ಸೆ.29ರಿಂದ ಅ.1ರ ತನಕ ಕೊಲ್ಯ ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವ.

ಮಂಗಳೂರು: ಉಳ್ಳಾಲ ತಾಲೂಕು ಸೋಮೇಶ್ವರ ಪುರಸಭಾ ವ್ಯಾಪ್ತಿಯಲ್ಲಿರುವ ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವ ಸಮಿತಿಯು ಆಯೋಜಿಸುವ 44ನೇ ವರ್ಷದ ಶ್ರೀ ಶಾರದಾ ಮಹೋತ್ಸವ ಸೆಪ್ಟೆಂಬರ್ 29ರಿಂದ ಅಕ್ಟೋಬರ್ 1ರವರೆಗೆ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರಗಲಿದೆ ಎಂದು ಕೊಲ್ಯ ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವದ ಅಧ್ಯಕ್ಷರಾದ ಮೋಹನ್ ಶೆಟ್ಟಿ ತಿಳಿಸಿದರು . ನಗರದ ಪತ್ರಿಕಾಭವನದಲ್ಲಿ ಮಾತನಾಡಿದ ಅವರು , 1982ರಲ್ಲಿ ಸ್ಥಾಪನೆಯಾದ ಸಮಿತಿಯು ಕಳೆದ 43 ವರ್ಷಗಳಿಂದ ನವರಾತ್ರಿ ಹಬ್ಬದ ಅಂಗವಾಗಿ ಶಾರದಾ ಮಹೋತ್ಸವವನ್ನು ಆಚರಿಸುತ್ತಿದ್ದು,…

Read More

ಮಂಜೇಶ್ವರ ಟ್ರಕ್ ಪಾರ್ಕಿಂಗ್ ಪ್ರದೇಶದಲ್ಲಿ ಗಾಂಜಾ ಸಸ್ಯ ಪತ್ತೆ ಹಚ್ಚಿದ ಕುಂಬಳೆ ಅಬಕಾರಿ ಇಲಾಖೆಯ ಅಧಿಕಾರಿಗಳು.

ಮಂಜೇಶ್ವರ : ಮಂಜೇಶ್ವರ ತಾಲೂಕು ವ್ಯಾಪ್ತಿಯ ಕಾಸರಗೋಡು – ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಸರ್ವೀಸ್ ರಸ್ತೆಯಲ್ಲಿರುವ ಟ್ರಕ್ ಪಾರ್ಕಿಂಗ್ ಪ್ರದೇಶದ ಸಮೀಪದಲ್ಲಿ 90 ಸೆಂಟಿಮೀಟರ್ ಎತ್ತರದಲ್ಲಿ ಬೆಳೆದ ಗಾಂಜಾ ಸಸ್ಯವನ್ನು ಕುಂಬಳ ಅಬಕಾರಿ ಇಲಾಖೆಯ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ಅಬಕಾರಿ ಇಲಾಖೆಯ ಮಂಜೇಶ್ವರ ಶಾಖೆಯ ಇನ್ಸ್ಪೆಕ್ಟರ್ ಶ್ರಾವಣ್ ಕೆ.ವಿ ಹಾಗೂ ಅವರ ತಂಡ ಗಾಂಜಾ ಸಹಿತ ಪತ್ತೆಹಚ್ಚಿ, ಕಾನೂನು ಅನುಸಾರ ವಶಪಡಿಸಿಕೊಂಡು NDPS ಪ್ರಕರಣ ದಾಖಲಿಸಿದ್ದಾರೆ. ಘಟನೆ ನಡೆದ ಸಂದರ್ಭದಲ್ಲಿ ಆರೋಪಿಗಳೆಂದೇ ಯಾರನ್ನೂ ಪ್ರಕರಣದಲ್ಲಿ ಸೇರಿಸಲು ಸಾಧ್ಯವಾಗಿಲ್ಲ….

Read More

ಸೆ .26 ರಂದು OTT ಯಲ್ಲಿ ಭರ್ಜರಿ ಬಿಡುಗಡೆಗೆ ಸಿದ್ದವಾದ ಮೀರಾ.

ಮಂಗಳೂರು: ಚಿತ್ರಮಂದಿರಗಳಲ್ಲಿ ಯಶಸ್ವಿಯಾಗಿ ಪ್ರದರ್ಶನಗೊಂಡ ಮಹಿಳಾ ಪ್ರಧಾನ ತುಳು ಚಲನಚಿತ್ರ “ಮೀರಾ” ಇದೀಗ OTT ಯಲ್ಲಿ ಬಿಡುಗಡೆಗೆ ಸಿದ್ಧವಾಗಿದೆ . ಅಸ್ತ್ರ, ಬ್ಯಾನರ್ ಅಡಿಯಲ್ಲಿ ನಿರ್ಮಿಸಿದ ಈ ಚಿತ್ರ, ಸೆಪ್ಟೆಂಬರ್ 26 (ಶುಕ್ರವಾರ) ರಂದು “ಟಾಕೀಸ್ OTT ಆ್ಯಪ್” ನಲ್ಲಿ ಬಿಡುಗಡೆಯಾಗಲಿದೆ ಎಂದು ಅಸ್ತ್ರ ಗ್ರೂಪ್ ಸಿಇಒ, ಚಿತ್ರ ನಿರ್ಮಾಪಕ ಲಂಚುಲಾಲ್ ಮಾಹಿತಿ ನೀಡಿದ್ದಾರೆ. ಚಿತ್ರವು ಪ್ರೀಮಿಯರ್ ಶೋ ನಲ್ಲೆ ಯಶಸ್ಸು ಕಂಡು ಜನಮನ ಗೆದ್ದಿತ್ತು. ನಾಯಕಿಯಾಗಿ ಇಶಿತಾ ಶೆಟ್ಟಿ ಅಭಿನಯಿಸಿದ್ದು, ಜೊತೆಗೆ ಅರವಿಂದ್ ಬೋಳಾರ್, ಜೆ.ಪಿ….

Read More

ಪುಚ್ಛತ್ ವಯಲ್ ಹಯಾತುಲ್ ಇಸ್ಲಾಂ ಮದ್ರಸದಲ್ಲಿ ನಬಿದಿನೋತ್ಸವದ ಅದ್ಧೂರಿ ಆಚರಣೆ.

ಪುಚ್ಛತ್ ವಯಲ್: ಮುಹಿಯುದ್ದೀನ್ ಜುಮಾ ಮಸ್ಜಿದ್ ಆವರಣದಲ್ಲಿರುವ ಹಯಾತುಲ್ ಇಸ್ಲಾಂ ಮದ್ರಸದಲ್ಲಿ ನಬಿ ದಿನಾಚರಣೆಯನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಯಿತು. ವಿದ್ಯಾರ್ಥಿಗಳು ಮತ್ತು ಸ್ಥಳೀಯರು ಭಾಗವಹಿಸಿದ್ದ ಈ ಕಾರ್ಯಕ್ರಮದಲ್ಲಿ ವಿವಿಧ ಮನರಂಜನಾ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಎಲ್ಲರ ಗಮನ ಸೆಳೆದವು. ಕಾರ್ಯಕ್ರಮಕ್ಕೆ ಯಾಕೂಬ್ ಮಜ್ಮಾ ಅವರು ಅಧ್ಯಕ್ಷತೆ ವಹಿಸಿದ್ದರು. ಜಮಾಅತ್ ಖತೀಬ್ ಉಮರುಲ್ ಫಾರುಕ್ ಹನೀಫಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ, ಪ್ರವಾದಿ ಮುಹಮ್ಮದ್ (ಸ.ಅ) ಅವರ ಬದುಕು ಮತ್ತು ಸಂದೇಶಗಳ ಬಗ್ಗೆ ಮಾತನಾಡಿದರು. ಈ ಸಂದರ್ಭದಲ್ಲಿ ಜಮಾಅತ್ ಕಾರ್ಯದರ್ಶಿ…

Read More

ಮೈಸೂರಿನಲ್ಲಿ ಖಾಸಗಿ ಸಂಸ್ಥೆಯಲ್ಲಿ ಉದ್ಯೋಗದಲ್ಲಿದ್ದ ಯುವಕ ಹೃದಯಾಘಾತದಿಂದ ನಿಧನ.

ಕಡಬ ತಾಲೂಕಿನ ಕಡಬ ಗ್ರಾಮದ ಪಿಜಕಳ ಪರಪ್ಪು ನಿವಾಸಿ ಜನಾರ್ದನ ನಾಯ್ಕ ಅವರ ಪುತ್ರ ವಿನೋದ್ ಪಿ.ಜೆ.(23 ವ.) ಹೃದಯಾಘಾತದಿಂದ ಮೈಸೂರಿನಲ್ಲಿ ಭಾನುವಾರ ರಾತ್ರಿ ನಿಧನ ಹೊಂದಿದರು. ಮೈಸೂರಿನಲ್ಲಿ ಖಾಸಗಿ ಸಂಸ್ಥೆಯಲ್ಲಿ ಉದ್ಯೋಗದಲ್ಲಿದ್ದ ವಿನೋದ್ ಅವರಿಗೆ ಎರಡು ದಿನಗಳ ಹಿಂದೆ ಜ್ವರ ಕಾಣಿಸಿಕೊಂಡು ಕಡಿಮೆಯಾಗಿತ್ತು. ಭಾನುವಾರ ರಾತ್ರಿ ತನ್ನ ರೂಂನಲ್ಲಿ ಊಟ ಮಾಡುತ್ತಿದ್ದ ವೇಳೆ ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದರೂ ಅಷ್ಟರಲ್ಲೇ ಅವರ ಪ್ರಾಣ ಪಕ್ಷಿ ಹಾರಿ ಹೋಗಿತ್ತು. ಅವಿವಾಹಿತರಾಗಿದ್ದ ಮೃತರು ತಂದೆ, ತಾಯಿ…

Read More

ಮಂಗಳೂರು ದಸರಾ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ.

ಮಂಗಳೂರು: ದಸರಾ ಹಬ್ಬ ಮಾತ್ರವಲ್ಲ, ನಂಬಿಕೆ, ಸಂಸ್ಕೃತಿ ಹಾಗು ಒಗಟ್ಟಿನ ಪ್ರತೀಕ. ಕುದ್ರೋಳಿಯಲ್ಲಿ ನಡೆಯುತ್ತಿರು ಈ ಉತ್ಸವ ಮಂಗಳೂರನ್ನು ಮತ್ತಷ್ಟು ವಿಭಿನ್ನವಾಗಿಸಿದೆ ಎಂದು ನವಮಂಗಳೂರು ಬಂದರು ಪ್ರಾಧಿಕಾರ ( ಎನ್ಎಂಪಿಎ) ಅಧ್ಯಕ್ಷ ಡಾ.ಎ.ವೆಂಕಟರಮಣ ಅಕ್ಕರಾಜು ಹೇಳಿದರು. ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ದಸರಾ ಮಹೋತ್ಸವ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಸೋಮವಾರ ಚಾಲನೆ ನೀಡಿ ಮಾತನಾಡಿದರು.ಮಂಗಳೂರು ದಸರಾ ಮೈಸೂರ ದಸರಾದಷ್ಟೇ ಪ್ರಸಿದ್ಧಿ‌ ಪಡೆದಿದೆ. ಭಾರತೀಯ ಧರ್ಮ, ಸಂಸ್ಕೃತಿಯ ರಕ್ಷಣೆ ನಮ್ಮೆಲ್ಲರ ಕರ್ತವ್ಯ ಎಂದರು.ತಾಸೆ ಮತ್ತು ಡೋಲು ಬಡಿಯುವ ಮೂಲಕ ತುಳುನಾಡಿನ…

Read More

ಮಂಗಳೂರು ದಸರಾ ದೀಪಾಲಂಕಾರ ಉದ್ಘಾಟನೆ:- ಶಾಸಕ ಕಾಮತ್

ಪ್ರಸಿದ್ದ ಮಂಗಳೂರು ದಸರಾ ಹಬ್ಬಕ್ಕೆ ಇಡೀ ನಗರವು ವಿದ್ಯುತ್ ದೀಪಾಲಂಕಾರದಿಂದ ಸಿಂಗಾರಗೊಂಡಿದ್ದು ನಗರದ ಪಿವಿಎಸ್ ವೃತ್ತದ ಬಳಿ ನವರಾತ್ರಿಯ ಮೊದಲನೇ ದಿನದಂದು ಶಾಸಕ ವೇದವ್ಯಾಸ ಕಾಮತ್ ರವರು ದೀಪಾಲಂಕಾರವನ್ನು ಉದ್ಘಾಟಿಸಿದರು. ನಂತರ ಮಾತನಾಡಿದ ಶಾಸಕರು, ಮಂಗಳೂರು ದಸರಾ ನಮ್ಮ ಜಿಲ್ಲೆಯ ಹೆಮ್ಮೆಯ ಸಂಕೇತವಾಗಿದ್ದು ದೇಶ ವಿದೇಶಗಳಿಂದ ಭಕ್ತರನ್ನು, ಪ್ರವಾಸಿಗರನ್ನು ಸೆಳೆಯುವ ಇಂತಹ ಹಬ್ಬದ ಸಂದರ್ಭದಲ್ಲಿ ಇಡೀ ನಗರಕ್ಕೆ ಪಾಲಿಕೆ ವತಿಯಿಂದಲೇ ದೀಪಾಲಂಕಾರಗೊಳ್ಳಬೇಕು ಎಂದು ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ವಿಶೇಷವಾಗಿ ಚಿಂತನೆ ನಡೆಸಿ ಮಹತ್ವದ ನಿರ್ಧಾರವನ್ನು ಕೈಗೊಳ್ಳಲಾಗಿತ್ತು….

Read More

ಮಂಜೇಶ್ವರದ ಎಸ್.ಎ.ಟಿ. ಹೈಯರ್ ಸೆಕೆಂಡರಿ ಶಾಲೆ.ಪೂರ್ವಭಾವಿ ಶಿಬಿರ 2025.

ಮಂಜೇಶ್ವರದ ಎಸ್.ಎ.ಟಿ. ಹೈಯರ್ ಸೆಕೆಂಡರಿ ಶಾಲೆಯ ಲಿಟಲ್ ಕೈಟ್ಸ್ ಐಟಿ ಕ್ಲಬ್, ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಸೆಪ್ಟೆಂಬರ್ 20, 2025 ರಂದು ತನ್ನ ಮೊದಲ ಒಂದು ದಿನದ ಪೂರ್ವಭಾವಿ ತರಬೇತಿ ಶಿಬಿರವನ್ನು ಆಯೋಜಿಸಿತು. ಈ ಶಿಬಿರದಲ್ಲಿ ಸ್ಕ್ರ್ಯಾಚ್ ಪ್ರೋಗ್ರಾಮಿಂಗ್, ರೊಬೊಟಿಕ್ಸ್, ಅನಿಮೇಷನ್ ಮತ್ತು ರಸಪ್ರಶ್ನೆ ಕುರಿತು ಸಂವಾದಾತ್ಮಕ ಅವಧಿಗಳು ನಡೆದವು, ಇವೆಲ್ಲವನ್ನೂ ಮಂಜೇಶ್ವರ ಉಪ-ಜಿಲ್ಲಾ ಐಟಿ ಮಾರ್ಗದರ್ಶಕ ಶ್ರೀ ಮಿಧುನ್ ಪಿ.ವಿ. ನಡೆಸಿಕೊಟ್ಟರು. ಕಾರ್ಯಕ್ರಮವನ್ನು ಶ್ರೀ ಮಿಧುನ್ ಪಿ.ವಿ. ಉದ್ಘಾಟಿಸಿದರು, ಅವರು ಶಿಬಿರವನ್ನು ಅಧಿಕೃತವಾಗಿ ಉದ್ಘಾಟಿಸಿದರು .ಮತ್ತು ಭಾಗವಹಿಸುವವರನ್ನು…

Read More

ಮುಗುಳು ನಗೆಯ ಶಾರದಾ ದೇವಿಯ ಪ್ರತಿಷ್ಠಾಪನೆಯೊಂದಿಗೆ ಜಗತ್ ಪ್ರಸಿದ್ಧ ಮಂಗಳೂರು ದಸರಾಗೆ ಚಾಲನೆ…..!

ಮಂಗಳೂರು: ಕರ್ನಾಟಕದಲ್ಲಿ ಮೈಸೂರಿನಂತೆ ಸಂಭ್ರಮದಿಂದ ಇನ್ನೊಂದು ಕಡೆ ದಸರಾವನ್ನು ಆಚರಿಸುವ ಊರೆಂದರೆ ಅದು ಕರಾವಳಿ ನಗರಿ ಮಂಗಳೂರು. ಇದನ್ನು ಮಂಗಳೂರು ದಸರಾ ಎಂದೇ ಕರೆಯುತ್ತಾರೆ.ಇಲ್ಲಿ ನವರಾತ್ರಿಗೆ ಶಾರದಾದೇವಿಯನ್ನು ಪ್ರತಿಷ್ಠಾಪಿಸುವುದೇ ವಿಶೇಷ. ಮಂಗಳೂರು ದಸರಾ 2025ರ ಉದ್ಘಾಟನೆಯು ಇಂದು, ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದಲ್ಲಿ ನಡೆಯಿತು. ಧಾರ್ಮಿಕ ಕಾರ್ಯಕ್ರಮಗಳನ್ನು ರಾಮಕೃಷ್ಣ ಮಠದ ಅಧ್ಯಕ್ಷ ಸ್ವಾಮಿ ಜಿತಕಾಮಾನಂದಜಿ ಮತ್ತು ಬ್ರಹ್ಮಕುಮಾರಿಗಳ ಮುಖ್ಯಸ್ಥೆ ಬ್ರಹ್ಮಕುಮಾರಿ ವಿಶ್ವೇಶ್ವರೀ ಜಿ ಅವರ ಉಪಸ್ಥಿತಿಯಲ್ಲಿ, ಜನಾರ್ದನ ಪೂಜಾರಿ ಅವರ ಸಮ್ಮುಖದಲ್ಲಿ ಉದ್ಘಾಟಿಸಲಾಯಿತು. ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಎ.ವಿ….

Read More

ಹುಟ್ಟಿನ ಸಾರ್ಥಕತೆ ಮೆರೆಯುವ ರೀತಿಯಲ್ಲಿ ಹುಟ್ಟು ಹಬ್ಬವನ್ನ ಆಚರಿಸಿದ ಲಂಚುಲಾಲ್.

ಅಸ್ತ್ರ ಗ್ರೂಪ್ CEO, ಸಿನೆಮಾ ನಟ,ನಿರ್ಮಾಪಕ, CATCA ದ ಅಧ್ಯಕ್ಷ ಕೊಡುಗೈ ದಾನಿ ಲಂಚು ಲಾಲ್ ಅವರು ಹತ್ತು ಹಲವು ಸಮಾಜಮುಖಿ ಚಟುವಟಿಕೆಗಳನ್ನು ಮಾಡುವ ಮೂಲಕ ಜನಪ್ರಿಯತೆ ಪಡೆದಿದ್ದು ,ಇವರು ತಮ್ಮ ಹುಟ್ಟುಹಬ್ಬವನ್ನು ವಿಶೇಷವಾಗಿ ಆಚರಿಸುವ ಮೂಲಕ ಮತ್ತೆ ಎಲ್ಲರ ಗಮನ ಸೆಳೆದಿದ್ದಾರೆ. ತೊಕ್ಕೋಟು ಸಮೀಪದ ಗಟ್ಟಿ ಸಮಾಜ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಳ್ಳಾಲ, ತೊಕ್ಕೊಟ್ಟು ಪರಿಸರದ ಸರಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಸ್ಕೂಲ್ ಬ್ಯಾಗ್, ಅಕ್ಕಿ, ಹಾಗೂ ದಿನಸಿ ಕಿಟ್ ನೀಡುವ ಮೂಲಕ ವಿಶೇಷವಾಗಿ ತಮ್ಮ…

Read More
error: Content is protected !!