ಪೈವಳಿಕೆ ಪೇಟೆಯಲ್ಲಿ ಬಿ.ಜೆ.ಪಿ ಅಭ್ಯರ್ಥಿ ಕೆ. ಸುರೇಂದ್ರನ್ ರೋಡ್ ಶೋ
ಮಂಜೇಶ್ವರ: ವಿಧಾನಸಭಾ ಕ್ಷೇತ್ರದ ಬಿ.ಜೆ.ಪಿ ಅಭ್ಯರ್ಥಿ ಕೆ. ಸುರೇಂದ್ರನ್ ಅವರ ಚುನಾವಣಾ ಪ್ರಚಾರದ ಅಂಗವಾಗಿ ಪೈವಳಿಕೆ ಪೇಟೆಯಲ್ಲಿ ಭರ್ಜರಿ ರೋಡ್ ಶೋ ಕಾರ್ಯಕ್ರಮ ನಡೆಯಿತು. ರೋಡ್ ಶೋ ವೇಳೆ ಕಾರ್ಯಕರ್ತರು ಹಾಗೂ ಬೆಂಬಲಿಗರು ದೊಡ್ಡ ಸಂಖ್ಯೆಯಲ್ಲಿ ಭಾಗವಹಿಸಿ ಅಭ್ಯರ್ಥಿಗೆ ಉತ್ಸಾಹಭರಿತ ಸ್ವಾಗತ ಕೋರಿದರು. ಘೋಷಣೆಗಳು, ಪಕ್ಷದ ಧ್ವಜಗಳು ಮತ್ತು ಸಂಗೀತದ ನಡುವೆ ರೋಡ್ ಶೋ ಜೋರಾಗಿ ಸಾಗಿತು. ಈ ವೇಳೆ ಮಾತನಾಡಿದ ಕೆ. ಸುರೇಂದ್ರನ್, ಕ್ಷೇತ್ರದ ಅಭಿವೃದ್ಧಿಗೆ ಬಿ.ಜೆ.ಪಿ ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವುದಾಗಿ ಭರವಸೆ ನೀಡಿದರು….