ಇಂಟಕ್ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆಯಾಗಿ ಖ್ಯಾತ ನ್ಯಾಯವಾದಿ ಕರೀಷ್ಮಾ ಎಸ್. ಆಯ್ಕೆ!

ಮಂಗಳೂರು: ಇಂಟಕ್ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆಯಾಗಿ ಖ್ಯಾತ ನ್ಯಾಯವಾದಿ ಕರೀಷ್ಮಾ ಎಸ್. ಅವರು ಆಯ್ಕೆಯಾಗಿದ್ದಾರೆ.ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾ‌ರ್, ಕಾನೂನು ಮತ್ತು ಮಾಹಿತಿ ಹಕ್ಕುಗಳ ವಿಭಾಗದ ಉಪಾಧ್ಯಕ್ಷರಾದ ಡಾ| ಎಜೆ ಅಕ್ರಂ ಪಾಶಾ ಹಾಗೂ ಇಂಡಿಯನ್ ನ್ಯಾಶನಲ್ ಟ್ರೇಡ್ ಯೂನಿಯನ್ ಕಾಂಗ್ರೆಸ್ ಅಧ್ಯಕ್ಷ ಟಿ.ವೈ ಕುಮಾರ್ ಅವರಆದೇಶದ ಮೇರೆಗೆ ಈ ಆಯ್ಕೆ ನಡೆದಿದ್ದು ಇಂಡಿಯನ್ ನ್ಯಾಷನಲ್ ಟ್ರೇಡ್ ಯೂನಿಯನ್ (ಐ.ಎನ್.ಟಿ.ಯು.ಸಿ) ಕಾಂಗ್ರೆಸ್ ವಿಭಾಗದ ಮಂಗಳೂರು ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆಯನ್ನಾಗಿ ಕರಿಷ್ಮಾ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ…

Read More

ಕಾಲುವೆಯಲ್ಲಿ ನೀರಿನ ಹರಿವಿಗೆ ಸಿಲುಕಿ ಆರನೇ ತರಗತಿ ವಿದ್ಯಾರ್ಥಿಯ ದಾರುಣ ಅಂತ್ಯ

ಕಾಸರಗೋಡು : ಚೆರ್ಕಳ ಪಾಡಿಯಲ್ಲಿ ಆರನೇ ತರಗತಿ ವಿದ್ಯಾರ್ಥಿಯೊಬ್ಬ ನೀರಿನ ಹರಿವಿಗೆ ಸಿಲುಕಿ ದಾರುಣವಾಗಿ ಸಾವನ್ನಪ್ಪಿದ್ದಾನೆ.ಮುಟ್ಟತ್ತೋಡಿ ಗ್ರಾಮದ ಕಲ್ಲಕಟ್ಟ ಬೆಳ್ಳೂರಡ್ಕ ನಿವಾಸಿ ಹಸೈನಾರ್ ಎಂಬವರ ಪುತ್ರ ಮಿತ್ಲಾಜ್ (11) ಸಾವನ್ನಪ್ಪಿದ ದುರ್ದೈವಿ.ಈತ ಆಲಂಪಾಡಿ ಶಾಲೆಯ 6 ನೇ ತರಗತಿ ವಿದ್ಯಾರ್ಥಿ.ಶನಿವಾರ ಸಂಜೆ ಶಾಲೆಯ ಸಹಪಾಠಿಗಳೊಂದಿಗೆ ಕಾಲುವೆಯಲ್ಲಿ ಸ್ನಾನಕ್ಕೆ ಹೋಗಿರುವುದಾಗಿ ಪ್ರಾಥಮಿಕ ಮಾಹಿತಿ. ಈ ಸಂದರ್ಭ ನೀರಿನ ಹರಿವಿಗೆ ಸಿಲುಕಿ ಈ ದುರ್ಘಟನೆ ಸಂಭವಿಸಿದೆ.ವಿದ್ಯಾನಗರ ಪೊಲೀಸರು ಹಾಗೂ ಅಗ್ನಿಶಾಮಕ ದಳ ನಡೆಸಿದ ಕಾರ್ಯಾಚರಣೆಯಲ್ಲಿ ಬಾಲಕನ ಶವ ಶರೀರವನ್ನು ಪತ್ತೆ…

Read More

ಯೂಟ್ಯೂಬರ್ ಸಮೀರ್ ಎಂ.ಡಿ ದಾಖಲೆಗಳ ಸಮೇತ ಪೊಲೀಸರ ಮುಂದೆ ಹಾಜರು.

ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಯೂಟ್ಯೂಬರ್ ಎಂ.ಡಿ ಸಮೀರ್ ಹಲವು ದಾಖಲೆಗಳ ಸಮೇತ ಪೊಲೀಸ್ ವಿಚಾರಣೆಗೆ ಹಾಜರಾಗಿದ್ದಾರೆ. ಬೆಳ್ತಂಗಡಿ ಪೊಲೀಸ್ ಠಾಣೆಗೆ ಬ್ಯಾಗ್ ಹಿಡಿದುಕೊಂಡು ವಕೀಲರ ಜೊತೆ ಸಮೀರ್ ಹಾಜರಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಇಂದು ಸಮೀರ್ ವಿಚಾರಣೆ ಎದುರಿಸಲಿದ್ದು, ಹಲವು ದಾಖಲೆಗಳನ್ನು ನೀಡಲಿದ್ದಾರೆ. ಎಐ ವಿಡಿಯೋ ಮೂಲಕ ಗಲಭೆಗೆ ಪ್ರಚೋದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ವಿಚಾರಣೆಗೆ ಹಾಜರಾಗುವಂತೆ ಯೂಟ್ಯೂಬರ್ ಸಮೀರ್ ಗೆ ಬೆಳ್ತಂಗಡಿ ಪೊಲೀಸರು ಸೂಚನೆ ನೀಡಿದ್ದರು. ಅಲ್ಲದೇ ಪ್ರಕರಣಕ್ಕೆ…

Read More

ಧರ್ಮಸ್ಥಳ ಪ್ರಕರಣದಲ್ಲಿ : ‘ಎಸ್‌ಐಟಿ ತನಿಖೆ ನಡೆಸುವಾಗಲೇ ಎನ್‌ಐಎ ತನಿಖೆ ಅಸಾಧ್ಯ ‘- ಗೃಹ ಸಚಿವ ಪರಮೇಶ್ವರ್

ಬೆಂಗಳೂರು: ಧರ್ಮಸ್ಥಳ ಪ್ರಕರಣದಲ್ಲಿ ಎಸ್‌ಐಟಿ ತನಿಖೆ ಪೂರ್ಣ ಮಾಡಲು ಸಮಯ ನಿಗದಿ ಆಗಿಲ್ಲ . ಎಸ್‌ಐಟಿ ತನಿಖೆ ಪ್ರಕ್ರಿಯೆ ನಡೆಯುವಾಗಲೇ ಎನ್‌ಐಎ ತನಿಖೆ ಅಸಾಧ್ಯ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, “ತನಿಖೆ ತ್ವರಿತವಾಗಿ ಆಗಬೇಕು ಎಂದು ಹೇಳಿದ್ರೆ ಎಸ್‌ಐಟಿ ಅವರಿಗೆ ಅವರದ್ದೇ ಆದ ತೀರ್ಮಾನ ಇರುತ್ತದೆ. ಎಸ್‌ಐಟಿ ಅವರು ತನಿಖೆ ಮಾಡುತ್ತಿದ್ದಾರೆ. ತನಿಖೆ ಮುಗಿಯೋವರೆಗೂ ಅವರು ಯಾವ ವಿಚಾರಗಳನ್ನು ಹೇಳುವ ಹಾಗೇ ಇಲ್ಲ. ತನಿಖೆ ತ್ವರಿತವಾಗಿ ಆಗಲಿ ಅಂತ ಹೇಳಬಹುದು….

Read More

ದಸರಾ ಹಬ್ಬದ ಪ್ರಯುಕ್ತ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು -ಶಾಸಕ ವೇದವ್ಯಾಸ ಕಾಮತ್

ಮುಂಬರುವ ಪ್ರಸಿದ್ದ ಮಂಗಳೂರು ದಸರಾ ಹಬ್ಬವು ಸುವ್ಯವಸ್ಥಿತವಾಗಿ ನಡೆಯುವಂತಾಗಲು ಸಕಲ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಮಹಾನಗರ ಪಾಲಿಕೆ ಆಯುಕ್ತರಿಗೆ ಶಾಸಕ ವೇದವ್ಯಾಸ ಕಾಮತ್ ರವರು ಸೂಚನೆ ನೀಡಿದರು. ದಸರ ಮೆರವಣಿಗೆ ಸಾಗುವ ರಸ್ತೆಗಳ ಕಾಮಗಾರಿಗಳನ್ನು ವಿಶೇಷ ಆದ್ಯತೆ ಮೇರೆಗೆ ಪೂರ್ಣಗೊಳಿಸಬೇಕು. ಕುದ್ರೋಳಿ ದೇವಸ್ಥಾನದಿಂದ ಲೇಡಿಹಿಲ್, ಲಾಲ್‌ ಭಾಗ್, ಪಿ.ವಿ.ಎಸ್ ಸರ್ಕಲ್, ವೆನ್‌ಲಾಕ್ ಆಸ್ಪತ್ರೆ, ಮೋಹಿನಿ ವಿಲಾಸ್, ನ್ಯೂಚಿತ್ರ ಟಾಕೀಸ್, ಅಳಕೆ, ಮೊದಲಾದ ರಸ್ತೆಗಳ ದಾರಿ ದೀಪ ಸರಿಪಡಿಸುವುದು, ರಸ್ತೆ ವಿಭಜಕಗಳನ್ನು ಶುಚಿಗೊಳಿಸುವುದು, ರಸ್ತೆಗಳ ಹೊಂಡ ಮುಚ್ಚುವುದು, ಕಸ,…

Read More

ಜನಪ್ರಿಯ ಕಂಪನಿಯೊಂದರ ಹೆಸರಿನಲ್ಲಿ ನಕಲಿ ಮಾಲುಗಳನ್ನು ಖರೀದಿ-ಪಂಚಾಯತು ಹಾಗೂ ಐಸಿಡಿಎಸ್ ಅಧಿಕಾರಸ್ಥರ ವಿರುದ್ಧ ವ್ಯಾಪಕ ಆಕ್ರೋಶ.

ಮಂಜೇಶ್ವರ : 2020 – 21 ರ ಆರ್ಥಿಕ ವರ್ಷದಲ್ಲಿ ಮಂಜೇಶ್ವರ ಗ್ರಾಮ ಪಂಚಾಯತು ಮೀಸಲಿಟ್ಟ 4 ಲಕ್ಷ ರೂಪಾಯಿ ಹಾಗೂ ಐಸಿಡಿಎಸ್ ವತಿಯಿಂದ ಮಂಜೂರಾದ 1 ಲಕ್ಷ ರೂಪಾಯಿಯೊಂದಿಗೆ ಮಹಿಳಾ ಮೀಸಲಾತಿ ನಿಧಿಯಿಂದ ಸ್ಟ ಉದ್ಯೋಗ ಹೊಲಿಗೆ ಘಟಕ ಸ್ಥಾಪಣೆಗೆ ಜನಪ್ರಿಯ ಕಂಪನಿಯೊಂದರ ಹೆಸರಲ್ಲಿ ಕಳಪೆ ಗುಣಮಟ್ಟದ ಹೊಲಿಗೆ ಯಂತ್ರಗಳನ್ನು ಖರೀದಿಸಿ ಅವುಗಳು ಉಪಯೋಗಕ್ಕೆ ಬಾರದೆ ಐಸಿಡಿಎಸ್ ಕಚೇರಿಯ ಕೊಠಡಿಯೊಳಗೆ ಮೂಲೆ ಪಾಲಾಗಿರುವುದು ತಡವಾಗಿ ಬೆಳಕಿಗೆ ಬಂದಿದೆ.ಜನಪ್ರಿಯ ಕಂಪನಿಯೊಂದರ ಹೆಸರಿನಲ್ಲಿ ನಕಲಿ ಮಾಲುಗಳನ್ನು ಖರೀದಿಸಿರುವ ಬಗ್ಗೆ…

Read More

ಪಾಂಗೋಡು ನವರಾತ್ರಿ ಆಮಂತ್ರಣ ಪತ್ರಿಕೆ ಬಿಡುಗಡೆ.

ಕಾಸರಗೋಡು : ಪಾಂಗೋಡು ಶ್ರೀ ದುರ್ಗಾಪರಮೇಶ್ವರಿ ಶ್ರೀ ಸುಬ್ರಮಣ್ಯ ದೇವಸ್ಥಾನದಲ್ಲಿ ವರ್ಷಮ್ಪ್ರತಿ ನಡೆಯುವ ನವರಾತ್ರಿ ಮಹೋತ್ಸವದ ಆಮಂತ್ರಣ ಪತ್ರಿಕೆ ಶ್ರೀ ಕ್ಷೇತ್ರ ಪಾತ್ರಿಗಳಾದ ಪಾಂಗೋಡು ಪ್ರವೀಣ್ ನಾಯಕ್ ಬಿಡುಗಡೆ ಗೊಳಿಸಿದರು. ಕ್ಷೇತ್ರ ಕುಟುಂಬಸ್ಥರು ಹಾಗೂ ಭಕ್ತ ಭಾಂದವರು ಅಪಾರ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

Read More

ಕೇಂದ್ರ ಹಾಗೂ ಕೇರಳ ಸರಕಾರಗಳ ದುರಾಡಳಿತಗಳಿಂದ ಜನಸಾಮಾನ್ಯರು ತೊಂದರೆಯಲ್ಲಿ -ಮುಂದಿನ ಚುನಾವಣೆಯಲ್ಲಿ ಎರಡೂ ಪಕ್ಷಗಳು ನೆಲ ಕಚ್ಚಲಿವೆ- ಶ್ರೀ ಸುಂದರ ಆರಿಕ್ಕಾಡಿ

ಕೇಂದ್ರ ಹಾಗೂ ಕೇರಳ ಸರಕಾರಗಳ ದುರಾಡಳಿತಗಳಿಂದ ಜನಸಾಮಾನ್ಯರು ರೋಸಿ ಹೋಗಿದ್ದು, ಮುಂದಿನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಈ ಎರಡೂ ಪಕ್ಷಗಳು ನೆಲ ಕಚ್ಚಲಿವೆ ಎಂದು ಕಾಸರಗೋಡು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶ್ರೀ ಸುಂದರ ಆರಿಕ್ಕಾಡಿ ಹೇಳಿದ್ದಾರೆ.ವರ್ಕಾಡಿ ಮಂಡಲ ಕಾಂಗ್ರೆಸ್ ವತಿಯಿಂದ ಶ್ರೀ ಉಮ್ಮರ್ ಬೋರ್ಕಳರ ನಿವಾಸದಲ್ಲಿ ನಡೆದ ಮಂಡಲ ಮಟ್ಟದ ಕಾಂಗ್ರೆಸ್ ಗೃಹಸಂದರ್ಶನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಮಂಜೇಶ್ವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಮುಹಮ್ಮದ್ ಡಿಎಂಕೆ ಗೃಹಸಂದರ್ಶನ ಕಾರ್ಯಕ್ರಮದ ಉದ್ದೇಶಗಳ ಕುರಿತು ವಿವರಣೆ…

Read More

ಸುಜಾತಾ ಭಟ್‌ಗೆ ಬಿಗ್ ರಿಲೀಫ್ ….. !?

ಮಂಗಳೂರು: ಪ್ರಸ್ತುತ ವಿವಾದದ ಸುಳಿಯಲ್ಲಿ ಸಿಲುಕಿದ್ದ ಸಾಮಾಜಿಕ ಕಾರ್ಯಕರ್ತೆ ಸುಜಾತಾ ಭಟ್ ಗೆ ತಾತ್ಕಾಲಿಕವಾಗಿ ಕಾನೂನು ಕ್ರಮದಿಂದ ಬಿಗ್ ರಿಲೀಫ್ ಸಿಕ್ಕಿದೆ . ಅವರ ವಿರುದ್ಧದ ಕಠಿಣ ಕ್ರಮಗಳನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಆದರೆ, ವಿಚಾರಣೆಗೆ ಹಾಜರಾಗುವುದು ಅನಿವಾರ್ಯ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಾಹಿತಿಯ ಪ್ರಕಾರ, ಸುಜಾತಾ ಭಟ್ ವಿರುದ್ಧ ದಾಖಲಾಗಿದ್ದ ಕೆಲವೊಂದು ದೂರಿನ ಪರಿಶೀಲನೆ ನಡೆದಿದೆ. ಪ್ರಥಮ ದೃಷ್ಟಿಯಿಂದ ಗಂಭೀರ ಕಾನೂನು ಉಲ್ಲಂಘನೆಯ ಲಕ್ಷಣಗಳು ಪತ್ತೆಯಾಗದ ಹಿನ್ನೆಲೆಯಲ್ಲಿ, ತಕ್ಷಣದ ಬಂಧನ ಅಥವಾ ಬಂಧನಾತ್ಮಕ ಕ್ರಮ ಕೈಗೊಳ್ಳುವುದನ್ನು ತಪ್ಪಿಸಲಾಗಿದೆ….

Read More

ತಲಪಾಡಿ ಅಪಘಾತಕ್ಕೆ ಬ್ರೇಕ್ ವೈಫಲ್ಯ ಕಾರಣವಲ್ಲ, ಚಾಲಕನ ಅತೀಯಾದ ವೇಗವೇ ಕಾರಣ ; ಕರ್ನಾಟಕ ಸಾರಿಗೆ ಸ್ಪಷಣೆ

ತಲಪಾಡಿ ಟೋಲ್‌ಗೇಟ್ ಸಮೀಪ ಸಂಭವಿಸಿದ ಬಸ್ ಅಪಘಾತಕ್ಕೆ ಸಂಬಂಧಿಸಿದಂತೆ ಕೆಲವೊಂದು ಸಾಮಾಜಿಕ ಜಾಲತಾಣಗಳು ಹಾಗೂ ಮಾಧ್ಯಮಗಳಲ್ಲಿ ‘ಬ್ರೇಕ್ ವೈಫಲ್ಯ’ ಎಂಬ ವದಂತಿಗಳು ಹರಡುತ್ತಿದ್ದರೂ, ಕೆಎಸ್‌ಆರ್‌ಟಿಸಿ ಈ ಅಪಘಾತಕ್ಕೆ ಬಸ್‌ನ ತಾಂತ್ರಿಕ ದೋಷ ಅಥವಾ ಬ್ರೇಕ್ ವೈಫಲ್ಯ ಕಾರಣವಲ್ಲ ಎಂದು ಸ್ಪಷ್ಟಪಡಿಸಿದೆ. ಇಲಾಖೆಯ ತಾಂತ್ರಿಕ ತಂಡ ಸ್ಥಳ ಪರಿಶೀಲನೆ ನಡೆಸಿದ್ದು, ಬಸ್ ಸಂಪೂರ್ಣವಾಗಿ ಫಿಟ್ ಆಗಿತ್ತು ಹಾಗೂ ಇತ್ತೀಚೆಗೆ ಎಫ್‌ಸಿ ನವೀಕರಣವೂ ಮಾಡಿಕೊಂಡಿತ್ತು ಎಂಬುದು ದೃಢವಾಗಿದೆ. ಬಸ್ ಚಾಲಕನ ಅಜಾಗರೂಕ, ನಿರ್ಲಕ್ಷ್ಯಪೂರ್ಣ ಹಾಗೂ ಅತಿವೇಗದ ಚಾಲನೆಯೇ ಈ ದುರ್ಘಟನೆಗೆ…

Read More
error: Content is protected !!