ಶಾಲಾ ಮಿತ್ರ ಮಂಡಳಿ ಗ್ರಂಥಾಲಯ ಮತ್ತು ವಾಚನಾಲಯ ಹಾಗೂ ಮಂಜೇಶ್ವರ ತಾಲೂಕು ಲೈಬ್ರರಿ ಕೌನ್ಸಿಲ್ ನ ಸಂಯುಕ್ತ ಆಶ್ರಯದಲ್ಲಿ ಸಂಸ್ಮರಣಾ ಕಾರ್ಯಕ್ರಮ.
ಮಂಜೇಶ್ವರ: ಶಾಲಾ ಮಿತ್ರ ಮಂಡಳಿ ಗ್ರಂಥಾಲಯ ಮತ್ತು ವಾಚನಾಲಯ ಹಾಗೂ ಮಂಜೇಶ್ವರ ತಾಲೂಕು ಲೈಬ್ರರಿ ಕೌನ್ಸಿಲ್ ನ ಸಂಯುಕ್ತ ಆಶ್ರಯದಲ್ಲಿ ಆದಿತ್ಯವಾರದಂದು ಎಸ್ ನಾರಾಯಣ ಭಟ್ ಅವರ ಸಂಸ್ಮರಣಾ ಕಾರ್ಯಕ್ರಮವು ಬಾಯಾರು ಹೆದ್ದಾರಿ ಶಾಲಾ ಸಭಾಂಗಣದಲ್ಲಿ ಜರುಗಿತು. ಮಂಜೇಶ್ವರ ತಾಲೂಕು ಲೈಬ್ರರಿ ಕೌನ್ಸಿಲ್ ನ ಅಧ್ಯಕ್ಷರಾದ ಶ್ರೀಮತಿ ಶ್ರೀ ಕುಮಾರಿ ಟೀಚರ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಸಾಹಿತಿಗಳಾದ ಶ್ರೀ ಶ್ರೀರಾಮ ಪದಕಣ್ಣಾಯ ಅವರು ಸಂಸ್ಮರಣಾ ಭಾಷಣವನ್ನು ನೆರವೇರಿಸಿದರು. ಶ್ರೀ ರಾಮಕೃಷ್ಣ ಭಟ್ ಪೆಲತ್ತಡ್ಕ, ಗ್ರಂಥಾಲಯದ ಉಪಾಧ್ಯಕ್ಷರಾದ ಶ್ರೀ…
