ಸಂಕಷ್ಟದ ಸಾಥಿಗೆ ಕೃತಜ್ಞತೆಯ ಹರಕೆ: ಕೇರಳದ ಅರ್ಜುನನ ತಾಯಿಯಿಂದ ಮಂಜೇಶ್ವರದ ಅಭ್ಯರ್ಥಿಗೆ ‘ಗೆಲುವಿನ ಇಡುಗಂಟು

ಮಂಜೇಶ್ವರ: ರಾಜಕೀಯದ ಆಚೆಗೂ ಮಾನವೀಯ ಸಂಬಂಧಗಳು ಎಷ್ಟು ಗಾಢವಾಗಿರುತ್ತವೆ ಎಂಬುದಕ್ಕೆ ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಯುಡಿಎಫ್ ಅಭ್ಯರ್ಥಿ ಎಕೆಎಂ ಅಶ್ರಫ್ ಹಾಗೂ ಶಿರೂರು ಭೂಕುಸಿತದಲ್ಲಿ ಮೃತಪಟ್ಟ ಲಾರಿ ಚಾಲಕ ಅರ್ಜುನ್ ಕುಟುಂಬದ ನಡುವಿನ ಭೇಟಿ ಸಾಕ್ಷಿಯಾಗಿದೆ. ​ಉತ್ತರ ಕನ್ನಡ ಜಿಲ್ಲೆಯ ಶಿರೂರಿನಲ್ಲಿ ಸಂಭವಿಸಿದ ಭೀಕರ ಭೂಕುಸಿತದಲ್ಲಿ ಲಾರಿ ಸಹಿತ ಗಂಗಾವಳಿ ನದಿ ಪಾಲಾಗಿದ್ದ ಅರ್ಜುನನ ಪತ್ತೆಗಾಗಿ ನಡೆದ ಸುದೀರ್ಘ 70ಕ್ಕೂ ಹೆಚ್ಚು ದಿನಗಳ ಕಾರ್ಯಾಚರಣೆಯ ವೇಳೆ, ಕರ್ನಾಟಕ ಮತ್ತು ಕೇರಳ ರಾಜ್ಯಗಳ ನಡುವೆ ಸೇತುವೆಯಂತೆ ನಿಂತು ಅಶ್ರಫ್…

Read More

ಕದ್ರಿ ಮೈದಾನದಲ್ಲಿ ಮಾ.26ರಿಂದ 29ರ ತನಕ ರಜತ ಮಹೋತ್ಸವ ಶ್ರೀ ರಾಮೋತ್ಸವ … !

ವಿಶ್ವ ಹಿಂದು ಪರಿಷತ್‌ ಮತ್ತು ಶ್ರೀ ರಾಮೋತ್ಸವ ಸಮಿತಿ ವತಿಯಿಂದ ಮಾ.26ರಿಂದ 29ರ ತನಕ ನಗರದ ಕದ್ರಿ ಮೈದಾನದಲ್ಲಿ 25ನೇ ವರ್ಷದ ಶ್ರೀ ರಾಮೋತ್ಸವ ಸಂಭ್ರಮವು ವೈದಿಕ ,ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದ್ದು ಕೊನೆಯ ದಿನ ರಾವಣನ ದಹನದ ಮೂಲಕ ಕಾರ್ಯಕ್ರಮ ಸಮಾಪ್ತಿಯಾಗಲಿದೆ ಎಂದು ಶ್ರೀರಾಮೋತ್ಸವ ಸಮಿತಿಯ ಗೌರವಾಧ್ಯಕ್ಷರಾದ ಡಾ ಎಂ.ಬಿ. ಪುರಾಣಿಕ್ ತಿಳಿಸಿದರು . ಅವರು ಕದ್ರಿಯ ವಿಶ್ವಶ್ರೀ ಸಭಾಂಗಣದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿ , ಶ್ರೀ ರಾಮನ ಜನ್ಮ…

Read More

ಮಾ. 26 ರಂದು ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ ವತಿಯಿಂದ 14 ಮಹಿಳಾ ಸಾಧಕಿಯರಿಗೆ ಸನ್ಮಾನ ….!

ಮಂಗಳೂರು: ರೋಟರಿ ಕ್ಲಬ್ ಆಫ್ ಮಂಗಳೂರು ಸೆಂಟ್ರಲ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಗ್ಲೋಬಲ್ ಗ್ರೀನ್ ಇಕೋ ಫೌಂಡೇಶನ್ ಮಂಗಳೂರು ಇವುಗಳ ಸಂಯುಕ್ತ ಆಶ್ರಯದಲ್ಲಿ ಮಾರ್ಚ್ 26ರಂದು ನಗರದ ಬಿಜೈನ ಮೆಸ್ಕಾಂ ಕಚೇರಿ ಬಳಿಗಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಭಾಂಗಣದಲ್ಲಿ ‘ವಿಶೇಷ ಮಹಿಳಾ ದಿನಾಚರಣೆ’ ಮತ್ತು ಸಾಧಕಿಯರ ಸನ್ಮಾನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ ಅಧ್ಯಕ್ಷ, ಹಿರಿಯ ಪತ್ರಕರ್ತರಾದ ಭಾಸ್ಕರ್ ರೈ ಕಟ್ಟಾ ತಿಳಿಸಿದರು . ಅವರು…

Read More

200 ಬಾಕ್ಸ್ ಮೀನುಗಳಿದ್ದ ಲಾರಿ ಕಳವು: ಇಬ್ಬರು ಬಂಧನ

ಕುಂಬಳೆ: ಬಂದಿಯೊಡ್ ಅಡ್ಕ ಪ್ರದೇಶದಲ್ಲಿ ನಿಲ್ಲಿಸಿದ್ದ ಸುಮಾರು 200 ಬಾಕ್ಸ್ ಮೀನುಗಳಿದ್ದ ಲಾರಿಯನ್ನು ಕಳವು ಮಾಡಿದ ಪ್ರಕರಣದಲ್ಲಿ ಇಬ್ಬರನ್ನು ಕುಂಬಳೆ ಪೊಲೀಸರು ಬಂಧಿಸಿದ್ದಾರೆ. ಇಚ್ಚಿಲಂಪಾಡಿ ಕೊಡೀಯಮ್ಮ ನಿವಾಸಿ ಅಬ್ದುಲ್ಲ ಎ.ಪಿ (32) ಹಾಗೂ ಕುಂಬಳೆ ಎಡನಾಡು ಮುಕ್ಕರಿಕ್ಕಂಡದ ಮೊಹಮ್ಮದ್ ರಿಜ್ವಾನ್ (27) ಬಂಧಿತರು. ಅಡ್ಕ ಎಂ. ಸಕ್ಕರಿಯಾ ನೀಡಿದ ದೂರಿನ ಪ್ರಕಾರ, ಸೆಡ್.ಎಂ.ಎಸ್ ಫಿಶ್ ಸರ್ವಿಸ್ ಕಚೇರಿ ಸಮೀಪ ನಿಲ್ಲಿಸಿದ್ದ ಮೀನು ಲಾರಿಯೇ ಕಳುವಾಗಿದೆ. ಶನಿವಾರ ರಾತ್ರಿ 11.30 ಗಂಟೆಯಿಂದ ಮುಂದಿನ ದಿನ ಬೆಳಗ್ಗೆ 8 ಗಂಟೆಯೊಳಗಿನ…

Read More

ಪಣಕಜೆಯಲ್ಲಿ ಟೋಲ್ ಗೇಟ್ ನಿರ್ಮಾಣ ವಿರುದ್ಧ ತಾಲೂಕಿನ ಜನತೆ ಒಗ್ಗಟ್ಟಾಗಿ ಹೋರಾಡಬೇಕು: ನವಾಝ್ ಕಟ್ಟೆ

ಬೆಳ್ತಂಗಡಿ (ಮೇ-26): ಮಂಗಳೂರು- ಕಡೂರು ರಾಷ್ಟ್ರೀಯ ಹೆದ್ದಾರಿ ನಾಲ್ಕು ಪಥದ ರಸ್ತೆಯಾಗಿ ಮೇಲ್ದರ್ಜೆಗೆ ಏರುತ್ತಿದ್ದು, ಇದರ ಭಾಗವಾಗಿ ಬೆಳ್ತಂಗಡಿ ತಾಲೂಕಿನ ಪಣಕಜೆ ಸಮೀಪ ಟೋಲ್ ಗೇಟ್ ನಿರ್ಮಾಣಕ್ಕೆ ಎಸ್‌ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯದರ್ಶಿ ನವಾಝ್ ಕಟ್ಟೆಯವರು ವಿರೋಧವನ್ನು ವ್ಯಕ್ತಪಡಿಸಿದ್ದಾರೆ. ಬೆಳ್ತಂಗಡಿ ತಾಲೂಕಿಗೆ ಟೋಲ್ ಗೇಟ್ ಬೇಡ . ಇದರ ವಿರುದ್ಧ ಪಕ್ಷತೀತವಾಗಿ ಹೋರಾಟ ನಡೆಸುವ ಅನಿವಾರ್ಯತೆ ಇದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸರಕಾರ ಪಣಕಜೆ ಟೋಲ್ ಗೇಟ್ ನಿರ್ಮಾಣ ಪ್ರಸ್ತಾವನೆಯನ್ನು ಕೂಡಲೇ ಹಿಂಪಡೆಯಬೇಕು. ಜನಸಾಮಾನ್ಯರಿಗೆ…

Read More

ಹುತಾತ್ಮರ ದಿನಾಚರಣೆ: ಪುತ್ತೂರಿನಲ್ಲಿ ಬೃಹತ್ ಪಾದಯಾತ್ರೆ, ಯುವಜನರಲ್ಲಿ ದೇಶಭಕ್ತಿ ಜಾಗೃತಿ

ಪುತ್ತೂರು/ಮಂಗಳೂರು, ಮಾರ್ಚ್ 23, 2026: ಭಗತ್ ಸಿಂಗ್, ಶಿವರಾಮ ರಾಜಗುರು ಮತ್ತು ಸುಖದೇವ್ ಥಾಪರ್ ಅವರ ತ್ಯಾಗವನ್ನು ಸ್ಮರಿಸುವ ಹುತಾತ್ಮರ ದಿನಾಚರಣೆಯ ಅಂಗವಾಗಿ ಪುತ್ತೂರಿನಲ್ಲಿ ಜಿಲ್ಲಾ ಮಟ್ಟದ ಬೃಹತ್ ಪಾದಯಾತ್ರೆ ನಡೆಯಿತು. ಭಾರತ ಸರ್ಕಾರದ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯದ ಮೇರಾ ಯುವ ಭಾರತ್ (ಮೈ ಭಾರತ್), ದಕ್ಷಿಣ ಕನ್ನಡ, ಪುತ್ತೂರಿನ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಹಾಗೂ ರೋಟರಿ ಕ್ಲಬ್ ಪುತ್ತೂರು ಸಿಟಿ ಇವರ ಜಂಟಿ ಆಶ್ರಯದಲ್ಲಿ ನಡೆದ ಈ ಪಾದಯಾತ್ರೆಯಲ್ಲಿ 250ಕ್ಕೂ…

Read More

ವಿಟ್ಲ ಸಮೀಪ ಭೀಕರ ಅಪಘಾತ: ಬೈಕ್ ಸವಾರರು ಗಂಭೀರ ಗಾಯ

ವಿಟ್ಲ: ಕಾರು ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್‌ನಲ್ಲಿದ್ದ ಇಬ್ಬರು ಸವಾರರು ಗಂಭೀರವಾಗಿ ಗಾಯಗೊಂಡ ಘಟನೆ ವಿಟ್ಲ–ಮಂಗಳೂರು ರಸ್ತೆಯ ಬೊಬ್ಬೆಕೇರಿ ಶಾಂತಿನಗರದಲ್ಲಿ ನಡೆದಿದೆ. ವಿಟ್ಲ ಕಡೆಯಿಂದ ಮಂಗಳೂರು ಕಡೆಗೆ ಸಾಗುತ್ತಿದ್ದ ಕಾರು ಮತ್ತು ಮಂಗಳೂರು ಕಡೆಯಿಂದ ವಿಟ್ಲ ಕಡೆಗೆ ಬರುತ್ತಿದ್ದ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ ಎಂದು ತಿಳಿದುಬಂದಿದೆ. ಅಪಘಾತದ ತೀವ್ರತೆಗೆ ಬೈಕ್‌ನಲ್ಲಿದ್ದ ಇಬ್ಬರು ಸವಾರರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರು ವೀರಕಂಬ ಮೂಲದವರಾಗಿದ್ದು, ಅವರನ್ನು ತಕ್ಷಣ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರು ವಿಟ್ಲದ…

Read More

ಮಸೀದಿ ವಿಚಾರಕ್ಕೆ ಸಂಬಂಧಿಸಿದ ಗಲಾಟೆ: ಬಂಟ್ವಾಳದಲ್ಲಿ ಕೌಂಟರ್ ಪ್ರಕರಣ ದಾಖಲು

ಬಂಟ್ವಾಳ: ಮಸೀದಿ ವಿಚಾರಕ್ಕೆ ಸಂಬಂಧಿಸಿದಂತೆ ಎರಡು ತಂಡಗಳ ನಡುವೆ ನಡೆದ ಗಲಾಟೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಎರಡು ಪಕ್ಷಗಳೂ ಪರಸ್ಪರ ದೂರು ನೀಡಿದ್ದು, ಕೌಂಟರ್ ಪ್ರಕರಣ ದಾಖಲಾಗಿದೆ. ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಸಜೀಪ ನಡು ಗ್ರಾಮದ ತಲೆಮೊಗರು ಮಸೀದಿ ಸಮೀಪ ಈ ಗಲಾಟೆ ನಡೆದಿದ್ದು, ಒಟ್ಟು 17 ಮಂದಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಅಂಗಡಿಯೊಂದರಲ್ಲಿ ವ್ಯಾಪಾರ ನಡೆಸುತ್ತಿದ್ದ ವೇಳೆ ದಾವೂದ್ ಅವರ ತಂಡ ಬಂದು ಹಲ್ಲೆ ನಡೆಸಿದೆ…

Read More

ಅತ್ತಾವರ ಶ್ರೀ ಅಯ್ಯಪ್ಪ ಸ್ವಾಮಿ ಕ್ಷೇತ್ರದಲ್ಲಿ ಬ್ರಹ್ಮಕಲಶೋತ್ಸವಕ್ಕೆ ಆಹ್ವಾನ ಪತ್ರಿಕೆ ಬಿಡುಗಡೆ

ಮಂಗಳೂರು: ನೂರಾರು ವರ್ಷಗಳ ಇತಿಹಾಸ ಹೊಂದಿರುವ ಅತ್ತಾವರದ ಶ್ರೀ ಅಯ್ಯಪ್ಪ ಸ್ವಾಮಿ ಕ್ಷೇತ್ರದಲ್ಲಿ ನಡೆಯಲಿರುವ ಬ್ರಹ್ಮಕಲಶಾಭಿಷೇಕ ಮಹೋತ್ಸವದ ಅಂಗವಾಗಿ ಆಹ್ವಾನ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಮಾರ್ಚ್ 22ರಂದು ದೇವಸ್ಥಾನದಲ್ಲಿ ನಡೆಯಿತು. ಮಂಗಳೂರು ದಕ್ಷಿಣ ಶಾಸಕ Vedavyas Kamath ಅವರು ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಮಾತನಾಡಿ, ದಕ್ಷಿಣ ಕನ್ನಡ ಜಿಲ್ಲೆಯ ಮೊದಲ ಅಯ್ಯಪ್ಪ ದೇವಸ್ಥಾನದ ಬ್ರಹ್ಮಕಲಶೋತ್ಸವದಲ್ಲಿ ಭಾಗವಹಿಸುವುದು ಪುಣ್ಯದ ಫಲವಾಗಿದ್ದು, ಇಂತಹ ದೇವತಾ ಕಾರ್ಯಗಳು ಊರಿನ ಉನ್ನತಿಗೆ ಕಾರಣವಾಗುತ್ತವೆ ಎಂದರು. ಬ್ರಹ್ಮಕಲಶ ನಡೆಯುವ ಊರಿಗೆ ಸಂಕಷ್ಟಗಳು ದೂರವಾಗುತ್ತವೆ ಎಂದು…

Read More

ಇಂಧನ ಕೊರತೆ ಬಗ್ಗೆ ಗೊಂದಲ ಬೇಡ: ಕೇಂದ್ರದ ಕ್ರಮಗಳಿಂದ ಸ್ಥಿತಿ ನಿಯಂತ್ರಣದಲ್ಲಿ – ಸಂಜೀವ ಮಠಂದೂರು

ಪುತ್ತೂರು: ಪ್ರಸ್ತುತ ಇರಾನ್, ಅಮೇರಿಕಾ ಹಾಗೂ ಇಸ್ರೇಲ್ ನಡುವಿನ ಉದ್ವಿಗ್ನ ಪರಿಸ್ಥಿತಿಯಿಂದ ಜಾಗತಿಕ ಮಟ್ಟದಲ್ಲಿ ಇಂಧನ, ತೈಲ ಮತ್ತು ನೈಸರ್ಗಿಕ ಅನಿಲದ ಕೊರತೆ ಉಂಟಾಗುತ್ತಿರುವ ಸಂದರ್ಭದಲ್ಲೂ, ಭಾರತದಲ್ಲಿ ಅಡುಗೆ ಅನಿಲ ಸರಬರಾಜು ಸಮರ್ಪಕವಾಗಿ ನಡೆಯುತ್ತಿದೆ ಎಂದು ಪುತ್ತೂರು ಮಾಜಿ ಶಾಸಕ ಸಂಜೀವ ಮಠಂದೂರು ತಿಳಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು, ದೇಶದ ಪ್ರಧಾನಿ Narendra Modi ಹಾಗೂ ಕೇಂದ್ರ ಇಂಧನ ಸಚಿವ Hardeep Singh Puri ಅವರ ಸೂಕ್ತ ಯೋಜನೆ ಮತ್ತು ವ್ಯವಸ್ಥಿತ ನಿರ್ವಹಣೆಯಿಂದ ದೇಶದ ಜನರಿಗೆ…

Read More
error: Content is protected !!