ಕಾಸರಗೋಡಿನಲ್ಲಿ ಎನ್‌ಡಿಎ ಅಭ್ಯರ್ಥಿ ಅಶ್ವಿನಿ ಎಂ.ಎಲ್. ಭರ್ಜರಿ ರೋಡ್ ಶೋ, ನಾಮಪತ್ರ ಸಲ್ಲಿಕೆ

ಕಾಸರಗೋಡು: ಸಪ್ತ ಭಾಷಾ ಸಂಗಮ ಭೂಮಿ ಕಾಸರಗೋಡು ವಿಧಾನಸಭಾ ಕ್ಷೇತ್ರದಲ್ಲಿ ಎನ್‌ಡಿಎ ಅಭ್ಯರ್ಥಿ ಅಶ್ವಿನಿ ಎಂ.ಎಲ್. ಭರ್ಜರಿ ರೋಡ್ ಶೋ ನಡೆಸಿ ಇಂದು ನಾಮಪತ್ರ ಸಲ್ಲಿಸಿದರು. ಕರಂದಕ್ಕಾಡು ಮೈದಾನದಿಂದ ಆರಂಭವಾದ ರೋಡ್ ಶೋ ಭಾರೀ ಜನಸಾಗರದ ಮಧ್ಯೆ ಸಾಗಿದ್ದು, ಸಾರ್ವಜನಿಕ ಮೆರವಣಿಗೆ ಮೂಲಕ ಕಾರ್ಯಕರ್ತರಲ್ಲಿ ಉತ್ಸಾಹ ಮೂಡಿಸಿತು. ಮೆರವಣಿಗೆಯಲ್ಲಿ ಪಕ್ಷದ ಧ್ವಜಗಳು, ಘೋಷಣೆಗಳು ಮತ್ತು ಭರ್ಜರಿ ಸ್ವಾಗತದ ನಡುವೆ ಅಭ್ಯರ್ಥಿ ಅಶ್ವಿನಿ ಎಂ.ಎಲ್. ಗಮನಸೆಳೆದರು . ನಾಮಪತ್ರ ಸಲ್ಲಿಕೆಗೂ ಮುನ್ನ ಅವರು ಎಡನೀರು ಮಠಕ್ಕೆ ಭೇಟಿ ನೀಡಿ…

Read More

ಗೋಡೆ ಬರಕ್ಕೆ ಹೈಟೆಕ್ ಸ್ಪರ್ಶ ….. !

ಪಾಲಕ್ಕಾಡ್: ಗೋಡೆ ಬರಹ ಅದು ಕಲಾ ಕೃತಿಯ ಒಂದು ಪ್ರಕಾರ ದೇವರ ನಾಡು ಕೇರಳದಲ್ಲಿ ಚುನಾವಣೆಯ ಪ್ರಚಾರಕ್ಕಾಗಿ ಗೋಡೆ ಬರವನ್ನು ಬರೆಯುತ್ತಾರೆ. ವರುಷಗಳು ಉರುಳಿದರು ಇಂದಿಗೂ ಗೋಡೆ ಪ್ರಚಾರ ಜೀವಂತವಾಗಿ ಕೇರಳದಲ್ಲಿ ಇಂದಿಗೂ ಮುಂದುವರಿದು ಕೊಂಡು ಹೋಗುತ್ತಿದೆ . ತಂತ್ರಜ್ಞಾನವು ಸಕತ್ ಆಗಿ ಈಗ ಎಲ್ಲೆಡೆ ಸದ್ದು ಮಾಡುತ್ತಿದೆ . ಈಗ ಗೋಡೆ ಬರಹಕ್ಕೂ ಆಧುನಿಕ ಸ್ಪರ್ಶವನ್ನು ನೀಡಿ ಗೋಡೆ ಬರಹ ಬರವಣಿಗೆಗೆ ಕೇರಳದಲ್ಲಿ ರೋಬೋಟ್ ಕೂಡಾ ಪಾದಾರ್ಪಣೆ ಮಾಡಿರುವುದು ವಿಶೇಷ . ಚುವರ್ ಬೋಟ್ ಎಂಬ…

Read More

ಅಳಪೆ ದಕ್ಷಿಣ ವಾರ್ಡಿನಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 50ನೇ ಅಳಪೆ ದಕ್ಷಿಣ ವಾರ್ಡಿನ ಕುಂದರ್ ಕುಟುಂಬ ದೈವಸ್ಥಾನ ಚಾವಡಿ ಸಮಿತಿ ವತಿಯಿಂದ ಅಳಪೆ ಸಂಪರ್ಕ ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ಕಾರ್ಯಕ್ರಮ ಶಾಸಕ ಡಿ. ವೇದವ್ಯಾಸ ಕಾಮತ್ ಅವರ ನೇತೃತ್ವದಲ್ಲಿ ನೆರವೇರಿತು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, ಪಡೀಲಿನ ಕುಂದರ್ ಕುಟುಂಬದ ದೈವಸ್ಥಾನಕ್ಕೆ ಸಂಪರ್ಕಿಸುವ ಪ್ರಮುಖ ರಸ್ತೆ ಬಹಳ ಕಿರಿದಾಗಿದ್ದು, ಅಭಿವೃದ್ಧಿ ಕಾಮಗಾರಿಯ ಅಗತ್ಯತೆ ಬಹಳ ದಿನಗಳಿಂದ ಇದ್ದುದಾಗಿ ಹೇಳಿದರು. ಇಂದು ಶಿಲಾನ್ಯಾಸಗೊಂಡಿರುವ ಈ ಕಾಮಗಾರಿ ಶೀಘ್ರದಲ್ಲೇ…

Read More

ಡ್ರಗ್ ಪೆಡ್ಲಿಂಗ್‌ನಲ್ಲಿ ತೊಡಗಿದ್ದ ಯುವಕನ ಬಂಧನ

ಮಂಗಳೂರು ನಗರ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಡ್ರಗ್ ಪೆಡ್ಲಿಂಗ್‌ನಲ್ಲಿ ತೊಡಗಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ. ಮುಹಮ್ಮದ್ ಝಾಕೀರ್, ಬಂಧಿತ ಯುವಕ. ಮಂಗಳೂರು ನಗರ ಕೊಣಾಜೆ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಗಳ ತಂಡವು ಠಾಣಾ ವ್ಯಾಪ್ತಿಯ ಉಳ್ಳಾಲ ತಾಲೂಕು ಬೆಳ್ಮ ಗ್ರಾಮದ ಕೆ.ಎಸ್ ಹೆಗ್ಡೆ ಆಸ್ಪತ್ರೆಯ ಎದುರು ಫೀಜಾ ಮೈದಾನದ ಸಾರ್ವಜನಿಕ ಸ್ಥಳದಲ್ಲಿ ಮೊಹಮ್ಮದ್ ಝಾಕೀರ್ ಎಂಬಾತನು ಎಮ್.ಡಿ.ಎಮ್.ಎ ಮಾದಕವಸ್ತುವನ್ನು ತಂದು ತನ್ನ ಗಿರಾಕಿಗಳಿಗೆ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಹೆಚ್ಚಿನ ಹಣಕ್ಕಾಗಿ ಮಾರಾಟ ಮಾಡುತ್ತಿರುವುದಾಗಿ ಬಂದ ಮಾಹಿತಿ…

Read More

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಮಾದಕ ವಸ್ತು ವಶ, 3 ಮಂದಿ ಬಂಧನ

ಮಂಗಳೂರು ನಗರಕ್ಕೆ ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎಅನ್ನು ಖರೀದಿಸಿಕೊಂಡು ಅದನ್ನು ಮಂಗಳೂರು ನಗರದ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಆಟೋ ರಿಕ್ಷಾದಲ್ಲಿ ಪಂಪವೆಲ್-ಎಕ್ಕೂರು ಪರಿಸರದಲ್ಲಿ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯನ್ನು ಪಡೆದ ಮಂಗಳೂರು ಸಿಸಿಬಿ ಪೊಲೀಸರು ಎಂಡಿಎಂಎ ಮಾದಕ ವಸ್ತುವನ್ನು ಹೊಂದಿಕೊಂಡು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಆಟೋ ರಿಕ್ಷಾವನ್ನು ಪತ್ತೆ ಹಚ್ಚಿ ಆರೋಪಿಗಳನ್ನು ಬಂಧಿಸಿದ್ದಾರೆ. ಹೈದರ್ @ ಹೈದರ್ ಆಲಿ, ಮೊಹಮ್ಮದ್ ಸಜಾದ್, ಜೈಸನ್ ಮೆನೆಜಸ್ ಎಂಬಾತರನ್ನು ವಶಕ್ಕೆ ಪಡೆದುಕೊಂಡು ಅವರುಗಳ ವಶದಿಂದ 2,50,000ಮೌಲ್ಯದ 26 ಗ್ರಾಂ…

Read More

ಗಾಂಜಾ ಮಾರಾಟ ಪ್ರಕರಣ: 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

ಗಾಂಜಾ ಮಾರಾಟ ಪ್ರಕರಣದಲ್ಲಿ ಸುಮಾರು 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಉತ್ತರ ಪ್ರದೇಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಠಾಣಾ ಪೊಲೀಸರು ಬಂಧಿಸಿದ್ದಾರೆ. ಸುಳ್ಯ ಪೊಲೀಸ್ ಠಾಣಾ ಅ.ಕ್ರ 328/2016, ಕಲಂ :8(c) ಜೊತೆಗೆ 20(b) NDPS Act ಪ್ರಕರಣ ಹಾಗೂ LPC NO : 11/2024 ರಲ್ಲಿ ಸುಮಾರು 10 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಉತ್ತರ ಪ್ರದೇಶದ ನಸೀಮ್ ಎಂಬಾತನನ್ನು ಸುಳ್ಯ ಠಾಣಾ ಸಿಬ್ಬಂದಿಗಳಾದ Hc 359-ರಮೇಶ್ ಎಲ್, Hc 368-ರಾಜು…

Read More

ಒಳಮೀಸಲಾತಿ ರೋಸ್ಟರ್ ವಿರೋಧಿಸಿ ಮಾರ್ಚ್ 24ರಂದು ಬೆಂಗಳೂರಿನಲ್ಲಿ ಭಾರಿ ಪ್ರತಿಭಟನೆ

ಬೆಂಗಳೂರು: ಪರಿಶಿಷ್ಟ ಜಾತಿಗಳ ಒಳಮೀಸಲಾತಿ ರೋಸ್ಟರ್ ಹಂಚಿಕೆ ವಿರುದ್ಧ ಭೋವಿ ಹಾಗೂ ಇತರೆ ಸಮುದಾಯಗಳ ವತಿಯಿಂದ ಮಾರ್ಚ್ 24ರಂದು ಬೆಳಗ್ಗೆ 10 ಗಂಟೆಗೆ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಬೃಹತ್ ಪ್ರತಿಭಟನಾ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಭೋವಿ ಸಮಾಜದ ಯುವ ಮುಖಂಡ ಪವನ್ ಕುಮಾರ್ ತಿಳಿಸಿದ್ದಾರೆ. ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಪ್ರತಿಭಟನೆಯಲ್ಲಿ ಭೋವಿ ಗುರುಪೀಠದ ಜಗದ್ಗುರು ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಸೇರಿದಂತೆ ಬಂಜಾರ, ಭೋವಿ, ಕೊರಮ, ಕೊರಚ, ಚರ್ಮಕಾರ ಹಾಗೂ ಸೂಕ್ಷ್ಮ…

Read More

ಮಂಜೇಶ್ವರ ವಿಧಾನಸಭಾ ಕ್ಷೇತ್ರ: ಎಸ್‌ಡಿಪಿಐ ಅಭ್ಯರ್ಥಿ ಅಶ್ರಫ್ ಬಡಾಜೆ ನಾಮಪತ್ರ ಸಲ್ಲಿಕೆ

ಮಂಜೇಶ್ವರ: ಮಂಜೇಶ್ವರ ವಿಧಾನಸಭಾ ಕ್ಷೇತ್ರದ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಎಸ್‌ಡಿಪಿಐ ಅಭ್ಯರ್ಥಿ ಅಶ್ರಫ್ ಬಡಾಜೆ ಅವರು ಸೋಮವಾರ ತಮ್ಮ ನಾಮಪತ್ರವನ್ನು ಸಲ್ಲಿಸಿದರು. ಮಧ್ಯಾಹ್ನ ಸುಮಾರು 1.30ರ ವೇಳೆಗೆ ಉಪ್ಪಳ ತಹಶೀಲ್ದಾರ್ ಕಚೇರಿಗೆ ಆಗಮಿಸಿದ ಅವರು ಚುನಾವಣಾಧಿಕಾರಿಗಳ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಕೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದರು. ನಾಮಪತ್ರ ಸಲ್ಲಿಕೆ ವೇಳೆ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದು, ಅಭ್ಯರ್ಥಿಗೆ ಬೆಂಬಲ ಸೂಚಿಸಿದರು. ನಾಮಪತ್ರ ಸಲ್ಲಿಕೆಗೆ ಮುನ್ನ ಕಾರ್ಯಕರ್ತರು ಉಪ್ಪಳ ಪಟ್ಟಣದ ವಿವಿಧ ಭಾಗಗಳಲ್ಲಿ ಮೆರವಣಿಗೆ ನಡೆಸಿ ಘೋಷಣೆಗಳನ್ನು ಕೂಗಿದರು. ಪಕ್ಷದ…

Read More

ತೊಕ್ಕೊಟ್ಟುವಿನಲ್ಲಿ ಉಚಿತ ಕೈತೋಟ, ತಾರಸಿ ತೋಟ ತರಬೇತಿ ಹಾಗೂ ಬೀಜ ವಿತರಣೆ ಕಾರ್ಯಕ್ರಮ

ಉಳ್ಳಾಲ: ಸಿರಿ ತೋಟಗಾರಿಕಾ ಸಂಘದ ಆಶ್ರಯದಲ್ಲಿ ತೋಟಗಾರಿಕೆ ಇಲಾಖೆ ಮಂಗಳೂರು ಇವರ ಸಹಯೋಗದೊಂದಿಗೆ ಉಚಿತ ಕೈತೋಟ ಮತ್ತು ತಾರಸಿ ತೋಟ ತರಬೇತಿ ಕಾರ್ಯಕ್ರಮ ತೊಕ್ಕೊಟ್ಟುವಿನಲ್ಲಿ ನಡೆಯಿತು. ಕಾರ್ಯಕ್ರಮಕ್ಕೆ ಕಾರ್ಯನಿರತ ಪತ್ರಕರ್ತರ ಸಂಘ ಉಳ್ಳಾಲ, ಫುಡ್ ಚೈನ್ ಕ್ಯಾಂಪೇನ್, ಶಿವಾಜಿ ಫ್ರೆಂಡ್ಸ್ ಸರ್ಕಲ್, ಸ್ವಾಮಿ ಕೊರಗಜ್ಜ ಸೇವಾ ಸಮಿತಿ ತೊಕ್ಕೊಟ್ಟು, ರಿಚಲ್ ಸರ್ವಿಸಸ್ ಹಾಗೂ ಮಂಗಳೂರು ಆಟೋ ರಿಕ್ಷಾ ಮತ್ತು ಕಾರು ಚಾಲಕರ ಸಹಕಾರಿ ಸಂಘ ತೊಕ್ಕೊಟ್ಟು ಇವುಗಳು ಸಹಭಾಗಿತ್ವ ನೀಡಿದವು. ಈ ಸಂದರ್ಭದಲ್ಲಿ ತರಕಾರಿ ಬೀಜ ಮತ್ತು…

Read More

ಮಾಂಸದ ಕೋಳಿಗಳ ಸಾಕಾಣಿಕೆಯಲ್ಲಿ ಮುನ್ನೆಚ್ಚರಿಕೆ ಕ್ರಮಗಳು

ಕೋಳಿ ಮನೆಗಳಲ್ಲಿ ದಿನದ 24 ಗಂಟೆಗಳ ಕಾಲ ತಂಪಾದ ಮತ್ತು ಶುಚಿಯಾದ ನೀರನ್ನು ಒದಗಿಸಬೇಕು. ಒಂದು ಗಂಟೆ ನೀರು ಇಲ್ಲದಿದ್ದರೆ ಕೋಳಿಗಳು ಸಾವನ್ನಪ್ಪಬಹುದು. ಚೆನ್ನಾಗಿ ಗಾಳಿಯಾಡಲು ಅನುಕೂಲವಾಗುವಂತೆ ಎಲ್ಲಾ ತಡೆಗಳನ್ನು ತೆಗೆಯಬೇಕು. ಕೋಳಿ ಮನೆ ಮಾಡಿನ ಮೇಲ್ಭಾಗಕ್ಕೆ ಸುಣ್ಣ ಬಳಿಯಬೇಕು ಆಥವಾ ಹುಲ್ಲು ಅಡಿಕೆಗರಿ, ತೆಂಗಿನ ಗರಿಗಳಿಂದ ಹೊದಿಸಬೇಕು. ಅನುಕೂಲವಿದ್ದರೆ ಕೋಳಿ ಮನೆಯ ಮಾಡಿನ ಮೇಲೆ ಸ್ಪ್ರಿಂಕ್ಲರ್ನಲ್ಲಿ ನೀರು ಸಿಂಪಡಿಸಬೇಕು. ಕೋಳಿ ಮನೆಯ ಒಳಗೆ ಫ್ಯಾನ್ ಅಥವಾ ಫಾಗಸ್ರ್ಗಳನ್ನು ಅಳವಡಿಸಬೇಕು. ವಿಟಮಿನ್ ಸಿ ಮತ್ತು ಇತರೆ ಎಲೆಕ್ಟ್ರೋಲೈಟ್‍ಗಳನ್ನು…

Read More
error: Content is protected !!