ತಲಪಾಡಿ : ಸಂಚಾರಕ್ಕೆ ಯೋಗ್ಯವಲ್ಲದ KSRTC BUS .ಆರು ಮಂದಿಯ ಸಾವಿಗೆ ಕಾರಣ.

ಗುರುವಾರ ಚಾಲಕನ ಅಜಾಗರೂಕತೆ ಹಾಗೂ ಬಸ್‌ನ ಸವೆದ ಚಕ್ರದಿಂದ ತಲಪಾಡಿಯಲ್ಲಿ ಉಂಟಾದ ಭೀಕರ ಅಪಘಾತದಲ್ಲಿ ಆರು ಮಂದಿ ದುರ್ಮರಣಕ್ಕೀಡಾದ ಘಟನೆ ರಾಜ್ಯಾದ್ಯಂತ ಶೋಕ ಮತ್ತು ಆಕ್ರೋಶಕ್ಕೆ ಕಾರಣವಾಯಿತು. ಈ ಘಟನೆಗೆ ಪ್ರತಿಕ್ರಿಯೆ ನೀಡಿದ ಊರವರು ಇಂದು ಬೆಳಿಗ್ಗೆ ಗಡಿ ಪ್ರದೇಶದಲ್ಲಿರುವ ಮುಖ್ಯ ರಸ್ತೆಯಲ್ಲಿ ಸಾರಿಗೆ ಬಸ್‌ಗಳನ್ನು ತಡೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗ್ರಾಮಸ್ಥರು ಮುಖ್ಯವಾಗಿ ಸವೆದ ಚಕ್ರಗಳುಳ್ಳ ಹಾಗೂ ಸಾರಿ ಹೋಗಿರುವ ಬಸ್‌ಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ತಲುಪಿದ ಪೊಲೀಸರು ಹಾಗೂ ಮೋಟಾರು…

Read More

ದುರಂತಗಳ ಸರಮಾಲೆ…ವಾಹನ ಅಪಘಾತಗಳಲ್ಲಿ ಅಜ್ಜಿನಡ್ಕ ಸಾಮನಿಗೆ ಕುಟುಂಬ ಕಳೆದುಕೊಂಡಿದ್ದು ಒಟ್ಟು 12 ಜೀವಗಳನ್ನು!

ಮಂಜೇಶ್ವರ : ತಲಪಾಡಿ ಕೆ.ಸಿ.ರೋಡು ಸಮೀಪದ ಅಜ್ಜಿನಡ್ಕ ಸಾಮಾನಿಗೆ ಕುಟುಂಬಕ್ಕೆ ದುರಂತಗಳ ಸರಮಾಲೆಯೇ ಇದೆ. ಒಟ್ಟು ನಾಲ್ಕು ಅಪಘಾತಗಳನ್ನಾಗಿ ಈ ಕುಟುಂಬಕ್ಕೆ ಸಂಬಂಧಪಟ್ಟ 12 ಮಂದಿ ಸಾವನ್ನಪ್ಪಿದ್ದಾರೆ.ಗುರುವಾರದಂದು ತಲಪಾಡಿಯಲ್ಲಿ ನಡೆದ ವಾಹನ ಅಪಘಾತದಲ್ಲಿ ತಾರುಣ ಸಾವಿಗೀಡಾದ ಆರು ಮಂದಿ ಪೈಕಿ ಐದು ಮಂದಿ ಇದೇ ಕುಟುಂಬಕ್ಕೆ ಸೇರಿದವರು. ಒಂದರ ಹಿಂದೆ ಒಂದರಂತೆ ರಸ್ತೆ ಅಪಘಾತಕ್ಕೀಡಾಗಿ ಈ ಕುಟುಂಬದ ಸದಸ್ಯರು ಸಾವಿಗೀಡಾಗುವುದು ನಿಜಕ್ಕೂ ದಾರುಣ ಸಂಗತಿ.2018 ಜುಲೈ 9 ರಂದು ಮುಂಜಾನೆ ಉಪ್ಪಳ ಸಮೀಪದ ನಯಾಬಜಾರ್ ಬಳಿ ಅಜ್ಜಿನಡ್ಕ…

Read More

ತುಳುಭಾಷೆಯ 150ನೇ ಚಿತ್ರ “ನೆತ್ತೆರೆಕೆರೆ” ಬೆಳ್ಳಿ ತೆರೆಗೆ

ಮಂಗಳೂರು: “ವಿಭಿನ್ನ ಪರಿಕಲ್ಪನೆಯ * ತುಳುವಲ್ಲಿ ಬರುತ್ತಿದೆ. ನಿರ್ದೇಶಕ ಸ್ವರಾಜ್ ಶೆಟ್ಟಿಯ ಹಲವು ದಿನಗಳ ಕನಸು ‘ನೆತ್ತರೆಕೆರೆ’ ಮೂಲಕ ತುಳುಭಾಷೆಯ 150ನೇ ಚಿತ್ರ ಯಶಸ್ವಿಯಾಗಲಿ“ ಎಂದು ಹಿರಿಯ ರಂಗಭೂಮಿ ನಿರ್ದೇಶಕ ವಿಜಯ ಕುಮಾರ್ ಕೊಡಿಯಾಲ್‌ಬೈಲ್ ಹೇಳಿದರು.ಅವರು ಮಂಗಳೂರಿನ ಬಿಗ್ ಸಿನಿಮಾಸ್ ‌ನಲ್ಲಿ ಅಸ್ತ್ರ ಪ್ರೊಡಕ್ಷನ್ ಲಾಂಛನದಲ್ಲಿ ತಯಾರಾದ ಲಂಚುಲಾಲ್ ಕೆ.ಎಸ್. ನಿರ್ಮಾಣದ ಸ್ವರಾಜ್ ಶೆಟ್ಟಿ ನಿರ್ದೇಶನದ “ನೆತ್ತರಕೆರೆ”ತುಳು ಚಿತ್ರವನ್ನು ದೀಪ ಬೆಳಗಿಸುವ ಮೂಲಕ ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಚಿತ್ರ ನಿರ್ಮಾಪಕ ಪ್ರಕಾಶ್ ಪಾಂಡೇಶ್ವರ ಮಾತನಾಡಿ, “ಇದುವರೆಗೆ ತುಳುವಲ್ಲಿ…

Read More

NREG ವರ್ಕರ್ಸ್ ಯೂನಿಯನ್ ನೇತೃತ್ವದಲ್ಲಿ ಮೀಯಪದವು ಅಂಚೆ ಕಚೇರಿಗೆ ಮಾರ್ಚ್ ಹಾಗೂ ಧರಣಿ.

ಮೀಂಜ ಪಂಚಾಯತ್ NREG ವರ್ಕರ್ಸ್ ಯೂನಿಯನ್ ನೇತೃತ್ವದಲ್ಲಿ,ಉದ್ಯೋಗ ಖಾತರಿ ಯೋಜನೆಯನ್ನು ಬುಡಮೇಲು ಗೊಳಿಸುವ ಕೇಂದ್ರ ಸರಕಾರದ ಧೋರಣೆಗೆದುರಾಗಿ ಹಾಗೂ ಕೇಂದ್ರ ಸರ್ಕಾರದ ತೀರ್ಮಾನವನ್ನು ತಿದ್ದುಪಡಿಗೊಳಿಸುವಂತೆ ಆಗ್ರಹಿಸಿ ,ಮೀಯಪದವು ಅಂಚೆ ಕಚೇರಿಗೆ ಮಾರ್ಚ್ ಹಾಗೂ ಧರಣಿ ನಡೆಸಲಾಯಿತು. f ಧರಣಿ ಯ ಉದ್ಘಾಟನೆ ಯನ್ನು ಸಿಪಿಎಂ ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರೂ ಕೇರಳ ರೈತ ಸಂಘದ ರಾಜ್ಯ ಸಮಿತಿ ಸದಸ್ಯರೂ ಆದ ಕಾ: ಕೆ.ಆರ್.ಜಯಾನಂದ ಉದ್ಘಾಟಿಸಿದರು. ಅಧ್ಯಕ್ಷತೆ ಯನ್ನು NREG ಏರಿಯಾ ಸಮಿತಿ ಅಧ್ಯಕ್ಷೆ ಶ್ರೀಮತಿ ಸರಸ್ವತಿ ಎಲಿಯಾನ…

Read More

“ಬಂಟರ ಸಂಘದ ಗಣೇಶೋತ್ಸವ ಲೋಕಕ್ಕೆ ಮಾದರಿ“ -ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ.-ಬಂಟ್ಸ್ ಹಾಸ್ಟೆಲ್ ಗಣೇಶೋತ್ಸವ, ಧಾರ್ಮಿಕ ಸಭೆ

ಮಂಗಳೂರು: ಬಂಟರ ಯಾನೆ ನಾಡವರ ಮಾತೃ ಸಂಘ ಶ್ರೀ ಸಿದ್ದಿವಿನಾಯಕ ಪ್ರತಿಷ್ಠಾನ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ ಬಂಟ್ಸ್ ಹಾಸ್ಟೆಲ್ ನ ಓಂಕಾರ ನಗರದಲ್ಲಿ ನಡೆದ ಸಾರ್ವಜನಿಕ ಗಣೇಶೋತ್ಸವ ಎರಡನೇ ದಿನದ ಧಾರ್ಮಿಕ ಸಭೆಯನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ. ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತಾಡಿದ ಅವರು, “ನಾನು ಮೊದಲ ಬಾರಿ ಇಲ್ಲಿಗೆ ಆಗಮಿಸಿದ್ದೇನೆ. ಬಹಳ ವಿಜೃಂಭಣೆಯಿಂದ ಗಣೇಶೋತ್ಸವ ಆಚರಿಸುತ್ತಿದ್ದೀರಿ. ಗಣೇಶ ಚತುರ್ಥಿಯ ಶುಭ ಸಂದರ್ಭದಲ್ಲಿ ಇಡೀ ಲೋಕಕ್ಕೆ ಒಳೆಯದಾಗಲಿ….

Read More

ಜಿಲ್ಲಾ ನವಜೀವನ ಸಮಿತಿ ವತಿಯಿಂದ “ಕೇಸರ್ದ ಕಂಡೊಡು ಕುಸಲ್ದ ಗೊಬ್ಬುಲು” ಕಾರ್ಯಕ್ರಮ

ಕುಂಬಳೆ ಸಮೀಪದ ಕಳತ್ತೂರಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ) ಮಂಜೇಶ್ವರ ತಾಲೂಕು , ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬಿ.ಸಿ. ಟ್ರಸ್ಟ್(ರಿ) ಮಂಜೇಶ್ವರ ತಾಲೂಕು , ಕಳತ್ತೂರು ಶ್ರೀ ಮಹಾದೇವ ನವಜೀವನ ಸಮಿತಿ ಹಾಗೂ ಜಿಲ್ಲಾ ನವಜೀವನ ಆಶ್ರಯದಲ್ಲಿ ದ್ವಿತೀಯ ವರ್ಷದ ನವಜೀವನೋತ್ಸವದ ಅಂಗವಾಗಿ ಕೇಸರ್ದ ಕಂಡೊಡು ಕುಸಲ್ದ ಗೊಬ್ಬುಲು ಕಾರ್ಯಕ್ರಮ ಇಚ್ಲಂಪಾಡಿ ಗದ್ದೆಯಲ್ಲಿ ಇತ್ತೀಚೆಗೆ ನಡೆಯಿತ್ತು . ಅಖಿಲ ಕರ್ನಾಟಕ ರಾಜ್ಯ ಜನಜಾಗೃತಿ ವೇದಿಕೆ ಪ್ರಾದೇಶಿಕ ನಿರ್ದೇಶಕರಾದ ಶ್ರೀ ವಿವೇಕ್…

Read More

ಸ್ಪಂದನ ಆರ್ಟ್ಸ್ ಆಂಡ್ ಸ್ಪೋರ್ಟ್ ಕ್ಲಬಿನ ವತಿಯಿಂದ 4 ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ

ಮೀಂಜ : ಸ್ಪಂದನ ಆರ್ಟ್ಸ್ ಆಂಡ್ ಸ್ಪೋರ್ಟ್ ಕ್ಲಬ್ ತಿಲಕ್ ನಗರ ಎಲಿಯಾಣ ವತಿಯಿಂದ 4ನೇ ವರ್ಷದ ಗಣೇಶೋತ್ಸವವು ಬಹಳ ವಿಜೃಂಭಣೆಯಿಂದ ಜರಗಿತು.ಬೆಳಗ್ಗೆ 6 ಗಂಟೆಗೆ ಗಣಪತಿ ಪ್ರತಿಷ್ಠೆ ಗಣಪತಿ ಹವನ ನಡೆದು ಶ್ರೀ ಶಾಸ್ತ ಭಜನಾ ಮಂದಿರ ಚಿನಾಲದ ವತಿಯಿಂದ ಭಜನಾ ಸೇವೆ ನಡೆಯಿತು.ನಂತರ ಮಕ್ಕಳಿಗೆ ವಿವಿಧ ಸ್ಪರ್ಧೆಗಳು ನಡೆದವು.ನಂತರ ಸಭಾ ಕಾರ್ಯಕ್ರಮ ನಡೆಯಿತು. ಉತ್ತಮ ಕೃಷಿ ಕಾರ್ಮಿಕರಿಗೆ ನೀಡುವ ಈ ವರ್ಷದ ‘ ಸ್ಪಂದನ ಗ್ರಾಮೀಣ ಪ್ರಶಸ್ತಿ’ ಕುಂಞಿ ಪೂಜಾರಿ ಹಾಗೂ ಬಾಗಿ ದಂಪತಿಗಳಿಗೆ…

Read More

ನಗರದ ಹೃದಯ ಭಾಗದಲ್ಲಿ ಮತ್ತೆ ಕಲಶ ಸ್ಥಾಪನೆ

ಮಂಗಳೂರು: ಮಹಾವೀರ ವೃತ್ತದಲ್ಲಿ ಮೇಲ್ಸ್ತುವೆ ಕಾಮಗಾರಿ ಹಿನ್ನಲೆ ತೆರವುಗೊಳಿಸಿದ್ದ ಭಾರಿ ಗಾತ್ರದ ‘ಕಲಶ’ದ ಆಕೃತಿಯನ್ನು ಮರುಸ್ಥಾಪಿಸಲಾಗುತ್ತಿದ್ದು, ಸೋಮವಾರ ರಾತ್ರಿ ಪೀಠದ ಮೇಲೆ ತಂದಿರಿಸಲಾಗಿದೆ. ಪಂಪ್‌ವೆಲ್ ಗೆ 2003ರಲ್ಲಿ ಬೃಹತ್ ಕಲಶವಿಟ್ಟು ಮಹಾವೀರ ಸರ್ಕಲ್ ನಾಮಕರಣ ಮಾಡಲಾಗಿತ್ತು. ಮಂಗಳೂರು ಜೈನ್‌ ಸೊಸೈಟಿ ಇದರ ಉಸ್ತುವಾರಿ ವಹಿಸಿದ್ದರು. ರಾಷ್ಟ್ರೀಯ ಹೆದ್ದಾರಿ 66ರ ಮೇತುವೆಯು ಈ ವೃತ್ತದ ಮೇಲೆಯೇ ಹಾದು ಹೋಗಿದ್ದು, ಅದರ ಕಾಮಗಾರಿ ಸಲುವಾಗಿ 2016ರ ಮಾರ್ಚ್‌ನಲ್ಲಿ ಕಲಶವನ್ನು ತೆರವುಗೊಳಿಸಲಾಗಿತ್ತು. ಈಗ ಮೇಲ್ವೇತುವೆ ಪಕ್ಕದಲ್ಲಿ ಕಲಶಕ್ಕಾಗಿ ಮೀಸಲಿಟ್ಟಿರುವ ಜಾಗದಲ್ಲಿ ವೃತ್ತಾಕಾರದ…

Read More

ಆ್ಯಸಿಡ್ ಕುಡಿದು ಒಂದೇ ಕುಟುಂಬದ ಮೂವರು ಸಾವು …… !

ಕಾಸರಗೋಡು: ಆ್ಯಸಿಡ್ ಕುಡಿದು ಒಂದೇ ಕುಟುಂಬದ ಮೂವರು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಅಂಬಲತ್ತರ ಸಮೀಪದ ಪಾರಕ್ಕಾಯಿ ಎಂಬಲ್ಲಿ ನಡೆದಿದೆ. ಗೋಪಿ (58) , ಪತ್ನಿ ಇಂದಿರಾ (54) ,ಪುತ್ರ ರಂಜೇಶ್ (34) ಮೃತಪಟ್ಟವರು. ಇನ್ನೋರ್ವ ಪುತ್ರ ರಾಕೇಶ್ (27) ಗಂಭೀರ ಸ್ಥಿತಿಯಲ್ಲಿ ಕಣ್ಣೂರು ಸರಕಾರಿ ವೈದ್ಯಕೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಆರ್ಥಿಕ ಸ್ಥಿತಿ ಹದಗೆಟ್ಟಿರುವುದು ಕಾರಣ ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದಿದೆ . ಬೆಳ್ಳಂಬೆಳಗ್ಗೆ ಮೂರು ಗಂಟೆ ಸುಮಾರಿಗೆ ಘಟನೆ ಬೆಳಕಿಗೆ ಬಂದಿದೆ. ಸಂಬಂಧಿಕರೋರ್ವರ ಮೊಬೈಲ್‌ಗೆ ಕರೆ…

Read More

ಪುಣೆಯಲ್ಲಿ ಕಾರ್ಕಳ ಮೂಲದ ಹೋಟೆಲ್ ಮಾಲೀಕನ ಬರ್ಬರ್ ಹತ್ಯೆ

ಮಂಗಳವಾರ ರಾತ್ರಿ ಮಹಾರಾಷ್ಟ್ರದ ಪುಣೆಯಲ್ಲಿ ಕಾರ್ಕಳದ ಹೋಟೆಲ್ ಮಾಲೀಕನೊಬ್ಬನ ಕೊಲೆ ನಡೆದ ಘಟನೆಯೊಂದು ನಡೆದಿದೆ . ಮೃತ ವ್ಯಕ್ತಿಯನ್ನು ಕಾರ್ಕಳ ಮೂಲದ ಕುಮೇರುಮನೆಯ ಎಣ್ಣೆಹೊಳೆ ನಿವಾಸಿ ಸಂತೋಷ್ ಶೆಟ್ಟಿ (46) ಎಂದು ಗುರುತಿಸಲಾಗಿದೆ. ಪ್ರಾಥಮಿಕ ವರದಿಗಳ ಪ್ರಕಾರ, ಕರ್ತವ್ಯದಲ್ಲಿರುವಾಗ ಕುಡಿದ ಅಮಲಿನಲ್ಲಿದ್ದ ಉತ್ತರ ಪ್ರದೇಶದ ಸಿಬ್ಬಂದಿಯೊಬ್ಬರಿಗೆ ಸಂತೋಷ್ ಶೆಟ್ಟಿ ಎಚ್ಚರಿಕೆ ನೀಡಿದ್ದರು. ಗದರಿಸುವಿಕೆಯಿಂದ ಕೋಪಗೊಂಡ ಸಿಬ್ಬಂದಿ ಅಡುಗೆ ಮನೆಯಿಂದ ಚಾಕುವನ್ನು ತಂದು ಶೆಟ್ಟಿ ಮೇಲೆ ಹಲ್ಲೆ ನಡೆಸಿದ್ದ. ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.ಮಂಗಳವಾರ ರಾತ್ರಿ 10 ಗಂಟೆ ಸುಮಾರಿಗೆ…

Read More
error: Content is protected !!