ಎಡನೀರು ಶಾಲೆಯಲ್ಲಿ ಕನ್ನಡ ಸಾಹಿತ್ಯ ಅಭಿಯಾನ ಆ.2ರಂದು
ಕಾಸರಗೋಡು : ಕಾಸರಗೋಡು ನುಳ್ಳಿಪ್ಪಾಡಿಯ ಸೀತಮ್ಮ ಪುರುಷ ನಾಯಕ ಕನ್ನಡ ಭವನ ಮತ್ತು ಗ್ರಂಥಾಲಯದ ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಕಾಸರಗೋಡು ಜಿಲ್ಲಾ ಘಟಕದ ಆಶ್ರಯದಲ್ಲಿ ವಿದ್ಯಾರ್ಥಿಗಳಿಗಾಗಿ ನಡೆಯುವ ಏಕದಿನ ಕನ್ನಡ ಸಾಹಿತ್ಯ ಅಭಿಯಾನವಾದ, ‘ಕನ್ನಡದ ನಡಿಗೆ ಶಾಲೆಯ ಕಡೆಗೆ” ಶೈಕ್ಷಣಿಕ ಶಿಬಿರದ 4ನೇ ಕಾರ್ಯಕ್ರಮವು 2025 ಆಗಸ್ಟ್ 2ರಂದು ಬೆಳಗ್ಗೆ 10ರಿಂದ ಎಡನೀರಿನ ಸ್ವಾಮೀಜೀಸ್ ಪ್ರೌಢಶಾಲೆಯಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಎಡನೀರು ಶ್ರೀಮಠದ ವ್ಯವಸ್ಥಾಪಕ ರಾಜೇಂದ್ರ ಕಲ್ಲೂರಾಯರು ಉದ್ಘಾಟಿಸುವರು. ದಕ್ಷಿಣ ಕನ್ನಡ ಜಿಲ್ಲಾ ಮಕ್ಕಳ…
