ಧರ್ಮಸ್ಥಳ ಪ್ರಕರಣ – ಉತ್ಖನನ ಆರಂಭ, ಕಾಣ ಸಿಗುತ್ತಿಲ್ಲ ಕಳೇಬರ ಅವಶೇಷ
ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ವಿವಿಧೆಡೆ ನೂರಾರು ಮೃತದೇಹಗಳನ್ನು ಹೂತು ಹಾಕಿರುವುದಾಗಿ ಅನಾಮಿಕ ವ್ಯಕ್ತಿಯೊಬ್ಬ ದೂರು ನೀಡಿದ ಪ್ರಕರಣಕ್ಕೆ ಸಂಬಂಧಿಸಿ ವಿಶೇಷ ತನಿಖಾ ದಳ (ಎಸ್ಐಟಿ) ತನಿಖೆ ಮುಂದುವರಿಸಿದ್ದು, ದೂರುದಾರ ಗುರುತಿಸಿರುವ ಸ್ಥಳಗಳನ್ನು ಅಗೆಯುವ ಪ್ರಕ್ರಿಯೆ ಪೊಲೀಸ್ ಬಿಗು ಭದ್ರತೆಯೊಂದಿಗೆ ಇಂದು ಆರಂಭಗೊಂಡಿದೆ. ಈ ಪ್ರಕರಣದ ದೂರುದಾರ ವ್ಯಕ್ತಿಯೂ ಮುಸುಕು ಧರಿಸಿ ಸ್ಥಳದಲ್ಲಿದ್ದನು. ೧೩ ಮಂದಿ ಕಾರ್ಮಿಕರು ಅಗೆಯುವ ಕೆಲಸದಲ್ಲಿ ತೊಡಗಿದ್ದಾರೆ.ಧರ್ಮಸ್ಥಳದ ಸ್ನಾನ ಘಟ್ಟದ ಸಮೀಪದ ನೇತ್ರಾವತಿ ನದಿ ಪಕ್ಕದ ಕಾಡಿನಲ್ಲಿ ಶವಗಳನ್ನು ಹೂತಿಡಲಾಗಿದೆ ಎನ್ನಲಾದ ಜಾಗವನ್ನು ಕಾರ್ಮಿಕರು…
