ದಕ್ಷಿಣ ಕನ್ನಡ ಜಿಲ್ಲೆಯ ಅವೈಜ್ಞಾನಿಕ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ತನಿಖೆಗೆ ಕೇಂದ್ರ ಸರಕಾರ ತನಿಖಾ ತಂಡವನ್ನು ರಚಿಸಲಿ ; ವಿಧಾನ ಪರಿಷತ್ ಶಾಸಕ ಐವನ್ ಡಿ’ಸೋಜಾ.
ಕರಾವಳಿ ಭಾಗದಲ್ಲಿ ನಿರ್ಮಾಣವಾದ ರಾಷ್ಟ್ರೀಯ ಹೆದ್ದಾರಿಯು ಅವೈಜ್ಞಾನ ಮತ್ತು ಕಳಪೆ ಕಾಮಗಾರಿಯ ಬಗ್ಗೆ ಸೂಕ್ತವಾದ ತನಿಖೆ ನಡೆಯಬೇಕೆಂದು ಕೇಂದ್ರ ಸರಕಾರಕ್ಕೆ ವಿಧಾನ ಪರಿಷತ್ ಶಾಸಕರಾದ ಐವನ್ ಡಿ’ಸೋಜಾ ಆಗ್ರಹಿಸಿದರು . ಅವರು ಮನಪಾ ಕಚೇರಿಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿ , ಕರಾವಳಿಯ ರಸ್ತೆಗಳು ಅವ್ಯವಸ್ಥೆಗಳ ಆಗರವಾಗಿದೆ . ಮಾರ್ಗಗಳು ಅವೈಜ್ಞಾನಿಕತೆ ಮತ್ತು ಕಳಪೆ ಕಾಮಗಾರಿಯಿಂದ ಕೂಡಿದೆ . ಈ ಬಗ್ಗೆ ತನಿಖೆಗೆ ಆಗ್ರಹಿಸಿ ಕೇಂದ್ರದ ಹೆದ್ದಾರಿ ಇಲಾಖೆಗೆ ಪತ್ರವನ್ನು ಬರೆಯಲಾಗಿದೆ . ಕರಾವಳಿ…
