ಕೊಲ್ಲೂರಿನಲ್ಲಿ ‘ವರಾಹ ಮಿಹಿರನ್’ ಕಥಕ್ಕಳಿ ಪ್ರದರ್ಶನ ಜೂನ್‌ 10ರಂದು

ಉಡುಪಿ ಜಿಲ್ಲೆಯ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಸ್ವರ್ಣಮುಖಿ ರಂಗಮಂದಿರದಲ್ಲಿ ಜೂನ್‌ 10ರಂದು “ವರಾಹ ಮಿಹಿರನ್” ಕಥಕ್ಕಳಿ ಪ್ರದರ್ಶನ ನಡೆಯಲಿದೆ ಎಂದು ಕಾರ್ಯಕ್ರಮದ ಸಂಯೋಜಕ ಚೇತಲ್ಲೂರ್ ವಿಜಯಕುಮಾರ್ ಗುಪ್ತನ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಮಧ್ಯಾಹ್ನ 3ರಿಂದ ಸಂಜೆ 6ರವರೆಗೆ ನಡೆಯುವ ಕಾರ್ಯಕ್ರಮದಲ್ಲಿ ಕೇರಳದ ಖ್ಯಾತ ಕಥಕ್ಕಳಿ ಕಲಾವಿದರು ಭಾಗವಹಿಸಲಿದ್ದು, ಪೌರಾಣಿಕ ಖಗೋಳಶಾಸ್ತ್ರಜ್ಞ ಹಾಗೂ ಜ್ಯೋತಿಷಿ ವರಾಹಮಿಹಿರರ ಜೀವನ ಮತ್ತು ಭವಿಷ್ಯವಾಣಿಯನ್ನು ಆಧರಿಸಿದ ದೃಶ್ಯಮಯ ನಿರೂಪಣೆ ಪ್ರದರ್ಶಿಸಲಿದ್ದಾರೆ ಎಂದರು. “ವರಾಹ ಮಿಹಿರನ್” ಕಥಕ್ಕಳಿಯ ಕಥಾವಸ್ತು ಉಜ್ಜಯಿನಿ…

Read More

ಉಳಿಯತ್ತಡ್ಕ: 24ನೇ ವರ್ಷದ ವೈದಿಕ ಶಿಕ್ಷಣ ಶಿಬಿರದ ಸಮಾರೋಪ ಸಮಾರಂಭ ಸಂಪನ್ನ

​ಉಳಿಯತ್ತಡ್ಕ: ಗುರುಕೃಪಾ ವೈದಿಕ ಶಿಕ್ಷಣ ಸಮಿತಿ ಉಳಿಯತ್ತಡ್ಕ ಇದರ ವತಿಯಿಂದ ವಿಶ್ವಬ್ರಾಹ್ಮಣ ಸಮಾಜದ ಮಕ್ಕಳಿಗೆ ವೈದಿಕ ಧಾರ್ಮಿಕ ಸಂಸ್ಕಾರವನ್ನು ಒದಗಿಸುವ 24 ನೇ ವರ್ಷದ “ವೈದಿಕ ಶಿಕ್ಷಣ ಶಿಬಿರ”ವು ಇಲ್ಲಿನ ಗುರುಕೃಪಾ ನಿವಾಸದಲ್ಲಿ ಅತ್ಯಂತ ಯಶಸ್ವಿಯಾಗಿ ಸಂಪನ್ನಗೊಂಡಿತು. ​ಕಾರ್ಯಕ್ರಮದ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಬ್ರಹ್ಮ ಶ್ರೀ ಪುರೋಹಿತರತ್ನ ಬಿ. ಕೇಶವ ಆಚಾರ್ಯ ಅವರು, “ನಿತ್ಯ ನೈಮಿತ್ತಿಕ ಕರ್ಮಾನುಷ್ಠಾನವನ್ನು ಬಾಲ್ಯದಲ್ಲಿಯೇ ಅಳವಡಿಸಿಕೊಂಡಿದ್ದಲ್ಲಿ ಸಮಾಜವು ಬಲಿಷ್ಟವಾಗಿ ಬೆಳೆಯುವುದು. ಇಂದಿನ ಆಧುನಿಕ ಯುಗದಲ್ಲಿ ಮಕ್ಕಳಿಗೆ ಸಂಸ್ಕಾರ ಮತ್ತು ಸಂಸ್ಕೃತಿಯನ್ನು ಧಾರೆ…

Read More

ಪುತ್ತೂರು ವಿದ್ಯಾರ್ಥಿನಿ ಪ್ರಕರಣ ತೀರ್ಪಿಗೆ ಶಾಕ್: ಮಹಿಳಾ ಆಯೋಗ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ

ಉಡುಪಿ: ಪುತ್ತೂರಿನ ವಿದ್ಯಾರ್ಥಿನಿಯ ಅತ್ಯಾಚಾರ ಹಾಗೂ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯ ಕೊಟ್ಟಿರುವ ತೀರ್ಮಾನದ ಬಗ್ಗೆ ನನಗೆ ಶಾಕ್ ಆಗಿದೆ. ಸಂತ್ರಸ್ತೆಗೆ ಕೇವಲ ಪರಿಹಾರ ನೀಡುವುದರಿಂದ ನ್ಯಾಯ ಸಿಗಲು ಸಾಧ್ಯವಿಲ್ಲ ಎಂದು ರಾಜ್ಯ ಮಹಿಳಾ ಆಯೋಗ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ತಿಳಿಸಿದ್ದಾರೆ. ಉಡುಪಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನ್ಯಾಯಾಲಯದ ತೀರ್ಮಾನದ ಬಗ್ಗೆ ಮತ್ತೆ ಮೇಲ್ಮನವಿ ಸಲ್ಲಿಸಬೇಕಾಗಿದೆ. ಈ ಪ್ರಕರಣವನ್ನು ಸುಪ್ರೀಂ ಕೋರ್ಟ್‌ಗೆ ತೆಗೆದುಕೊಂಡು ಹೋಗಬೇಕಾಗುತ್ತದೆ. ನಾವು ಎಲ್ಲ ಹಂತದಲ್ಲೂ ಸಂತ್ರಸ್ತೆಯ ಪರವಾಗಿ…

Read More

ಮುಲ್ಕಿಯಲ್ಲಿ ಬೈಕ್ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು; ಇಬ್ಬರ ಬಂಧನ

ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೈಕ್ ಕಳ್ಳತನ ಪ್ರಕರಣವನ್ನು ಭೇದಿಸಿರುವ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ, ಕಳುವಾದ ಬೈಕ್ ಹಾಗೂ ಎರಡು ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಂಡಿದ್ದಾರೆ. 2026ರ ಮೇ 18ರಂದು ಮುಲ್ಕಿ ಜಂಕ್ಷನ್ ಸಮೀಪದ ಅಪೋಲೊ ಫಾರ್ಮಾ ಬಳಿ ನಿಲ್ಲಿಸಿದ್ದ ಕೆಎ 20 ಇಬಿ 6383 ಸಂಖ್ಯೆಯ ಹೋಂಡಾ ಯುನಿಕಾರ್ನ್ ಬೈಕ್ ಕಳವು ಆಗಿತ್ತು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿ ಆರೋಪಿಗಳಾದ ಮೊಹಮ್ಮದ್ ರಾಝಿಕ್ (36) ಹಾಗೂ ಉಬೈದತ್ ಹೈದರ್ (31)ರನ್ನು ಬಂಧಿಸಿದ್ದಾರೆ. ಬಂಧಿತರಿಂದ ಸುಮಾರು…

Read More

ಇತಿಹಾಸ ಪ್ರಸಿದ್ಧ ಸಂತಡ್ಕ ಮಾಡದಲ್ಲಿ ಜೂನ್ 6–7 ರಂದು ಭವ್ಯ ‘ರುದ್ರಯಾಗ’ ಹಾಗೂ ‘ಗಿರಿಜಾ ಕಲ್ಯಾಣೋತ್ಸವ

ಸಂತಡ್ಕ: ಇತಿಹಾಸ ಪ್ರಸಿದ್ಧ ಸಂತಡ್ಕ ಮಾಡದ ಶ್ರೀ ಅರಸು ಸಂಕಲ ದೈವ ಕ್ಷೇತ್ರದಲ್ಲಿ ಲೋಕಕಲ್ಯಾಣ ಹಾಗೂ ಭಕ್ತರ ಅಭಿಷ್ಟಾರ್ಥ ಸಿದ್ಧಿಗಾಗಿ ಶ್ರೀ ರುದ್ರಯಾಗ, ಗಿರಿಜಾ ಕಲ್ಯಾಣೋತ್ಸವ ಹಾಗೂ ನೂತನ ಭೋಜನ ಶಾಲೆಯ ಉದ್ಘಾಟನಾ ಸಮಾರಂಭವು ಜೂನ್ 6 ಮತ್ತು 7 ರಂದು ವಿವಿಧ ವೈದಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಅದ್ದೂರಿಯಾಗಿ ನಡೆಯಲಿದೆ. ಜೂನ್ 6ರಂದು ಭವ್ಯ ಶೋಭಾಯಾತ್ರೆ ಜೂನ್ 6ರ ಶನಿವಾರ ಸಂಜೆ 4 ಗಂಟೆಗೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಚಿಗುರುಪಾದೆಯಿಂದ ರುದ್ರಯಾಗ ಮತ್ತು ಗಿರಿಜಾ ಕಲ್ಯಾಣೋತ್ಸವದಲ್ಲಿ…

Read More

ಮಂಜೇಶ್ವರದಲ್ಲಿ ಯುವಕನ ನಿಗೂಢ ಸಾವು: ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ

ಮಂಜೇಶ್ವರ ವ್ಯಾಪ್ತಿಯ ಪೈವಳಿಕೆ ಬಾಯಾರುಪದವಿನ ನಿವಾಸಿ ಮೊಹಮ್ಮದ್ ಆಸಿಫ್ (29) ಅವರ ನಿಗೂಢ ಸಾವು ಪ್ರಕರಣ ಇದೀಗ ಹೈಕೋರ್ಟ್ ಗಮನ ಸೆಳೆದಿದೆ. 2025ರ ಜನವರಿ 15ರಂದು ಫೋನ್ ಕರೆ ಸ್ವೀಕರಿಸಿ ಮನೆಯಿಂದ ಹೊರಬಂದಿದ್ದ ಆಸಿಫ್, ಕೆಲವೇ ಗಂಟೆಗಳ ಬಳಿಕ ಗಂಭೀರ ಗಾಯಗಳೊಂದಿಗೆ ರಸ್ತೆ ಬದಿಯಲ್ಲಿ ಪತ್ತೆಯಾಗಿದ್ದರು. ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು. ಈ ಪ್ರಕರಣವನ್ನು ಪೊಲೀಸರು ಆರಂಭದಲ್ಲಿ ಅಸಹಜ ಸಾವು ಎಂದು ದಾಖಲಿಸಿಕೊಂಡಿದ್ದರು. ಆದರೆ, ಘಟನೆ ನಡೆದ ಸ್ಥಳದ ಸಮೀಪ ಲಾರಿ ಹಾಗೂ ಅದರ…

Read More

ಎಂಡಿಎಂಎ ಹಾಗೂ ಅರ್ಧಲಕ್ಷದಷ್ಟು ಹಣದೊಂದಿಗೆ ಯುವಕ ಸೆರೆ

ಮಂಜೇಶ್ವರ : ಮಾದಕ ವಸ್ತುಗಳ ವಿರುದ್ಧ ಕಠಿಣ ಸಮರ ಸಾರಿರುವ ಮಂಜೇಶ್ವರ ಪೊಲೀಸರು, ಮತ್ತೊಂದು ಕಾರ್ಯಾಚರಣೆಯಲ್ಲಿ ಎಂಡಿಎಂಎ ಮಾರಾಟಕ್ಕೆ ಯತ್ನಿಸುತ್ತಿದ್ದ ಯುವಕನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಉಪ್ಪಳ ರೈಲ್ವೇ ನಿಲ್ದಾಣ ರಸ್ತೆಯ ಬಿಸ್ಮಿಲ್ಲಾ ಮಂಜಿಲ್ ನಿವಾಸಿ ಮೊಹಮ್ಮದ್ ಸಮೀರ್ ಪಿ.ಎ (30) ಬಂಧಿತ ಆರೋಪಿ. ​ಖಚಿತ ಮಾಹಿತಿ ಮೇರೆಗೆ ಬಪ್ಪಾಯಿತೊಟ್ಟಿಯಲ್ಲಿ ನಡೆಸಿದ ದಾಳಿಯ ವೇಳೆ, ಈತನಿಂದ 5.080 ಗ್ರಾಂ ಎಂಡಿಎಂಎ ಹಾಗೂ ಮಾರಾಟದ ಹಣ 55,860 ರೂಪಾಯಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಮಂಜೇಶ್ವರ ಪೋಲೀಸರ ತಂಡ ಈ ಕಾರ್ಯಾಚರಣೆಯನ್ನು ನಡೆಸಿದೆ. ಆರೋಪಿಯ…

Read More

ಪಿಣರಾಯಿ ವಿಜಯನ್ ವಿರುದ್ಧದ ‘ರಾಜಕೀಯ ಬೇಟೆ’ ಖಂಡಿಸಿ ಹೊಸಂಗಡಿಯಲ್ಲಿ ಸಿಪಿಐಎಂ ಪ್ರತಿಭಟನೆ

ಹೊಸಂಗಡಿ: ಕೇರಳದ ವಿರೋಧ ಪಕ್ಷ ನಾಯಕರು ಹಾಗೂ ಸಿಪಿಐಎಂ ಪೊಲಿಟ್ ಬ್ಯೂರೋ ಸದಸ್ಯರಾದ Pinarayi Vijayan ಅವರ ವಿರುದ್ಧ ಕೇಂದ್ರ ತನಿಖಾ ಸಂಸ್ಥೆ ED ಅನ್ನು ಬಳಸಿಕೊಂಡು ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳು ರಾಷ್ಟ್ರೀಯ ಮಟ್ಟದಲ್ಲಿ ರಾಜಕೀಯ ಬೇಟೆ ನಡೆಸುತ್ತಿವೆ ಎಂದು ಆರೋಪಿಸಿ ಸಿಪಿಐಎಂ ಮಂಜೇಶ್ವರ ಏರಿಯಾ ಸಮಿತಿ ನೇತೃತ್ವದಲ್ಲಿ ಹೊಸಂಗಡಿ ಟೌನ್‌ನಲ್ಲಿ ಪ್ರತಿಭಟನೆ ನಡೆಯಿತು. ಪ್ರತಿಭಟನೆಯಲ್ಲಿ ಮಾತನಾಡಿದ ನಾಯಕರು, ಕೇಂದ್ರ ತನಿಖಾ ಸಂಸ್ಥೆಗಳ ದುರುಪಯೋಗದ ಮೂಲಕ ವಿರೋಧ ಪಕ್ಷಗಳ ನಾಯಕರನ್ನು ಗುರಿಯಾಗಿಸಲಾಗುತ್ತಿದೆ ಎಂದು ಆರೋಪಿಸಿದರು. ಪ್ರಜಾಪ್ರಭುತ್ವದ…

Read More

ಕೋಸ್ಟಲ್ ಫಿಲ್ಮ್ ಅವಾಡ್ಸ್೯ ಅಕ್ಷರ್ ಜೆ ಶೆಟ್ಟಿಗೆ ಬಾಲ ನಟ ಪ್ರಶಸ್ತಿ

ಮುಲ್ಕಿ ಸುಂದರ್ ರಾಮ ಶೆಟ್ಟಿ ಕನ್ವೆನ್ಷನ್ ಸೆಂಟರ್ ನಲ್ಲಿ ಸ್ಯಾಂಡಿಸ್ ಕಂಪನಿಯ ಆಶ್ರಯದಲ್ಲಿ ನಡೆದ ಕೋಸ್ಟಲ್ ಫಿಲಂ ಅವಾಡ್ಸ್೯ ನಲ್ಲಿ ರಾಕ್ ಸ್ಟಾರ್ ರೂಪೇಶ್ ಶೆಟ್ಟಿ ನಿರ್ದೇಶನ “ಜೈ” ತುಳು ಸಿನಿಮಾದಲ್ಲಿ ಅಕ್ಷರ್ ಜೆ ಶೆಟ್ಟಿಯ ಅಭಿನಯಕ್ಕಾಗಿ ಬಾಲನಟ ಪ್ರಶಸ್ತಿ ಲಭಿಸಿದೆ.ಅಕ್ಷರ್ ಜೆ ಶೆಟ್ಟಿ ಹಿರಿಯ ಪತ್ರಕರ್ತ ಬಾಳ ಜಗನ್ನಾಥ ಶೆಟ್ಟಿ ಮತ್ತು ಚಿತ್ರಾ ಜೆ ಶೆಟ್ಟಿ ದಂಪತಿಯ ಪುತ್ರ. ಅಕ್ಷರ್ ಜೆ ಶೆಟ್ಟಿ ಈ ಹಿಂದೆ ಜಯಕಿರಣ ಫಿಲಂಸ್ ಲಾಂಛನದಲ್ಲಿ ಪ್ರಕಾಶ್ ಪಾಂಡೇಶ್ವರ್ ನಿರ್ಮಾಣದಲ್ಲಿ ವಿರೇಂದ್ರ…

Read More

ಬಾಳಿಯೂರಿನಲ್ಲಿ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರದ ಅವಧಿ ವಿಸ್ತರಣೆ

ಬಾಳಿಯೂರು: ಶ್ರೀ ಅಯ್ಯಪ್ಪ ಭಜನಾ ಮಂದಿರ ಬಾಳಿಯೂರಿನಲ್ಲಿ ನಡೆಯುತ್ತಿರುವ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರಕ್ಕೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಶಿಬಿರದ ಅವಧಿಯನ್ನು ವಿಸ್ತರಿಸಲಾಗಿದೆ. ಶಿಬಿರದ ಫಲಾನುಭವಿಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಬಹುಜನರ ಅಪೇಕ್ಷೆಯ ಮೇರೆಗೆ ಇನ್ನಷ್ಟು ಜನರಿಗೆ ಇದರ ಪ್ರಯೋಜನ ದೊರಕಲೆಂದು ಶಿಬಿರವನ್ನು ಮೇ 27, 2026ರ ಬುಧವಾರದವರೆಗೆ ಮುಂದುವರಿಸಲು ವ್ಯವಸ್ಥಾಪಕರು ತೀರ್ಮಾನಿಸಿದ್ದಾರೆ. ಆರೋಗ್ಯ ಸಂಬಂಧಿತ ವಿವಿಧ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಈ ಥೆರಪಿ ಸಹಕಾರಿಯಾಗುತ್ತಿದೆ ಎಂದು ಶಿಬಿರದಲ್ಲಿ ಭಾಗವಹಿಸಿದವರು ಅಭಿಪ್ರಾಯಪಟ್ಟಿದ್ದಾರೆ….

Read More
error: Content is protected !!