ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರಿಂದ ಸಾರ್ವಜನಿಕರ ಅಹವಾಲು ಸ್ವೀಕಾರ

ಮಂಗಳೂರು: ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿರುವ ಸಂಸದರ ಕಚೇರಿಯಲ್ಲಿ ಇಂದು ಸಾರ್ವಜನಿಕರ ಕುಂದು-ಕೊರತೆ ಆಲಿಸಿದರು. ಈ ವೇಳೆ ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ್ದ ಸಾರ್ವಜನಿಕರು ಹಾಗೂ ಸಂಘ ಸಂಸ್ಥೆಗಳು ತಮ್ಮ ಭಾಗದ ಸಮಸ್ಯೆ, ಬೇಡಿಕೆಗಳು ಮತ್ತು ಅಹವಾಲುಗಳನ್ನು ಸಂಸದರ ಗಮನಕ್ಕೆ ತಂದರು. ಸಾರ್ವಜನಿಕರ ಅಹವಾಲುಗಳನ್ನು ಆಲಿಸಿದ ಸಂಸದರು, ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳೊಂದಿಗೆ ಸಮಸ್ಯೆಗಳ ನಿವಾರಣೆಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಇದಲ್ಲದೇ ಸಾರ್ವಜನಿಕ ಭೇಟಿ ವೇಳೆ ವಿವಿಧ…

Read More

ಕುತ್ಲೂರು ಸರಕಾರಿ ಶಾಲಾ ಮಕ್ಕಳಿಗೆ ಬಿಎಎಸ್ಎಫ್ ಸಂಸ್ಥೆಯಿಂದ ಪುಸ್ತಕ ಸಾಮಾಗ್ರಿ ಕೊಡುಗೆ

ಮಂಗಳೂರು: ಬೆಳ್ತಂಗಡಿ ತಾಲೂಕಿನ ಕುತ್ಲೂರು ಉನ್ನತೀಕರಿಸಿದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಬಿಎಎಸ್ಎಫ್ ಸಿಎಸ್ ಆರ್ ನಿಧಿಯಿಂದ ನೀಡಲಾದ 50 ಸಾವಿರ ರೂಪಾಯಿ ಮೌಲ್ಯದ ಪುಸ್ತಕ ಸಾಮಾಗ್ರಿ ಗಳನ್ನು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ವಿನಾಯಕ ನರ್ವಾಡೆ ಶಾಲಾ ಮಕ್ಕಳಿಗೆ ಹಸ್ತಾ0ತರಿಸಿದರು. ಈ ವೇಳೆ ಮಾತನಾಡಿದ ಅವರು ಸರಕಾರಿ ಶಾಲೆಯ ಅಭಿವೃದ್ಧಿಗೆ ಸಂಘ ಸಂಸ್ಥೆಗಳ ಸಹಕಾರ ಅತೀ ಅಗತ್ಯವಾಗಿದೆ. ಕುತ್ಲೂರು ಸರಕಾರಿ ಶಾಲೆಯಲ್ಲಿ ಎಲ್ ಕೆ ಜಿ ಹಾಗೂ ಯು…

Read More

ಮೇ 22ಕ್ಕೆ ತೆರೆಕಾಣಲಿದೆ ‘ಗಜಾನನ ಕ್ರಿಕೆಟರ್ಸ್’ ತುಳು ಸಿನಿಮಾ. ಕ್ರಿಕೆಟ್ ಹಿನ್ನೆಲೆ ಕಥೆಗೆ ಪ್ರೀಮಿಯರ್ ಶೋದಲ್ಲೇ ಭರ್ಜರಿ ಮೆಚ್ಚುಗೆ

ಪುತ್ತೂರು: ಪ್ರಜ್ವಲ್‌ ಫಿಲಂಸ್ ಲಾಂಛನದಲ್ಲಿ ತಯಾರಾಗುತ್ತಿರುವ ಪ್ರಜ್ವಲ್ ಶೆಟ್ಟಿ ನಿರ್ಮಾಣ ಹಾಗೂ ಕೀರ್ತನ್ ಭಂಡಾರಿ ನಿರ್ದೇಶನದ ‘ಗಜಾನನ ಕ್ರಿಕೆಟರ್ಸ್ (ಜಂತೊಟ್ಟು ಸಿನ್ಸ್ 1983)’ ತುಳು ಚಲನಚಿತ್ರವು ಮೇ.22ರಂದು ತೆರೆಕಾಣಲಿದೆ ಎಂದು ಚಿತ್ರದ ತಂಡ ಪುತ್ತೂರಿನಲ್ಲಿ ಪತ್ರಿಕಾಗೋಷ್ಟಿಯಲ್ಲಿ ಹೇಳಿದ್ದಾರೆ. ಚಿತ್ರದ ನಾಯಕ ನಟ ವಿನೀತ್ ಕುಮಾರ್ ಅವರು ಮಾತನಾಡಿ ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಗೊಂಡಿದ್ದು, ಜೊತೆಗೆ ಹಲವು ಕಡೆ ಪ್ರೀಮಿಯರ್ ಶೋನಲ್ಲಿ ಉತ್ತಮ ಮೆಚ್ಚುಗೆ ಸಿಕ್ಕಿದೆ. ಸಾಮಾಜಿಕ ಜಾಲತಾಣಗಳಲ್ಲಿ ವೀಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಬಂದಿದೆ. ತುಳುನಾಡು ಚಿತ್ರರಂಗಕ್ಕೆ ಹೊಸ…

Read More

ದ್ವಾರಕ ಕಾರ್ಪೋರೇಶನ್ ಪ್ರೈವೇಟ್ ಲಿಮಿಟೆಡ್ ವತಿಯಿಂದ ವಿಕಲ ಚೇತನರಿಗೆ ಸಂತ್ವ ಉದ್ಯೋಗ ಮಾಡಲು ಹೊಲಿಗೆ ಯಂತ್ರ ವಿತರಣೆ

ಪುತ್ತೂರು ತಾಲ್ಲೂಕು ಪಂಚಾಯತ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ವಿಕಲ ಚೇತನರ ಸೇವಾ ಕೇಂದ್ರ ಕಚೇರಿಯ ಪುತ್ತೂರು ತಾಲ್ಲೂಕು ಪಂಚಾಯತ್ ವಿಕಲ ಚೇತನರ ವಿವಿದೋದ್ದೇಶ ಪುನರ್ವಸತಿ ಕಾರ್ಯ ಕರ್ತರಾದ ನವೀನ್ ಕುಮಾರ್ ರವರ ಮನವಿಗೆ ಸ್ಪಂದಿಸಿದ ಪುತ್ತೂರು ಸರಕಾರಿ ನೌಕರರ ಸಭಾಂಗಣ ದಲ್ಲಿ ಕಾರ್ಯನಿರ್ವಹಿಸುತ್ತಿರುವ ಪುತ್ತೂರು ದ್ವಾರಕ ಕಾರ್ಪೋರೇಶನ್ ಪ್ರೈವೇಟ್ ಲಿಮಿಟೆಡ್ ವತಿಯಿಂದ ದಿನಾಂಕ :18/5/26ರ ಸೋಮವಾರ ದಂದು ಪುತ್ತೂರು ತಾಲ್ಲೂಕು ಕೇಮ್ಮಿಂಜೆ ಗ್ರಾಮದ ಮರೀಲ್ ಮನೆ ನಿವಾಸಿಯಾದ ತೀರ್ವತರದ ಎರಡು ಕಾಲು ಕಳೆದು ಕೊಂಡ ದೈಹಿಕವಾಗಿ 80%…

Read More

ಮೇ 24ರಂದು ಮಂಗಳೂರು ಪ್ರೆಸ್ ಕ್ಲಬ್ ದಿನಾಚರಣೆ

ಮಂಗಳೂರು : ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಪ್ರೆಸ್ ಕ್ಲಬ್ ದಿನಾಚರಣೆ ಮೇ 24 ರಂದು ಬೆಳಗ್ಗೆ 10 ಕ್ಕೆ ನಗರದ ರೆಡ್ ಕ್ರಾಸ್ ಶತಮಾನೋತ್ಸವ ಭವನದ ಪ್ರೇರಣಾ ಸಭಾಂಗಣದಲ್ಲಿ ನಡೆಯಲಿದೆ. ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. 2025 ನೇ ಸಾಲಿನ ಮಂಗಳೂರು ಪ್ರೆಸ್ ಕ್ಲಬ್ ವಾರ್ಷಿಕ ಪ್ರಶಸ್ತಿಗೆ ಆಯ್ಕೆಯಾಗಿರುವ ಸಮಾಜ ಸೇವಕ ದೀಪಕ್.ಜಿ.ಬೆಳ್ತಂಗಡಿ ಇವರಿಗೆ ಮಂಗಳೂರು ನಗರ ಪೊಲೀಸ್ ಕಮಿಷನರೆಟ್‌ನ ಉಪ ಪೊಲೀಸ್ ಆಯುಕ್ತ ಎಚ್.ಎನ್.ಮಿಥುನ್ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಪ್ರೆಸ್…

Read More

ಅಧಿಕ ಮಾಸದ ಅಂಗವಾಗಿ ಧರ್ಮಸ್ಥಳದಲ್ಲಿ ಭಕ್ತಿಪರ ಮಹೋತ್ಸವ. ಜೂನ್ 7ರಿಂದ 13ರವರೆಗೆ ಅಖಂಡ ಹರಿನಾಮ ಸಂಕೀರ್ತನೆ

ಮಂಗಳೂರು:ಅಧಿಕ ಮಾಸದ ಪವಿತ್ರ ಸಂದರ್ಭವನ್ನು ಅಂಗವಾಗಿ ಮಾಡಿಕೊಂಡು ಶ್ರೀ ಚೈತನ್ಯ ಸದ್ಗುರು ಹರಿಪ್ರಸಾದ ಶರದ್ ಸ್ವಾಮಿ ಶಿವೂರಕರ ಅವರ ನೇತೃತ್ವದಲ್ಲಿ ಹಾಗೂ ಶ್ರೀ ಅನಂತ ಶ್ರೀ ವಿಭೂಷಿತ ಪ್ರೋತ್ರಿಯ ಬ್ರಹ್ಮನಿಷ್ಠ ಮಹಾಮಂಡಲೇಶ್ವರ 1008 ಶ್ರೀ ಸ್ವಾಮಿಸದ್ಗುರು ಬ್ರಹ್ಮಾನಂದ ಸರಸ್ವತಿಜೀ ಮಹಾರಾಜ್‌ (ಶ್ರೀ ಪಂಚದಶನಾಮ ಜುನಾ ಅಖಾಡಾ) ಅವರ ದಿವ್ಯ ಸಾನಿಧ್ಯದಲ್ಲಿ “ಶ್ರೀ ಗ್ರಂಥರಾಜ ಜ್ಞಾನೇಶ್ವರಿಯ ಸಾಮುದಾಯಿಕ ಪಾರಾಯಣ ಹಾಗೂ ಅಖಂಡ ಹರಿನಾಮ ಸಪ್ತಾಹ” ಕಾರ್ಯಕ್ರಮವು ಜೂನ್ 7ರಿಂದ 13ರವರೆಗೆ ಧರ್ಮಸ್ಥಳ ಗ್ರಾಮದ ನಿತ್ಯಾನಂದ ನಗರದಲ್ಲಿರುವ ಶ್ರೀ ರಾಮ…

Read More

ಗಡಿನಾಡಿನ ಕ್ರೀಡಾ ತಾರೆ: ರಾಷ್ಟ್ರೀಯ ಥ್ರೋಬಾಲ್ ಟ್ರಯಲ್ಸ್‌ಗೆ ಬೆಳ್ಳೂರಿನ ಆಶಿಶ್ ಆಯ್ಕೆ!

​ಕಾಸರಗೋಡು: ಗಡಿನಾಡು ಕಾಸರಗೋಡಿನ ಕ್ರೀಡಾ ಇತಿಹಾಸದ ಸುವರ್ಣ ಪುಟಕ್ಕೆ ಮತ್ತೊಂದು ಹೆಮ್ಮೆಯ ಗರಿ ಸೇರ್ಪಡೆಯಾಗಿದ್ದು, ಗಡಿನಾಡಿನ ನೆಲದ ಪ್ರತಿಭೆಯೊಂದು ರಾಷ್ಟ್ರಮಟ್ಟದಲ್ಲಿ ಮಿಂಚಲು ಸಜ್ಜಾಗಿದೆ. ಮಧ್ಯಪ್ರದೇಶದ ಇಂದೋರ್‌ನಲ್ಲಿ ಮೇ 21 ರಿಂದ 23 ರವರೆಗೆ ಜರುಗಲಿರುವ 31ನೇ ರಾಷ್ಟ್ರೀಯ ಸಬ್-ಜೂನಿಯರ್ ಥ್ರೋಬಾಲ್ ಚಾಂಪಿಯನ್‌ಶಿಪ್ ಹಾಗೂ 35ನೇ ಫೆಡರೇಶನ್ ಕಪ್ ಸೀನಿಯರ್ ಪಂದ್ಯಾವಳಿಗಾಗಿ, ಕೇರಳ ರಾಜ್ಯ ತಂಡವನ್ನು ಪ್ರತಿನಿಧಿಸುವ ಮುಕ್ತ ಆಯ್ಕೆ ಟ್ರಯಲ್ಸ್‌ಗೆ ಬೆಳ್ಳೂರಿನ ಹೆಮ್ಮೆಯ ಕ್ರೀಡಾಪಟು ಆಶಿಶ್ ಕೆ.ಪಿ. ಭರ್ಜರಿಯಾಗಿ ಆಯ್ಕೆಯಾಗಿದ್ದಾರೆ.​ರಾಷ್ಟ್ರೀಯ ಥ್ರೋಬಾಲ್ ಫೆಡರೇಶನ್‌ನ ತುರ್ತು ಪ್ರಕಟಣೆಯ ಹಿನ್ನೆಲೆಯಲ್ಲಿ,…

Read More

ಹಿಜಾಬ್‌ಗೆ ಅವಕಾಶ: ರಾಜ್ಯ ಸರ್ಕಾರದ ಕ್ರಮಕ್ಕೆ ಶರಣ್ ಪಂಪ್ವೆಲ್ ವಿರೋಧ

ಮಂಗಳೂರು:ಶಾಲಾ–ಕಾಲೇಜುಗಳಲ್ಲಿ ಹಿಜಾಬ್‌ಗೆ ಅವಕಾಶ ನೀಡಿರುವ ರಾಜ್ಯ ಸರ್ಕಾರದ ಕ್ರಮಕ್ಕೆ ವಿಶ್ವ ಹಿಂದೂ ಪರಿಷತ್ ಮುಖಂಡರಾದ ಶರಣ್ ಪಂಪ್ವೆಲ್ ತೀವ್ರ ವಿರೋಧವನ್ನು ವ್ಯಕ್ತಪಡಿಸಿದ್ದಾರೆ . ಮಾಧ್ಯಮ ಮಿತ್ರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಶಿಕ್ಷಣ ಸಂಸ್ಥೆಗಳಲ್ಲಿ ಪವಿತ್ರತೆ ಮತ್ತು ಸಮಾನತೆಯ ವಾತಾವರಣ ಕಾಪಾಡಬೇಕಾದ ಸರ್ಕಾರವೇ ಇದೀಗ ಹಿಜಾಬ್‌ಗೆ ಅವಕಾಶ ನೀಡುವ ಮೂಲಕ ಮತಾಂಧತೆಗೆ ಬೆಂಬಲ ನೀಡುತ್ತಿರುವಂತೆ ಕಾಣುತ್ತಿದೆ ಎಂದು ಟೀಕಿಸಿದರು. “ಇದು ಸ್ಪಷ್ಟವಾದ ಓಲೈಕೆ ರಾಜಕಾರಣದ ನೀತಿಯಾಗಿದೆ. ಸರ್ಕಾರದ ಈ ನಿರ್ಧಾರವನ್ನು ಯುವಜನತೆ ಮತ್ತು ವಿದ್ಯಾರ್ಥಿಗಳು ಖಂಡಿಸಬೇಕು. ಸರ್ಕಾರ…

Read More

ನಿಯಮಬಾಹಿರ ಇ-ಫಾರ್ಮಸಿ ವಿರುದ್ಧ ಮೇ 20ರಂದು ದೇಶವ್ಯಾಪಿ ಮೆಡಿಕಲ್ ಶಾಪ್ ಬಂದ್

ನವದೆಹಲಿ: ನಿಯಮಬಾಹಿರವಾಗಿ ಕಾರ್ಯನಿರ್ವಹಿಸುತ್ತಿರುವ ಇ-ಫಾರ್ಮಸಿಗಳು ಹಾಗೂ ಎಐ (AI) ತಂತ್ರಜ್ಞಾನ ಬಳಸಿ ನಕಲಿ ವೈದ್ಯರ ಪ್ರಿಸ್ಕ್ರಿಪ್ಷನ್‌ಗಳನ್ನು ಸೃಷ್ಟಿಸುವ ಮೂಲಕ ಸಾರ್ವಜನಿಕ ಆರೋಗ್ಯಕ್ಕೆ ಗಂಭೀರ ಧಕ್ಕೆಯುಂಟಾಗುತ್ತಿದೆ ಎಂದು ಆರೋಪಿಸಿ, ಮೇ 20ರಂದು ದೇಶಾದ್ಯಂತ ಮೆಡಿಕಲ್ ಶಾಪ್‌ಗಳ ಬಂದ್‌ಗೆ ಔಷಧ ವ್ಯಾಪಾರಿಗಳ ಸಂಘಟನೆಗಳು ಕರೆ ನೀಡಿವೆ. ‘ಆಲ್ ಇಂಡಿಯಾ ಆರ್ಗನೈಸೇಶನ್ ಆಫ್ ಕೆಮಿಸ್ಟ್ಸ್ ಅಂಡ್ ಡ್ರಗ್ಗಿಸ್ಟ್ಸ್’ (AIOCD) ಮತ್ತು ‘ತೆಲಂಗಾಣ ಕೆಮಿಸ್ಟ್ಸ್ ಅಂಡ್ ಡ್ರಗ್ಗಿಸ್ಟ್ಸ್ ಅಸೋಸಿಯೇಷನ್’ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆಯಲಿದ್ದು, ದೇಶದಾದ್ಯಂತ ಸುಮಾರು 12.40 ಲಕ್ಷಕ್ಕೂ ಅಧಿಕ ಕೆಮಿಸ್ಟ್‌ಗಳು…

Read More

ಉಳ್ಳಾಲ ಸಮುದ್ರ ತೀರದಲ್ಲಿ ಅಪರಿಚಿತ ಮೃತದೇಹ ಪತ್ತೆ…!!

ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಮೃತದೇಹವನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸುತ್ತಿದ್ದಾರೆ. ಮೃತ ವ್ಯಕ್ತಿಯ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ. ಮೃತದೇಹವನ್ನು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದ್ದು, ವಾರಿಸುದಾರರ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ. ಈ ವ್ಯಕ್ತಿಯನ್ನು ಯಾರಾದರೂ ಗುರುತಿಸಿದಲ್ಲಿ ಸಮೀಪದ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ ಮಾಡಲಾಗಿದೆ.

Read More
error: Content is protected !!