ಟಿಪ್ಪರ್ ಲಾರಿ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಉಡುಪಿ: ಟಿಪ್ಪರ್ ಲಾರಿಯೊಂದು ಬೈಕ್‌ಗೆ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ದುರ್ಘಟನೆ ಗುರುವಾರ ಕಾರ್ಕಳ ತಾಲೂಕಿನ ಪಳ್ಳಿ ಅಡಪಾಡಿ ಸಮೀಪ ನಡೆದಿದೆ. ಮೃತಪಟ್ಟ ಯುವಕನನ್ನು ಹಿರಿಯಡ್ಕ ಕುಜಂಬೈಲು ನಿವಾಸಿ ಗಣೇಶ್ ನಾಯಕ್ (27) ಎಂದು ಗುರುತಿಸಲಾಗಿದೆ. ಗಣೇಶ್ ನಾಯಕ್ ಅವರು ತಮ್ಮ ಬೈಕ್‌ನಲ್ಲಿ ಹಂಪನಕಟ್ಟೆ ಕಡೆಗೆ ತೆರಳುತ್ತಿದ್ದ ವೇಳೆ, ಆರೋಪಿಯು ಟಿಪ್ಪರ್ ಲಾರಿಯನ್ನು ಅತೀ ವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ಬೈಕ್‌ನ ಹಿಂಬದಿಗೆ ಡಿಕ್ಕಿ ಹೊಡೆದಿದ್ದಾನೆ. ಡಿಕ್ಕಿಯ ಪರಿಣಾಮ ಗಣೇಶ್…

Read More

ನೂರುದ್ದೀನ್ ಜುಮಾ ಮಸೀದಿಯಲ್ಲಿ ಸಂಭ್ರಮದ ಈದುಲ್ ಫಿತ್ರ್ ಆಚರಣೆ

ಬಂಟ್ವಾಳ: ಪಾಣೆಮಂಗಳೂರು ಸಮೀಪದ ಗುಡ್ಡೆಅಂಗಡಿ ಪ್ರದೇಶದಲ್ಲಿರುವ ನೂರುದ್ದೀನ್ ಜುಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಹಬ್ಬವನ್ನು ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು. ಹಬ್ಬದ ಅಂಗವಾಗಿ ಮಸೀದಿಯಲ್ಲಿ ಸಾಮೂಹಿಕ ಈದ್ ನಮಾಜ್ ಹಾಗೂ ಖುತ್ಬಾ ಪಾರಾಯಣ ಕಾರ್ಯಕ್ರಮಗಳು ನೆರವೇರಿದವು. ನೂರುದ್ದೀನ್ ಜುಮಾ ಮಸೀದಿಯ ಖತೀಬರಾದ ಆಸಿಫ್ ದಾರಿಮಿ ಅವರು ನಮಾಜ್ ಹಾಗೂ ಖುತ್ಬಾ ನೆರವೇರಿಸಿ, ಭಕ್ತರಿಗೆ ಶಾಂತಿ, ಸಹನೆ ಮತ್ತು ಸಹಬಾಳ್ವೆಯ ಸಂದೇಶವನ್ನು ನೀಡಿದರು. ಈ ಸಂದರ್ಭದಲ್ಲಿ ಮಾಜಿ ಬಂಟ್ವಾಳ ಪುರಸಭಾ ಸದಸ್ಯ ಅಬೂಬಕ್ಕರ್ ಸಿದ್ದೀಕ್ ಗುಡ್ಡೆಅಂಗಡಿ, ಮಸೀದಿ ಅಧ್ಯಕ್ಷ…

Read More

ಕೇರಳದಲ್ಲಿ ಹಕ್ಕಿಜ್ವರ ಆತಂಕ: ಅಲಪ್ಪುಳ–ಕೋಝೀಕ್ಕೋಡ್ ಜಿಲ್ಲೆಗಳಲ್ಲಿ ತುರ್ತು ಕ್ರಮಗಳು

ತಿರುವನಂತಪುರಂ: ಕೇರಳ ರಾಜ್ಯದಲ್ಲಿ ಹಕ್ಕಿಜ್ವರ (H5N1) ಪ್ರಕರಣಗಳು ಮತ್ತೆ ಕಾಣಿಸಿಕೊಂಡಿದ್ದು, ಅಲಪ್ಪುಳ ಹಾಗೂ ಕೋಝೀಕ್ಕೋಡ್ ಜಿಲ್ಲೆಗಳಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಅಲಪ್ಪುಳ ಜಿಲ್ಲೆಯ ಮುಹಮ್ಮ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಹಕ್ಕಿಜ್ವರ ದೃಢಪಟ್ಟ ಹಿನ್ನೆಲೆಯಲ್ಲಿ ತುರ್ತು ಕ್ರಮಗಳನ್ನು ಕೈಗೊಳ್ಳಲಾಗಿದೆ. ಸೋಂಕು ವ್ಯಾಪಿಸುವುದನ್ನು ತಡೆಯುವ ಉದ್ದೇಶದಿಂದ ಸುಮಾರು 6,000ಕ್ಕೂ ಹೆಚ್ಚು ಕೋಳಿಗಳನ್ನು ನಾಶಪಡಿಸಲು (ಕಲ್ಲಿಂಗ್) ಸರ್ಕಾರ ನಿರ್ಧರಿಸಿದೆ. ಇದೇ ವೇಳೆ, ಕೋಝೀಕ್ಕೋಡ್ ಜಿಲ್ಲೆಯ ಪಣಂಗಾಡ್, ಓಳವಣ್ಣ, ಕಕ್ಕೋಡಿ, ಪೆರುಮಣ್ಣ ಮತ್ತು ನಾಲ್ಲಾಳಂ ಸೇರಿದಂತೆ ಹಲವು ಪ್ರದೇಶಗಳಲ್ಲಿ ಕೂಡ ಹಕ್ಕಿಜ್ವರ ಪ್ರಕರಣಗಳು…

Read More

ಬಿಜೆಪಿ ಅಭ್ಯರ್ಥಿ ಕೆ. ಸುರೇಂದ್ರನ್ ಅವರ ಭರ್ಜರಿ ರೋಡ್ ಶೋ ಇಂದು

ಮಂಜೇಶ್ವರ: ಭಾರತೀಯ ಜನತಾ ಪಕ್ಷದ ಅಭ್ಯರ್ಥಿ K. Surendran (ಕೆ. ಸುರೇಂದ್ರನ್) ಅವರ ನೇತೃತ್ವದಲ್ಲಿ ಇಂದು ಸಂಜೆ ೪:೦೦ ಗಂಟೆಗೆ ಭರ್ಜರಿ ರೋಡ್ ಶೋ ಆಯೋಜಿಸಲಾಗಿದೆ. ಬಾಯಿಕಟ್ಟೆಯಿಂದ ಪ್ರಾರಂಭವಾಗುವ ಈ ಬೃಹತ್ ರೋಡ್ ಶೋ ಪೈವಳಿಕೆ ಪೇಟೆತನಕ ಸಾಗಲಿದ್ದು, ಮಾರ್ಗಮಧ್ಯೆ ವಿವಿಧ ಸ್ಥಳಗಳಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಪಕ್ಷದ ನಾಯಕರು ಮಾತುಕತೆ ನಡೆಸಿ ಮತಯಾಚನೆ ಮಾಡಲಿದ್ದಾರೆ. ಈ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ Captain Brijesh Chowta (ಕ್ಯಾಪ್ಟನ್ ಬ್ರಿಜೇಶ್ ಚೌಟ), ಉಡುಪಿ ಕ್ಷೇತ್ರದ ಸಂಸದ…

Read More

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಭ್ರಮದ ಈದುಲ್ ಫಿತ್ರ್ ಆಚರಣೆ

ಮಂಗಳೂರು: ಪವಿತ್ರ ರಮಝಾನ್ ತಿಂಗಳ ಒಂದು ತಿಂಗಳ ಉಪವಾಸವನ್ನು ಆಚರಿಸಿದ ಮುಸ್ಲಿಂ ಬಾಂಧವರು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಇಂದು ಮುಂಜಾನೆಯಿಂದಲೇ ಭಕ್ತಿ, ಶ್ರದ್ಧೆ ಮತ್ತು ಸಂಭ್ರಮದಿಂದ ಈದುಲ್ ಫಿತ್ರ್ ಹಬ್ಬವನ್ನು ಆಚರಿಸಿದರು. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಎಲ್ಲಾ ಜುಮಾ ಮಸೀದಿಗಳು ಮತ್ತು ಈದ್ಗಾಗಳಲ್ಲಿ ಸಾಮೂಹಿಕ ನಮಾಝ್, ಈದ್ ಖುತ್ಬಾ, ಧಾರ್ಮಿಕ ಪ್ರವಚನಗಳು, ಶುಭಾಶಯ ವಿನಿಮಯ ಕಾರ್ಯಕ್ರಮಗಳು ನಡೆಯಿತು. ಹಬ್ಬದ ಅಂಗವಾಗಿ ನೆರೆಮನೆ ಹಾಗೂ ಬಂಧು-ಬಳಗದ ಮನೆಗಳಿಗೆ ಭೇಟಿ ನೀಡಿ ಸೌಹಾರ್ದತೆಯನ್ನು ಬಲಪಡಿಸಲಾಯಿತು. ಜಿಲ್ಲೆಯ ಬಹುತೇಕ…

Read More

ಮಂಜೇಶ್ವರಾಧ್ಯಂತ ಸಂಭ್ರಮದ ಈದುಲ್ ಫಿತ್ರ್ ಆಚರಣೆ

ಮಂಜೇಶ್ವರ: ಪವಿತ್ರ ರಮಝಾನ್ ತಿಂಗಳ ಉಪವಾಸ ವ್ರತಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿದ ಮಂಜೇಶ್ವರದ ಮುಸ್ಲಿಂ ಬಾಂಧವರು ಇಂದು ಭಕ್ತಿಭಾವ ಹಾಗೂ ಸಂಭ್ರಮದಿಂದ ಈದುಲ್ ಫಿತ್ರ್ ಹಬ್ಬವನ್ನು ಆಚರಿಸಿದರು. ತಾಲೂಕಿನಾದ್ಯಂತ ಜುಮಾ ಮಸೀದಿಗಳು ಹಾಗೂ ಈದ್ಗಾ ಮೈದಾನಗಳಲ್ಲಿ ಸಾಮೂಹಿಕ ನಮಾಝ್, ಈದ್ ಖುತ್ಬಾ, ಧಾರ್ಮಿಕ ಪ್ರವಚನಗಳು ಮತ್ತು ಶುಭಾಶಯ ವಿನಿಮಯ ಕಾರ್ಯಕ್ರಮಗಳು ನಡೆದವು. ಹಬ್ಬದ ಅಂಗವಾಗಿ ನೆರೆಮನೆಯವರ ಹಾಗೂ ಬಂಧುಗಳ ಮನೆಗಳಿಗೆ ಭೇಟಿ ನೀಡಿ ಪರಸ್ಪರ ಸೌಹಾರ್ದತೆ ಪ್ರದರ್ಶಿಸಲಾಯಿತು. ಶುಕ್ರವಾರ ಮುಂಜಾನೆಯೇ ಹೊಸ ವಸ್ತ್ರ ಧರಿಸಿದ ಭಕ್ತಾದಿಗಳು ಉದ್ಯಾವರ ಜುಮಾ…

Read More

ತಲೆನೋವಿಗೆ ಔಷಧಿ ಸೇವಿಸಿ 10 ವರ್ಷದ ಬಾಲಕ ಸಾವು: ಕಡಬದಲ್ಲಿ ಪ್ರಕರಣ ದಾಖಲು

ಕಡಬ: ತಲೆನೋವಿನ ಹಿನ್ನೆಲೆಯಲ್ಲಿ ಮನೆಯಲ್ಲಿದ್ದ ಔಷಧಿ ಸೇವಿಸಿದ 10 ವರ್ಷದ ಬಾಲಕ ಮೃತಪಟ್ಟಿರುವ ದುರ್ಘಟನೆ ಕಡಬ ತಾಲೂಕಿನಲ್ಲಿ ವರದಿಯಾಗಿದೆ. ರಾಮಕುಂಜ ನಿವಾಸಿ ಸಂಜೀವ ಪೂಜಾರಿ (50) ಅವರ ದೂರಿನಂತೆ, ಅವರ 10 ವರ್ಷದ ಮಗನಿಗೆ ಪದೇಪದೇ ತಲೆನೋವು ಕಾಣಿಸಿಕೊಳ್ಳುತ್ತಿತ್ತು. ಮಾರ್ಚ್ 18, 2026 ರಂದು ಸಂಜೆ ತಲೆನೋವಿಗೆಂದು ಮನೆಯಲ್ಲಿದ್ದ ಔಷಧಿಯನ್ನು ಸೇವಿಸಿದ ಬಳಿಕ ಬಾಲಕ ಅಸ್ವಸ್ಥಗೊಂಡು ಮನೆಯಲ್ಲಿ ಹೊರಳಾಡುತ್ತಿರುವುದಾಗಿ ಪತ್ನಿ ತಿಳಿಸಿದ್ದಾಳೆ. ತಕ್ಷಣ ಮನೆಗೆ ಬಂದ ಸಂಜೀವ ಪೂಜಾರಿ ಅವರು ಮಗನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ…

Read More

ಬಂಟ್ವಾಳದಲ್ಲಿ ಕುಡಿಯುವ ನೀರಿನ ಸಂಕಷ್ಟ: ನೇರಂಬೋಳು ನಿವಾಸಿಗಳ ಸಂಕಟ

ಬಂಟ್ವಾಳ: ಪುರಸಭಾ ವ್ಯಾಪ್ತಿಯ ನೇರಂಬೋಳು ಪ್ರದೇಶದಲ್ಲಿ ತೀವ್ರ ಕುಡಿಯುವ ನೀರಿನ ಅಭಾವ ಉಂಟಾಗಿ, ಸ್ಥಳೀಯರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕಳೆದ ಮೂರು ತಿಂಗಳಿನಿಂದ ಸಮರ್ಪಕವಾಗಿ ನೀರು ಪೂರೈಕೆ ಆಗದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಪುರಸಭೆಯ ಗಮನ ಸೆಳೆಯಲು ಮುಂದಾಗಿದ್ದಾರೆ. ಈ ಪ್ರದೇಶದಲ್ಲಿ ಎರಡು ದಿನಕ್ಕೊಮ್ಮೆ ಕೇವಲ ಅರ್ಧ ಗಂಟೆ ಮಾತ್ರ ನೀರು ಸರಬರಾಜಾಗುತ್ತಿದ್ದು, ಅದೂ ಸಹ ಸಮರ್ಪಕ ಒತ್ತಡದಲ್ಲಿ ಬರದೆ ಸುಮಾರು 750 ಲೀಟರ್ ಮಾತ್ರ ಸಂಗ್ರಹವಾಗುತ್ತಿದೆ. ಈ ಪ್ರಮಾಣ ದಿನನಿತ್ಯದ ಅಗತ್ಯಗಳಿಗೆ ಸಾಲದೆ, ಮನೆಮಠದ ಕೆಲಸಗಳು ಕಷ್ಟಕರವಾಗಿವೆ. ಆರ್ಥಿಕವಾಗಿ…

Read More

ಬಾಲಕಿಗೆ ಲೈಂಗಿಕ ಕಿರುಕುಳ: ಬಂಟ್ವಾಳದ ಯುವಕನ ಬಂಧನ

ಮಂಜೇಶ್ವರ: 11 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಬಂಟ್ವಾಳ ಮೂಲದ ಯುವಕನನ್ನು ಮಂಜೇಶ್ವರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಬಂಟ್ವಾಳ ತಾಲೂಕಿನ ಸಜಿಪಮೂಡು ನಿವಾಸಿ ಅಬ್ದುಲ್ ರಹಿಮಾನ್ (26) ಎಂದು ಗುರುತಿಸಲಾಗಿದೆ. ಕಳೆದ ಭಾನುವಾರ ಮಂಜೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ಬಾಲಕಿಗೆ ಕಿರುಕುಳ ನೀಡಿದ್ದಾಗಿ ದೂರು ದಾಖಲಾಗಿತ್ತು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಆರೋಪಿಯ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದರು. ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಜೇಶ್ವರ ಸಿಐ ಜಿಜೀಶ್ ನೇತೃತ್ವದ ತಂಡ ತಲಪ್ಪಾಡಿ ಪ್ರದೇಶದಲ್ಲಿ…

Read More

ಯುಗಾದಿ ಹಬ್ಬಕ್ಕೆ ಕರಾವಳಿಗೆ ಶುಭಾಶಯ: ಶರವು ಮಹಾಗಣಪತಿ ದೇವಸ್ಥಾನದಲ್ಲಿ ಉತ್ಸವ ಆರಂಭ

ಮಂಗಳೂರು: ಕರಾವಳಿ ಭಾಗದ ಸಮಸ್ತರಿಗೆ ಯುಗಾದಿ ಹಬ್ಬದ ಹಾರ್ದಿಕ ಶುಭಾಶಯಗಳನ್ನು ತಿಳಿಸಿರುವ ಶರವು ಮಹಾಗಣಪತಿ ದೇವಾಲಯ ಹಾಗೂ ಆಡಳಿತ ಮಂಡಳಿಯ ಪರವಾಗಿ ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ ಅವರು ಹೊಸ ಸಂವತ್ಸರವನ್ನು ಆತ್ಮೀಯವಾಗಿ ಸ್ವಾಗತಿಸಿದರು. ಶರವು ಮಹಾಗಣಪತಿ ದೇವಾಲಯದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸೂರ್ಯೋದಯ–ಸೂರ್ಯಾಸ್ತಗಳ ನಡುವೆ ಕಾಲಚಕ್ರ ನಿರಂತರವಾಗಿ ಮುಂದುವರಿಯುತ್ತಿದ್ದು, ವರ್ಷಗಳ ಬದಲಾವಣೆಯೊಂದಿಗೆ ಋತುಗಳ ಪರಿವರ್ತನೆ ಸಹ ಸಹಜವಾಗಿವೆ ಎಂದು ಹೇಳಿದರು. ಭಾರತೀಯ ಸನಾತನ ಸಂಸ್ಕೃತಿಯಲ್ಲಿ ಸಂವತ್ಸರ ಬದಲಾವಣೆಗೆ ವಿಶೇಷ ಮಹತ್ವವಿದ್ದು, ಯುಗಾದಿ…

Read More
error: Content is protected !!