ಕಾಂಗ್ರೆಸ್ ನ ಮೂರು ರಾಜ್ಯಸಭಾ ಸ್ಥಾನಗಳಲ್ಲಿ ಒಂದು ಸ್ಥಾನ ಕ್ರಿಶ್ಚಿಯನ್ ಅಲ್ಪಸಂಖ್ಯಾತರಿಗೆ ಮೀಸಲು ಸಂಭವ. ನವೀನ್ ಡಿಸೋಜ ಹೆಸರು ಮುಂಚೂಣಿಯಲ್ಲಿ

ಬೆಂಗಳೂರು: ಕಾಂಗ್ರೆಸ್ ನ ಮೂರು ರಾಜ್ಯಸಭಾ ಸ್ಥಾನಗಳು ಮುಂದಿನ ತಿಂಗಳು ತೆರವಾಗಲಿದೆ. ಈ ಪೈಕಿ ಒಂದು ಸ್ಥಾನ ಮತ್ತೊಮ್ಮೆ ಕಾಂಗ್ರೆಸ್ನ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮತ್ತೊಮ್ಮೆ ಸಿಗಲಿದೆ ಎಂಬುದು ಗ್ಯಾರಂಟಿಯಾಗಿದೆ. ಒಂದು ಸ್ಥಾನ ಕ್ರಿಶ್ಚಿಯನ್ ಅಲ್ಪಸಂಖ್ಯಾತರಿಗೆ ಈ ಬಾರಿ ಮೀಸಲಿರಿಸುವ ಸಂಭವ ಹೆಚ್ಚಿದೆ ಎಂದು ಕಾಂಗ್ರೆಸ್ ಉನ್ನತ ಮೂಲಗಳಿಂದ ತಿಳಿದು ಬಂದಿದೆ. ಕಳೆದ ಬಾರಿ ಮುಸ್ಲಿಂ ಅಲ್ಪಸಂಖ್ಯಾತರಿಗೆ ಒಂದು ರಾಜ್ಯಸಭಾ ಸದಸ್ಯ ಸ್ಥಾನ ಒಲಿದು ಬಂದಿತ್ತು. ಈ ಬಾರಿ ಕ್ರಿಶ್ಚಿಯನ್ ಅಲ್ಪಸಂಖ್ಯಾತರಿಗೆ ಒಲಿದು ಬರಲಿದೆ ಎಂದು…

Read More

ಜಿಪ್ಪು ಕಡೆಕಾರಿನಲ್ಲಿ ನಾಲ್ಕು ಅತ್ಯಾಧುನಿಕ ಸಭಾಭವನಗಳಿಗೆ ಚಾಲನೆ

ಮಂಗಳೂರು, ಮೇ 22: ಮಂಗಳೂರು ಮಹಾನಗರದ ಜಿಪ್ಪು ಕಡೆಕಾರು ಪ್ರದೇಶದಲ್ಲಿರುವ ನೇತ್ರಾವತಿ ನದಿಯ ಕಿನಾರೆಯ ಇತಿಹಾಸ ಪ್ರಸಿದ್ಧ ಶ್ರೀ ಮಲ್ಲಿಕಾರ್ಜುನ ದೇವರ ಸನ್ನಿಧಾನದಲ್ಲಿ ಹಾಗೂ ಪರಮಪೂಜ್ಯ ಶ್ರೀ ಶ್ರೀ ನರೇಂದ್ರನಾಥ ಯೋಗೇಶ್ವರೇಶ್ವರ ಮಹಾಸ್ವಾಮಿಗಳ ಆಶೀರ್ವಾದದೊಂದಿಗೆ ಮಾಜಿ ಸಚಿವ ಕೃಷ್ಣ ಜೆ. ಪಾಲೇಮಾರ್ ಅವರ ನೇತೃತ್ವದಲ್ಲಿ ನಿರ್ಮಾಣಗೊಂಡ ನಾಲ್ಕು ಅತ್ಯಾಧುನಿಕ ಸಭಾಭವನಗಳ ಲೋಕಾರ್ಪಣೆಯ ಚಾಲನಾ ಕಾರ್ಯಕ್ರಮ ಶುಕ್ರವಾರ ಗುರುವನ ಶ್ರೀ ದುರ್ಗಾ ಕ್ಷೇತ್ರದಲ್ಲಿ ಜರುಗಿತು. ನೇತ್ರಾವತಿ ಸಭಾಭವನ, ಪಾಲೇಮಾರ್ ಫಾರ್ಮ್ಸ್, ಪಾಲೇಮಾರ್ ಕನ್ವೆನ್ಷನ್ ಸೆಂಟರ್ ಹಾಗೂ ಪಾಲೇಮಾರ್ ಗಾರ್ಡನ್…

Read More

ಪಂಜರಕೋಡಿಯಲ್ಲಿ ಅಕ್ರಮ ಗೋಸಾಗಾಟ ಪತ್ತೆ: ಚಾಲಕ ವಶ, ಪೊಲೀಸರ ಮೇಲೆ ಕಾರು ಹತ್ತಿಸಲು ಯತ್ನ

ವಿಟ್ಲ: ಪಿಕಪ್ ವಾಹನದಲ್ಲಿ ಅಕ್ರಮವಾಗಿ ಗೋಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ವಿಟ್ಲ ಪೊಲೀಸರು ಪತ್ತೆಹಚ್ಚಿ ವಾಹನ ಚಾಲಕನನ್ನು ವಶಕ್ಕೆ ಪಡೆದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕೊಳ್ನಾಡು ಗ್ರಾಮದ ಪಂಜರಕೋಡಿ ಎಂಬಲ್ಲಿ ನಡೆದಿದೆ. ಅಕ್ರಮ ಗೋಸಾಗಾಟ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ನಿನ್ನೆ ವಿಟ್ಲ ಪೊಲೀಸರು ಸ್ಥಳಕ್ಕೆ ತೆರಳಿ KA-19-D-1496 ನೋಂದಣಿಯ ಪಿಕಪ್ ವಾಹನವನ್ನು ತಡೆದು ನಿಲ್ಲಿಸಿ ಪರಿಶೀಲನೆ ನಡೆಸಿದರು. ಈ ವೇಳೆ ಪಿಕಪ್ ವಾಹನಕ್ಕೆ ಬೆಂಗಾವಲಾಗಿ ಬಂದಿದ್ದ KA-21-MA-0801 ನೋಂದಣಿಯ ಸ್ವಿಫ್ಟ್ ಕಾರಿನಲ್ಲಿದ್ದ…

Read More

ಅಪಾಯದ ಅಂಚಿನಲ್ಲಿ ಒಣಗಿದ ಕಜುವರಿನ ಮರ: ಮಂಜೇಶ್ವರ ಕಡಲತೀರದಲ್ಲಿ ಸಂಭವನೀಯ ದುರಂತದ ಆತಂಕ

​ಮಂಜೇಶ್ವರ: ಮಂಜೇಶ್ವರ ಕಡಲತೀರದಲ್ಲಿರುವ ಓಷನ್ ವಾಟರ್ ಪಾರ್ಕ್‌ನ ಮುಂಭಾಗದಲ್ಲಿರುವ ಬೃಹತ್ ಕಜುವರಿನಾ ಮರವು ಯಾವುದೇ ಕ್ಷಣದಲ್ಲಿ ಧರೆಗುರುಳುವ ಸ್ಥಿತಿಯಲ್ಲಿದ್ದು, ಸಾರ್ವಜನಿಕರಲ್ಲಿ ತೀವ್ರ ಆತಂಕ ಮೂಡಿಸಿದೆ. ಒಣಗಿ ಶಿಥಿಲವಾಗಿರುವ ಈ ಮರವು ಭಾರಿ ಅನಾಹುತಕ್ಕೆ ಮುನ್ಸೂಚನೆಯಾಗಿದೆ ಎಂದು ಸ್ಥಳೀಯರು ಮತ್ತು ಪ್ರವಾಸಿಗರು ಕಳವಳ ವ್ಯಕ್ತಪಡಿಸಿದ್ದಾರೆ. ​ವಾಟರ್ ಪಾರ್ಕ್‌ನ ಎದುರಿನ ಸಣ್ಣ ಅಂಗಡಿಯ ಸಮೀಪವೇ ಈ ಮರವು ಸ್ಥಿತವಾಗಿದ್ದು, ಪ್ರತಿದಿನ ಸಂಜೆಯ ವೇಳೆ ಕಡಲ ತಂಗಾಳಿಯನ್ನು ಸವಿಯಲು ಮತ್ತು ಸಮಯ ಕಳೆಯಲು ನೂರಾರು ಜನರು ಇಲ್ಲಿಗೆ ಬರುತ್ತಾರೆ. ಇಲ್ಲಿನ ಕಡಲ…

Read More

ಪೆರ್ಲದಲ್ಲಿ ವ್ಯಾಪಾರಿಗಳ ಮೇಲೆ ಹಲ್ಲೆ ಆರೋಪ: ಮೂವರ ವಿರುದ್ಧ ಪ್ರಕರಣ

ಬದಿಯಡ್ಕ: ಮಖಾಂಗೆ ತೆರಳಿ ಪ್ರಾರ್ಥನೆ ನಡೆಸಿದ ಹಿನ್ನೆಲೆಯಲ್ಲಿ ಪೆರ್ಲದಲ್ಲಿರುವ ಬಟ್ಟೆ ಅಂಗಡಿಗೆ ನುಗ್ಗಿ ಇಬ್ಬರು ವ್ಯಾಪಾರಿಗಳ ಮೇಲೆ ಹಲ್ಲೆ ನಡೆಸಿ ₹65,000 ಕಳೆದುಹೋಗುವಂತೆ ಮಾಡಿದ ಆರೋಪದಲ್ಲಿ ಮೂವರ ವಿರುದ್ಧ ಬದಿಯಡ್ಕ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.ಬಟ್ಟಂಪಾಡಿ ನಿವಾಸಿ ಕೆ.ಎಂ. ಮೊಹಮ್ಮದ್ ಅಶ್ರಫ್ (45) ಹಾಗೂ ಭುವನಚಂದ್ರನ್ (48) ಗಾಯಗೊಂಡವರಾಗಿದ್ದಾರೆ. ಈ ಕುರಿತು ಮೊಹಮ್ಮದ್ ಅಶ್ರಫ್ ನೀಡಿದ ದೂರಿನ ಆಧಾರದಲ್ಲಿ ಪ್ರಕರಣ ದಾಖಲಾಗಿದೆ. ಮಂಗಳವಾರ ಸಂಜೆ ಸುಮಾರು 5.30ರ ವೇಳೆಗೆ ಪೆರ್ಲದಲ್ಲಿ ಭುವನಚಂದ್ರನ್ ಹಾಗೂ ಅಶ್ರಫ್ ಮಾತನಾಡುತ್ತಿದ್ದ ವೇಳೆ ಆರೋಪಿಗಳು…

Read More

ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಎ.ಕೆ.ಎಂ. ಅಶ್ರಫ್: ಸಚಿವ ಸ್ಥಾನದ ನಿರೀಕ್ಷೆ ಭಗ್ನ

​ ಮಂಜೇಶ್ವರ: ಮಂಜೇಶ್ವರ ವಿಧಾನಸಭಾ ಕ್ಷೇತ್ರದಿಂದ ಸತತ ಎರಡನೇ ಬಾರಿಗೆ ಭರ್ಜರಿ ಜಯಗಳಿಸಿರುವ ಎ.ಕೆ.ಎಂ. ಅಶ್ರಫ್, ಈ ಸಲ ಕೂಡಾ ಕೇರಳ ವಿಧಾನಸಭೆಯಲ್ಲಿ ಕನ್ನಡ ಭಾಷೆಯಲ್ಲಿಯೇ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಕಾಸರಗೋಡಿನ ಭಾಷಾ ವೈವಿಧ್ಯತೆಯನ್ನು ಮತ್ತೊಮ್ಮೆ ಎತ್ತಿಹಿಡಿದರು. ಕಳೆದ ಬಾರಿಯಂತೆ ಈ ಬಾರಿಯೂ ಕನ್ನಡದಲ್ಲಿಯೇ ಪ್ರಮಾಣವಚನ ಸ್ವೀಕರಿಸಿದ ಅವರು ಎಲ್ಲರ ಗಮನ ಸೆಳೆದರು. ​ಮತ್ತೊಂದೆಡೆ, ಜಿಲ್ಲೆಯ ಐದು ಕ್ಷೇತ್ರಗಳ ಪೈಕಿ ನಾಲ್ಕರಲ್ಲಿ ಯುಡಿಎಫ್ ಗೆಲುವು ಸಾಧಿಸಿರುವುದರಿಂದ, ಹೊಸ ಸಚಿವ ಸಂಪುಟದಲ್ಲಿ ಕಾಸರಗೋಡು ಜಿಲ್ಲೆಗೆ ಸಚಿವ ಸ್ಥಾನ…

Read More

ಅನಧಿಕೃತ ಮರಳು ಸಾಗಾಟ: ಟಿಪ್ಪರ್ ಲಾರಿ ವಶ, ಚಾಲಕ ಬಂಧನ

ಮಂಜೇಶ್ವರ: ಅನಧಿಕೃತ ಮರಳುಗಾರಿಕೆ ವಿರುದ್ಧ ಕಾರ್ಯಾಚರಣೆ ತೀವ್ರಗೊಳಿಸಿರುವ ಕುಂಬಳೆ ಪೊಲೀಸರು, ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಟಿಪ್ಪರ್ ಲಾರಿಯನ್ನು ವಶಪಡಿಸಿಕೊಂಡು ಚಾಲಕನನ್ನು ಬಂಧಿಸಿದ್ದಾರೆ. ಶಿರಿಯ ಹೊಳೆಯ ಪಾಚಾಣಿ ಪ್ರದೇಶದಿಂದ ಅನಧಿಕೃತವಾಗಿ ಮರಳು ಸಾಗಾಟ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಪಡೆದ ಕುಂಬಳೆ ಪೊಲೀಸರು ಮಫ್ತಿ ವೇಷದಲ್ಲಿ ಕಾರ್ಯಾಚರಣೆ ನಡೆಸಿ, ಶಿರಿಯ ವಳಯಂನಲ್ಲಿ ಟಿಪ್ಪರ್ ಲಾರಿಯನ್ನು ತಡೆದಿದ್ದಾರೆ. ಈ ವೇಳೆ ವಾಹನ ಚಾಲಕ ಬಂದ್ಯೋಡು ಅಡ್ಕ ನಿವಾಸಿ ಮನೋಜ್ ಕುಮಾರ್ (26) ಎಂಬಾತನನ್ನು ಬಂಧಿಸಲಾಗಿದೆ. ಮರಳು ಸಾಗಾಟಕ್ಕೆ ಪ್ರೇರೇಪಿಸಿದ ಆರೋಪದ…

Read More

ಮಂಗಳೂರಿನಲ್ಲಿ ಮೇ 23ರಂದು ನಾಲ್ಕು ಭವ್ಯ ಸಭಾಭವನಗಳ ಲೋಕಾರ್ಪಣೆ

ಮಂಗಳೂರು: ಕರಾವಳಿ ಇತಿಹಾಸದಲ್ಲೇ ಮೊದಲ ಬಾರಿಗೆ ಮಂಗಳೂರಿನ ನಾಲ್ಕು ಪ್ರಮುಖ ಪ್ರದೇಶಗಳಲ್ಲಿ ಏಕಕಾಲಕ್ಕೆ ನಾಲ್ಕು ಅತ್ಯಾಧುನಿಕ ಹಾಗೂ ಅದ್ದೂರಿ ಸಭಾಭವನಗಳನ್ನು ಲೋಕಾರ್ಪಣೆ ಮಾಡಲಾಗುತ್ತಿದೆ ಎಂದು ಮಾಜಿ ಸಚಿವ ಹಾಗೂ ವಿಕಾಸ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ಕೃಷ್ಣ ಜೆ. ಪಾಲೆಮಾರ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲ್ಯಾಂಡ್ ಲಿಂಕ್ಸ್ ಸಂಸ್ಥೆಯ 45 ವರ್ಷಗಳ ಯಶಸ್ವಿ ಪಯಣದ ಸವಿನೆನಪಾಗಿ ಕರಾವಳಿ ಜನತೆಗೆ ವಿಶಿಷ್ಟ ಕೊಡುಗೆಯಾಗಿ ನಾಲ್ಕು ಭವ್ಯ ಸಭಾಂಗಣಗಳನ್ನು ನಿರ್ಮಿಸಲಾಗಿದ್ದು, ಮೇ 23ರಂದು ಅವುಗಳನ್ನು ಸಾರ್ವಜನಿಕ ಬಳಕೆಗೆ ಸಮರ್ಪಿಸಲಾಗುವುದು…

Read More

“ಕಾಕ್ರೋಚ್‌ ಜನತಾ ಪಾರ್ಟಿ” ಡಿಜಿಟಲ್‌ ಟ್ರೆಂಡ್‌ ಭಾರೀ ವೈರಲ್‌: ರಾಜಕೀಯ ವಲಯದಲ್ಲಿ ಚರ್ಚೆ

ನವದೆಹಲಿ: ಕೇವಲ ಐದು ದಿನಗಳ ಹಿಂದೆ ಸಾಮಾಜಿಕ ಜಾಲತಾಣಗಳಲ್ಲಿ ಆರಂಭವಾದ “ಕಾಕ್ರೋಚ್‌ ಜನತಾ ಪಾರ್ಟಿ” (ಕೆಜೆಪಿ) ಎಂಬ ಡಿಜಿಟಲ್‌ ಅಭಿಯಾನ ದೇಶದ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಕೇಂದ್ರದಲ್ಲಿ ದೀರ್ಘಕಾಲದಿಂದ ಆಡಳಿತದಲ್ಲಿರುವ ಭಾರತೀಯ ಜನತಾ ಪಕ್ಷಕ್ಕಿಂತಲೂ ಹೆಚ್ಚು ಹಿಂಬಾಲಕರನ್ನು ಈ ಖಾತೆ ಪಡೆದುಕೊಂಡಿದೆ ಎಂಬ ಮಾಹಿತಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. ಈ ಅಭಿಯಾನದ ಹುಟ್ಟಿಗೆ ಕಾರಣವಾಗಿದ್ದು, ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಸೂರ್ಯಕಾಂತ್ ಅವರ ಹೇಳಿಕೆ ಎನ್ನಲಾಗಿದೆ. ಹಿರಿಯ ವಕೀಲರ ಹುದ್ದೆಗೆ ಸಲ್ಲಿಸಲಾದ ಅರ್ಜಿಯ ವಿಚಾರಣೆ…

Read More

ಸಾಲೆತ್ತೂರಿನಲ್ಲಿ ಅಕ್ರಮ ಗೋಸಾಗಾಟ ಪತ್ತೆ: ಪೊಲೀಸರ ಮೇಲೆ ಕಾರು ಹತ್ತಿಸಲು ಯತ್ನ, ಪ್ರಕರಣ ದಾಖಲು

ವಿಟ್ಲ: ಅಕ್ರಮವಾಗಿ ಗೋಸಾಗಾಟ ಮಾಡುತ್ತಿದ್ದ ಪಿಕಪ್ ವಾಹನವನ್ನು ವಶಕ್ಕೆ ಪಡೆದು ಎರಡು ಜಾನುವಾರುಗಳನ್ನು ರಕ್ಷಿಸಿದ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಕೊಳ್ನಾಡು ಗ್ರಾಮದ ಪಂಜರಕೋಡಿ ಎಂಬಲ್ಲಿ ನಡೆದಿದೆ. ಇದೇ ವೇಳೆ ಜಾನುವಾರು ಸಾಗಾಟ ವಾಹನಕ್ಕೆ ಬೆಂಗಾವಲಾಗಿ ಬಂದಿದ್ದ ಕಾರು ಚಾಲಕ ಪೊಲೀಸರ ಮೇಲೆಯೇ ವಾಹನ ಹತ್ತಿಸಲು ಯತ್ನಿಸಿದ ಘಟನೆ ಕೂಡ ನಡೆದಿದೆ. ಈ ಸಂಬಂಧ ಬಂಟ್ವಾಳ ತಾಲೂಕು ಬಾಳೆಪುಣಿ ನಿವಾಸಿ ಮೊಹಮ್ಮದ್ ಹನೀಪ್ ಹಾಗೂ ಸ್ವಿಫ್ಟ್ ಕಾರು ಚಾಲಕ ಬಶೀರ್ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ…

Read More
error: Content is protected !!