ಟಿಪ್ಪರ್ ಲಾರಿ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು
ಉಡುಪಿ: ಟಿಪ್ಪರ್ ಲಾರಿಯೊಂದು ಬೈಕ್ಗೆ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ದುರ್ಘಟನೆ ಗುರುವಾರ ಕಾರ್ಕಳ ತಾಲೂಕಿನ ಪಳ್ಳಿ ಅಡಪಾಡಿ ಸಮೀಪ ನಡೆದಿದೆ. ಮೃತಪಟ್ಟ ಯುವಕನನ್ನು ಹಿರಿಯಡ್ಕ ಕುಜಂಬೈಲು ನಿವಾಸಿ ಗಣೇಶ್ ನಾಯಕ್ (27) ಎಂದು ಗುರುತಿಸಲಾಗಿದೆ. ಗಣೇಶ್ ನಾಯಕ್ ಅವರು ತಮ್ಮ ಬೈಕ್ನಲ್ಲಿ ಹಂಪನಕಟ್ಟೆ ಕಡೆಗೆ ತೆರಳುತ್ತಿದ್ದ ವೇಳೆ, ಆರೋಪಿಯು ಟಿಪ್ಪರ್ ಲಾರಿಯನ್ನು ಅತೀ ವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ಬೈಕ್ನ ಹಿಂಬದಿಗೆ ಡಿಕ್ಕಿ ಹೊಡೆದಿದ್ದಾನೆ. ಡಿಕ್ಕಿಯ ಪರಿಣಾಮ ಗಣೇಶ್…