ಕೊಲ್ಲೂರಿನಲ್ಲಿ ‘ವರಾಹ ಮಿಹಿರನ್’ ಕಥಕ್ಕಳಿ ಪ್ರದರ್ಶನ ಜೂನ್ 10ರಂದು
ಉಡುಪಿ ಜಿಲ್ಲೆಯ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಸ್ವರ್ಣಮುಖಿ ರಂಗಮಂದಿರದಲ್ಲಿ ಜೂನ್ 10ರಂದು “ವರಾಹ ಮಿಹಿರನ್” ಕಥಕ್ಕಳಿ ಪ್ರದರ್ಶನ ನಡೆಯಲಿದೆ ಎಂದು ಕಾರ್ಯಕ್ರಮದ ಸಂಯೋಜಕ ಚೇತಲ್ಲೂರ್ ವಿಜಯಕುಮಾರ್ ಗುಪ್ತನ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಮಧ್ಯಾಹ್ನ 3ರಿಂದ ಸಂಜೆ 6ರವರೆಗೆ ನಡೆಯುವ ಕಾರ್ಯಕ್ರಮದಲ್ಲಿ ಕೇರಳದ ಖ್ಯಾತ ಕಥಕ್ಕಳಿ ಕಲಾವಿದರು ಭಾಗವಹಿಸಲಿದ್ದು, ಪೌರಾಣಿಕ ಖಗೋಳಶಾಸ್ತ್ರಜ್ಞ ಹಾಗೂ ಜ್ಯೋತಿಷಿ ವರಾಹಮಿಹಿರರ ಜೀವನ ಮತ್ತು ಭವಿಷ್ಯವಾಣಿಯನ್ನು ಆಧರಿಸಿದ ದೃಶ್ಯಮಯ ನಿರೂಪಣೆ ಪ್ರದರ್ಶಿಸಲಿದ್ದಾರೆ ಎಂದರು. “ವರಾಹ ಮಿಹಿರನ್” ಕಥಕ್ಕಳಿಯ ಕಥಾವಸ್ತು ಉಜ್ಜಯಿನಿ…