ಬೆಳ್ತಂಗಡಿ ತಾಲ್ಲೂಕಿನಾದ್ಯಂತ ಚಾರಣ ತಾಣಗಳು ಮತ್ತು ಪ್ರಮುಖ ಜಲಪಾತಗಳು ಜೂನ್ 1 ರಿಂದ ಪ್ರವಾಸಿಗರಿಗೆ ಮತ್ತೆ ವೀಕ್ಷಣೆಗೆ ತೆರೆದುಕೊಳ್ಳಲಿವೆ.

ಅರಣ್ಯ ಇಲಾಖೆಯ ವನ್ಯಜೀವಿ ವಿಭಾಗವು ಈ ಹಿಂದೆ ಜನವರಿಯಲ್ಲಿ ನೇತ್ರಾವತಿ ಶಿಖರ, ಬಂಡಾಜೆ ಜಲಪಾತ ಮತ್ತು ಗಡಾಯಿಕಲ್ಲು ಮುಂತಾದ ಜನಪ್ರಿಯ ತಾಣಗಳಿಗೆ ಭೇಟಿ ನೀಡುವುದನ್ನು ನಿಷೇಧಿಸಿತ್ತು. ಬೇಸಿಗೆಯ ತಿಂಗಳುಗಳಲ್ಲಿ ಕಾಡ್ಗಿಚ್ಚು ತಡೆಗಟ್ಟಲು ಮತ್ತು ಹುಲಿ ಗಣತಿಗೆ ಅನುಕೂಲವಾಗುವಂತೆ ಈ ನಿರ್ಬಂಧವನ್ನು ಜಾರಿಗೆ ತರಲಾಗಿತ್ತು. ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಗೆ ಬರುವ ತಾಲ್ಲೂಕಿನ ಮಲವಂತಿಗೆ ಗ್ರಾಮವು ಹಲವಾರು ಪ್ರವಾಸಿ ಆಕರ್ಷಣೆಗಳಿಗೆ ನೆಲೆಯಾಗಿದೆ. ಇದು ಚಾರಣಿಗರು ಮತ್ತು ಪ್ರಕೃತಿ ಪ್ರಿಯರನ್ನು ಹೆಚ್ಚಿನ ಸಂಖ್ಯೆಯಲ್ಲಿ ಆಕರ್ಷಿಸುತ್ತಿದ್ದರೂ, ಬೇಸಿಗೆಯಲ್ಲಿ ಈ ದಟ್ಟ ಅರಣ್ಯ…

Read More

ಕದ್ರಿ ಪಾರ್ಕ್‌ನಲ್ಲಿ ಮೇ 28ರಿಂದ ಮಾವು ಮೇಳ: “ರೈತರಿಂದ ಗ್ರಾಹಕರಿಗೆ ನೇರ ಮಾರಾಟ”ಕ್ಕೆ ವೇದಿಕೆ

ಮಂಗಳೂರು: ರಾಮನಗರ ಜಿಲ್ಲಾ ಮಾವು ತೋಟದ ಬೆಳೆಗಾರರ ಮಾರಾಟ ಸಂಘ (ರಿ) ವತಿಯಿಂದ “ರೈತರಿಂದ ಗ್ರಾಹಕರಿಗೆ ನೇರ ಮಾರಾಟ” ಶೀರ್ಷಿಕೆಯಡಿ ಮಾವು ಮೇಳವು ಮೇ 28ರಿಂದ 31ರವರೆಗೆ ನಗರದ ಕದ್ರಿ ಪಾರ್ಕ್ನಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ರಮೇಶ್ ತಿಳಿಸಿದರು. ನಗರದ ಪತ್ರಿಕಾಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೇಳದಲ್ಲಿ 25ಕ್ಕೂ ಅಧಿಕ ಬೆಳೆಗಾರರಿಗೆ ತಮ್ಮ ಮಾವು ಹಾಗೂ ಮಾವಿನ ಉತ್ಪನ್ನಗಳನ್ನು ಗ್ರಾಹಕರಿಗೆ ನೇರವಾಗಿ ಮಾರಾಟ ಮಾಡಲು ಅವಕಾಶ ಕಲ್ಪಿಸಲಾಗುತ್ತಿದೆ ಎಂದರು. ಮೇ 28ರಂದು ಪೂರ್ವಾಹ್ನ 11…

Read More

“Birds on Canvas” ಮೂಲಕ ಮೆಚ್ಚುಗೆ ಗಳಿಸಿದ ಪುಟಾಣಿ ಕಲಾವಿದೆ ಫಾತಿಮಾ ಝೋಯಾ

ಗೇರು ಮೇಳದಲ್ಲಿ ಕಲಾಕೃತಿಗಳ ಪ್ರದರ್ಶನಕ್ಕೆ ಗಣ್ಯರಿಂದ ಸನ್ಮಾನ ಮಂಗಳೂರು: ಬೊಂದೆಲ್‌ನ ಸೈಂಟ್ ಲಾರೆನ್ಸ್ ಶಾಲೆ ಯ 3ನೇ ತರಗತಿ ವಿದ್ಯಾರ್ಥಿನಿ ಫಾತಿಮಾ ಝೋಯಾ ಇತ್ತೀಚೆಗೆ ಮಂಗಳೂರಿನ Kadri Park ನಲ್ಲಿ ನಡೆದ ಗೇರು ಮೇಳದಲ್ಲಿ ತನ್ನ “Birds on Canvas” ಕಲಾಕೃತಿಗಳನ್ನು ಪ್ರದರ್ಶಿಸಿ ಎಲ್ಲರ ಮೆಚ್ಚುಗೆಗೆ ಪಾತ್ರಳಾಗಿದ್ದಾಳೆ. ಅವಳ ಸೃಜನಶೀಲತೆ ಮತ್ತು ಪರಿಶ್ರಮವನ್ನು ಗುರುತಿಸಿ ಪದ್ಮರಾಜ ಅರ್, ತಾರಾನಾಥ ಗಟ್ಟಿ, ಮಮತ ಎಸ್ ಗಟ್ಟಿ ಹಾಗೂ ಪುಷ್ಪರಾಜ್ ಸೇರಿದಂತೆ ಹಲವು ಗಣ್ಯರು ಅಭಿನಂದಿಸಿ ಸನ್ಮಾನಿಸಿದರು. ಬಾಲ್ಯದಿಂದಲೇ ಪ್ರಕೃತಿ…

Read More

ಜಾಗತಿಕ ಆರ್ಥಿಕ ಸಂಕಷ್ಟ ಎದುರಿಸಲು ಕೇಂದ್ರದ “ತುರ್ತು ದ್ರವ್ಯತೆ ಯೋಜನೆ” ಘೋಷಣೆ

MSME ಹಾಗೂ ವಿಮಾನಯಾನ ವಲಯಕ್ಕೆ ₹2.55 ಲಕ್ಷ ಕೋಟಿ ಹೆಚ್ಚುವರಿ ಸಾಲ ಹರಿವು ಗುರಿ ಮಂಗಳೂರು: ಪಶ್ಚಿಮ ಏಷ್ಯಾದ ಸಂಘರ್ಷದಿಂದ ಉಂಟಾಗಿರುವ ಜಾಗತಿಕ ಆರ್ಥಿಕ ಸಂಕಷ್ಟದ ಪರಿಣಾಮವನ್ನು ತಗ್ಗಿಸಲು ಹಾಗೂ ಅಲ್ಪಾವಧಿಯ ದ್ರವ್ಯತೆ ಅಸಮತೋಲನವನ್ನು ಎದುರಿಸಲು ಕೇಂದ್ರ ಸರ್ಕಾರ “ತುರ್ತು ದ್ರವ್ಯತೆ ಯೋಜನೆ” (Emergency Credit) ಘೋಷಿಸಿದೆ ಎಂದು ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾ ಆರ್ಥಿಕ ಪ್ರಕೋಷ್ಠದ ಸಂಚಾಲಕ ಸಿಎ ಎಸ್‌.ಎಸ್‌. ನಾಯಕ್ ತಿಳಿಸಿದ್ದಾರೆ. ನಗರದ ಪತ್ರಿಕಾಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, MSME ಹಾಗೂ MSME…

Read More

ಮಂಗಲ್ಪಾಡಿ ಕುಲಾಲ ಸಂಘದ ವಾರ್ಷಿಕೋತ್ಸವ ಸಂಭ್ರಮ: ಕೃಷಿರತ್ನ ಬಿರುದು ಪ್ರದಾನ, ಪ್ರತಿಭಾವಂತರಿಗೆ ಸನ್ಮಾನ

ಮಂಗಲ್ಪಾಡಿ : ಕಾಸರಗೋಡು ಜಿಲ್ಲಾ ಕುಲಾಲ ಸಂಘ (ರಿ.) ಮಂಗಲ್ಪಾಡಿ ಶಾಖೆಯ ಪ್ರಥಮ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮವು ದಿನಾಂಕ 24/05/2026ನೇ ರವಿವಾರ ಬೆಳಿಗ್ಗೆ 10ಗಂಟೆಗೆ ಕುಬಣೂರು ಶ್ರೀ ರಾಮ ಎ.ಯು.ಪಿ.ಶಾಲಾ ಸಭಾಂಗಣದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಬಹು ವಿಜ್ರಂಭಣೆಯಿಂದ ಜರುಗಿತು.ಮೊದಲಿಗೆ ಸಭಾ ಕಾರ್ಯಕ್ರಮವನ್ನು ಪ್ರೇಮಲತಾ ಬೊಳ್ಳಾರು ಮತ್ತು ಬಳಗದವರ ಪ್ರಾರ್ಥನೆಯೊಂದಿಗೆ ಆರಂಭವಾಯಿತು.ಶ್ರೀ ಬಾಲಕೃಷ್ಣ ಪಯ್ಯಾರ್ ಅತಿಥಿಯವರನ್ನು ಸ್ವಾಗತಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದರು.ಈ ಸಭಾ ಕಾರ್ಯಕ್ರಮದ ಅಧ್ಯಕ್ಷ ತೆಯನ್ನು ಮಂಗಲ್ಪಾಡಿ ಶಾಖೆಯ ಅಧ್ಯಕ್ಷರಾದ ಶ್ರೀ ಸತೀಶ್ ಎಂ.ಹೇರೂರು ವಹಿಸಿದರು.ಶ್ರೀ ಶಂಕರ…

Read More

ವಾರಂಟ್ ಆರೋಪಿ ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆ:ಪರಾರಿಯಾಗಿದ್ದ ಸುಹೈಲ್‌ನನ್ನು ಹರಸಾಹಸಪಟ್ಟು ಬಂಧಿಸಿದ ಪೊಲೀಸ್

​ಮಂಜೇಶ್ವರ: ಹೊಸದುರ್ಗ ಪೊಲೀಸ್ ಠಾಣೆಯ ವಾರಂಟ್ ಆರೋಪಿಯನ್ನು ಬಂಧಿಸಲು ಉಪ್ಪಳ ಮಣಿಮಂಡಕ್ಕೆ ತೆರಳಿದ್ದ ಪೊಲೀಸ್ ತಂಡದ ಮೇಲೆ ಹಲ್ಲೆ ನಡೆಸಿ, ಆರೋಪಿಯನ್ನು ಬಿಡಿಸಿಕೊಂಡು ಹೋದ ಆರೋಪಿಯನ್ನು ಹರಸಾಹಸ ಪಟ್ಟು ಪೋಲೀಸರು ಬಂಧಿಸಿದ್ದಾರೆ. ​ಹೊಸದುರ್ಗ ಪೊಲೀಸ್ ಠಾಣೆಯ ಕೇಸೊಂದಕ್ಕೆ ಸಂಬಂಧಿಸಿದಂತೆ ಸುಹೈಲ್ ಎಂಬಾತನನ್ನು ಬಂಧಿಸಲು ಕಾಸರಗೋಡಿನಿಂದ ಪೊಲೀಸ್ ತಂಡ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯ ವಿಶೇಷ ದಳ ತೆರಳಿತ್ತು. ಈತ ಮಂಗಳೂರಿನ ಕೆ.ಸಿ. ರೋಡ್‌ನಲ್ಲಿ ನಡೆದ ಗ್ಯಾಂಗ್ ವಾರ್‌ನಲ್ಲಿ ಹತ್ಯೆಯಾದ ಕುಖ್ಯಾತ ರೌಡಿ ಕಾಲಿಯ ರಫೀಕ್‌ನ ಪುತ್ರನಾಗಿದ್ದು, ಹಲವು…

Read More

ಸಂತ ಫಿಲೋಮಿನಾ ಪಿಯು ಕಾಲೇಜಿನಲ್ಲಿ ‘ಫಿಲೋ ಆರಂಭ’ ಕಾರ್ಯಕ್ರಮ

2026-27ನೇ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವಕ್ಕೆ ಚಾಲನೆ ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ನಲ್ಲಿ 2026-27ನೇ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ ‘ಫಿಲೋ ಆರಂಭ’ ಕಾರ್ಯಕ್ರಮ ಮೇ 25ರಂದು ಕಾಲೇಜು ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಮಾಯಿದೆ ದೇವುಸ್ ಶಿಕ್ಷಣ ಸಂಸ್ಥೆಯ ಸಂಚಾಲಕರಾದ ರೆ. ಫಾ. ಡಾ. ಜೋನ್ ಬ್ಯಾಪ್ಟಿಸ್ಟ್ ಸಲ್ದಾನ್ಹಾ ಅವರು ಪ್ರಥಮ ಪಿಯುಸಿ ತರಗತಿಗಳನ್ನು ಉದ್ಘಾಟಿಸಿ ಮಾತನಾಡಿದರು. “ಹತ್ತನೇ ತರಗತಿಯ ನಂತರ ನಿಮ್ಮ ಮುಂದಿನ ವಿದ್ಯಾಭ್ಯಾಸಕ್ಕಾಗಿ ಸಂತ ಫಿಲೋಮಿನಾ ಪದವಿ ಪೂರ್ವ…

Read More

ಬದ್ರಿಯಾ ವೆಲ್ಫೇರ್ ಸೊಸೈಟಿಯ 40ನೇ ವರ್ಷಾಚರಣೆ ಸಮಾರೋಪ

ಮಾದಕ ವ್ಯಸನ ವಿರೋಧಿ ಜನಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ಅಜ್ಜಿನಡ್ಕ: ಬದ್ರಿಯಾ ವೆಲ್ಫೇರ್ ಸೊಸೈಟಿ ಇದರ 40ನೇ ವರ್ಷದ ಸಮಾರೋಪ ಸಮಾರಂಭ ಹಾಗೂ ಮಾದಕ ವ್ಯಸನದ ವಿರುದ್ಧ ಜನಜಾಗೃತಿ ಕಾರ್ಯಕ್ರಮ ಭಾನುವಾರ ನಡೆಯಿತು. ಕಾರ್ಯಕ್ರಮವನ್ನು ಮಂಗಳೂರು ದಕ್ಷಿಣ ವಿಭಾಗದ ಸಹಾಯಕ ಪೊಲೀಸ್ ಆಯುಕ್ತೆ ವಿಜಯಕಾಂತಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಯುವ ಸಮುದಾಯ ಮಾದಕ ವ್ಯಸನ ಹಾಗೂ ಇತರ ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ದಾರಿ ತಪ್ಪುತ್ತಿರುವುದು ಆತಂಕಕಾರಿ ಬೆಳವಣಿಗೆ ಎಂದರು. ಸಂಘ-ಸಂಸ್ಥೆಗಳು ಕ್ರೀಡೆ, ಸಾಮಾಜಿಕ ಹಾಗೂ…

Read More

ಸೋಮಂತಡ್ಕ ಬಳಿ ಕಾರು-ಬೈಕ್ ಅಪಘಾತ: ಚಿಕಿತ್ಸೆ ಫಲಕಾರಿಯಾಗದೆ ಬೈಕ್ ಸವಾರ ಸಾವು

ಫೋಟೋಗ್ರಾಫರ್ ಸಂಘದ ಸದಸ್ಯ ಗಣೇಶ್ ನಿಧನಕ್ಕೆ ಸಂತಾಪ ಬೆಳ್ತಂಗಡಿ: ರಾಷ್ಟ್ರೀಯ ಹೆದ್ದಾರಿಯ ಮುಂಡಾಜೆ ಗ್ರಾಮದ ಸೋಮಂತಡ್ಕದ ಅಗರಿ ಕ್ರಾಸ್ ಬಳಿ ಭಾನುವಾರ ಸಂಭವಿಸಿದ ಕಾರು ಹಾಗೂ ಬೈಕ್ ನಡುವಿನ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಸೋಮವಾರ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಕಾಯರ್ತಡ್ಕ ನಿವಾಸಿ ಗಣೇಶ್ (36) ಮೃತರು. ಅವರು ಉಜಿರೆ ಕಡೆಯಿಂದ ಕಕ್ಕಿಂಜೆ ಕಡೆಗೆ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ, ಚಾರ್ಮಾಡಿ ಕಡೆಯಿಂದ ಬರುತ್ತಿದ್ದ ಕಾರಿನ ಬಲಭಾಗದ ಸೈಡ್ ಮಿರರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ ಎಂದು…

Read More

ಕಡಬದಲ್ಲಿ ನದಿಗೆ ಸ್ನಾನಕ್ಕೆ ಹೋದ ವೃದ್ಧ ನೀರಿನಲ್ಲಿ ಮುಳುಗಿ ಸಾವು

ಕಡಬ ತಾಲೂಕಿನ ಕೊಣಾಜೆ ಗ್ರಾಮದಲ್ಲಿ ನದಿಗೆ ಸ್ನಾನಕ್ಕೆ ತೆರಳಿದ್ದ ವೃದ್ಧರೊಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಭಾನುವಾರ ಸಂಜೆ ನಡೆದಿದೆ.ಮೃತರನ್ನು ಮರ್ದಾಳ ಸಮೀಪದ ಕೊಣಾಜೆ ಗ್ರಾಮದ ಸುಬ್ರಮಣ್ಯ (70) ಎಂದು ಗುರುತಿಸಲಾಗಿದೆ. ಇವರು ಕಳೆದ ಒಂದು ವರ್ಷದಿಂದ ಕಡಬದ ಮರ್ದಾಳ ವಿವಿಧ ಹೋಟೆಲ್ಗಲ್ಲಿ ಕೆಲಸ ಮಾಡಿಕೊಂಡಿದ್ದರು. ಭಾನುವಾರ ಸಂಜೆ ಕೆಲಸ ಮುಗಿಸಿಕೊಂಡು ಮನೆಗೆ ಬಂದಿದ್ದ ಸುಬ್ರಮಣ್ಯ ಅವರು ಪ್ರತಿದಿನದ ಅಭ್ಯಾಸದಂತೆ ಸಂಜೆ ವೇಳೆಗೆ ಮನೆಯ ಸಮೀಪದ ನದಿಗೆ ಸ್ನಾನಕ್ಕೆ ತೆರಳಿದ್ದರು. ಆದರೆ ಸಾಕಷ್ಟು ಸಮಯವಾದರೂ ಮನೆಗೆ ಮರಳಿ…

Read More
error: Content is protected !!