ರಾಷ್ಟ್ರೀಯ ಹೆದ್ದಾರಿಯಲ್ಲಿರುವ ನಯಾ ಬಜಾರ್ ಬಸ್ ನಿಲ್ದಾಣದ ಹೆಸರಿನಲ್ಲಿ ಬದಲಾವಣೆ .ಪ್ರಯಾಣಿಕರಲ್ಲಿ ಗೊಂದಲ.
ಮಂಜೇಶ್ವರ: ರಾಷ್ಟ್ರೀಯ ಹೆದ್ದಾರಿಯಲ್ಲಿರುವ ನಯಾ ಬಜಾರ್ ಬಸ್ ನಿಲ್ದಾಣದ ಹೆಸರಿನಲ್ಲಿ ಬದಲಾವಣೆ ಮಾಡಿರುವುದು ಪ್ರಯಾಣಿಕರಲ್ಲಿ ಗೊಂದಲವನ್ನು ಸೃಷ್ಟಿಸಿದೆ. ನಯಾ ಬಜಾರಿನ ಮಂಗಳೂರು ಕಡೆಗೆ ಸಂಚರಿಸುವ ರಸ್ತೆಯಲ್ಲಿರುವ ಬಸ್ ನಿಲ್ದಾಣಕ್ಕೆ ಮಂಗಲ್ಪಾಡಿ ಎಂಬ ಹೆಸರಿನಲ್ಲಿ ಫಲಕವನ್ನು ಸ್ಥಾಪಿಸಿರುವುದು ಪ್ರಯಾಣಿಕರ ಗೊಂದಲಕ್ಕೆ ಕಾರಣವಾಗಿದೆ. ನಯಾಬಜಾರಿಗೆ ಹೊರಗಿನಿಂದ ಆಗಮಿಸುವ ಪ್ರಯಾಣಿಕರೂ, ಹೊಸದಾಗಿ ಬರುವ ಬಸ್ ಚಾಲಕರೂ ಈ ಸ್ಥಳವನ್ನು ಅರ್ಥಮಾಡಿಕೊಳ್ಳದೇ ಗೊಂದಲಕ್ಕೆ ಒಳಗಾಗುತ್ತಿದ್ದಾರೆ. ಹತ್ತಿರದಲ್ಲಿರುವ ಕೈಕಂಬ ಬಸ್ ನಿಲ್ದಾಣಕ್ಕೆ ತಲುಪಿದಾಗ ಮಾತ್ರವೇ ಅರ್ಥವಾಗುತ್ತಿದೆ. ನಯಾ ಬಜಾರ್ ಬಸ್ ನಿಲ್ದಾಣವನ್ನು ದಾಟಿ ಹೋಗಿರುವುದು….
