ದುರ್ಗಾ ಶಕ್ತಿ ಕುಣಿತ ಭಜನಾ ತಂಡ ಪರಂಬಳ ಕಯ್ಯಾರು ಅಭಿನಂದನಾ ಸಭೆ 24 ರಂದು

ಉಪ್ಪಳ : ದುರ್ಗಾ ಶಕ್ತಿ ಕುಣಿತ ಭಜನಾ ತಂಡ ಪರಂಬಳ ಕಯ್ಯಾರು ಇದರ ವತಿಯಿಂದ ಅಭಿನಂದನಾ ಸಭೆಯು ಶ್ರೀ ಭಾರತ್ ಮಾತಾ ಸೇವಾ ಟ್ರಸ್ಟ್ ಪರಂಬಳ ಕಯ್ಯಾರು ಇದರ ಸಭಾಂಗಣದಲ್ಲಿ ನಡೆಯಲಿದೆ ಸಭೆಯ ಅಧ್ಯಕ್ಷತೆಯನ್ನು ದುರ್ಗಾ ಶಕ್ತಿ ಕುಣಿತ ಭಜನಾ ತಂಡ ಪರಂಬಳ ಕಯ್ಯಾರು ಇದರ ಗೌರವ ಮಾರ್ಗಧರ್ಶಕಿ ಶ್ರೀಮತಿ ರಮ್ಯಾ ಯನ್ ಸೀತಾಂಗೋಳಿ ವಹಿಸಲಿರುವರು. ದಿಕ್ಸೂಚಿ ಭಾಷಣವನ್ನು ಶ್ರೀ ವಿಠಲ ನಾಯಕ್ ಕಲ್ಲಡ್ಕ (ಗೀತಾ ಸಾಹಿತ್ಯ ಸಂಭ್ರಮದ ರೂವಾರಿ ) ಮಾಡಲಿರುವರು. ಮುಖ್ಯ ಅತಿಥಿಗಳಾಗಿ ಶ್ರೀ…

Read More

ಶ್ರೀ ಚೌಕರು ಗುಳಿಗ-ಕೊರಗ ತನಿಯ ಸನ್ನಿದಿಯಲ್ಲಿ ವಾರ್ಷಿಕ ಕೋಲದ ಆಮಂತ್ರಣ ಪತ್ರಿಕೆ ಬಿಡುಗಡೆ

ಶ್ರೀ ಚೌಕರು ಗುಳಿಗ, ಶ್ರೀ ಕೊರಗ ತನಿಯ ಸನ್ನಿದಿ ದೊಡ್ಡ ಹಿತ್ತಿಲು ಮಠ ಮೊಗ್ರಾಲ್ ಪುತ್ತೂರು , ಮೇ 23, 2026ರಂದು ನಡೆಯಲಿರುವ ವಾರ್ಷಿಕ ಕೋಲದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಭಕ್ತಿಭಾವದಿಂದ ನೆರವೇರಿತು. ಸನ್ನಿಧಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಶ್ರೀ ಚಾಮುಂಡೇಶ್ವರಿ ಭಜನಾ ಮಂದಿರದ ಆಡಳಿತ ಸಮಿತಿ ಅಧ್ಯಕ್ಷರಾದ ಶ್ರೀದರ ನಡುಹಿತ್ಲು ಅವರ ಸಮ್ಮುಖದಲ್ಲಿ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆ ಮಾಡಲಾಯಿತು. ಈ ಸಂದರ್ಭದಲ್ಲಿ ದೈವದಪಾತ್ರಿ ಶ್ರೀ ರಾಮ ಪಂಜದಗುಡ್ಡೆ, ಮಂದಿರದ ಅರ್ಚಕರಾದ ಶ್ರೀ ಪ್ರಭಾಕರ ದೊಡ್ಡಹಿತ್ಲು, ಶ್ರೀ…

Read More

ಭೋವಿ ಜನಾಂಗಕ್ಕೆ ಜಾತಿ ಪ್ರಮಾಣ ಪತ್ರ ನಿರಾಕರಣೆ ಆರೋಪ: ಜಿಲ್ಲಾಡಳಿತದ ವಿರುದ್ಧ ಅಸಮಾಧಾನ

ಕರ್ನಾಟಕದ ಅವಿಭಾಜ್ಯ ಭಾಗವಾಗಿರುವ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಭೋವಿ ಜನಾಂಗದವರಿಗೆ ಜಾತಿ ಪ್ರಮಾಣ ಪತ್ರ ನೀಡುವುದನ್ನು ಕಳೆದ 7-8 ವರ್ಷಗಳಿಂದ ನಿರಾಕರಿಸಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಭೋವಿ ಸಮಾಜದ ಯುವ ಮುಖಂಡ ಪವನ್ ಕುಮಾರ್, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುಮಾರು 30 ಸಾವಿರ ಹಾಗೂ ಉಡುಪಿ ಜಿಲ್ಲೆಯಲ್ಲಿ ಸುಮಾರು 40 ಸಾವಿರ ಭೋವಿ ಸಮುದಾಯದ ಜನರು ವಾಸವಾಗಿದ್ದು, ರಾಜ್ಯದ ಇತರ 31 ಜಿಲ್ಲೆಗಳಲ್ಲಿ ಜಾರಿಯಲ್ಲಿರುವ ಒಂದೇ ಕಾನೂನು ಈ ಎರಡು…

Read More

ಬ್ರಿಕ್ಸ್ ಶೃಂಗಸಭೆಗೂ ಮುನ್ನ ಭಾರತಕ್ಕೆ ಜಾಗತಿಕ ಗಮನ: ಕ್ಸಿ ಜಿನ್‌ಪಿಂಗ್, ಪುಟಿನ್ ಭೇಟಿ ಸಾಧ್ಯತೆ

ಈ ವರ್ಷದ ಬ್ರಿಕ್ಸ್ (BRICS) ಶೃಂಗಸಭೆಯ ಅಧ್ಯಕ್ಷತೆಯನ್ನು ಭಾರತ ವಹಿಸಿಕೊಳ್ಳುತ್ತಿರುವ ಹಿನ್ನೆಲೆ, ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ದೇಶ ಮತ್ತೊಮ್ಮೆ ಕೇಂದ್ರಬಿಂದುವಾಗಿದ್ದು, ಸೆಪ್ಟೆಂಬರ್ 12 ಮತ್ತು 13ರಂದು ನವದೆಹಲಿಯಲ್ಲಿ ನಡೆಯಲಿರುವ ಶೃಂಗಸಭೆ ಭಾರೀ ಮಹತ್ವ ಪಡೆದುಕೊಂಡಿದೆ. ಆರ್ಥಿಕ ಮತ್ತು ಭೌಗೋಳಿಕ ರಾಜಕೀಯ ಚರ್ಚೆಗಳ ಜೊತೆಗೆ, ಭಾರತ-ಚೀನಾ ನಡುವಿನ ದೀರ್ಘಕಾಲದ ಬಿಕ್ಕಟ್ಟಿನ ಸಂಬಂಧಗಳಿಗೆ ಹೊಸ ತಿರುವು ಸಿಗುವ ಸಾಧ್ಯತೆಯೂ ಈ ಸಮ್ಮೇಳನದಿಂದ ಮೂಡಿದೆ. ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಶೃಂಗಸಭೆಯಲ್ಲಿ ಭಾಗವಹಿಸಲು ಭಾರತಕ್ಕೆ ಆಗಮಿಸುವ ಸಾಧ್ಯತೆ ದಟ್ಟವಾಗಿದ್ದು, ಅವರು…

Read More

ಆನ್‌ಲೈನ್ ಔಷಧ ಮಾರಾಟ ವಿರೋಧಿಸಿ ದೇಶವ್ಯಾಪಿ ಪ್ರತಿಭಟನೆ: ಕರ್ನಾಟಕದಲ್ಲಿ ಮಿಶ್ರ ಪ್ರತಿಕ್ರಿಯೆ

ಆನ್‌ಲೈನ್ ಮೂಲಕ ನಡೆಯುತ್ತಿರುವ ಔಷಧ ಮಾರಾಟ ವಿರೋಧಿಸಿ ಅಖಿಲ ಭಾರತ ಔಷಧ ವ್ಯಾಪಾರಿಗಳ ಸಂಘ (AIOCD) ಕರೆ ನೀಡಿದ್ದ ದೇಶವ್ಯಾಪಿ ಮೆಡಿಕಲ್ ಶಾಪ್ ಬಂದ್‌ಗೆ ಕರ್ನಾಟಕದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ರಾಜ್ಯದ ಕೆಲವು ವ್ಯಾಪಾರ ಸಂಘಟನೆಗಳು ಸಂಪೂರ್ಣ ಬಂದ್‌ಗೆ ಬೆಂಬಲ ಸೂಚಿಸಿದರೆ, ಇನ್ನೂ ಕೆಲವು ಸಂಘಟನೆಗಳು ಕಪ್ಪುಪಟ್ಟಿ ಧರಿಸಿ ನೈತಿಕ ಬೆಂಬಲ ವ್ಯಕ್ತಪಡಿಸಿ ಅಂಗಡಿಗಳನ್ನು ತೆರೆಯುವ ನಿರ್ಧಾರ ಕೈಗೊಂಡಿವೆ. ರಾಜ್ಯದಲ್ಲಿ ಸುಮಾರು 26 ಸಾವಿರಕ್ಕೂ ಅಧಿಕ ಮೆಡಿಕಲ್ ಶಾಪ್‌ಗಳಿದ್ದು, ಬೆಂಗಳೂರಿನಲ್ಲಿ ಶೇಕಡಾ 90ರಷ್ಟು ಅಂಗಡಿಗಳು ಎಂದಿನಂತೆ ಕಾರ್ಯನಿರ್ವಹಿಸುತ್ತಿವೆ….

Read More

ಇಂಧನ ಬೆಲೆ ಏರಿಕೆ ನಡುವೆಯೂ ಬಸ್ ದರ ಹೆಚ್ಚಳ ಇಲ್ಲ: ದಕ್ಷಿಣ ಕನ್ನಡ ಬಸ್ ಮಾಲಕರ ಸಂಘ

ಜಾಗತಿಕ ಮಟ್ಟದಲ್ಲಿ ಇಂಧನ ತೈಲ ಬೆಲೆ ನಿರಂತರ ಏರಿಕೆಯಾಗುತ್ತಿರುವ ನಡುವೆಯೂ ಮುಂದಿನ ಒಂದು ತಿಂಗಳವರೆಗೆ ಬಸ್ ದರ ಹೆಚ್ಚಳ ಮಾಡದಿರಲು ದಕ್ಷಿಣ ಕನ್ನಡ ಬಸ್ ಮಾಲಕರ ಸಂಘ ತೀರ್ಮಾನಿಸಿದೆ ಎಂದು ಸಂಘದ ಅಧ್ಯಕ್ಷ ಅಝೀಝ್ ಪರ್ತಿಪ್ಪಾಡಿ ತಿಳಿಸಿದ್ದಾರೆ. ಮಂಗಳವಾರ ನಡೆದ ದಕ್ಷಿಣ ಕನ್ನಡ ಬಸ್ ಮಾಲಕರ ಸಂಘದ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಸ್ತುತ ಪರಿಸ್ಥಿತಿಯಲ್ಲಿ ವಾಹನಗಳ ಬಿಡಿಭಾಗಗಳು, ಪೆಟ್ರೋಲ್, ಡೀಸೆಲ್ ಹಾಗೂ ಇಂಜಿನ್ ಆಯಿಲ್ ಬೆಲೆಗಳು ಗಣನೀಯವಾಗಿ ಏರಿಕೆಯಾಗಿರುವುದರಿಂದ ಸಾರಿಗೆ ನಿರ್ವಹಣಾ ವೆಚ್ಚ ಹೆಚ್ಚಾಗಿದೆ…

Read More

ಗಡಿನಾಡು ಕನ್ನಡ ಸೇವೆಗೆ ರಾಜ್ಯ ಮಟ್ಟದ ಗೌರವ: ಡಾ. ವಾಮನ್ ರಾವ್ ಬೇಕಲ್ ಹಾಗೂ ಸಂಧ್ಯಾರಾಣಿ ಟೀಚರ್ ದಂಪತಿಗೆ “ಕರುನಾಡ ಕನ್ನಡ ಗಡಿನಾಡು ಪೋಷಕ ರತ್ನ” ಪ್ರಶಸ್ತಿ

ಕರುನಾಡ ಕನ್ನಡ ಸಾಹಿತ್ಯ ಹಾಗೂ ಸಾಂಸ್ಕೃತಿಕ ಬಳಗ(ರಿ), ಬೆಂಗಳೂರು ವತಿಯಿಂದ ನೀಡಲಾಗುವ ರಾಜ್ಯ ಮಟ್ಟದ “ಕರುನಾಡ ಕನ್ನಡ ಗಡಿನಾಡು ಪೋಷಕ ರತ್ನ” ಪ್ರಶಸ್ತಿಗೆ ಗಡಿನಾಡು ಕಾಸರಗೋಡಿನ ಕನ್ನಡ ಸೇವಾ ಕ್ಷೇತ್ರದಲ್ಲಿ ವಿಶಿಷ್ಟ ಸೇವೆ ಸಲ್ಲಿಸುತ್ತಿರುವ ಡಾ. ವಾಮನ್ ರಾವ್ ಬೇಕಲ್ ಹಾಗೂ ಶ್ರೀಮತಿ ಸಂಧ್ಯಾರಾಣಿ ಟೀಚರ್ ದಂಪತಿ ಆಯ್ಕೆಯಾಗಿದ್ದಾರೆ. ಮೇ 25ರಂದು ಹಾವೇರಿ ಜಿಲ್ಲೆಯ ಡಾ. ಬಿ.ಆರ್. ಅಂಬೇಡ್ಕರ್ ಸಭಾಭವನದಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಎರಡನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಗಡಿನಾಡು…

Read More

ಕಾಸರಗೋಡಿನ ತಳ ಮಟ್ಟದ ಬಂಟರ ಏಳಿಗೆಗಾಗಿ ಹೊಸ ಬಂಟ ಸಂಘಟನೆ ಅಸ್ತಿತ್ವಕ್ಕೆ ರೂಪುರೇಷೆ

ಮಹಾದಾನಿ ಕುಳೂರು ಕನ್ಯಾನ ಸದಾಶಿವ ಶೆಟ್ಟಿ ನೇತೃತ್ವದಲ್ಲಿ ನಡೆದ ಸಮಾನ ಮನಸ್ಕ ಬಂಟರ ಸಭೆ ಮಂಜೇಶ್ವರ : ಕಾಸರಗೋಡಿನ ಕೆಳಮಟ್ಟದ ಬಂಟರ ಏಳಿಗೆ ಮತ್ತು ಬಂಟರ ಭವನ ನಿರ್ಮಾಣದ ಸದುದ್ದೇಶವನ್ನು ಮುಂದಿಟ್ಟುಕೊಂಡು ಮಹಾದಾನಿ ಕುಳೂರು ಕನ್ಯಾನ ಸದಾಶಿವ ಶೆಟ್ಟಿಯವರ ನೇತೃತ್ವದಲ್ಲಿ ಸಮಾನ ಮನಸ್ಸಿನ ಬಂಟರು ಭಾಗಿಯಾಗಿ ಕಾಸರಗೋಡು ಬಂಟ ಸಮಾಜದ ಸರ್ವತೋಮುಖ ಏಳಿಗೆಯ ಬಗ್ಗೆ ತೀವ್ರ ಚರ್ಚೆ ನಡೆಯಿತು.ಸದಾಶಿವ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಅವರ ಹೊಸ ನಿವಾಸ ಶ್ರೀಲಿಲಾ ಸದನದಲ್ಲಿ ನಡೆದ ಸಭೆಯಲ್ಲಿ ಮಹತ್ವದ ನಿರ್ಧಾರ ಮಾಡಲಾಯಿತು. ಸಭೆಯಲ್ಲಿ…

Read More

ಪಂಚಾಯತ್ ರಾಜ್ ಬಲವರ್ಧನೆಗೆ ಸಂಘಟನೆಯ ಸಂಕಲ್ಪ: ಕೇಂದ್ರ ಸರಕಾರದ ವೈಫಲ್ಯಗಳ ವಿರುದ್ಧ ಪ್ರತಿಭಟನೆಗೆ ನಿರ್ಧಾರ: ಕುಳಾಲು ಸುಭಾಶ್ಚಂದ್ರ ಶೆಟ್ಟಿ

ಮಂಗಳೂರು, ಮೇ 19: ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ದಕ್ಷಿಣ ಕನ್ನಡ ಜಿಲ್ಲಾ ಮಾಸಿಕ ಸಭೆಯು ಮಂಗಳೂರಿನ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಸಂಘಟನೆಯ ಜಿಲ್ಲಾಧ್ಯಕ್ಷರಾದ ಶ್ರೀ. ಕುಳಾಲು ಸುಭಾಶ್ಚಂದ್ರ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಪಂಚಾಯತ್ ರಾಜ್ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಕುರಿತು ಹಾಗೂ ಗ್ರಾಮೀಣ ಮಟ್ಟದಲ್ಲಿ ಸಂಘಟನೆಯನ್ನು ಸಕ್ರಿಯಗೊಳಿಸುವ ಬಗ್ಗೆ ಮಹತ್ವದ ಚರ್ಚೆಗಳು ನಡೆದವು.ಸಭೆಯನ್ನುದ್ದೇಶಿಸಿ ಮಾತನಾಡಿದ ಶ್ರೀ. ಕುಳಾಲು ಸುಭಾಶ್ಚಂದ್ರ ಶೆಟ್ಟಿಯವರು, “SIR” ಮತದಾರರ ಮ್ಯಾಪಿಂಗ್ ಕಾರ್ಯವನ್ನು ಪಂಚಾಯತ್ ರಾಜ್ ಸಂಘಟನೆಯ ಸದಸ್ಯರು ಗ್ರಾಮೀಣ…

Read More

ಮಂಗಳೂರಿನಲ್ಲಿ ಲಿಫ್ಟ್ ಅವಘಡದಿಂದ ಕಾರ್ಮಿಕ ಸಾವು, ಮೃತ ಕುಟುಂಬಕ್ಕೆ ಸೂಕ್ತ ಪರಿಹಾರ ಹಾಗೂ ಸಂಸ್ಥೆಯ ವಿರುದ್ಧ ಕಠಿನ ಕಾನೂನು ಕ್ರಮಕ್ಕೆ ಎಸ್.ಡಿ.ಟಿ.ಯು ಆಗ್ರಹ

ಮಂಗಳೂರಿನ ಎಜೆ ಆಸ್ಪತ್ರೆಯ ಮುಂಭಾಗದಲ್ಲಿರುವ ಅಗತ್ಯ ವಸ್ತುಗಳನ್ನು ಪೂರೈಕೆ ಮಾಡುವ ಇನ್ಟಾಮಾರ್ಟ್ ಸಂಸ್ಥೆಯಲ್ಲಿ ಕಾರ್ಮಿಕನಾಗಿ ದುಡಿಯುತ್ತಿದ್ದ ಬೆಳ್ತಂಗಡಿ ತಾಲೂಕಿನ ಬೆಳಲು ಪೂಂಜಕೆರೆ ನಿವಾಸಿ ಅವಿವಾಹಿತ 28 ವರ್ಷದ ಯುವಕ ನೌಫಲ್ ಎಂಬುವರು ಸಂಸ್ಥೆಯ ಅವೈಜ್ಞಾನಿಕವಾಗಿ ಯಾವುದೇ ಪರವಾನಿಗೆ ಪಡೆಯದೆ ನಿರ್ಮಿಸಿದ ಲಿಫ್ಟ್ ನಲ್ಲಿ ಸಿಲುಕಿ ಅವಘಡದಿಂದ ಸಾವನ್ನಪ್ಪಿದ್ದು ಈ ಘಟನೆಯು ಅತ್ಯಂತ ದುಃಖಕರ ಹಾಗೂ ಆತಂಕಕಾರಿ ಘಟನೆ ಎಂದು ಎಸ್.ಡಿ.ಟಿ.ಯು ಮಂಗಳೂರು ನಗರ ಜಿಲ್ಲಾ ಉಪಾಧ್ಯಕ್ಷರಾದ ಇರ್ಫಾನ್ ಕಾನ ತೀವ್ರ ಖಂಡನೆ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ನಿರಂತರವಾಗಿ ನಿರ್ಮಾಣ…

Read More
error: Content is protected !!