ವಿಟ್ಲ ಸಮೀಪ ಭೀಕರ ಅಪಘಾತ: ಬೈಕ್ ಸವಾರರು ಗಂಭೀರ ಗಾಯ

ವಿಟ್ಲ: ಕಾರು ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್‌ನಲ್ಲಿದ್ದ ಇಬ್ಬರು ಸವಾರರು ಗಂಭೀರವಾಗಿ ಗಾಯಗೊಂಡ ಘಟನೆ ವಿಟ್ಲ–ಮಂಗಳೂರು ರಸ್ತೆಯ ಬೊಬ್ಬೆಕೇರಿ ಶಾಂತಿನಗರದಲ್ಲಿ ನಡೆದಿದೆ. ವಿಟ್ಲ ಕಡೆಯಿಂದ ಮಂಗಳೂರು ಕಡೆಗೆ ಸಾಗುತ್ತಿದ್ದ ಕಾರು ಮತ್ತು ಮಂಗಳೂರು ಕಡೆಯಿಂದ ವಿಟ್ಲ ಕಡೆಗೆ ಬರುತ್ತಿದ್ದ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ ಎಂದು ತಿಳಿದುಬಂದಿದೆ. ಅಪಘಾತದ ತೀವ್ರತೆಗೆ ಬೈಕ್‌ನಲ್ಲಿದ್ದ ಇಬ್ಬರು ಸವಾರರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರು ವೀರಕಂಬ ಮೂಲದವರಾಗಿದ್ದು, ಅವರನ್ನು ತಕ್ಷಣ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರು ವಿಟ್ಲದ…

Read More

ಮಸೀದಿ ವಿಚಾರಕ್ಕೆ ಸಂಬಂಧಿಸಿದ ಗಲಾಟೆ: ಬಂಟ್ವಾಳದಲ್ಲಿ ಕೌಂಟರ್ ಪ್ರಕರಣ ದಾಖಲು

ಬಂಟ್ವಾಳ: ಮಸೀದಿ ವಿಚಾರಕ್ಕೆ ಸಂಬಂಧಿಸಿದಂತೆ ಎರಡು ತಂಡಗಳ ನಡುವೆ ನಡೆದ ಗಲಾಟೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಎರಡು ಪಕ್ಷಗಳೂ ಪರಸ್ಪರ ದೂರು ನೀಡಿದ್ದು, ಕೌಂಟರ್ ಪ್ರಕರಣ ದಾಖಲಾಗಿದೆ. ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಸಜೀಪ ನಡು ಗ್ರಾಮದ ತಲೆಮೊಗರು ಮಸೀದಿ ಸಮೀಪ ಈ ಗಲಾಟೆ ನಡೆದಿದ್ದು, ಒಟ್ಟು 17 ಮಂದಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಅಂಗಡಿಯೊಂದರಲ್ಲಿ ವ್ಯಾಪಾರ ನಡೆಸುತ್ತಿದ್ದ ವೇಳೆ ದಾವೂದ್ ಅವರ ತಂಡ ಬಂದು ಹಲ್ಲೆ ನಡೆಸಿದೆ…

Read More

ಅತ್ತಾವರ ಶ್ರೀ ಅಯ್ಯಪ್ಪ ಸ್ವಾಮಿ ಕ್ಷೇತ್ರದಲ್ಲಿ ಬ್ರಹ್ಮಕಲಶೋತ್ಸವಕ್ಕೆ ಆಹ್ವಾನ ಪತ್ರಿಕೆ ಬಿಡುಗಡೆ

ಮಂಗಳೂರು: ನೂರಾರು ವರ್ಷಗಳ ಇತಿಹಾಸ ಹೊಂದಿರುವ ಅತ್ತಾವರದ ಶ್ರೀ ಅಯ್ಯಪ್ಪ ಸ್ವಾಮಿ ಕ್ಷೇತ್ರದಲ್ಲಿ ನಡೆಯಲಿರುವ ಬ್ರಹ್ಮಕಲಶಾಭಿಷೇಕ ಮಹೋತ್ಸವದ ಅಂಗವಾಗಿ ಆಹ್ವಾನ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಮಾರ್ಚ್ 22ರಂದು ದೇವಸ್ಥಾನದಲ್ಲಿ ನಡೆಯಿತು. ಮಂಗಳೂರು ದಕ್ಷಿಣ ಶಾಸಕ Vedavyas Kamath ಅವರು ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಮಾತನಾಡಿ, ದಕ್ಷಿಣ ಕನ್ನಡ ಜಿಲ್ಲೆಯ ಮೊದಲ ಅಯ್ಯಪ್ಪ ದೇವಸ್ಥಾನದ ಬ್ರಹ್ಮಕಲಶೋತ್ಸವದಲ್ಲಿ ಭಾಗವಹಿಸುವುದು ಪುಣ್ಯದ ಫಲವಾಗಿದ್ದು, ಇಂತಹ ದೇವತಾ ಕಾರ್ಯಗಳು ಊರಿನ ಉನ್ನತಿಗೆ ಕಾರಣವಾಗುತ್ತವೆ ಎಂದರು. ಬ್ರಹ್ಮಕಲಶ ನಡೆಯುವ ಊರಿಗೆ ಸಂಕಷ್ಟಗಳು ದೂರವಾಗುತ್ತವೆ ಎಂದು…

Read More

ಇಂಧನ ಕೊರತೆ ಬಗ್ಗೆ ಗೊಂದಲ ಬೇಡ: ಕೇಂದ್ರದ ಕ್ರಮಗಳಿಂದ ಸ್ಥಿತಿ ನಿಯಂತ್ರಣದಲ್ಲಿ – ಸಂಜೀವ ಮಠಂದೂರು

ಪುತ್ತೂರು: ಪ್ರಸ್ತುತ ಇರಾನ್, ಅಮೇರಿಕಾ ಹಾಗೂ ಇಸ್ರೇಲ್ ನಡುವಿನ ಉದ್ವಿಗ್ನ ಪರಿಸ್ಥಿತಿಯಿಂದ ಜಾಗತಿಕ ಮಟ್ಟದಲ್ಲಿ ಇಂಧನ, ತೈಲ ಮತ್ತು ನೈಸರ್ಗಿಕ ಅನಿಲದ ಕೊರತೆ ಉಂಟಾಗುತ್ತಿರುವ ಸಂದರ್ಭದಲ್ಲೂ, ಭಾರತದಲ್ಲಿ ಅಡುಗೆ ಅನಿಲ ಸರಬರಾಜು ಸಮರ್ಪಕವಾಗಿ ನಡೆಯುತ್ತಿದೆ ಎಂದು ಪುತ್ತೂರು ಮಾಜಿ ಶಾಸಕ ಸಂಜೀವ ಮಠಂದೂರು ತಿಳಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು, ದೇಶದ ಪ್ರಧಾನಿ Narendra Modi ಹಾಗೂ ಕೇಂದ್ರ ಇಂಧನ ಸಚಿವ Hardeep Singh Puri ಅವರ ಸೂಕ್ತ ಯೋಜನೆ ಮತ್ತು ವ್ಯವಸ್ಥಿತ ನಿರ್ವಹಣೆಯಿಂದ ದೇಶದ ಜನರಿಗೆ…

Read More

ಕಾಸರಗೋಡು ಗೋ-ಕುಟೀರ ನಿರ್ಮಾಣಕ್ಕೆ ಎರಡನೇ ಹಂತದ ಚಾಲನೆ

ಕಾಸರಗೋಡು: ಕಾಸರಗೋಡು ಕನ್ನಡ ಗ್ರಾಮದಲ್ಲಿ ನಿರ್ಮಾಣಗೊಳ್ಳುತ್ತಿರುವ ಗೋ-ಕುಟೀರದ ಕಾಮಗಾರಿ ಮತ್ತೊಂದು ಮಹತ್ವದ ಹಂತಕ್ಕೆ ಕಾಲಿಟ್ಟಿದೆ. ಕಳೆದ ನವೆಂಬರ್ 4, 2025ರಂದು ಶ್ರೀ ಎಡನೀರು ಮಠದ ಶ್ರೀ ಶ್ರೀ ಸಚ್ಚಿದಾನಂದ ಭಾರತಿ ಶ್ರೀಪಾದಂಗಳವರಿಂದ ಭೂಮಿ ಪೂಜೆ ನೆರವೇರಿಸಿ ಕಾಮಗಾರಿಗೆ ಚಾಲನೆ ನೀಡಲಾಗಿತ್ತು. ಇದರ ಮೊದಲ ಹಂತದ ಕಾಮಗಾರಿ ಈಗಾಗಲೇ ಪೂರ್ಣಗೊಂಡಿದೆ. ಇದೀಗ ಎರಡನೇ ಹಂತವಾಗಿ ಮೊದಲ ಅಂತಸ್ತಿನ ಗೋಮೇವು ಸಂಗ್ರಹಾಲಯ ಹಾಗೂ ಮೇಲ್ಛಾವಣಿ ನಿರ್ಮಾಣ ಕಾಮಗಾರಿಗೆ ಮಾರ್ಚ್ 24, 2026ರಂದು ಬೆಳಗ್ಗೆ 9.45ಕ್ಕೆ ರೋಹಿಣಿ ನಕ್ಷತ್ರದ ಶುಭ ಮುಹೂರ್ತದಲ್ಲಿ…

Read More

ಮಂಜೇಶ್ವರ ವಿಧಾನ ಸಭಾ ಚುನಾವಣೆಯಲ್ಲಿ ಎಸ್‌ಡಿಪಿಐ ? ಮತ ವಿಭಜನೆಗೆ ಕಾರಣವಾಗಲಿದೆಯೇ ಈ ನಿರ್ಧಾರ ? ಬಿಜೆಪಿಗೆ ಈ ನಿರ್ಧಾರದಿಂದ ವರವೋ ಯುಡಿಎಫ್ ಗೆ ಶಾಪವೋ ?

ಕಾಸರಗೋಡು: ರಾಜ್ಯದ ಗಡಿ ಜಿಲ್ಲೆಯ ಮಂಜೇಶ್ವರ ವಿಧಾನಸಭಾ ಕ್ಷೇತ್ರದಲ್ಲಿ ಈ ಬಾರಿ ಚುನಾವಣಾ ಕಣ ಕಾದುಕೊಂಡಿದ್ದು, ಗೆಲ್ಲುವ ಕುದುರೆ ಯಾವುದು ಎಂಬ ಕುತೂಹಲ ಹೆಚ್ಚಾಗಿದೆ. ನಾಮಪತ್ರ ಸಲ್ಲಿಕೆಯ ಕೊನೆಯ ದಿನ ಎಸ್‌ಡಿಪಿಐ ತನ್ನ ಜಿಲ್ಲಾ ಸಮಿತಿ ಸದಸ್ಯ ಅಶ್ರಫ್ ಕೆ.ಎಂ. ಅವರನ್ನು ಕಣಕ್ಕಿಳಿಸುವ ಮೂಲಕ ರಾಜಕೀಯ ಸಮೀಕರಣಗಳಲ್ಲಿ ಅಚ್ಚರಿ ಮೂಡಿಸಿದೆ. ವಿಶೇಷವೆಂದರೆ, ಯುಡಿಎಫ್ ಅಭ್ಯರ್ಥಿ ಮತ್ತು ಹಾಲಿ ಶಾಸಕ ಎ.ಕೆ.ಎಂ. ಅಶ್ರಫ್ ಅವರ ಹೆಸರಿನೊಂದಿಗೆ ಹೋಲಿಕೆಯಿರುವ ಅಭ್ಯರ್ಥಿಯನ್ನು ಕಣಕ್ಕಿಳಿಸಿರುವುದು ಮತದಾರರಲ್ಲಿ ಗೊಂದಲಕ್ಕೆ ಕಾರಣವಾಗಬಹುದು ಎಂಬ ಅಭಿಪ್ರಾಯ ವ್ಯಕ್ತವಾಗಿದೆ….

Read More

ಕನಿಲ ಶ್ರೀ ಭಗವತಿ ಕ್ಷೇತ್ರದಲ್ಲಿ ಭಕ್ತಿಭರವಸೆಯ ಹರಿಕಥಾ ಸಪ್ತಾಹ: ಸದಸ್ಯರು ಮತ್ತು ಭಕ್ತರಿಗೆ ಆಹ್ವಾನ

ಮಂಜೇಶ್ವರ: ಕನಿಲ ಶ್ರೀ ಭಗವತಿ ಕ್ಷೇತ್ರ, ಹೊಸಂಗಡಿ–ಮಂಜೇಶ್ವರ ಪ್ರದೇಶದಲ್ಲಿ ಮಾರ್ಚ್ 25ರಿಂದ 31ರವರೆಗೆ ಭಕ್ತಿಭಾವದಿಂದ ಹರಿಕಥಾ ಸಪ್ತಾಹವನ್ನು ವೈಭವದಿಂದ ಆಯೋಜಿಸಲಾಗಿದೆ. ಪ್ರತಿದಿನ ಸಂಜೆ 6.00ರಿಂದ 8.00ರವರೆಗೆ ನಡೆಯುವ ಈ ಧಾರ್ಮಿಕ ಕಾರ್ಯಕ್ರಮದಲ್ಲಿ ವಿವಿಧ ಖ್ಯಾತ ಹರಿಕಥಾ ವಿದ್ವಾಂಸರು ಭಾಗವಹಿಸಿ ಪುರಾಣ ಪ್ರಸಂಗಗಳನ್ನು ನಿರೂಪಿಸಲಿದ್ದಾರೆ. ಮಾರ್ಚ್ 25, 2026 (ಬುಧವಾರ) ರಿಂದ ಮಾರ್ಚ್ 31, 2026 (ಮಂಗಳವಾರ) ರವರೆಗೆ ವಾರಪೂರ್ತಿ ಹರಿಕಥಾ ಸಪ್ತಾಹವನ್ನು ವೈಭವದಿಂದ ಆಯೋಜಿಸಲಾಗಿದೆ. ಈ ಸಪ್ತಾಹದ ಅಂಗವಾಗಿ ಪ್ರತಿದಿನ ಸಂಜೆ 6.00 ಗಂಟೆಗೆ ಹರಿಕಥಾ ಕಾರ್ಯಕ್ರಮ…

Read More

ಮಂಜೇಶ್ವರದಲ್ಲಿ ಬಿಜೆಪಿ ಸೇರ್ಪಡೆ ಕಾರ್ಯಕ್ರಮ

ಮಂಜೇಶ್ವರ: ಯುಡಿಎಫ್ (UDF) ನೇತಾರರು ಹಾಗೂ ಮಂಜೇಶ್ವರ ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ರಾಘವ್ ಮಂಜೇಶ್ವರ ಮತ್ತು ಪೈವಳಿಕೆಯ ಅಬ್ದುಲ್ ಸಮದ್ ಅವರು ಭಾರತೀಯ ಜನತಾ ಪಕ್ಷ (ಬಿಜೆಪಿ)ಗೆ ಅಧಿಕೃತವಾಗಿ ಸೇರ್ಪಡೆಯಾದರು. ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ K. Surendran ಅವರು ಇಬ್ಬರಿಗೂ ಸದಸ್ಯತ್ವ ನೀಡಿ ಪಕ್ಷಕ್ಕೆ ಆತ್ಮೀಯವಾಗಿ ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪಕ್ಷದ ತತ್ವಗಳು ಮತ್ತು ಅಭಿವೃದ್ಧಿ ದೃಷ್ಟಿಕೋನದಿಂದ ಪ್ರೇರಿತರಾಗಿ ಹೊಸ ಮುಖಗಳು ಬಿಜೆಪಿಗೆ ಸೇರುತ್ತಿರುವುದು ಸಂತೋಷದ ವಿಚಾರ ಎಂದರು. ಕಾರ್ಯಕ್ರಮದಲ್ಲಿ ಬಿಜೆಪಿ ಮಂಡಲ…

Read More

ಅಮೇರಿಕನ್ ಸಾಮ್ರಾಜ್ಯಶಾಹಿಗಳ ಯುದ್ದಕೋರ ನೀತಿ ಖಂಡಿಸಿ ಹಾಗೂ ಶಾಂತಿಗಾಗಿ ಒತ್ತಾಯಿಸಿ ಪ್ರತಿಭಟನೆ

ಅಮೇರಿಕನ್ ಸಾಮ್ರಾಜ್ಯಶಾಹಿಗಳ ಯುದ್ದಕೋರ ನೀತಿಗಳನ್ನು ಖಂಡಿಸಿ, ಜಾಗತಿಕ ಮಟ್ಟದಲ್ಲಿ ಶಾಂತಿ ನೆಲೆಗೊಳ್ಳಬೇಕೆಂದು ಒತ್ತಾಯಿಸಿ ಇಂದು ಮಂಗಳೂರು ನಗರದ ಹೃದಯ ಭಾಗದಲ್ಲಿ CITU, DYFI, JMS,DHS,ಆದಿವಾಸಿ ಸಂಘಟನೆಗಳ ಜಂಟಿ ನೇತ್ರತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಅಮೇರಿಕನ್ ಸಾಮ್ರಾಜ್ಯಶಾಹಿಗಳ ಯುದ್ದದಾಹದ ವಿರುದ್ಧ ಆಕ್ರೋಶಭರಿತರಾಗಿ ಘೋಷಣೆಗಳನ್ನು ಕೂಗಿದ ಪ್ರತಿಭಟನಾಕಾರರು ಜಗತ್ತಿನೆಲ್ಲೆಡೆ ಶಾಂತಿ ನೆಲೆಗೊಳ್ಳಬೇಕೆಂದು ಆಗ್ರಹಿಸಿದರು. ಪ್ರತಿಭಟನೆಯನ್ನು ಉದ್ಘಾಟಿಸಿ ಮಾತನಾಡಿದ CITU ದ.ಕ.ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ರವರು, ಅಮೇರಿಕನ್ ಸಾಮ್ರಾಜ್ಯಶಾಹಿ ಇಡೀ ಜಗತ್ತನ್ನು ತನ್ನ‌ ನಿಯಂತ್ರಣದಲ್ಲಿಡಲು ಹರಸಾಹಸ ಪಡುತ್ತಿದೆ.ಜಗತ್ತಿನ 80…

Read More

ಕಾಸರಗೋಡಿನಲ್ಲಿ ಎನ್‌ಡಿಎ ಅಭ್ಯರ್ಥಿ ಅಶ್ವಿನಿ ಎಂ.ಎಲ್. ಭರ್ಜರಿ ರೋಡ್ ಶೋ, ನಾಮಪತ್ರ ಸಲ್ಲಿಕೆ

ಕಾಸರಗೋಡು: ಸಪ್ತ ಭಾಷಾ ಸಂಗಮ ಭೂಮಿ ಕಾಸರಗೋಡು ವಿಧಾನಸಭಾ ಕ್ಷೇತ್ರದಲ್ಲಿ ಎನ್‌ಡಿಎ ಅಭ್ಯರ್ಥಿ ಅಶ್ವಿನಿ ಎಂ.ಎಲ್. ಭರ್ಜರಿ ರೋಡ್ ಶೋ ನಡೆಸಿ ಇಂದು ನಾಮಪತ್ರ ಸಲ್ಲಿಸಿದರು. ಕರಂದಕ್ಕಾಡು ಮೈದಾನದಿಂದ ಆರಂಭವಾದ ರೋಡ್ ಶೋ ಭಾರೀ ಜನಸಾಗರದ ಮಧ್ಯೆ ಸಾಗಿದ್ದು, ಸಾರ್ವಜನಿಕ ಮೆರವಣಿಗೆ ಮೂಲಕ ಕಾರ್ಯಕರ್ತರಲ್ಲಿ ಉತ್ಸಾಹ ಮೂಡಿಸಿತು. ಮೆರವಣಿಗೆಯಲ್ಲಿ ಪಕ್ಷದ ಧ್ವಜಗಳು, ಘೋಷಣೆಗಳು ಮತ್ತು ಭರ್ಜರಿ ಸ್ವಾಗತದ ನಡುವೆ ಅಭ್ಯರ್ಥಿ ಅಶ್ವಿನಿ ಎಂ.ಎಲ್. ಗಮನಸೆಳೆದರು . ನಾಮಪತ್ರ ಸಲ್ಲಿಕೆಗೂ ಮುನ್ನ ಅವರು ಎಡನೀರು ಮಠಕ್ಕೆ ಭೇಟಿ ನೀಡಿ…

Read More
error: Content is protected !!