ರಾಷ್ಟ್ರೀಯ ಹೆದ್ದಾರಿಯಲ್ಲಿರುವ ನಯಾ ಬಜಾರ್ ಬಸ್ ನಿಲ್ದಾಣದ ಹೆಸರಿನಲ್ಲಿ ಬದಲಾವಣೆ .ಪ್ರಯಾಣಿಕರಲ್ಲಿ ಗೊಂದಲ.

ಮಂಜೇಶ್ವರ: ರಾಷ್ಟ್ರೀಯ ಹೆದ್ದಾರಿಯಲ್ಲಿರುವ ನಯಾ ಬಜಾರ್ ಬಸ್ ನಿಲ್ದಾಣದ ಹೆಸರಿನಲ್ಲಿ ಬದಲಾವಣೆ ಮಾಡಿರುವುದು ಪ್ರಯಾಣಿಕರಲ್ಲಿ ಗೊಂದಲವನ್ನು ಸೃಷ್ಟಿಸಿದೆ. ನಯಾ ಬಜಾರಿನ ಮಂಗಳೂರು ಕಡೆಗೆ ಸಂಚರಿಸುವ ರಸ್ತೆಯಲ್ಲಿರುವ ಬಸ್ ನಿಲ್ದಾಣಕ್ಕೆ ಮಂಗಲ್ಪಾಡಿ ಎಂಬ ಹೆಸರಿನಲ್ಲಿ ಫಲಕವನ್ನು ಸ್ಥಾಪಿಸಿರುವುದು ಪ್ರಯಾಣಿಕರ ಗೊಂದಲಕ್ಕೆ ಕಾರಣವಾಗಿದೆ. ನಯಾಬಜಾರಿಗೆ ಹೊರಗಿನಿಂದ ಆಗಮಿಸುವ ಪ್ರಯಾಣಿಕರೂ, ಹೊಸದಾಗಿ ಬರುವ ಬಸ್ ಚಾಲಕರೂ ಈ ಸ್ಥಳವನ್ನು ಅರ್ಥಮಾಡಿಕೊಳ್ಳದೇ ಗೊಂದಲಕ್ಕೆ ಒಳಗಾಗುತ್ತಿದ್ದಾರೆ. ಹತ್ತಿರದಲ್ಲಿರುವ ಕೈಕಂಬ ಬಸ್ ನಿಲ್ದಾಣಕ್ಕೆ ತಲುಪಿದಾಗ ಮಾತ್ರವೇ ಅರ್ಥವಾಗುತ್ತಿದೆ. ನಯಾ ಬಜಾರ್ ಬಸ್ ನಿಲ್ದಾಣವನ್ನು ದಾಟಿ ಹೋಗಿರುವುದು….

Read More

“ಪೀಸ್ ಟ್ಯಾಲೆಂಟ್ ಹಂಟ್” ಸಾಂಸ್ಕೃತಿಕ ಕಾರ್ಯಕ್ರಮ.

ಮಂಜೇಶ್ವರ : ಕಳೆದ ಸುಮಾರು 17 ವರ್ಷಗಳಿಂದ ವಿದ್ಯಾಭ್ಯಾಸ ಕ್ಷೇತ್ರದಲ್ಲಿ ವಿಶೇಷ ಗಮನ ಸೆಳೆಯಿತ್ತಿರುವ ಹೊಸಂಗಡಿ ಪೀಸ್ ಕ್ರಿಯೇಟಿವ್ ಆಂಗ್ಲ ಮಾಧ್ಯಮ ಕೇಂದ್ರೀಯ ಶಾಲಾ ವಿದ್ಯಾರ್ಥಿಗಳು ತಮ್ಮ ಅನೇಕ ಪ್ರತಿಭೆಗಳ ಮೂಲಕ ಶಿಕ್ಷಣ ಕ್ಷೇತ್ರದಲ್ಲಿ ನೂತನ ಮೈಲಿಗಲ್ಲುಗಳನ್ನು ಸೃಷ್ಟಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮಂಗಳವಾರ ನಡೆದ “ಪೀಸ್ ಟ್ಯಾಲೆಂಟ್ ಹಂಟ್” ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ವಿವಿಧ ಕಲೆಗಳನ್ನು ಪ್ರದರ್ಶಿಸಿ ಪ್ರೇಕ್ಷಕರ ಪ್ರಶಂಶೆಗೆ ಪಾತ್ರರಾದರು. ಸಕಲ ಸಿದ್ಧತೆಗಳೊಂದಿಗೆ ಅದ್ದೂರಿಯಾಗಿ ನಡೆದ ಕಾರ್ಯಕ್ರಮಕ್ಕೆ ಶೈಕ್ಷಣಿಕ ಕ್ಷೇತ್ರದ ಶಿಸ್ತು ಪಾಲನೆಯಲ್ಲಿ ಗಿನ್ನೆಸ್ ವರ್ಲ್ಡ್…

Read More

ಡಾ. ಕೆರೆಮನೆ ಮಹಾಬಲ ಹೆಗಡೆ ಸ್ಮಾರಕ ರಂಗ ಪ್ರತಿಷ್ಠಾನ(ರಿ)ದಿಂದ ಎಲ್. ಎಸ್. ಶಾಸ್ತ್ರಿ ಅವರಿಗೆ “ಮಹಾಬಲ ಪ್ರಶಸ್ತಿ”

ಪ್ರಸಿದ್ಧ ಯಕ್ಷಗಾನ ಕಲಾವಿದ ಡಾ. ಕೆರೆಮನೆ ಮಹಾಬಲ ಹೆಗಡೆಯವರ 16ನೆಯ ಸಂಸ್ಮರಣಾ ದಿನ ಮತ್ತು ಕೆರೆಮನೆ ರಾಮ ಹೆಗಡೆಯವರ 6 ನೆಯ ಸಂಸ್ಮರಣಾ ದಿನಗಳ ಅಂಗವಾಗಿ ಇದೇ ಒ.18 ರಂದು ರಂದು ಸಂಜೆ 4 ಗಂಟೆಗೆ ಹೊನ್ನಾವರ ತಾಲೂಕು ಗುಣವಂತೆಯ ಕೆರೆಮನೆ ಶಿವರಾಮ ಹೆಗಡೆ ರಂಗಮಂದಿರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತ ಸಾಹಿತಿ, ರಂಗಚಿಂತಕ ಶ್ರೀ ಲಕ್ಷ್ಮೀನಾರಾಯಣ ಶಾಸ್ತ್ರಿ , ನಾಜಗಾರ ( ಬೆಳಗಾವಿ) ಇವರಿಗೆ ಈ ವರ್ಷದ ” ಮಹಾಬಲ ಪ್ರಶಸ್ತಿ ” ನೀಡಿ ಗೌರವಿಸಲಾಗುವುದು….

Read More

ತುಂಬೆ: ಶ್ರೀ ಶಾರದಾ ಸಮುದಾಯ ಭವನ ಲೋಕಾರ್ಪಣಾ ಕಾರ್ಯಕ್ರಮ.

ಬಂಟ್ವಾಳ: ತುಂಬೆ ರಾಮಲ್ ಕಟ್ಟೆ ಶ್ರೀ ಶಾರದಾ ಸೇವಾ ಪ್ರತಿಷ್ಠಾನ (ರಿ.) ಶ್ರೀ ಶಾರದಾ ರಜತ ಮಹೋತ್ಸವ ಸಮಿತಿ ಇದರ ವತಿಯಿಂದ ತುಂಬೆ ಶ್ರೀರಾಮ ನಗರ ರಾಮಲ್ ಕಟ್ಟೆಯಲ್ಲಿ ಸುಮಾರು 1.5ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣಗೊಂಡ ಶ್ರೀ ಶಾರದಾ ಸಮುದಾಯ ಭವನವನ್ನು ಸೆ 28ರಂದು ಆದಿತ್ಯವಾರ ಮಂಗಳೂರು ಎಸ್ ಸಿ ಡಿ ಸಿ ಸಿ ಬ್ಯಾಂಕ್ ಅಧ್ಯಕ್ಷರಾದ ಡಾ ಎಂ ಎನ್ ರಾಜೇಂದ್ರ ಕುಮಾರ್ ಉದ್ಘಾಟಿಸಿ ಲೋಕಾರ್ಪಣೆಗೊಳಿಸಿದರು. ಬಳಿಕ ಮಾತನಾಡಿದ ಅವರು, ಶಾಂತಿ ಪ್ರಿಯರಾದ ನಾವು ಎಲ್ಲರನ್ನು…

Read More

ಕನ್ನಡ ಭವನ ಪ್ರಕಾಶನದ “ಮರೆಯಲಾಗದವರು “9ನೇ ಕೃತಿ ಬಿಡುಗಡೆ.

ಕಾಸರಗೋಡು : ಪಾಂಗೋಡು ಶ್ರೀ ದುರ್ಗಾಪರಮೇಶ್ವರಿ ಶ್ರೀ ಸುಬ್ರಮಣ್ಯ ದೇವಸ್ಥಾನದಲ್ಲಿ ಶರನ್ನವರಾತ್ರಿ ಪ್ರಯುಕ್ತ ನಡೆಯುತ್ತಿರುವ “ಕಾಸರಗೋಡು ದಸರಾ ಸಾಂಸ್ಕೃತಿಕೋತ್ಸವ 2025.ವೇದಿಕೆಯಲ್ಲಿ ಆದರ್ಶ ಮಹಿಳೆ, ಮೇರು ಯಕ್ಷಗಾನ ಕಲಾವಿದೆ, ಉದ್ಯಮಿ, ಸಾಮಾಜಿಕ ಕಾರ್ಯಕರ್ತೆ ದಿ. ಶ್ರೀಮತಿ ಗಾಯತ್ರಿ ನಾಗೇಶ್ ಇವರ ಸಂಸ್ಮರಣೆ -ನುಡಿನಮನ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮ ದಲ್ಲಿ ಗಾಯತ್ರಿ ನಾಗೇಶ್ ಇವರ ಬಗ್ಗೆ ಕಾಸರಗೋಡು ಕನ್ನಡ ಭವನ ಪ್ರಕಾಶನದ ಪ್ರಕಾಶಕಿ ಸಂಧ್ಯಾರಾಣಿ ಟೀಚರ್ ರಚಿಸಿದ “ಮರೆಯಲಾಗದವರು “ಎಂಬ ವ್ಯಕ್ತಿ ಚಿತ್ರಣ ಕೃತಿ ಬಿಡುಗಡೆ ಗೊಳಿಸಲಾಯಿತು. ರಾಮರಾಜ…

Read More

ಪೆಟ್ರೋಲ್‌ ಕಳ್ಳತನ ಪ್ರಕರಣ: 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ.

ಬೆಳ್ತಂಗಡಿ: ನೆರಿಯ ಪೆಟ್ರೋನೆಟ್ ಪೈಪ್ ಲೈನ್ ನಿಂದ 2010 ರಲ್ಲಿ ಪೆಟ್ರೋಲ್ ಕಳ್ಳತನ ಪ್ರಕರಣದಲ್ಲಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗದೆ ಸುಮಾರು 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.ಬೆಳ್ತಂಗಡಿ ತಾಲೂಕಿನ ಚಿಬಿದ್ರೆ ನಿವಾಸಿ ತಮ್ಮಯ್ಯ(35) ಬಂಧಿತ ಆರೋಪಿ . ಮಂಗಳೂರು ನಗರದ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೆ.28 ರಂದು ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದವನನ್ನು ನೋಡಿ ಸುರತ್ಕಲ್ ಪೊಲೀಸ್ ಠಾಣೆಯ ಸಿಬ್ಬಂದಿ ಉಮೇಶ್ ಅವರು ವಶಕ್ಕೆ…

Read More

ಉಡುಪಿ: ಅ. 4ರಿಂದ 12ರವರೆಗೆ ಮಾನಸಿಕ ಆರೋಗ್ಯ ಮತ್ತು ಯೋಗಕ್ಷೇಮ ಸಪ್ತಾಹ

ಉಡುಪಿ: ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯ ಪ್ರಯುಕ್ತ ಲಯನ್ಸ್ ಡಿಸ್ಟ್ರಿಕ್ಟ್ 317C – ಲಯನ್ಸ್ ಕ್ಲಬ್, ಮಣಿಪಾಲ್, ಮತ್ತು ಡಾ. ಎ.ವಿ.ಬಾಳಿಗಾ ಸ್ಮಾರಕ ಆಸ್ಪತ್ರೆ ಉಡುಪಿ ಇವರ ಸಹಯೋಗದಲ್ಲಿ ಅ. 4ರಿಂದ 12ರವರೆಗೆ ಮಾನಸಿಕ ಆರೋಗ್ಯ ಮತ್ತು ಯೋಗಕ್ಷೇಮ ಸಪ್ತಾಹವನ್ನು ಆಯೋಜಿಸಲಾಗಿದೆ ಎಂದು ಲಯನ್ಸ್ ಡಿಸ್ಟ್ರಿಕ್ಟ್ 317ಸಿ ಜಿಲ್ಲಾ ಗವರ್ನರ್ ಸಪ್ನಾ ಸುರೇಶ್ ತಿಳಿಸಿದರು. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಈ ಸಪ್ತಾಹದಲ್ಲಿ ಮಕ್ಕಳು, ಮಹಿಳೆಯರು, ವಯಸ್ಕರು, ಉದ್ಯೋಗಿಗಳು ಹಾಗೂ ಹಿರಿಯ ನಾಗರಿಕರನ್ನು ಎಲ್ಲರ…

Read More

ಕ್ರೀಡೆಗಳು ಮನೋಸ್ಥೈರ್ಯ ಹಾಗೂ ಶಾರೀರಿಕ ದೃಢತೆಯನ್ನು ಹೆಚ್ಚಿಸುತ್ತದೆ : ಶ್ರೀನಿವಾಸ್ ರಾವ್

ಆನೆಕಲ್ಲು: ” ಕ್ರೀಡೆಗಳು ಮಾನಸಿಕ ಸ್ಥೈರ್ಯದೊಂದಿಗೆ ಶಾರೀರಿಕ ದೃಢತೆಯನ್ನು ಹೆಚ್ಚಿಸಲು ಸಹಕಾರಿಯಾಗುತ್ತದೆ.ಆದ್ದರಿಂದ ಪ್ರಾಥಮಿಕ ಹಂತದಲ್ಲೇ ಮಕ್ಕಳಿಗೆ ಕ್ರೀಡಾ ತರಬೇತಿ ಉತ್ತಮ ರೀತಿಯಲ್ಲಿ ಸಿಗುವಂತಾಗಬೇಕು” ಎಂದು ಎ ಯು ಪಿ ಶಾಲೆ ಬಾಕ್ರಬೈಲ್ ನ ನಿವೃತ್ತ ಮುಖ್ಯೋಪಾಧ್ಯಾಯರಾದ ಶ್ರೀನಿವಾಸ್ ರಾವ್ ತಿಳಿಸಿದರು.ಅವರು ಎ.ಯು.ಪಿ ಶಾಲೆ ಆನೆಕಲ್ಲಿನಲ್ಲಿ ಜರಗಿದ ಶಾಲಾ ಮಟ್ಟದ ಕ್ರೀಡೋತ್ಸವನ್ನು ಉದ್ಘಾಟಿಸಿ ಮಾತನಾಡಿದರು. ಹಳೆ ವಿದ್ಯಾರ್ಥಿ ಕುಮಾರಿ ಹರಿಣಾಕ್ಷಿ ಟೀಚರ್ ಮಾತನಾಡಿ ,”ಕ್ರೀಡೆಗಳು ಮಾನಸಿಕ ಒತ್ತಡವನ್ನು ನಿಯಂತ್ರಿಸುವುದರೊಂದಿಗೆ ಉತ್ತಮ ಆರೋಗ್ಯವನ್ನು ನೀಡುತ್ತದೆ.ಆದುದರಿಂದ ಶಾಲಾ ಮಟ್ಟದ ಕ್ರೀಡೆಗಳಲ್ಲಿ ಭಾಗವಹಿಸಿ…

Read More

ಕುದ್ರೋಳಿ ದಸರಾ ಅದ್ದೂರಿ ಶಾರದಾ ಮೆರವಣಿಗೆ ಅಕ್ಟೋಬರ್ ೨ ಕ್ಕೆ

ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ “ಮಂಗಳೂರು ದಸರಾ’ ಶೋಭಾಯಾತ್ರೆ ಅ. 2ರಂದು ಅದ್ದೂರಿಯಾಗಿ ನಡೆಯಲಿದೆ . ಈಗಾಗಲೇ ಶೋಭಾಯಾತ್ರೆ ಗೆ ಪೂರ್ವ ಸಿದ್ದತೆಗಳು ನಡೆಸಲಾಗಿದೆ ಎನ್ನಲಾಗಿದೆ . ಸಂಜೆ 4ರಿಂದ ಶ್ರೀ ಶಾರದಾಂಬೆಯ ಶೋಭಾಯಾತ್ರೆಯು ಶ್ರೀ ಕ್ಷೇತ್ರದಿಂದ ಹೊರಡಲಿದೆ. ಶ್ರೀ ಕ್ಷೇತ್ರದಲ್ಲಿ ನವರಾತ್ರಿ ಅಂಗವಾಗಿ ಪೂಜಿಸಲ್ಪಟ್ಟ ಶ್ರೀ ಮಹಾಗಣಪತಿ, ಆದಿಶಕ್ತಿ, ನವದುರ್ಗೆಯರು, ಶ್ರೀ ಶಾರದಾ ಮಾತೆ, ಬ್ರಹ್ಮಶ್ರೀ ನಾರಾಯಣ ಗುರುಗಳ ವಿಗ್ರಹ ಸಹಿತ ವರ್ಣರಂಜಿತ ದಸರಾ ಮೆರವಣಿಗೆ ನಗರದಲ್ಲಿ ಸಾಗಿಬರಲಿದೆ. ಕುದ್ರೋಳಿ ಕ್ಷೇತ್ರದಿಂದ ಹೊರಟು ಕಂಬಾರ…

Read More

ಕಾಸರಗೋಡು: ಡಿವೈಎಫ್‌ಐ ಸಕ್ರಿಯ ನಾಯಕಿ , ಯುವ ವಕೀಲೆ ಆತ್ಮಹತ್ಯೆಗೆ ಶರಣು …. !

ಕಾಸರಗೋಡು: ಡಿವೈಎಫ್‌ಐ ನಾಯಕಿ ಹಾಗು ಯುವ ವಕೀಲೆ ರಂಜಿತಾ ಕುಮಾರಿ (30) ಮಂಗಳವಾರ ಸಂಜೆ ಕುಂಬ್ಳೆಯ ಬಥೇರಿಯಲ್ಲಿರುವ ತಮ್ಮ ಕಚೇರಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ದುರ್ಘಟನೆ ಬೆಳಕಿಗೆ ಬಂದಿದೆ. ಪೊಲೀಸರು ಹೇಳುವಂತೆ , ಅವರು ತಮ್ಮ ಕಚೇರಿಯೊಳಗಿನ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಸಂಜೆಯಿಂದ ಅವರಿಗೆ ಕರೆ ಮಾಡಲು ಪ್ರಯತ್ನಿಸಿದರೂ ಯಾವುದೇ ಪ್ರತಿಕ್ರಿಯೆ ಬಾರದ ಕುಟುಂಬ ಸದಸ್ಯರು ಅವರ ಕಚೇರಿಗೆ ಹೋದಾಗ ಬಾಗಿಲು ಒಳಗಿನಿಂದ ಚಿಲಕ ಹಾಕಿರುವುದನ್ನು ಕಂಡುಕೊಂಡರು. ಅವರು ಪೊಲೀಸರಿಗೆ ಮಾಹಿತಿ…

Read More
error: Content is protected !!