ಕಾವ್ಯದ ಮಾತು ಧ್ವನಿಯಾಗಬೇಕು- ಡಾ ಪುರುಷೋತ್ತಮ ಬಿಳಿಮಲೆ
ಭಾವನೆಗಳಿಗೆ ಅನುಗುಣವಾಗಿ ಭಾಷೆಯನ್ನು ಹೊಸತುಗೊಳಿಸಿ. ಕಾಲದ ಓಗಕ್ಕೆ ಅನುಗುಣವಾಗಿ ಬರವಣಿಗೆಗಳು ಬದಲಾಗಬೇಕು. ಕವನಗಳು ಓದುವಾಗ ಪ್ರಶ್ನೆಗಳು ಮೂಡಬೇಕು.ಕಾವ್ಯದ ಮಾತು ಧ್ವನಿ ಯಾಗಬೇಕು. ಪ್ರತಿಯೊಬ್ಬರೂ ತಮ್ಮದೇ ಆದ ಭಾಷೆಯನ್ನು ಅನುಸರಿಸಿದಾಗ ಆಶಯಗಳು ಪ್ರತಿಧ್ವನಿಸಲು ಸಾಧ್ಯವಾಗುತ್ತದೆ ಎಂದು ಬೆಂಗಳೂರು ರಂಗಮಂಡಲ ಹಾಗೂ ರಾಷ್ಟ್ರ ಕವಿ ಮಂಜೇಶ್ವರ ಗೋವಿಂದ ಪೈಗಳ ಸ್ಮಾರಕ ಗಿಳಿವಿಂಡು ಸಮಿತಿ ಆಶ್ರಯದಲ್ಲಿ ನಡೆದ ಕಾವ್ಯ ಸಂಸ್ಕೃತಿ ಯಾನ ಜನರೆಡೆಗೆ ಕಾವ್ಯ ಹನ್ನೊಂದನೆಯ ಕವಿಗೋಷ್ಠಿಯ ಉದ್ಘಾಟನಾ ಸಮಾರಂಭದ ಸರ್ವಾಧ್ಯಕ್ಷತೆಯನ್ನು ವಹಿಸಿದ ಕರ್ನಾಟಕ ಸರಕಾರದ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ…
