ಮುಂಗಾರು ಎಂಟ್ರಿಗೆ ಕರಾವಳಿಯಲ್ಲಿ ಅಲರ್ಟ್-ಕೆತ್ತಿಕಲ್ ಮತ್ತೆ ಅಪಾಯ ವಲಯವಾಗಿ ಗುರುತು

ಮಂಗಳೂರು: ಕೇರಳಕ್ಕೆ ಮುಂಗಾರು ಆಗಮಿಸಿರುವ ಬೆನ್ನಲ್ಲೇ ಕರಾವಳಿ ಜಿಲ್ಲೆ ದಕ್ಷಿಣ ಕನ್ನಡದ ಮೂಲಕ ರಾಜ್ಯಕ್ಕೂ ಮುಂಗಾರು ಪ್ರವೇಶಿಸುವ ನಿರೀಕ್ಷೆ ಹೆಚ್ಚಾಗಿದೆ. ಜೂನ್ ಆರಂಭಕ್ಕೂ ಮುನ್ನವೇ ಈ ಬಾರಿ ಮುಂಗಾರು ಚುರುಕುಗೊಳ್ಳುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ. ಜಿಲ್ಲೆಯ ವಿವಿಧ ಭಾಗಗಳಲ್ಲಿ ಪ್ರವಾಹ ಹಾಗೂ ಭೂಕುಸಿತ ಸಂಭವಿಸುವ ಸಾಧ್ಯತೆ ಇರುವ ಪ್ರದೇಶಗಳಲ್ಲಿ ತಕ್ಷಣ ತಡೆಗಟ್ಟುವ ಕಾಮಗಾರಿಗಳನ್ನು ಕೈಗೊಳ್ಳಬೇಕೆಂದು ಸ್ಥಳೀಯ ನಿವಾಸಿಗಳು ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ. ಕಳೆದ ವರ್ಷಗಳ ಮಳೆ ಅವಾಂತರಗಳು ಮತ್ತು ಅನಾಹುತಗಳು ಈ ಬಾರಿಯೂ…

Read More

ಪಾಂಗೋಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಬ್ರಹ್ಮಕಳಶೋತ್ಸವ ಸಂಭ್ರಮ

ಕಾಸರಗೋಡು: ಪಾಂಗೋಡು ಶ್ರೀ ದುರ್ಗಾಪರಮೇಶ್ವರಿ ಹಾಗೂ ಶ್ರೀ ಸುಬ್ರಮಣ್ಯ ದೇವಸ್ಥಾನದ ವಾರ್ಷಿಕ ಪ್ರತಿಷ್ಠಾ ಬ್ರಹ್ಮಕಳಶೋತ್ಸವವು ಸೋಮವಾರ ಭಕ್ತಿಭಾವ ಹಾಗೂ ವೈಭವದೊಂದಿಗೆ ನಡೆಯಿತು. ಉತ್ಸವದ ಅಂಗವಾಗಿ ಚಂಡಿಕಾ ಹೋಮ, ಶುದ್ಧಿ ಕಲಶಾಭಿಷೇಕ ಸೇರಿದಂತೆ ವಿವಿಧ ಧಾರ್ಮಿಕ ವಿಧಿವಿಧಾನಗಳು ಕ್ಷೇತ್ರ ತಂತ್ರಿಗಳಾದ ಹಾರ್ನಾಡ್ ಕೆ.ಯು. ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ನೆರವೇರಿದವು. ಇದೇ ವೇಳೆ ಲಲಿತಾ ಸಹಸ್ರನಾಮ ಪಾರಾಯಣ, ಭಜನೆ, ಶ್ರೀ ಮಹಾತಾಯಿಯ ದರ್ಶನ ಸೇವೆ, ಪ್ರಸಾದ ಹಾಗೂ ಅನ್ನಪ್ರಸಾದ ವಿತರಣೆ ಕಾರ್ಯಕ್ರಮಗಳು ಭಕ್ತರ ಸಮ್ಮುಖದಲ್ಲಿ ಜರುಗಿದವು. ಕಾರ್ಯಕ್ರಮದಲ್ಲಿ ಕಾಸರಗೋಡು ಕೋಟೆ…

Read More

ಕೋಕ್ ಸಲ್ಪರ್ ಮಾಲಿನ್ಯ ವಿರುದ್ಧ ಜೋಕಟ್ಟೆ ಗ್ರಾಮಸ್ಥರ ಹೋರಾಟ ಮೂರನೇ ದಿನಕ್ಕೆ

ಮಂಗಳೂರು: ಎಂಆರ್‌ಪಿಎಲ್‌ನ ಕೋಕ್ ಸಲ್ಪರ್ ಘಟಕದಿಂದ ಉಂಟಾಗುತ್ತಿರುವ ಗಂಭೀರ ಮಾಲಿನ್ಯ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಬೇಕು, ಜನವಸತಿ ಪ್ರದೇಶದಲ್ಲಿ ಹಸಿರು ವಲಯ ನಿರ್ಮಾಣಕ್ಕಾಗಿ ಭೂಸ್ವಾಧೀನ ಪ್ರಕ್ರಿಯೆ ಹಾಗೂ ಸಂತ್ರಸ್ತರಿಗೆ ಪುನರ್ವಸತಿ ಕಾರ್ಯವನ್ನು ತಕ್ಷಣ ಕೈಗೊಳ್ಳಬೇಕು ಎಂದು ಆಗ್ರಹಿಸಿ ಜೋಕಟ್ಟೆ, ಕೆಂಜಾರು ಮತ್ತು ಕಳವಾರು ಗ್ರಾಮದ ನಿವಾಸಿಗಳು ನಡೆಸುತ್ತಿರುವ ಹಗಲು-ರಾತ್ರಿ ಧರಣಿ ಮೂರನೇ ದಿನಕ್ಕೂ ಮುಂದುವರಿಯಿತು. ಎಂಆರ್‌ಪಿಎಲ್ ಕೋಕ್ ಸಲ್ಪರ್ ಘಟಕದ ಮುಂಭಾಗ ನಡೆಯುತ್ತಿರುವ ಧರಣಿಯಲ್ಲಿ ಮಾಜಿ ಸಚಿವ ಅಭಯಚಂದ್ರ ಜೈನ್ ಭಾಗವಹಿಸಿ ಪ್ರತಿಭಟನಾಕಾರರಿಗೆ ಬೆಂಬಲ ಸೂಚಿಸಿದರು. ಈ…

Read More

​ಕುಂಜತ್ತೂರು: ನೂತನ ಇಂಟರ್ ಲಾಕ್ ಕಾಲ್ನಡೆ ರಸ್ತೆಯೇ ಈಗ ‘ತ್ಯಾಜ್ಯದ ಹರವು’; ಅಧಿಕಾರಿಗಳ ಎಚ್ಚರಿಕೆಯನ್ನು ಗಾಳಿಗೆ ತೂರಿದ ದುರುಳರು

ಮಂಜೇಶ್ವರ: ಅಭಿವೃದ್ಧಿಯ ಪಥದಲ್ಲಿ ಸಾಗುತ್ತಿರುವ ಮಂಜೇಶ್ವರದ ಕುಂಜತ್ತೂರು ರಾಷ್ಟ್ರೀಯ ಹೆದ್ದಾರಿ ಸರ್ವೀಸ್ ರಸ್ತೆಯ ಚಿತ್ರಣವೀಗ ಬದಲಾಗಿದೆ. ಆದರೆ ಈ ಬದಲಾವಣೆ ಇಂಟರ್ ಲಾಕ್ ರಸ್ತೆಯ ಸೌಂದರ್ಯಕ್ಕಲ್ಲ, ಬದಲಾಗಿ ಅಲ್ಲಿ ರಾಶಿ ಬಿದ್ದಿರುವ ದುರ್ನಾತ ಬೀರುತ್ತಿರುವ ತ್ಯಾಜ್ಯಕ್ಕೆ ಎಂಬಂತಾಗಿದೆ. ​ಕುಂಜತ್ತೂರು ರಾಷ್ಟ್ರೀಯ ಹೆದ್ದಾರಿಯ ಪಟಾಕಿ ಅಂಗಡಿ ಸಮೀಪದ ಸರ್ವೀಸ್ ರಸ್ತೆಯ ಪಕ್ಕದಲ್ಲೇ ಸಾರ್ವಜನಿಕರ ಅನುಕೂಲಕ್ಕಾಗಿ ಇತ್ತೀಚೆಗಷ್ಟೇ ಇಂಟರ್ ಲಾಕ್ ಅಳವಡಿಸಿ ಕಾಲ್ನಡೆ ರಸ್ತೆಯನ್ನು ಸುಸಜ್ಜಿತಗೊಳಿಸಲಾಗಿತ್ತು. ಆರಂಭದಲ್ಲಿ ಇಲ್ಲಿ ಕಸ ಹಾಕದಂತೆ ಪಂಚಾಯತ್ ಅಧಿಕಾರಿಗಳು ಕಟ್ಟುನಿಟ್ಟಿನ ಎಚ್ಚರಿಕೆ ನೀಡಿ, ಇಡೀ…

Read More

ಅನಂತಪುರ ಕೈಗಾರಿಕಾ ಪ್ರದೇಶದ ಮಾಲಿನ್ಯಕ್ಕೆ ತುರ್ತು ಪರಿಹಾರ ಒದಗಿಸಿ: ಎಂ.ಎಲ್. ಅಶ್ವಿನಿ

ಕಾಸರಗೋಡು: ಅನಂತಪುರ ಕೈಗಾರಿಕಾ ಪ್ರದೇಶದಲ್ಲಿ ಉಂಟಾಗಿರುವ ಪರಿಸರ ಮಾಲಿನ್ಯ ಹಾಗೂ ದುರ್ವಾಸನೆ ಸಮಸ್ಯೆಗೆ ತುರ್ತು ಪರಿಹಾರ ಕಂಡುಹಿಡಿಯಬೇಕು ಎಂದು ಬಿಜೆಪಿ ಕಾಸರಗೋಡು ಜಿಲ್ಲಾ ಅಧ್ಯಕ್ಷೆ M. L. Ashwini ಆಗ್ರಹಿಸಿದರು. ಬಿಜೆಪಿ ಮುಖಂಡರು ಹಾಗೂ ಸ್ಥಳೀಯ ನಿವಾಸಿಗಳೊಂದಿಗೆ ಕೈಗಾರಿಕಾ ಪ್ರದೇಶದ ವಿವಿಧ ಘಟಕಗಳಿಗೆ ಭೇಟಿ ನೀಡಿದ ಬಳಿಕ ಮಾತನಾಡಿದ ಅವರು, “ಕೈಗಾರಿಕೀಕರಣ ಆರ್ಥಿಕ ಪ್ರಗತಿಗೆ ಅಗತ್ಯವಾದರೂ, ಜನರ ಆರೋಗ್ಯ ಮತ್ತು ಪರಿಸರಕ್ಕೆ ಹಾನಿ ಉಂಟುಮಾಡುವ ಕೈಗಾರಿಕೆಗಳನ್ನು ಕೈಬಿಡಲು ಕೈಗಾರಿಕಾ ಇಲಾಖೆ ಸಿದ್ಧವಾಗಬೇಕು” ಎಂದು ಹೇಳಿದರು. ಜಲಮೂಲಗಳು ಮತ್ತು…

Read More

ಕಡೇಶಿವಾಲಯ-ಅಜಿಲಮೊಗರು ಸೌಹಾರ್ದ ಸೇತುವೆ ಶೀಘ್ರ ಉದ್ಘಾಟನೆ: ರಮಾನಾಥ ರೈ

ಬಂಟ್ವಾಳ: ಕಡೇಶಿವಾಲಯದಿಂದ ಮಣಿನಾಲ್ಕೂರು ಗ್ರಾಮವನ್ನು ಸಂಪರ್ಕ ಮಾಡುವ “ಕಡೇಶಿವಾಲಯ- ಅಜಿಲಮೊಗರು” ಸೌಹಾರ್ದ ಸೇತುವೆ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಶೀಘ್ರವಾಗಿ ಉದ್ಘಾಟನೆಯಾಗಲಿದೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ತಿಳಿಸಿದ್ದಾರೆ.ಇದರ ಪೂರ್ವಭಾವಿಯಾಗಿ ಸೇತುವೆಯ ಕಾಮಗಾರಿ ವೀಕ್ಷಿಸಲು ಸ್ಥಳಕ್ಕೆ ಭೇಟಿ ಈ ವಿಚಾರವಾಗಿ ಮಾತನಾಡಿದರು. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಡೇಶಿವಾಲಯ ಮತ್ತು ಮಣಿನಾಲ್ಕೂರು ಗ್ರಾಮದ ಸಂಪರ್ಕದ ಕಡೇಶಿವಾಲಯ- ಅಜಿಲಮೊಗರು ಸೇತುವೆ ಬಗ್ಗೆ ಅನೇಕ ವರ್ಷಗಳ ಬೇಡಿಕೆಯಾಗಿತ್ತು. ಕಡೇಶಿವಾಲಯ ದೇವಸ್ಥಾನ ಹಾಗೂ ಅಜಿಲಮೊಗರು ಮಸೀದಿಯನ್ನು ಸಂಪರ್ಕ ಮಾಡುವ ಸೌಹಾರ್ದ ಸೇತುವೆ 20…

Read More

ಮುಲ್ಕಿಯಲ್ಲಿ ಉಚಿತ ಆರೋಗ್ಯ ಶಿಬಿರ: 300ಕ್ಕೂ ಹೆಚ್ಚು ಜನರಿಗೆ ಚಿಕಿತ್ಸಾ ಸೇವೆ

ಮುಲ್ಕಿ: ಸಮಾಜಮುಖಿ ಕಾರ್ಯಕ್ರಮಗಳಿಗೆ ಸಹೃದಯತೆ ಬೇಕು ಆರೋಗ್ಯ, ಸಹಾಯ ಹಸ್ತ ಸಹಿತ ಅನೇಕ ಸಮಾಜಮುಖಿ ಕಾರ್ಯಗಳನ್ನು ನಡೆಸುತ್ತಿರುವಹಳೆಯಂಗಡಿ ಪ್ರಿಯದರ್ಶಿನಿ ಕೋ-ಆಪರೇಟಿವ್‌ ಸೊಸೈಟಿಯ ಕಾರ್ಯ ಅಭಿನಂದನೀಯ ಎಂದು ಕಿನ್ನಿಗೋಳಿ ಯುಗಪುರುಷ ಸಂಪಾದಕ ಭುವನಾಭಿರಾಮ ಉಡುಪ ಹೇಳಿದರು. ಅವರು ಹಳೆಯಂಗಡಿ ಪ್ರಿಯದರ್ಶಿನಿ ಕೋ-ಆಪರೇಟಿವ್‌ ಸೊಸೈಟಿಯ 5ನೇ ವರ್ಷದ ಸಂಭ್ರಮಾಚರಣೆ ಅಂಗವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್‌ ರಿ., ಮುಲ್ಕಿ ಅರಮನೆ ವೆಲ್ವೇರ್ ಆಂಡ್‌ ಚಾರಿಟೇಬಲ್ ಟ್ರಸ್ಟ್ (ರಿ) ಮುಲ್ಕಿ ಪ್ರೆಸ್ ಕ್ಲಬ್ , ಪೂಜಾ ಫ್ರೆಂಡ್ಸ್…

Read More

ಕಾಂಗ್ರೆಸ್ ಸರ್ಕಾರದ ಆರ್ಥಿಕ ನಿರ್ವಹಣೆಗೆ ಸಂಸದ ಬ್ರಿಜೇಶ್ ಚೌಟ ಟೀಕೆ: “ಕರ್ನಾಟಕ ಆದಾಯ ಮಿಗಿತ ರಾಜ್ಯದಿಂದ ಕೊರತೆ ರಾಜ್ಯವಾಗಿ ಮಾರ್ಪಟ್ಟಿದೆ”

ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷದ ಸಾಧನಾ ಸಮಾವೇಶ ನಡೆಸುತ್ತಿರುವ ಹಿನ್ನೆಲೆ, ರಾಜ್ಯದ ಆರ್ಥಿಕ ಪರಿಸ್ಥಿತಿ ಹಾಗೂ ಕೇಂದ್ರ ಸರ್ಕಾರದ ಯೋಜನೆಗಳ ಅನುಷ್ಠಾನದಲ್ಲಿ ಆಗುತ್ತಿರುವ ವಿಳಂಬದ ಕುರಿತು ಸಂಸದ ಕ್ಯಾ ಬ್ರಿಜೇಶ್ ಚೌಟ ತೀವ್ರ ಟೀಕೆ ವ್ಯಕ್ತಪಡಿಸಿದರು. ನಗರದ ಬಿಜೆಪಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಸವರಾಜ ಬೊಮ್ಮಾಯಿ ಸರ್ಕಾರದ ಅವಧಿಯಲ್ಲಿ ಆದಾಯ ಮಿಗಿತ (Revenue Surplus) ಹೊಂದಿದ್ದ ಕರ್ನಾಟಕ ಇಂದು ಆದಾಯ ಕೊರತೆ (Revenue Deficit) ರಾಜ್ಯವಾಗಿ ಪರಿಣಮಿಸಿದೆ ಎಂದು…

Read More

ಮಂಗಳೂರಿನಲ್ಲಿ ಹಿಜಾಬ್ ನಿಷೇಧಕ್ಕೆ ಆಗ್ರಹ:ಶಿವಸೇನೆ–ಹಿಂದೂ ಸಂಘಟನೆಗಳಿಂದ ಸರ್ಕಾರಕ್ಕೆ ಮನವಿ

ಮಂಗಳೂರು: ಹಿಜಾಬ್ ನಿಷೇಧವನ್ನು ಕಡ್ಡಾಯವಾಗಿ ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಶಿವಸೇನೆ ಹಾಗೂ ಸನಾತನ ಹಿಂದೂ ಸಂಘಟನೆಗಳ ಒಕ್ಕೂಟವು ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಸರ್ಕಾರಕ್ಕೆ ಮನವಿ ಸಲ್ಲಿಸಿತು. ಸಂಘಟನೆಗಳ ಪ್ರತಿನಿಧಿಗಳು ಕರ್ನಾಟಕ ಗೃಹ ಸಚಿವರಿಗೆ ಉದ್ದೇಶಿಸಿದ ಮನವಿಯನ್ನು ಜಿಲ್ಲಾಧಿಕಾರಿಗಳ ಮೂಲಕ ಸಲ್ಲಿಸಿದರು. ಹಿಜಾಬ್ ನಿಷೇಧವನ್ನು ಕಠಿಣವಾಗಿ ಜಾರಿಗೆ ತರಬೇಕು ಹಾಗೂ ಬಕ್ರೀದ್ ಹಬ್ಬದ ಸಂದರ್ಭದಲ್ಲಿ ನಡೆಯುವ ಗೋಹತ್ಯೆಗೆ ಕಡಿವಾಣ ಹಾಕಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ. ಈ ವೇಳೆ ಶಿವಸೇನೆ ಮುಖಂಡರಾದ ಆನಂದ್ ಶೆಟ್ಟಿ ಅಡ್ಯಾರ್, ಗಂಗಾಧರ್ ಕುಲ್ಕರ್ಣಿ…

Read More

ಉಡುಪಿಯಲ್ಲಿ 650ಕ್ಕೂ ಹೆಚ್ಚು ಮೆಡಿಕಲ್ ಅಂಗಡಿಗಳು ಬಂದ್: ಆನ್‌ಲೈನ್ ಔಷಧ ಮಾರಾಟಕ್ಕೆ ವ್ಯಾಪಾರಿಗಳ ತೀವ್ರ ವಿರೋಧ

ಉಡುಪಿ ಜಿಲ್ಲೆಯಾದ್ಯಂತ ಇಂದು 650ಕ್ಕೂ ಹೆಚ್ಚು ಮೆಡಿಕಲ್ ಅಂಗಡಿಗಳು ಬಂದ್‌ನಲ್ಲಿ ಭಾಗವಹಿಸಿ, ಆನ್‌ಲೈನ್ ಮೂಲಕ ನಡೆಯುತ್ತಿರುವ ಔಷಧ ಮಾರಾಟ ಸೇವೆಗೆ ವಿರೋಧ ವ್ಯಕ್ತಪಡಿಸಿವೆ. ಔಷಧ ವ್ಯಾಪಾರಿಗಳ ಸಂಘದ ಪದಾಧಿಕಾರಿಗಳು ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಜಿಲ್ಲಾಧಿಕಾರಿಗಳ ಮೂಲಕ ಪ್ರಧಾನ ಮಂತ್ರಿಗಳಿಗೆ ಮನವಿ ಸಲ್ಲಿಸಲು ತೀರ್ಮಾನಿಸಿದ್ದಾರೆ. ಸಂಘದ ಪ್ರತಿನಿಧಿಗಳು ಮಾತನಾಡಿ, ಆನ್‌ಲೈನ್ ಔಷಧ ಮಾರಾಟದಿಂದ ಕಾನೂನುಬಾಹಿರ ಔಷಧ ವ್ಯವಹಾರಗಳಿಗೆ ಅವಕಾಶ ಸಿಗುತ್ತಿದೆ ಎಂದು ಆರೋಪಿಸಿದರು. ವೈದ್ಯರ ಪ್ರಿಸ್ಕ್ರಿಪ್ಷನ್ ಇಲ್ಲದೆ ಔಷಧಿಗಳನ್ನು ನೀಡಲಾಗುತ್ತಿದ್ದು, ಎಐ ಮತ್ತು ಪಿಡಿಎಫ್ ಎಡಿಟರ್‌ಗಳ ಸಹಾಯದಿಂದ ನಕಲಿ…

Read More
error: Content is protected !!