ಕೆಲಸಕ್ಕೆ ಸೇರುವ ಮುನ್ನವೇ ಯುವಕನ ಜೀವ ಬಲಿ: ಹಿಟ್ ಆ್ಯಂಡ್ ರನ್ಗೆ ಬಲಿಯಾದ ಅಭಿಜಿತ್
ಬಂಟ್ವಾಳ,ಉದ್ಯೋಗ ಸಿಕ್ಕ ಸಂತೋಷದಲ್ಲಿದ್ದ ಯುವಕನೊಬ್ಬ ಕೆಲಸಕ್ಕೆ ಸೇರುವ ಮುನ್ನವೇ ಅಪರಿಚಿತ ವಾಹನದ ಡಿಕ್ಕಿಗೆ ಬಲಿಯಾದ ಹೃದಯವಿದ್ರಾವಕ ಘಟನೆ ಫರಂಗಿಪೇಟೆ ಸಮೀಪದ ಕಡೆಗೋಳಿಯಲ್ಲಿ ಇಂದು ಮುಂಜಾನೆ ನಡೆದಿದೆ. ಬಜಪೆ ಕೈಕಂಬ ನಿವಾಸಿ ಅಭಿಜಿತ್ (28) ಮೃತ ಯುವಕ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಸಹಸವಾರ ಸಂದೀಪ್ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಾಹಿತಿಯ ಪ್ರಕಾರ, ಅಭಿಜಿತ್ ಅವರು ತಮ್ಮ ಸ್ನೇಹಿತ ಸಂದೀಪ್ ಅವರನ್ನು ಬಂಟ್ವಾಳದ ಅಮ್ಟಾಡಿಯ ಮನೆಗೆ ಬೈಕ್ನಲ್ಲಿ ಬಿಟ್ಟು ಬರಲು ತೆರಳಿದ್ದರು. ಮುಂಜಾನೆ ಸುಮಾರು 3 ಗಂಟೆ…