ಕೋಟಿಮುರ-ಸರಿಪಳ್ಳ ರಸ್ತೆ ಅಭಿವೃದ್ಧಿಗೆ ಗುದ್ದಲಿ ಪೂಜೆ: 1.80 ಕೋಟಿ ಅನುದಾನ

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 36ನೇ ಪದವು ಪೂರ್ವ ವಾರ್ಡಿನ ಕೋಟಿಮುರ – ಸರಿಪಳ್ಳ ಸಂಪರ್ಕಿಸುವ ಮುಖ್ಯ ರಸ್ತೆಯು 1.80 ಕೋಟಿ ರೂ. ವಿಶೇಷ ಅನುದಾನದಲ್ಲಿ ಅಭಿವೃದ್ಧಿಗೊಳ್ಳಲಿದ್ದು ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ಗುದ್ದಲಿ ಪೂಜೆಯು ನಡೆಯಿತು. ನಂತರ ಮಾತನಾಡಿದ ಶಾಸಕರು, ಸುಮಾರು 900 ಮೀಟರ್ ಉದ್ದದ ಈ ರಸ್ತೆಯ ಅಭಿವೃದ್ಧಿ ಕಾಮಗಾರಿಯನ್ನು ಮಹಾತ್ಮಾ ಗಾಂಧಿ ನಗರ ವಿಕಾಸ ಯೋಜನೆ-2 ನೇ ಹಂತದಲ್ಲಿ ಕೈಗೆತ್ತಿಕೊಳ್ಳಲಾಗಿದೆ. ಈ ಕಾಮಗಾರಿಯ ಅಗತ್ಯತೆಯ ಕುರಿತು ಸ್ಥಳೀಯ ಬಿಜೆಪಿ ಪ್ರಮುಖರು, ಕಾರ್ಯಕರ್ತರು,…

Read More

ಹಿರಿಯ ನಾಯಕ ಬಿ. ಜನಾರ್ದನ ಪೂಜಾರಿಯಿಂದ ಕ್ಯಾ. ಬ್ರಿಜೇಶ್ ಚೌಟ ಅವರಿಗೆ ಆಶೀರ್ವಾದ

ಬಂಟ್ವಾಳ: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಕೇಂದ್ರದ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ಅವರನ್ನು ಭೇಟಿ ಮಾಡಿ ಅವರ ಆರೋಗ್ಯ ವಿಚಾರಿಸಿದರು. ಈ ಸಂದರ್ಭದಲ್ಲಿ ಬಿ. ಜನಾರ್ದನ ಪೂಜಾರಿ ಅವರು ಸಂಸದನಾಗಿ ಕಾರ್ಯನಿರ್ವಹಣೆ ಕುರಿತು ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರೊಂದಿಗೆ ಚರ್ಚೆ ನಡೆಸಿ, ಉತ್ತಮವಾಗಿ ಸಾರ್ವಜನಿಕ ಸೇವೆಯಲ್ಲಿ ತೊಡಗಿಕೊಳ್ಳುವಂತೆ ಶುಭಹಾರೈಸಿದರು. ಈ ಶಿಷ್ಟಾಚಾರ ಭೇಟಿಯ ವೇಳೆ ಕಿಯೋನಿಕ್ಸ್ ಮಾಜಿ ಅಧ್ಯಕ್ಷ ಕೆ. ಹರಿಕೃಷ್ಣ ಬಂಟ್ವಾಳ್ ಕೂಡ ಉಪಸ್ಥಿತರಿದ್ದರು.

Read More

ಜೂಜು ರಹಿತ ಕೋಳಿ ಅಂಕಕ್ಕೆ ಅವಕಾಶ ನೀಡಿ: ಸರ್ಕಾರಕ್ಕೆ ವೇದಿಕೆ ಒತ್ತಾಯ

ಬಂಟ್ವಾಳ: ದ.ಕ.ಜಿಲ್ಲೆಯಲ್ಲಿ ಸಾಂಪ್ರದಾಯಿಕ ಜೂಜು ರಹಿತ ಕೋಳಿ ಅಂಕಗಳಿಗೆ ಅವಕಾಶ ನೀಡುವಂತೆ ಜಿಲ್ಲೆಯ ಶಾಸಕರ ಜೊತೆ ಬೆಂಗಳೂರು ವಿಧಾನ ಸೌಧಕ್ಕೆ ತೆರಳಿ ರಾಜ್ಯ ಸರಕಾರಕ್ಕೆ ಒತ್ತಡವನ್ನು ಹಾಕಿದ್ದೇವೆ ಎಂದು ಸಾಂಪ್ರದಾಯಿಕ ಆಚರಣಾ ಹಿತರಕ್ಷಣಾ ವೇದಿಕೆ ಗೌರವಾಧ್ಯಕ್ಷ ಶಿವಣ್ಣ ಗೌಡ ಕಡಬ ತಿಳಿಸಿದ್ದಾರೆ. ಅವರು ಬಿಸಿರೋಡಿನ ಪ್ರೆಸ್ ಕ್ಲಬ್ ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸಾಂಪ್ರದಾಯಿಕ ಕೋಳಿ ಅಂಕಗಳನ್ನು ನಡೆಸಲು ಅವಕಾಶ ನೀಡುವ ಸಲುವಾಗಿ ಜಿಲ್ಲೆಯ ರೈತರು ಸೇರಿಕೊಂಡು ಜಿಲ್ಲಾ ಮಟ್ಟದ ಸಾಂಪ್ರದಾಯಿಕ ಆಚರಣಾ ಹಿತರಕ್ಷಣಾ ವೇದಿಕೆಯನ್ನು ಮಾಡಿದ್ದೇವೆ,ಇದೀಗ…

Read More

ಇಂದ್ರಾಳಿಯಲ್ಲಿ ಬೃಹತ್ ಹೆಬ್ಬಾವಿನ ರಕ್ಷಣೆ: ಗಾಯಗೊಂಡ ಹಾವಿಗೆ ಚಿಕಿತ್ಸೆ

ಉಡುಪಿ: ನಗರದಲ್ಲಿನ ಇಂದ್ರಾಳಿ ರೈಲ್ವೆ ನಿಲ್ದಾಣದ ಸಮೀಪ ಬೃಹತ್ ಗಾತ್ರದ ಹೆಬ್ಬಾವೊಂದನ್ನು ಯಶಸ್ವಿಯಾಗಿ ರಕ್ಷಿಸಲಾಗಿದೆ. ಇಂದ್ರಾಳಿ ರೈಲ್ವೆ ನಿಲ್ದಾಣದ ಆಟೋ ಸ್ಟ್ಯಾಂಡ್ ಹತ್ತಿರ, ರೈಲ್ವೆ ಪ್ರಯಾಣಿಕರ ಸಂಚಾರ ಜೋರಾಗಿರುವ ಪ್ರದೇಶದಲ್ಲಿ ಹೆಬ್ಬಾವಿನ ಚಲನವಲನವನ್ನು ಗಮನಿಸಿದ ಆಟೋ ಚಾಲಕ ಪ್ರಶಾಂತ್ ಅವರು, ತಕ್ಷಣ ಸಮಾಜಸೇವಕ ನಿತ್ಯಾನಂದ ಒಳಕಾಡು ಅವರಿಗೆ ಮಾಹಿತಿ ನೀಡಿದ್ದಾರೆ. ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಒಳಕಾಡು ಅವರು, ಹಾವು ಹಿಡಿಯುವ ಪರಿಣಿತಿ ಹೊಂದಿರುವ ಆಟೋ ಚಾಲಕ ಬಶೀರ್ ಅವರನ್ನು ಕರೆಯಿಸಿಕೊಂಡು ರಕ್ಷಣಾ ಕಾರ್ಯಾಚರಣೆ ನಡೆಸಿದರು….

Read More

ಮಾ.25ರಂದು ವಿಧಾನಸೌಧದ ಮುಖ್ಯ ಪ್ರವೇಶ ದ್ವಾರ ರಾಜ್ಯ ಮುಖ್ಯಮಂತ್ರಿಗಳಿಂದ ಲೋಕಾರ್ಪಣೆ : ಸ್ಪೀಕ‌ರ್ ಯು.ಟಿ.ಖಾದರ್

ಮಂಗಳೂರು :ವಿಧಾನಸೌಧದ ಮುಖ್ಯ ದ್ವಾರವನ್ನು ರಾಜ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಮಾರ್ಚ್ 25 ರಂದು ಉದ್ಘಾಟಿಸಲಿದ್ದಾರೆ ಎಂದು ಕರ್ನಾಟಕ ವಿಧಾನಸಭೆಯ ಸ್ಪೀಕ‌ರ್ ಯು.ಟಿ.ಖಾದರ್ ತಿಳಿಸಿದ್ದಾರೆ ಅವರು ಮಂಗಳೂರಿನ ಜೆಪ್ಪಿನಮೊಗರು ಎಂ ಎಸ್ ಗಾರ್ಡನ್ ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿಯನ್ನು ನೀಡಿ , ಈ ಪ್ರವೇಶ ದ್ವಾರವು ಅತ್ಯಂತ ಸುಂದರವಾದ ಕಲಾಕೃತಿಯ ಕೆತ್ತನೆಗಳೊಂದಿಗೆ ಕರ್ನಾಟಕ ಶೈಲಿಯನ್ನು ಹೊಂದಿದ್ದು, ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮ ಮತ್ತು ಲೋಕೋಪಯೋಗಿ ಇಲಾಖೆ ಮೂಲಕ ಅಭಿವೃದ್ಧಿಪಡಿಸಲಾಗಿದೆ ಎಂದು ತಿಳಿಸಿದರು . ವಿಧಾನಸೌಧದ…

Read More

ಗೂನಡ್ಕ ಲಾಡ್ಜ್‌ನಲ್ಲಿ ಯುವಕನ ಆತ್ಮಹತ್ಯೆ

ಬಂಟ್ವಾಳ: ತಾಲೂಕಿನ ಕಲ್ಲಡ್ಕದಲ್ಲಿ ಅಲ್ಯೂಮಿನಿಯಂ ಫ್ಯಾಬ್ರಿಕೇಶನ್ ಉದ್ಯಮ ನಡೆಸುತ್ತಿದ್ದ ಯುವಕನೊಬ್ಬ ಸಂಪಾಜೆ ಸಮೀಪದ ಗೂನಡ್ಕದ ಲಾಡ್ಜ್‌ ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ನಡೆದಿದೆ. ಮೃತರನ್ನು ಪಾಣೆಮಂಗಳೂರು ಹೊರವಲಯದ ಬೊಂಡಾಲ ಶಾಂತಿಗುಡ್ಡೆ ನಿವಾಸಿ, ನಾರಾಯಣ ಕುಲಾಲ್ ಅವರ ಪುತ್ರ ತಿಲಕರಾಜ್ (28) ಎಂದು ಗುರುತಿಸಲಾಗಿದೆ. ತಿಲಕರಾಜ್ ಅವರು ಮಾರ್ಚ್ 19ರಂದು ಅನಂತಾಡಿ ಪ್ರದೇಶದ ಮನೆಯೊಂದರಲ್ಲಿ ಅಲ್ಯೂಮಿನಿಯಂ ಫ್ಯಾಬ್ರಿಕೇಶನ್ ಕೆಲಸಕ್ಕಾಗಿ ಅಗತ್ಯ ಸಾಮಗ್ರಿಗಳನ್ನು ಹಾಕಿ ಬಂದಿದ್ದರು. ಮಾರ್ಚ್ 20ರ ಸಂಜೆಯಿಂದ ಕುಟುಂಬದವರ ಸಂಪರ್ಕಕ್ಕೆ ಸಿಗದೆ ನಾಪತ್ತೆಯಾಗಿದ್ದರು. ಇವರು…

Read More

ಕಲ್ಲಡ್ಕ–ಬೋಳಂತೂರು ರಸ್ತೆಯಲ್ಲಿ ಕಸದ ರಾಶಿ: ಪಾದಚಾರಿಗಳಿಗೆ ಸಂಕಷ್ಟ

ಬಂಟ್ವಾಳ: ಪಟ್ಟಣ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಸ್ವಚ್ಛತೆಯ ಪ್ರಶ್ನೆ ಮತ್ತೆ ಮುಂದೇಳಿರುವ ನಡುವೆಯಲ್ಲಿ, ಕಲ್ಲಡ್ಕ–ಬೋಳಂತೂರು ರಸ್ತೆಯಲ್ಲಿ ಕಸದ ರಾಶಿ ಪಾದಚಾರಿಗಳಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ. ಗೋಳ್ತಮಜಲು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೋಳಂತೂರು ಭಾಗದಲ್ಲಿ ರಸ್ತೆ ಬದಿಯಲ್ಲಿ ರಾಶಿರಾಶಿ ಕಸ, ಕೊಳೆತ ತ್ಯಾಜ್ಯ, ಪ್ಲಾಸ್ಟಿಕ್ ಬಾಟಲಿಗಳು ಹಾಗೂ ವಿವಿಧ ಬಣ್ಣದ ಚೀಲಗಳು ತುಂಬಿಕೊಂಡಿರುವ ದೃಶ್ಯಗಳು ಕಂಡು ಬರುತ್ತಿವೆ. ಇದರ ಪರಿಣಾಮವಾಗಿ ಪಾದಚಾರಿಗಳು ಸುಗಮವಾಗಿ ಸಂಚರಿಸಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಸ್ಥಳೀಯರ ಪ್ರಕಾರ, ನಿಯಮಗಳನ್ನು ಮೀರಿ ರಸ್ತೆ ಬದಿಯಲ್ಲಿ ತ್ಯಾಜ್ಯವನ್ನು…

Read More

ನಾಮಪತ್ರ ಸಲ್ಲಿಕೆಗೆ ಮುನ್ನ ಪೂಜೆ ಸಲ್ಲಿಸಿದ ಕೆ. ಸುರೇಂದ್ರನ್

ಮಂಜೇಶ್ವರ: 2026ರ ಕೇರಳ ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ ರಾಜಕೀಯ ಚಟುವಟಿಕೆಗಳು ವೇಗ ಪಡೆದುಕೊಂಡಿರುವ ಸಂದರ್ಭದಲ್ಲಿ, ಬಿಜೆಪಿ ರಾಜ್ಯಾಧ್ಯಕ್ಷ ಕೆ. ಸುರೇಂದ್ರನ್ ಅವರು ನಾಮಪತ್ರ ಸಲ್ಲಿಸುವ ಮೊದಲು ಧಾರ್ಮಿಕ ಕ್ಷೇತ್ರಕ್ಕೆ ಭೇಟಿ ನೀಡುವ ಮೂಲಕ ಗಮನ ಸೆಳೆದಿದ್ದಾರೆ. ಬಿಜೆಪಿ ಅಭ್ಯರ್ಥಿಯಾಗಿರುವ ಕೆ. ಸುರೇಂದ್ರನ್ ಅವರು ಮಂಜೇಶ್ವರ ಕ್ಷೇತ್ರದಲ್ಲಿ ತಮ್ಮ ನಾಮಪತ್ರ ಸಲ್ಲಿಸುವ ಮುನ್ನ ಕುಂಜತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ದೇವಸ್ಥಾನದಲ್ಲಿ ಶ್ರೀ ದೇವರ ದರ್ಶನ ಪಡೆದು ಆಶೀರ್ವಾದ ಪಡೆದ ನಂತರ ಅವರು ಚುನಾವಣಾ…

Read More

ಗ್ಯಾಸ್ ಪಂಪ್‌ನಲ್ಲಿ ಸಿಬ್ಬಂದಿ ಮೇಲೆ ಹಲ್ಲೆ: ಆಟೋ ಚಾಲಕನ ವಿರುದ್ಧ ಪ್ರಕರಣ

ಬಂಟ್ವಾಳ: ಗ್ಯಾಸ್ ಪಂಪ್‌ನಲ್ಲಿ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಘಟನೆ ಮೆಲ್ಕಾರ್‌ನಲ್ಲಿ ನಡೆದಿದ್ದು, ಆರೋಪಿಯ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಅಫ್ರಿಧಿ ಕಾರಾಜೆ ಎಂಬಾತ ಆರೋಪಿಯಾಗಿದ್ದು, ಈತನ ವಿರುದ್ಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಾಣೆಮಂಗಳೂರು ಗ್ರಾಮದ ಮೆಲ್ಕಾರ್ ಸಮೀಪದ ಕಾರಾಜೆ ಪ್ರದೇಶದಲ್ಲಿರುವ ಗ್ಯಾಸ್ ಪಂಪ್‌ನಲ್ಲಿ ಮಾರ್ಚ್ 20ರಂದು ಸಂಜೆ ಈ ಘಟನೆ ನಡೆದಿದೆ. ಕೆಎ 19 ಎಸಿ 2102 ನೋಂದಣಿ ಸಂಖ್ಯೆಯ ಆಟೋ ರಿಕ್ಷಾವನ್ನು ಚಲಾಯಿಸಿಕೊಂಡು ಬಂದ ಆರೋಪಿಯು ಗ್ಯಾಸ್ ಪಂಪ್ ಆವರಣಕ್ಕೆ…

Read More

ಬಂದಿಯೋಡ್ ರಸ್ತೆ ಬದಿಯಲ್ಲಿ ಮೂಡಿದ ನಯನಮನೋಹರ ದೃಶ್ಯಕ್ಕೆ ಜನರ ಮೆಚ್ಚುಗೆ

ಬಂದಿಯೋಡ್: ನೀಲಿ ಆಕಾಶದ ಹಿನ್ನೆಲೆಯಲ್ಲೇ ಕೆಂಪು ಮತ್ತು ಹಳದಿ ಹೂಗಳಿಂದ ಕಂಗೊಳಿಸುವ ಮರಗಳ ಮನಮೋಹಕ ದೃಶ್ಯ ಇಲ್ಲಿ ಕಣ್ಮನ ಸೆಳೆಯುತ್ತದೆ. ಮೇಲ್ಭಾಗದಲ್ಲಿ ಕೆಂಪು ಹೂಗಳಿಂದ ಅರಳಿರುವ ‘ಕೃಷ್ಣಚೂಡ’ ಮರ ಮತ್ತು ಕೆಳಭಾಗದಲ್ಲಿ ಹಳದಿ ಹೂಗಳಿಂದ ಕಂಗೊಳಿಸುವ ‘ಕಣಿಕ್ಕೊನ್ನ’ ಮರ ಪರಸ್ಪರ ಆಲಿಂಗಿಸಿಕೊಂಡಂತೆ ಕಾಣಿಸುತ್ತವೆ. ಸಾಮಾನ್ಯವಾಗಿ ಈ ಮರಗಳು ಬೇಸಿಗೆ ಕಾಲದಲ್ಲಿ ಅರಳುತ್ತವೆ. ವಿಶೇಷವಾಗಿ ಏಪ್ರಿಲ್ ತಿಂಗಳಲ್ಲಿ ಕಣಿಕ್ಕೊನ್ನ ಹೂವು ಅರಳುವುದು ವಿಷು ಹಬ್ಬದ ಆಗಮನದ ಸಂಕೇತವಾಗಿದೆ. ಈ ನಯನಮನೋಹರ ದೃಶ್ಯವು ಬಂದಿಯೋಡ್ ಸಮೀಪದ ರಸ್ತೆ ಬದಿಯಲ್ಲಿ ಕಾಣಸಿಗುತ್ತದೆ….

Read More
error: Content is protected !!