ಸುಳ್ಯದಲ್ಲಿ ಮರಿ ಆನೆ ಮೃತದೇಹ ಪತ್ತೆ

ದಂತದಿಂದ ತಿವಿದ ಪರಿಣಾಮ ಸಾವಿನ ಶಂಕೆ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಅರಂತೋಡು ಸಮೀಪದ ಅಡ್ತಲೆ ಪ್ರದೇಶದ ಕೃಷಿ ತೋಟವೊಂದರಲ್ಲಿ ಮರಿ ಆನೆಯ ಮೃತದೇಹ ಪತ್ತೆಯಾಗಿದೆ. ಸ್ಥಳೀಯರೊಬ್ಬರಿಗೆ ಸೇರಿದ ಅಡಿಕೆ ತೋಟದಲ್ಲಿ ಮರಿ ಆನೆ ಸಾವನ್ನಪ್ಪಿದ ಸ್ಥಿತಿಯಲ್ಲಿ ಕಂಡುಬಂದಿದ್ದು, ಸ್ಥಳೀಯರು ತಕ್ಷಣ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ಪಡೆದ ಅಧಿಕಾರಿಗಳು ಸುಳ್ಯ ಎಸಿಎಫ್ ಪ್ರಶಾಂತ್ ಪೈ ಅವರ ಸೂಚನೆಯಂತೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸುಳ್ಯ ವಲಯ ಅರಣ್ಯಾಧಿಕಾರಿ ಮಂಜುನಾಥ್…

Read More

ಮಂಗಳೂರಿನಲ್ಲಿ ಎಸ್‌ಡಿಪಿಐ ಆಕ್ರೋಶ: ಸರ್ಕಾರ ಗಲಭೆಕೋರರಿಗೆ ಬೆಂಬಲ ನೀಡುತ್ತಿದೆ

ಮಂಗಳೂರು: ರಾಜ್ಯದಲ್ಲಿನ ಗಲಭೆಕೋರರ ವಿರುದ್ಧ ದಾಖಲಾದ ಪ್ರಕರಣಗಳನ್ನು ಹಿಂಪಡೆಯುವ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ ಹಾಗೂ ಗೋ ರಕ್ಷಣೆಯ ಹೆಸರಿನಲ್ಲಿ ನಡೆಯುತ್ತಿರುವ ದೌರ್ಜನ್ಯಗಳ ವಿರುದ್ಧ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಮಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲಾ ಸಮಿತಿಗಳ ವತಿಯಿಂದ ಇಂದು ಮಂಗಳೂರಿನ ಕ್ಲಾಕ್ ಟವರ್ ಬಳಿ ಪ್ರತಿಭಟನೆ ನಡೆಯಿತು.ಪ್ರತಿಭಟನೆಯಲ್ಲಿ ಪಕ್ಷದ ನಾಯಕರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಭಾಗವಹಿಸಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಗಲಭೆಕೋರರ ವಿರುದ್ಧದ ಪ್ರಕರಣಗಳನ್ನು ಹಿಂಪಡೆಯುವ ಮೂಲಕ ಸಮಾಜದಲ್ಲಿ…

Read More

ಬಕ್ರೀದ್ ವೇಳೆ ಅಕ್ರಮ ಗೋ ಸಾಗಾಟ ತಡೆಗೆ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗೆ ಮನವಿ

ವಿಶ್ವ ಹಿಂದೂ ಪರಿಷದ್ ಮತ್ತು ಬಜರಂಗದಳ ಮುಖಂಡರ ಭೇಟಿ ಬಕ್ರೀದ್ ಸಂದರ್ಭದಲ್ಲಿ ಕುರ್ಬನಿ ಹೆಸರಿನಲ್ಲಿ ಅಕ್ರಮ ಗೋ ಸಾಗಾಟ ಹಾಗೂ ಗೋ ಹತ್ಯೆ ನಡೆಯದಂತೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ, ವಿಶ್ವ ಹಿಂದೂ ಪರಿಷದ್ ಹಾಗೂ ಬಜರಂಗದಳದ ಮುಖಂಡರು ಇಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು. ಜಿಲ್ಲೆಯಲ್ಲಿ ವ್ಯಾಪಕವಾಗಿ ನಡೆಯುತ್ತಿರುವ ಅಕ್ರಮ ಕಸಾಯಿಖಾನೆಗಳನ್ನು ತಕ್ಷಣ ಮುಚ್ಚುವಂತೆ ಕೂಡ ಅವರು ಆಗ್ರಹಿಸಿದರು. ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಜಿಲ್ಲಾಡಳಿತ…

Read More

ಕುದುರೆಮುಖ ಸಂಸ್ಥೆ ಎನ್‌ಎಂಡಿಸಿಗೆ ವಿಲೀನಗೊಳಿಸಿ: ಕೇಂದ್ರಕ್ಕೆ ಶಾಸಕ ಭರತ್ ಶೆಟ್ಟಿ ಮನವಿ

ಮಂಗಳೂರು : ಕುದುರೆಮುಖ ಕಬ್ಬಿಣದ ಅದಿರು ಕಂಪನಿಯನ್ನು ರಾಷ್ಟ್ರೀಯ ಖನಿಜ ಅಭಿವೃದ್ಧಿ ನಿಗಮ (ಎನ್‌ಎಂಡಿಸಿ) ಜೊತೆ ವಿಲೀನಗೊಳಿಸಬೇಕು ಹಾಗೂ ಕುದುರೆಮುಖ ಸಂಸ್ಥೆಯ ಕಾರ್ಮಿಕರ ಬಹುದಿನಗಳ ಬೇಡಿಕೆಗಳನ್ನು ಪರಿಗಣಿಸಿ ಈಡೇರಿಸಲು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಡಾ. ಭರತ್ ಶೆಟ್ಟಿ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಮನವಿ ಸಲ್ಲಿಸಿದರು. ಬೆಂಗಳೂರಿನಲ್ಲಿ ಸಚಿವರನ್ನು ಭೇಟಿ ಮಾಡಿದ ಅವರು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚಿನ ಉದ್ಯೋಗ ಅವಕಾಶಗಳನ್ನು ಸೃಷ್ಟಿಸುವ ನಿಟ್ಟಿನಲ್ಲಿ ಬಂಡವಾಳ ಹೂಡಿಕೆ…

Read More

ಕದ್ರಿಗುಡ್ಡೆಯಲ್ಲಿ ₹30 ಲಕ್ಷ ರಸ್ತೆ ಅಭಿವೃದ್ಧಿಗೆ ಚಾಲನೆ

ಶಾಸಕ ವೇದವ್ಯಾಸ ಕಾಮತ್ ನೇತೃತ್ವದಲ್ಲಿ ಗುದ್ದಲಿ ಪೂಜೆ ಮಂಗಳೂರು ಮಹಾನಗರ ಪಾಲಿಕೆಯ 30ನೇ ಕೊಡಿಯಾಲ್‌ಬೈಲ್ ವಾರ್ಡಿನ ಕದ್ರಿಗುಡ್ಡೆ ಪ್ರದೇಶದಲ್ಲಿ ಲೋಕೋಪಯೋಗಿ ಇಲಾಖೆಯಿಂದ ₹30 ಲಕ್ಷ ಅನುದಾನದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲಾಯಿತು. ಶಾಸಕ ವೇದವ್ಯಾಸ ಕಾಮತ್ ಅವರ ನೇತೃತ್ವದಲ್ಲಿ ಗುದ್ದಲಿ ಪೂಜೆ ನೆರವೇರಿತು. ಬಳಿಕ ಮಾತನಾಡಿದ ಶಾಸಕರು, ರಸ್ತೆ ಅಭಿವೃದ್ಧಿಯ ಅಗತ್ಯತೆ ಕುರಿತು ಸ್ಥಳೀಯ ನಿಕಟ ಪೂರ್ವ ಪಾಲಿಕೆ ಸದಸ್ಯರು ಹಾಗೂ ಮಾಜಿ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಅವರು ನಿರಂತರವಾಗಿ ಪ್ರಯತ್ನಿಸಿದ್ದರು. ಇದೀಗ ಅಗತ್ಯ…

Read More

ಮಂಗಳೂರು ವಿಶ್ವವಿದ್ಯಾನಿಲಯ ಘಟಕ ಕಾಲೇಜಿನಲ್ಲಿ ಇಂಗ್ಲಿಷ್ ಐಚ್ಛಿಕ ಕೋರ್ಸ್‌ಗೆ ಪ್ರವೇಶ ಪ್ರಕ್ರಿಯೆ ಆರಂಭ .

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯ ವ್ಯಾಪ್ತಿಯ ಯೂನಿವರ್ಸಿಟಿ ಕಾಲೇಜು ಮಂಗಳೂರು ನಲ್ಲಿ 2026-27ನೇ ಶೈಕ್ಷಣಿಕ ಸಾಲಿನ ಬಿಎ ಇಂಗ್ಲಿಷ್ ಐಚ್ಛಿಕ (English Optional) ಕೋರ್ಸ್‌ಗೆ ಪ್ರವೇಶ ಪ್ರಕ್ರಿಯೆ ಆರಂಭಗೊಂಡಿದೆ. ಎನ್‌ಎಎಸಿ ‘ಎ’ ಗ್ರೇಡ್ ಮಾನ್ಯತೆ ಹಾಗೂ “College with Potential for Excellence” ಗೌರವ ಪಡೆದಿರುವ ಕಾಲೇಜು, ವಿದ್ಯಾರ್ಥಿಗಳಿಗೆ ಭಾಷೆ, ಸಾಹಿತ್ಯ ಹಾಗೂ ಸಂವಹನ ಕೌಶಲ್ಯಗಳನ್ನು ಬೆಳೆಸುವ ಗುಣಮಟ್ಟದ ಶಿಕ್ಷಣ ನೀಡುತ್ತಿದೆ. ಕಾಲೇಜಿನಲ್ಲಿ ಬಿಎ ವಿಭಾಗದಲ್ಲಿ ಇಂಗ್ಲಿಷ್ ಐಚ್ಛಿಕ ಕೋರ್ಸ್‌ನಡಿ ವಿವಿಧ ಸಂಯೋಜನೆಗಳು ಲಭ್ಯವಿದ್ದು, ಇಂಗ್ಲಿಷ್-ಅರ್ಥಶಾಸ್ತ್ರ-ಇತಿಹಾಸ (EEH), ಇಂಗ್ಲಿಷ್-ಇತಿಹಾಸ-ಸಮಾಜಶಾಸ್ತ್ರ…

Read More

ಎಸ್ ಡಿ ಪಿ ಐ ಪುತ್ತೂರು ನಗರ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ ; ಅಧ್ಯಕ್ಷರಾಗಿ ತಾಜುದ್ದೀನ್ ಸಾಲ್ಮರ, ಕಾರ್ಯದರ್ಶಿಯಾಗಿ ಇಫಾಝ್ ಬನ್ನೂರು

ಪುತ್ತೂರು : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪುತ್ತೂರು ನಗರ ಸಮಿತಿಯು ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ನಡೆಯಿತು. ಸಮಿತಿಯ ಅಧ್ಯಕ್ಷರಾಗಿ ತಾಜುದ್ದೀನ್ ಸಾಲ್ಮರ, ಉಪಾಧ್ಯಕ್ಷರಾಗಿ ಶಮೀರ್ ನಾಜೂಕು, ಕಾರ್ಯದರ್ಶಿಯಾಗಿ ಇಫಾಝ್ ಬನ್ನೂರು, ಜೊತೆ ಕಾರ್ಯದರ್ಶಿಯಾಗಿ ಫವಾಝ್ ಬನ್ನೂರು, ಕೋಶಾಧಿಕಾರಿಯಾಗಿ ಸಮೀರ್ ಡಿ.ಕೆ ಹಾಗೂ ಸಮಿತಿ ಸದಸ್ಯರಾಗಿ ರಿಯಾಝ್ ಭೂಮಿ, ಅಶ್ರಫ್ ಗೋಳಿಕಟ್ಟೆ, ರಫೀಕ್ ಬಲ್ನಾಡ್ ಹಾಗೂ ಅಲಿ ಸಾಲ್ಮರ ಆಯ್ಕೆಯಾದರು. ಎಸ್ ಡಿ ಪಿ ಐ ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದಾತ್ ಬಜತ್ತೂರುರವರು…

Read More

ಮೇ 31ರಂದು ನೀರ್ಚಾಲಿನಲ್ಲಿ ಕನ್ನಡ ಸಾಹಿತ್ಯ-ಸಂಸ್ಕೃತಿ ಸಮ್ಮೇಳನ

ನೀರ್ಚಾಲು: ಕನ್ನಡದ ಹಿರಿಯ ಸಾಹಿತಿ ಡಾ. ರಮಾನಂದ ಬನಾರಿ ಅವರ 85ನೇ ಅಭಿನಂದನಾ ಪೂರ್ವಕವಾಗಿ ‘ಮಂಜೇಶ್ವರದ ಮುತ್ತು’ ಸಾಕ್ಷ್ಯಚಿತ್ರ ಬಿಡುಗಡೆ, ಕುಟ್ಟಿಯಾನ ಮುಹಮ್ಮದ್ ಅವರ ‘ಕನಸುಗಳ ಭೂಮಿಗೆ ಯಾತ್ರೆ’ ಕೃತಿ ಬಿಡುಗಡೆ ಹಾಗೂ ‘ಕನ್ನಡಿಯಲ್ಲಿ ಕನ್ನಡಿಗ’ ಕೃತಿ ಸರಣಿಯ 7ನೇ ಸಂಚಿಕೆಯ ಬಿಡುಗಡೆ ಕಾರ್ಯಕ್ರಮ ಮೇ 31ರಂದು ನೀರ್ಚಾಲು ಮಹಾಜನ ವಿದ್ಯಾಸಂಸ್ಥೆಯ ಸಭಾಭವನದಲ್ಲಿ ನಡೆಯಲಿದೆ. ಕಾಸರಗೋಡು ಜಿಲ್ಲಾ ಕನ್ನಡ ಲೇಖಕರ ಸಂಘದ ಆಶ್ರಯದಲ್ಲಿ ಆಯೋಜಿಸಲಾದ ಕನ್ನಡ ಸಾಹಿತ್ಯ-ಸಂಸ್ಕೃತಿ ಸಮ್ಮೇಳನದಲ್ಲಿ ಸಾಹಿತ್ಯ, ಸಂಸ್ಕೃತಿ ಹಾಗೂ ಗಡಿನಾಡಿನ ಕನ್ನಡ ಚಟುವಟಿಕೆಗಳಿಗೆ…

Read More

ಭೋವಿ ಸಮಾಜದ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹ; ಉಡುಪಿ ಜಿಲ್ಲೆಗೆ ನಿಗಮ ಅಧ್ಯಕ್ಷ ಎಂ. ರಾಮಪ್ಪ ಭೇಟಿ

ಉಡುಪಿ ಜಿಲ್ಲೆಗೆ ಭೋವಿ ಸಮಾಜದ ಮಾನವೀಯ ಮೇರೆಗೆ ಜಿಲ್ಲೆಗೆ ಪ್ರಪ್ರಥಮವಾಗಿ ಆಗಮಿಸುತ್ತಿರುವ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಎಂ. ರಾಮಪ್ಪ ಅವರ ಪ್ರವಾಸದ ವಿವರವನ್ನು ಭೋವಿ ಸಮಾಜದ ಯುವ ಮುಖಂಡ ಪವನ್ ಕುಮಾರ್ ಶಿರ್ವ ನೀಡಿದರು.. ಈ ಸಂಧರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತಾನಾಡಿದ ಪವನ್ ಕುಮಾರ್ ಅವರು ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜಾತಿ ಪ್ರಮಾಣ ಪತ್ರದ ಬಗ್ಗೆ ಅಧ್ಯಕ್ಷರೊಂದಿಗೆ ಜಿಲ್ಲಾಧಿಕಾರಿ ಭೇಟಿ ಮಾಡಿ ಈ ಸಮಸ್ಯೆಯ ಬಗ್ಗೆ ಮನವಿ ಮಾಡುತ್ತೇವೆ.. ಒಂದು ವೇಳೆ ಜಿಲ್ಲೆಯಲ್ಲಿ…

Read More

NEET ಪ್ರಶ್ನೆಪತ್ರಿಕೆ ಸೋರಿಕೆ, ಇಂಧನ ದರ ಏರಿಕೆ ವಿರೋಧಿಸಿ ಬಂಟ್ವಾಳದಲ್ಲಿ ಕಾಂಗ್ರೆಸ್ ಪ್ರತಿಭಟನೆ

ಬಂಟ್ವಾಳ:ಬಂಟ್ವಾಳ ಮತ್ತು ಪಾಣೆಮಂಗಳೂರು ಬ್ಲಾಕ್ ,ಯುವ ಕಾಂಗ್ರೆಸ್ ,ಮಹಿಳಾ ಕಾಂಗ್ರೆಸ್ ಹಾಗೂ ಎನ್.ಎಸ್.ಯು.ಐ.ಇವರ ವತಿಯಿಂದ NEET. ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಪೆಟ್ರೋಲ್ ಡಿಸೇಲ್ ಬೆಲೆ ಏರಿಕೆ ವಿರುದ್ದ ಬೃಹತ್ ಪ್ರತಿಭಟನೆ ಬಿಸಿರೋಡಿನ ಪ್ಲೈ ಓವರ್ ಕೆಳಭಾಗದಲ್ಲಿ ನಡೆಯಿತು.ಪ್ರತಿಭಟನೆಯನ್ನುದ್ದೇಶಿಸಿ ಮಾಜಿ ಸಚಿವ ಬಿ.ರಮಾನಾಥ ರೈ ಅವರು ಮಾತನಾಡಿ, ಯು‌ಪಿ‌ಎ ಸರಕಾರ ಇರುವಾಗ ಹಾಗೂ ಬಿಜೆಪಿ ಎನ್‌‌ಡಿಎ ಸರಕಾರದ ಅವಧಿಯಲ್ಲಿನ ಕಚ್ಚಾತೈಲದ ಬೆಲೆಯ ಬಗ್ಗೆ ಸಾರ್ವಜನಿಕರು ಅವಲೋಕನ ಮಾಡಬೇಕಾಗಿದೆ ಎಂದು ಹೇಳಿದರು.ಅ ಸಂದರ್ಭದಲ್ಲಿ ಕಚ್ಚಾ ತೈಲದ ಬೆಲೆ ಹೆಚ್ಚಳವಾಗಿದ್ದರೂ…

Read More
error: Content is protected !!