ಲಯನ್ಸ್ ಇಂಟರ್ ನ್ಯಾಷನಲ್ ಜಿಲ್ಲೆ 317ಡಿ ವತಿಯಿಂದ ಸೆ. 21 ರಂದು ಪುರಭವನದಲ್ಲಿ ಸಿಂಹವಾಹಿನಿ ಲಯನ್ಸ್ ಜಿಲ್ಲಾ ಸಾಂಸ್ಕೃತಿಕ ಸ್ಪರ್ದೆ

ಮಂಗಳೂರು: ಲಯನ್ಸ್‌ ಇಂಟರ್ ನ್ಯಾಷನಲ್ ಜಿಲ್ಲೆ 317 ಡಿ ಇದರ ಆಶ್ರಯದಲ್ಲಿ “ಸಿಂಹವಾಹಿನಿ ಲಯನ್ಸ್ ಜಿಲ್ಲಾ ಸಾಂಸ್ಕೃತಿಕ ಸ್ಪರ್ಧೆ ನೆಪ್ಟೆಂಬರ್ 21 ರಂದು ಭಾನುವಾರ ಬೆಳಿಗೆ, 8.30 ಕ್ಕೆ, ಕುದ್ಮಲ್ ರಂಗರಾವ್ ಪುರಭವನ ಮಂಗಳೂರಿನಲ್ಲಿ ನಡೆಯಲಿದೆ ಎಂದು ಲಯನ್ ರಾಜೇಶ್ ಶೆಟ್ಟಿ ಶಬರಿ ತಿಳಿಸಿದರು. ಅವರು ನಗರದ ಲಯನ್ ಅಶೋಕದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿ, ಲಯನ್ಸ್ ಜಿಲ್ಲಾ ನಾಂಸ್ಕೃತಿಕ ಸ್ಪರ್ಧೆಯಲ್ಲಿ ಸುಮಾರು 25 ತಂಡಗಳು ಭಾಗವಹಿನಲಿದ್ದು, ನೆಟ್ಟಿಂಗ್ ಸೇರಿ ಒಂದು ತಂಡಕ್ಕೆ 20 ನಿಮಿಷಗಳ ಕಾಲಾವಧಿ…

Read More

ಸೆಪ್ಟೆಂಬರ್ 19ರಂದು ನಗರದಲ್ಲಿ ಬಸವ ಸಂಸ್ಕೃತಿ ಅಭಿಯಾನ

ಮಂಗಳೂರು: ಕರ್ನಾಟಕ ರಾಜ್ಯ ಸರ್ಕಾರವು ಸಾಂಸ್ಕೃತಿಕ ನಾಯಕ ಬಸವಣ್ಣ ಎಂದು ಘೋಷಿಸಿದ್ದು ತಮಗೆ ತಿಳಿದಿರುವ ವಿಚಾರ ಬಸವಾದಿ ಶಿವಶರಣರ ತತ್ವಾದರ್ಶಗಳನ್ನು ಜನಮನದಲ್ಲಿ ಬಿತ್ತುವ, ಜನರ ಮನಸ್ಸುಗಳನ್ನು ಕಟ್ಟುವ, ಜೊತೆಗೆ ಪರಸ್ಪರ ಭಾಂದವ್ಯದ ಬೆಸುಗೆ ಹಾಕುವ ಸದುದ್ದೇಶದಿಂದ ಲಿಂಗಾಯತ ಮಠಾಧಿಪತಿಗಳ ಒಕ್ಕೂಟದ ಆಶ್ರಯದಲ್ಲಿ ಕರ್ನಾಟಕ ರಾಜ್ಯದಾದ್ಯಂತ ಸಪ್ಟೆಂಬರ್ 1 ರಿಂದ ಅಕ್ಟೋಬರ್ 5 ರ ತನಕ ‘ಬಸವ ಸಂಸ್ಕೃತಿ ಅಭಿಯಾನ’ವನ್ನು ಹಮ್ಮಿಕೊಳ್ಳಲಾಗಿದೆ. ವ್ಯಸನ ಮುಕ್ತ ಸಮ ಸಮಾಜದ ನಿರ್ಮಾಣ, ಅಂಧಶ್ರದ ಅಳಿಸಿ ಸುಜ್ಞಾನ ಬೆಳೆಸುವುದು, ವಿದ್ಯಾರ್ಥಿ ಯುವಜನರಲ್ಲಿ ಆಧ್ಯಾತ್ಮದ…

Read More

ಮಂಗಳೂರು: ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾಸಿಕ ಸಭೆ

ಮಂಗಳೂರು: ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾಸಿಕ ಸಭೆ ಮಂಗಳವಾರ ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಜರುಗಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧ್ಯಕ್ಷ ಕೆ.ಹರೀಶ್ ಕುಮಾರ್, ಮತ ಕಳ್ಳತನ ದೇಶದ ಅತಿ ದೊಡ್ಡ ಚುನಾವಣಾ ಹಗರಣವಾಗಿದ್ದು, ಇದರ ವಿರುದ್ಧ ಎಐಸಿಸಿ ಅ.15ರ ವರೆಗೆ ದೇಶವ್ಯಾಪಿ ‘ಮತದಾರರ ಹಕ್ಕುಗಳಿಗಾಗಿ ಸಹಿ ಸಂಗ್ರಹ’ ಅಭಿಯಾನ ಆಯೋಜಿಸಿದೆ. ಈ ಅಭಿಯಾನವು ರಾಜಕೀಯ ಕಾರ್ಯಕ್ರಮವಲ್ಲ. ಸಂವಿಧಾನ ರಕ್ಷಣೆ, ದೇಶದ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡುವ ನಿರ್ಣಾಯಕ ಹೆಜ್ಜೆಯಾಗಿದೆ. ಅಭಿಯಾನವನ್ನು ಗಂಭೀರವಾಗಿ ಪರಿಗಣಿಸಿ ಜಿಲ್ಲೆಯ…

Read More

ಶ್ರೀಮತಿ ಸುಮನ್ ಆರ್. ವಾಲ್ಕೆ ಅವರ ವಿಜ್ಞಾನ ಮತ್ತು ತಂತ್ರಜ್ಞಾನಕ್ಕೆ ನೀಡಿದ ಅತ್ಯುತ್ತಮ ಕೊಡುಗೆಗಳಿಗಾಗಿ ಕೆನರಾ ಸಮೂಹ ಶಿಕ್ಷಣ ಸಂಸ್ಥೆಯ ವತಿಯಿಂದ ಸನ್ಮಾನ .

ಕೆನರಾ ಶಿಕ್ಷಣ ಸಂಸ್ಥೆಯ ಹಳೆಯ ವಿದ್ಯಾರ್ಥಿನಿ ಮತ್ತು ಇಸ್ರೋ ವಿಜ್ಞಾನಿಯಾದ ಶ್ರೀಮತಿ ಸುಮನ್ ಆರ್. ವಾಲ್ಕೆ ಅವರ ವಿಜ್ಞಾನ ಮತ್ತು ತಂತ್ರಜ್ಞಾನಕ್ಕೆ ನೀಡಿದ ಅತ್ಯುತ್ತಮ ಕೊಡುಗೆಗಳಿಗಾಗಿ ಕೆನರಾ ಸಮೂಹ ಶಿಕ್ಷಣ ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು ಕೆನರಾದ ಹೆಮ್ಮಯ ಹಳೆಯ ವಿದ್ಯಾರ್ಥಿ ಹಾಗೂ ಪ್ರಸ್ತುತ ಮಂಗಳೂರು ದಕ್ಷಿಣದ ಶಾಸಕರಾದ ಶ್ರೀ ಡಿ. ವೇದವ್ಯಾಸ ಕಾಮತ್ ಅವರು ಈ ಸನ್ಮಾನವನ್ನು ನಡೆಸಿದ್ದು ಶ್ರೀಮತಿ ವಾಲ್ಕೆಯವರನ್ನು ಮರಳಿ ಈ ಸಂಸ್ಥೆಯಡಿ ಸನ್ಮಾನಿಸಲು ಹೆಮ್ಮೆಯಾಗುತ್ತದೆ ಎಂದರು. ಇದೇ ವೇಳೆ ಕೆನರಾ ಹೈಸ್ಕೂಲ್ ಅಸೋಸಿಯೇಷನ್…

Read More

ರಾಜ್ಯದಲ್ಲಿ ಜಾತಿ ಗಣತಿ‌ ನಡೆಸುವ ವಿಚಾರವಾಗಿ ಹಲವಾರು ಗೊಂದಲಗಳಿದ್ದು ಅದನ್ನು ಪರಿಹರಿಸಿದ ಬಳಿಕ ಜಾತಿ ಗಣತಿ ಮಾಡಿದರೆ ಒಳಿತು – ಸತೀಶ್ ಕುಂಪಲ

ಮಂಗಳೂರು:ರಾಜ್ಯದಲ್ಲಿ ಜಾತಿ ಗಣತಿ‌ ನಡೆಸುವ ವಿಚಾರವಾಗಿ ಹಲವಾರು ಗೊಂದಲಗಳಿದ್ದು ಅದನ್ನು ಪರಿಹರಿಸಿದ ಬಳಿಕ ಜಾತಿ ಗಣತಿ ಮಾಡಿದರೆ ಒಳಿತೆಂದು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ತಿಳಿಸಿದರು . ಅವರು ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ , ಈಗಾಗಲೇ ಮನೆಗಳಲ್ಲಿ ಜಾತಿ ಗಣತಿಯ ಅಂಗವಾಗಿ ಸ್ಟಿಕ್ಕರ್ ಅಂಟಿಸಲಾಗುತ್ತಿದೆ . ಆದರೆ ಜನರಿಗೆ ಈ ಬಗ್ಗೆ ಹಲವು ಗೊಂದಲಗಳಿವೆ . ಜನಜಾಗೃತಿ ಮೂಡಿಸಿದ ನಂತರ ಈ ಸಮೀಕ್ಷೆಯನ್ನು ಕೈಗೊಂಡರೆ ಒಳ್ಳೆಯದಿತ್ತು . ಜಿಲ್ಲಾ ಪಂಚಾಯತ್ ನಲ್ಲಿ ಈ…

Read More

ಮುಡಿಪು ಎಜು ಪಾರ್ಕ್‌ನಲ್ಲಿ ‘ಫರ್ಹೇ ಮೀಲಾದ್ ’ಸಂಭ್ರಮ ಸಮಾವೇಶ

ಸಂಭ್ರಮ ಪ್ರವಾದಿ ಪೈಗಂಬರರ 1,500ನೇ ಜನ್ಮ ಮಾಸಾಚರಣೆಯ ಅಂಗವಾಗಿ ಮಜ್ಲಿಸ್ ಎಜುಕೇಶನ್ ಆ ಂಡ್ ಚಾರಿಟೇಬಲ್ ಟ್ರಸ್ಟ್ ಮುಡಿಪು ಸಂಸ್ಥೆಯ ವತಿಯಿಂದ ‘ಫರ್ಹೇ ಮೀಲಾದ್ ’ಸಂಭ್ರಮ ಸಮಾವೇಶವು ಸೆಪ್ಟೆಂಬರ್ 19 ಶುಕ್ರವಾರ ಮುಡಿಪುವಿನ ಮಜ್ಲಿಸ್ ಎಜು ಪಾರ್ಕ್‌ನಲ್ಲಿ ನಡೆಯಲಿದೆ. ಜನಸೇವೆಯೇ ಅತ್ಯಂತ ಶ್ರೇಷ್ಠ ಸತ್ಕರ್ಮ ಎಂಬ ಪ್ರವಾದಿಗಳ ಸಂದೇಶವನ್ನು ಅಳವಡಿಸಿಕೊಂಡು ಪ್ರಸ್ತುತ ಸಮಾವೇಶದ ಅಂಗವಾಗಿ ವಿವಿಧ ಜನಸೇವಾ ಕಾರ್ಯಕ್ರಮಗಳ್ನು ಹಮ್ಮಿಕೊಳ್ಳಲಾಗಿದೆ. ವಿಶೇಷವಾಗಿ ಕೈ ಮತ್ತು ಕಾಲುಗಳನ್ನು ಕಳೆದುಕೊಂಡಿರುವ ಅಂಗವಿಕಲರ ಜೀವನದಲ್ಲಿ ಹೊಸ ಭರವಸೆ ಮೂಡಿಸುವ ಉದ್ದೇಶದಿಂದ ಕೃತಕ…

Read More

ವಿಶ್ವ ಹೃದಯ ದಿನದ ಅಂಗವಾಗಿ ಕೆಎಂಸಿ ಆಸ್ಪತ್ರೆ ವತಿಯಿಂದ ‘ವಿಶ್ವ ಹೃದಯ ದಿನದ ವಾಕಥಾನ್’ ಸೆ. 21ಕ್ಕೆ

ಮಂಗಳೂರು: ಮಂಗಳೂರಿನ ಕೆಎಂಸಿ ಆಸ್ಪತ್ರೆಯು ವಿಶ್ವ ಹೃದಯ ದಿನದ ಅಂಗವಾಗಿ ಸೆ.21ರಂದು ‘ವಿಶ್ವ ಹೃದಯ ದಿನದ ವಾಕಥಾನ್-2025’ (“World Heart Day Walkathon 2025”) ಅನ್ನು ಆಯೋಜಿಸುವುದಾಗಿ ಆಸ್ಪತ್ರೆಯ ಡೀನ್ ಡಾ.ಉಣ್ಣಿಕೃಷ್ಣನ್ ಸುದ್ದಿಗೋಷ್ಠಿಯಲ್ಲಿ ಹೇಳಿದರು. ಈ ಕುರಿತು ಮಾಹಿತಿ ನೀಡಿದ ಕೆಎಂಸಿ ಹೃದ್ರೋಗ ವಿಭಾಗದ ಮುಖ್ಯಸ್ಥ ಡಾ. ನರಸಿಂಹ ಪೈ ಅವರು, ‘ಒಂದು ಬೀಟ್ ಕೂಡ ತಪ್ಪಿಸಿಕೊಳ್ಳಬೇಡಿ’ ಎನ್ನುವುದು ಈ ವರ್ಷದ ವಿಶ್ವ ಹೃದಯ ದಿನದ ಥೀಮ್ ಆಗಿದೆ. ಹೃದಯ ಕಾಯಿಲೆಗಳ ಪ್ರಮಾಣವು, ವಿಶೇಷವಾಗಿ ಯುವಕರಲ್ಲಿ ಹೆಚ್ಚುತ್ತಿರುವುದು…

Read More

ಕೇರಳ ಸರಕಾರದ ಜನ ವಿರೋಧಿ,ಕಾರ್ಮಿಕ ವಿರೋಧಿ ನೀತಿಗೆದುರಾಗಿ ಕಾಲ್ನಡೆ ಜಾಥಾ.

ಕೇರಳ ಸರಕಾರದ ಜನ ವಿರೋಧಿ, ಕಾರ್ಮಿಕ ವಿರೋಧಿ ನೀತಿಗೆದುರಾಗಿ ಕೇರಳ ರಾಜ್ಯಾದ್ಯಂತ ನಡೆಯುವ ಕಾಲ್ನಡೆ ಜಾಥ ಅಂಗವಾಗಿ ಮಂಜೇಶ್ವರ ಪಂಚಾಯತ್ ವತಿಯಿಂದ ನಡೆದ ಕಾಲ್ನಡೆ ಜಾಥ ವನ್ನು BMS ಜಿಲ್ಲಾ ಅಧ್ಯಕ್ಷರಾದ ಉಪೇಂದ್ರನ್ ಕೋಟೆಕಣಿ ಉದ್ಘಾಟನೆ ಗೆಯ್ದರು. ಜಾಥಾ ಕ್ಯಾಪ್ಟನ್ ಪ್ರಕಾಶ್ ಕೆ. ಪಿ ರವರ ನೇತ್ತ್ವದಲ್ಲಿ ನಡೆದ ಕಾಲ್ನಡೆ ಜಾಥಾದಲ್ಲಿ ಜಿಲ್ಲಾ ಜೊತೆ ಕಾರ್ಯದರ್ಶಿ ದಿನೇಶ್ ಬಂಬ್ರಾಣ. ಯಶವಂತಿ ಬೆಜ್ಜ ,ವಲಯ ಅಧ್ಯಕ್ಷ ರವಿ ಎಂ ಕೆ ಕೊಲ್ಯೂರು,ರವಿ ಮಜಲ್, ಕಿಶೂರ್ ಶೆಟ್ಟಿ ಕುಂಜತ್ತೂರು, ಶ್ರೀಧರ…

Read More

ಜಿ.ವಿ.ಎಚ್.ಎಸ್.ಎಸ್ ಕುಂಜತ್ತೂರು ಶಾಲೆಗೆ ಡೆಸ್ಕ್ ಟಾಪ್ , ಪ್ರಿಂಟರ್ ನೀಡಿದ 24ನ್ಯೂಸ್ ಹಾಗೂ ಕೆ ಚಿಟ್ಟಿಲಪ್ಪಿಲ್ಲಿ ಸಂಸ್ಥೆ.

ಮಂಜೇಶ್ವರ : ಜಿ.ವಿ.ಎಚ್.ಎಸ್.ಎಸ್ ಕುಂಜತ್ತೂರು ಶಾಲೆಯಲ್ಲಿ 24ನ್ಯೂಸ್ ಹಾಗೂ ಕೆ ಚಿಟ್ಟಿಲಪ್ಪಿಲ್ಲಿ ಸಂಸ್ಥೆಯವರು ಶಾಲೆಗೆ ದೇಣಿಗೆಯಾಗಿ ನೀಡಿದ 8 ಡೆಸ್ಕ್ ಟಾಪ್ ಹಾಗೂ ಒಂದು ಪ್ರಿಂಟರ್ ಗಳ ಉದ್ಘಾಟನಾ ಸಮಾರಂಭ ಜರುಗಿತು. ಕಾಸರಗೋಡು ಜಿಲ್ಲಾ ಕ್ರೈಂ ಬ್ರಾಂಚ್ ಡಿ. ವೈ. ಎಸ್. ಪಿ. ಶ್ರೀ ಟಿ. ಉತ್ತಮ್ ದಾಸ್ ಇವರು ಕಂಪ್ಯೂಟರ್‌ಗಳ ಉದ್ಘಾಟನಾ ಸಮಾರಂಭವನ್ನು ಉದ್ಘಾಟಿಸಿದರು. ಕುಂಜತ್ತೂರು ಶಾಲೆಯ ಪ್ರಾಂಶುಪಾಲರಾದ ಶ್ರೀ ಶಿಶು ಪಾಲನ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ನಂತರ ವಿದ್ಯಾರ್ಥಿಗಳಿಂದ ಲಹರಿ ವಿರುದ್ಧ ಪ್ರತಿಜ್ಞೆ ಕೈಗೊಳ್ಳಲಾಯಿತು. ಈ…

Read More

ಬಾಯಾರು: ಶಾಲಾ ಬಸ್ಸು ಸ್ಕೂಟರ್ ಡಿಕ್ಕಿ .ಇಬ್ಬರು ವಿದ್ಯಾರ್ಥಿಗಳಿಗೆ ಗಂಭೀರ ಗಾಯ.

ಮಂಜೇಶ್ವರ : ಬಾಯಾರು ಪೆಟ್ರೋಲ್ ಬಂಕ್ ಮುಂಬಾಗದಲ್ಲಿ ಇಂದು ಬೆಳಿಗ್ಗೆ ಶಾಲಾ ಬಸ್ಸೊಂದು ವಿದ್ಯಾರ್ಥಿಗಳು ಸಂಚರಿಸುತ್ತಿದ್ದ ಸ್ಕೂಟರಿಗೆ ಡಿಕ್ಕಿ ಹೊಡೆದು ಉಂಟಾದ ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳನ್ನು ಗಂಭೀರ ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಪೈಕಿ ಒಂದು ವಿದ್ಯಾರ್ಥಿ ಸ್ಥಿತಿ ಚಿಂತಾಜನಕವೆಂದು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ. ಬಾಯಾರು ಪೊನ್ನಂಗಳ ಮುಜಮ್ಮ ಸಶಾಫತ್ ಸುನ್ನಿ ಶಾಲಾ ಬಸ್ಸು ಸ್ಕೂಟರಿಗೆ ಡಿಕ್ಕಿ ಹೊಡೆದಿದೆ.ಅಪಘಾತದಲ್ಲಿ ಪೈವಳಿಕೆ ಅಕಾಡೆಮಿಕ್ ಶಾಲೆಯ ಪ್ಲಸ್ 2 ವಿದ್ಯಾರ್ಥಿಗಳಾದ ಸಾದಿಖ್ ಹಾಗೂ ಮೊಯಿನುದ್ದೀನ್ ಅಪಘಾತದಿಂದ ಗಾಯಗೊಂಡಿದ್ದಾರೆ.

Read More
error: Content is protected !!