್ರೆಸ್ ಕಾರ್ಯಕರ್ತರಿಂದ ಪಂಚಾಯತಿಗೆ ದಿಢೀ‌ರ್ ಭೇಟಿ. ಮೂರು ದಿನದೊಳಗಾಗಿ ಸ್ವಚ್ಛತೆ ಮಾಡದಿದ್ದಲ್ಲಿ ಪ್ರತಿಭಟನೆಯ ಎಚ್ಚರಿಕೆ.

ಪುತ್ತೂರು: ಪುತ್ತೂರು ತಾಲ್ಲೂಕು ಮುಂಡೂರು ಗ್ರಾಮ ಪಂಚಾಯತ್ ವಠಾರದಲ್ಲಿ ತ್ಯಾಜ್ಯ ರಾಶಿ ಹಾಗೂ ಗ್ರಾ.ಪಂ ವಠಾರದಲ್ಲಿ ಸ್ವಚ್ಛತೆ ಮಾಡದೇ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಆರೋಪಿಸಿ ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತರು ಪಂಚಾಯತಿಗೆ ದಿಢೀರ್ ಗ್ರಾ.ಪಂಗೆ ಭೇಟಿ ನೀಡಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ.ಮುಂಡೂರು ವಲಯ ಕಾಂಗ್ರೆಸ್ ಅಧ್ಯಕ್ಷ ಪ್ರವೀಣ್‌ ಆಚಾರ್ಯ ಹಾಗೂ ಮಾಜಿ ಅಧ್ಯಕ್ಷ ಸುಪ್ರೀತ್ ಕಣ್ಣಾರಾಯ ನೇತೃತ್ವದಲ್ಲಿ ಗ್ರಾ.ಪಂಗೆ ಆಗಮಿಸಿದ ಕಾಂಗ್ರೆಸ್‌ ಕಾರ್ಯಕರ್ತರು ಪಿಡಿಓ ಮನ್ಮಥ ಅಜಿರಂಗಳ ಜೊತೆ ಹಾಗೂ ಗ್ರಾ.ಪಂ ಅಧ್ಯಕ್ಷ ಚಂದ್ರಶೇಖರ ಎನ್‌ಎಸ್‌ಡಿ ಜೊತೆ…

Read More

ಪ್ರಯಾಣಿಕರ ಲಗೇಜ್ ದುಬೈಯಲ್ಲೇ ಬಿಟ್ಟು ಬಂದ ಏರ್ ಇಂಡಿಯಾ ಎಕ್ಸ್ ಪ್ರೆಸ್. ಪ್ರಯಾಣಿಕರಿಗೆ ಆಘಾತ .

ಮಂಗಳೂರು: ಪ್ರಯಾಣಿಕರ ಲಗೇಜ್ ದುಬೈಯಲ್ಲೇ ಬಿಟ್ಟು ಬಂದು ಏರ್ ಇಂಡಿಯಾ ಎಕ್ಸ್ ಪ್ರೆಸ್ ಪ್ರಯಾಣಿಕರಿಗೆ ಆಘಾತ ನೀಡಿದೆ.ಶನಿವಾರ ಸಂಜೆ ದುಬೈಯಿಂದ ಮಂಗಳೂರಿಗೆ ಆಗಮಿಸಿದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನವು ಹಲವು ಪ್ರಯಾಣಿಕರ ಲಗೇಜ್‌ಗಳನ್ನು ದುಬೈಯಲ್ಲೇ ಬಿಟ್ಟು ಬಂದಿರುವುದು ವರದಿಯಾಗಿದೆ. ವಿಮಾನ ಮಂಗಳೂರಿಗೆ ಬಂದು ಇಳಿದ ನಂತರ ಪ್ರಯಾಣಿಕರು ತಮ್ಮ ಲಗೇಜು ಪಡೆಯಲು ಬಂದಾಗಲೇ ಅವರಿಗೆ ನಿಮ್ಮ ಲಗೇಜು ದುಬೈಯಿಂದ ಲೋಡ್ ಆಗಿಲ್ವ ವಿಮಾನ ಫುಲ್ ಇದ್ದುದರಿಂದ ಕೆಲವು ಲಗೇಜ್‌ಗಳನ್ನು ಅಲ್ಲೇ ಬಿಡಲಾಗಿದೆ, ನಾಳೆ ಬೆಳಗ್ಗೆ 5 ಗಂಟೆಗೆ…

Read More

ಅಬ್ದುಲ್ ರಹ್ಮಾನ್ ಕೊಲೆ ಪ್ರಕರಣದ ಆರೋಪಿಗಳ ಮೇಲೆ ಕೆ-ಕೋಕಾ ಕಾಯ್ದೆ ಅಡಿ ಪ್ರಕರಣ ದಾಖಲು.

ಮಂಗಳೂರು: ಅಬ್ದುಲ್ ರಹ್ಮಾನ್ ಕೊಲೆ ಪ್ರಕರಣದ ಆರೋಪಿಗಳ ಮೇಲೆ ಕೆ-ಕೋಕಾ ಕಾಯ್ದೆ ಅಡಿ ಪ್ರಕರಣ ದಾಖಲು ಮಾಡಲಾಗಿದೆ.ಕೊಳತ್ತಮಜಲು ಅಬ್ದುಲ್ ರಹ್ಮಾನ್ ರನ್ನು‌ ಮೇ 27ರಂದು ಕೊಲೆ ಮಾಡಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ದೀಪಕ್, ಚಿಂತನ್, ಪೃಥ್ವಿರಾಜ್ ಜೋಗಿ, ಸುಮಿತ್ ಬಿ. ಆಚಾರ್ಯ, ವಿ.ರವಿರಾಜ ಮೂಲ್ಯ, ಅಭಿನ್ ರೈ, ತೇಜಾಕ್ಷ, ರವಿಸಂಜಯ್ ಜಿ.ಎಸ್., ಶಿವಪ್ರಸಾದ್ ತುಂಬೆ, ಪ್ರದೀಪ , ಶಾಹಿತ್, ಸಚಿನ್ ರೊಟ್ಟಿಗುಡ್ಡೆ, ರಂಜಿತ್ ಎಂಬವರನ್ನು ಬಂಧಿಸಿದ್ದರು. ಆರೋಪಿಗಳು ಇದೀಗ ನ್ಯಾಯಾಂಗ ಬಂಧನದಲ್ಲಿದ್ದಾರೆ. ಪ್ರಕರಣದ ಪ್ರಮುಖ ಆರೋಪಿ…

Read More

ಕ್ಷುಲ್ಲಕ ನೆಪಒಡ್ಡಿ ರಾಜಕೀಯ ಪ್ರೇರಿತ ಪ್ರಕರಣ ದಾಖಲಾತಿ ಅಧಿಕಾರಿಗಳ ನಡೆ ಖಂಡನಿಯ :ಹರೀಶ್ ಆಚಾರ್ಯ

ಬಂಟ್ವಾಳ ತಾಲೂಕು ಪಂಚಾಯತ್ ಮಾಜಿ ಸದಸ್ಯರೂ ಹಾಗೂ ಬಿಜೆಪಿ ಮುಖಂಡರಾಗಿರುವ ಪ್ರಭಾಕರ ಪ್ರಭುರವರು ಬಂಟ್ವಾಳ ತಾಲೂಕು ಪಂಚಾಯತ್ ಹೆಸರನ್ನು ತನ್ನ ಲೆಟರ್ ಹೆಡ್ ನಲ್ಲಿ ಬಳಸಿಕೊಂಡು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಕುರಿತು ಗ್ರಾಮ ಪಂಚಾಯತ್ ಸಿಬ್ಬಂದಿಗಳಿಗೆ ಜ್ಞಾಪನ ಪತ್ರ ಮೂಲಕ ಒತ್ತಡ ಹೇರದಂತೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳಿಗೆ ಮನವಿ ಮಾಡಿರುವುದರ ಬಗ್ಗೆ ಜಿಲ್ಲಾ ಮಟ್ಟದ ಅಧಿಕಾರಿಗಳ ಸೂಚನೆಯಂತೆ ಬಂಟ್ವಾಳ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಪೊಲೀಸ್ ದೂರು ನೀಡಿ ಪ್ರಕರಣ ದಾಖಲಿಸಿರುವ…

Read More

ರಸ್ತೆ ದಾಟುತ್ತಿದ್ದ ಮಹಿಳೆಗೆ ಡಿಕ್ಕಿ ತಪ್ಪಿಸಲು ಟೆಂಪೋ ಟ್ರಾವೆಲರ್ ನಡುರಸ್ತೆಯಲ್ಲೇ ಪಲ್ಟಿ.

ಬೆಳ್ತಂಗಡಿ: ರಸ್ತೆ ದಾಟುತ್ತಿದ್ದ ಮಹಿಳೆಗೆ ಡಿಕ್ಕಿ ತಪ್ಪಿಸಲು ಟೆಂಪೋ ಟ್ರಾವೆಲರ್ ನಡುರಸ್ತೆಯಲ್ಲೇ ಪಲ್ಟಿಯಾದ ಘಟನೆ ದ.ಕ. ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಅಳದಂಗಡಿಯಲ್ಲಿ ನಡೆದಿದೆ. ಅಪಘಾತದ ಭೀಕರ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಗುರುವಾಯನಕೆರೆಯಿಂದ ಅಳದಂಗಡಿ ಕಡೆಗೆ ಟೆಂಪೋ ಟ್ರಾವೆಲರ್ ವೇಗವಾಗಿ ಬರುತ್ತಿತ್ತು‌. ಈ ವೇಳೆ ಏಕಾಏಕಿ ರಸ್ತೆದಾಟಲು ಮಹಿಳೆಯೊಬ್ಬರು ಯತ್ನಿಸಿದ್ದಾರೆ‌‌. ಆಗ ಮಹಿಳೆಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಟೆಂಪೋ ಟ್ರಾವೆಲರ್ ಡ್ರೈವರ್ ಯತ್ನಿಸಿದ್ದಾರೆ. ಆದರೂ ಮಹಿಳೆಗೆ ಟೆಂಪೊ ಟ್ರಾವಲರ್ ತಾಗಿ ಮಹಿಳೆ ಬಿದ್ದಿದ್ದಾರೆ. ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ….

Read More

ಯಕ್ಷಧ್ರುವ ಪಟ್ಲ ಫೌಂಡೇಶನ್ ದೆಹಲಿ ಘಟಕದ ದಶಮ ಸಂಭ್ರಮ.

ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ನ ದೆಹಲಿ ಘಟಕದ ದಶಮ ಸಂಭ್ರಮ ದೆಹಲಿಯ ಕರ್ನಾಟಕ ಸಂಘದ ಸಭಾಂಗಣದಲ್ಲಿ ನೆರವೇರಿತು. ದೆಹಲಿಯ ಸಂಸದರಾದ ಭಾನ್ಸುರಿ ಸ್ವರಾಜ್ ಸಮಾರಂಭವನ್ನು ಉದ್ಘಾಟಿಸಿ ಯಕ್ಷಧ್ರುವ ಪಟ್ಲ ಫೌಂಡೇಶನ್ನಿನ ಕಾರ್ಯ ಯೋಜನೆಗಳನ್ನು ಮತ್ತು ಪಟ್ಲ ಸತೀಶ್ ಶೆಟ್ಟಿಯವರಿಗೆ ಕಲಾವಿದರ ಮೇಲಿರುವ ಕಾಳಜಿಯನ್ನು ಮುಕ್ತ ಕಂಠದಿಂದ ಪ್ರಶಂಸಿಸಿ ತನ್ನ ಅಧಿಕಾರ ವ್ಯಾಪ್ತಿಯಲ್ಲಿ ಪಟ್ಲ ಟ್ರಸ್ಟ್ ಫೌಂಡೇಶನ್ ಗೆ ಪೂರ್ಣ ಪ್ರಮಾಣದ ಸಹಕಾರದ ಭರವಸೆಯನ್ನು ನೀಡಿದರು. ಪಟ್ಲ ಫೌಂಡೇಶನ್ ನ ದೆಹಲಿ ಘಟಕದ ಅಧ್ಯಕ್ಷರಾದ ವಸಂತ ಶೆಟ್ಟಿ…

Read More

ವಿದ್ಯುತ್‌ ಪೋಲಾಗುವುದನ್ನು ತಪ್ಪಿಸಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು :- ಮೆಸ್ಕಾಂ ನೂತನ ಅಧ್ಯಕ್ಷ ಕೆ.ಹರೀಶ್‌ ಕುಮಾ‌ರ್

ಮಂಗಳೂರು: ವಿದ್ಯುತ್‌ ಪೋಲಾಗುವುದನ್ನು ತಪ್ಪಿಸಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಮೆಸ್ಕಾಂ ನೂತನ ಅಧ್ಯಕ್ಷ ಕೆ.ಹರೀಶ್‌ ಕುಮಾ‌ರ್ ಹೆಳಿದ್ದಾರೆ.ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಹರೀಶ್ ಕುಮಾರ್ ಮಾತನಾಡಿದರು.ಗ್ರಾಮೀಣ ಪ್ರದೇಶ ಸೇರಿದಂತೆ ಹೆಚ್ಚಿನ ಕಡೆಗಳಲ್ಲಿ ಬೀದಿದೀಪಗಳು ದಿನವಿಡೀ ಉರಿಯುತ್ತಿದ್ದು ಇದನ್ನು ಗಂಭೀರ ವಾಗಿ ಪರಿಗಣಿಸಲಾಗಿದೆ. ಗ್ರಾಮ ಪಂಚಾಯತ್‌ಗಳಿಗೆ ಈ ನಿಟ್ಟಿನಲ್ಲಿ ಸ್ಪಷ್ಟ ಸೂಚನೆ ನೀಡಲಾಗುವುದು. ಸಾರ್ವಜನಿಕರು ಕೂಡ ಈ ನಿಟ್ಟಿನಲ್ಲಿ ವಿಶೇಷ ಕಾಳಜಿ ವಹಿಸಬೇಕು ಎಂದರು. ಮೆಸ್ಕಾಂ ಪವರ್ ಮ್ಯಾನ್‌ಗಳ ಕೊರತೆಯನ್ನು ಎದುರಿಸುತ್ತಿದೆ. ಪ್ರತಿ ಬಾರಿ…

Read More

ಸ್ವೀಕರ್ ಯು ಟಿ ಖಾದರ್ ಗೆ ಬೆಂಗಳೂರು ವಿಶ್ವವಿದ್ಯಾನಿಲಯದಿಂದ ಗೌರವ ಡಾಕ್ಟರೇಟ್.

ಬೆಂಗಳೂರು: ಕರ್ನಾಟಕ ವಿಧಾನಸಭಾಧ್ಯಕ್ಷ ಯು ಟಿ ಖಾದರ್ ಸಹಿತ ಮೂವರು ಬೆಂಗಳೂರು ವಿಶ್ವವಿದ್ಯಾನಿಲಯದ 60ನೇ ವಾರ್ಷಿಕ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ಪದವಿ ಪಡೆಯಲಿದ್ದಾರೆ. ವಿಧಾನ ಪರಿಷತ್ ಮಾಜಿ ಸದಸ್ಯ ಹಾಗೂ ಸಮಾಜಸೇವಕ ಡಿ. ಮಾದೇಗೌಡ ಹಾಗೂ ಜೆ.ಪಿ. ಅಗ್ರಿ ಜೆನೆಟಿಕ್ಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥಾಪಕ ಹಾಗೂ ವ್ಯವಸ್ಥಾಪಕ ನಿರ್ದೇಶಕರಾಗಿರುವ ಡಾ.ಟಿ.ಬಿ.ಪ್ರಸನ್ನ ಗೌರವ ಡಾಕ್ಟರೇಟ್ ಪದವಿ ಪಡೆಯುವ ಇನ್ನಿಬ್ಬರು ಸಾಧಕರೊಂದಿಗೆ ಯು.ಟಿ.ಖಾದರ್ ಅವರು ಗೌರವ ಡಾಕ್ಟರೇಟ್ ಪದವಿ ಪಡೆಯಲಿದ್ದಾರೆ. ಅಕ್ಟೋಬರ್.8ರಂದು ಬೆಂಗಳೂರಿನ ಅರಮನೆ ರಸ್ತೆಯಲ್ಲಿರುವ ಸೆಂಟ್ರಲ್ ಕಾಲೇಜು ಆವರಣದಲ್ಲಿ…

Read More

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಶಿಕ್ಷಣ ಕ್ರಾಂತಿಯನ್ನೇ ಮಾಡಿದೆ ; ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಹೇಳಿಕೆ.

ಮಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಸ್ತಿತ್ವಕ್ಕೆ ಬಂದ ಬಳಿಕ ಸಾಕಷ್ಟು ಅಭಿವೃದ್ಧಿ ಕಾರ್ಯವನ್ನು ಕೈಗೊಂಡಿದೆ .ಸರಕಾರ , ಶಿಕ್ಷಣ ಇಲಾಖೆಯಲ್ಲಿಯೂ ಸಾಕಷ್ಟು ಬದಲಾವಣೆಗಳನ್ನು ತಂದಿದೆ . ೮೦ ಕ್ಕೂ ಅಧಿಕ ಶೇಕಡಾ ಕೆ ಪಿ ಎಸ್ ಮಾಡೆಲ್ ಶಾಲೆಗಳನ್ನು ಜಾರಿಗೆ ತರುವಲ್ಲಿ ಸರ್ಕಾರ ಯಶಸ್ವಿಯಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ತಿಳಿಸಿದರು .ಅವರು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿಯನ್ನು ನೀಡಿ , ಮಕ್ಕಳಿಗೆ ಒಂದೇ ಸೂರಿನಡಿಗೆಯಲ್ಲಿ ಶಿಕ್ಷಣವನ್ನು…

Read More

ಮಂಜೇಶ್ವರ ಗ್ರಾಮ ಪಂಚಾಯತ್ ವತಿಯಿಂದ “ಕೇರಳೋತ್ಸವ – 2025”

ಮಂಜೇಶ್ವರ: – ಮಂಜೇಶ್ವರ ಗ್ರಾಮ ಪಂಚಾಯತ್ ವತಿಯಿಂದ ಏರ್ಪಡಿಸಲಾದ “ಕೇರಳೋತ್ಸವ – 2025” ಕಾರ್ಯಕ್ರಮವು ಭಾರೀ ಉತ್ಸಾಹ ಹಾಗೂ ಸಂಸ್ಕೃತಿಯ ಜಾತ್ರೆಯಂತೆ ವಿಜೃಂಭಣೆಯಿಂದ ನೆರವೇರಿತು. ಈ ಉತ್ಸವವು ಕ್ರೀಡೆ, ಸಂಸ್ಕೃತಿ ಮತ್ತು ಸಮುದಾಯ ಸಾಂಘಿಕತೆಯ ಸಮನ್ವಯದಿಂದ ಗಮನ ಸೆಳೆದಿತು.ಕಾರ್ಯಕ್ರಮವನ್ನು ಗ್ರಾಮ ಪಂಚಾಯತ್ ಅಧ್ಯಕ್ಷೆ ಜೀನ್ ಲವಿನಾ ಮೊಂತೇರೋ ಅವರು ಉದ್ಘಾಟಿಸಿದರು. ಅವರು ತಮ್ಮ ಭಾಷಣದಲ್ಲಿ ಕೇರಳೋತ್ಸವದ ಮಹತ್ವವನ್ನು ವಿವರಿಸಿ, “ಈ ಉತ್ಸವವು ನಮ್ಮ ನಾಡು-ನೂತನತೆಗೆ ಕಿರುಚಿತ್ರವಾಗಿದೆ. ಕ್ರೀಡೆ, ಕಲೆ ಮತ್ತು ಜನಸಾಮಾನ್ಯರ ಭಾಗವಹಿಸುವಿಕೆಯಿಂದ ಗ್ರಾಮೀಣ ಪ್ರದೇಶದ ಸಮಗ್ರ…

Read More
error: Content is protected !!