ನಿಯಮಬಾಹಿರ ಇ-ಫಾರ್ಮಸಿ ವಿರುದ್ಧ ಮೇ 20ರಂದು ದೇಶವ್ಯಾಪಿ ಮೆಡಿಕಲ್ ಶಾಪ್ ಬಂದ್

ನವದೆಹಲಿ: ನಿಯಮಬಾಹಿರವಾಗಿ ಕಾರ್ಯನಿರ್ವಹಿಸುತ್ತಿರುವ ಇ-ಫಾರ್ಮಸಿಗಳು ಹಾಗೂ ಎಐ (AI) ತಂತ್ರಜ್ಞಾನ ಬಳಸಿ ನಕಲಿ ವೈದ್ಯರ ಪ್ರಿಸ್ಕ್ರಿಪ್ಷನ್‌ಗಳನ್ನು ಸೃಷ್ಟಿಸುವ ಮೂಲಕ ಸಾರ್ವಜನಿಕ ಆರೋಗ್ಯಕ್ಕೆ ಗಂಭೀರ ಧಕ್ಕೆಯುಂಟಾಗುತ್ತಿದೆ ಎಂದು ಆರೋಪಿಸಿ, ಮೇ 20ರಂದು ದೇಶಾದ್ಯಂತ ಮೆಡಿಕಲ್ ಶಾಪ್‌ಗಳ ಬಂದ್‌ಗೆ ಔಷಧ ವ್ಯಾಪಾರಿಗಳ ಸಂಘಟನೆಗಳು ಕರೆ ನೀಡಿವೆ. ‘ಆಲ್ ಇಂಡಿಯಾ ಆರ್ಗನೈಸೇಶನ್ ಆಫ್ ಕೆಮಿಸ್ಟ್ಸ್ ಅಂಡ್ ಡ್ರಗ್ಗಿಸ್ಟ್ಸ್’ (AIOCD) ಮತ್ತು ‘ತೆಲಂಗಾಣ ಕೆಮಿಸ್ಟ್ಸ್ ಅಂಡ್ ಡ್ರಗ್ಗಿಸ್ಟ್ಸ್ ಅಸೋಸಿಯೇಷನ್’ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆಯಲಿದ್ದು, ದೇಶದಾದ್ಯಂತ ಸುಮಾರು 12.40 ಲಕ್ಷಕ್ಕೂ ಅಧಿಕ ಕೆಮಿಸ್ಟ್‌ಗಳು…

Read More

ಉಳ್ಳಾಲ ಸಮುದ್ರ ತೀರದಲ್ಲಿ ಅಪರಿಚಿತ ಮೃತದೇಹ ಪತ್ತೆ…!!

ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಮೃತದೇಹವನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸುತ್ತಿದ್ದಾರೆ. ಮೃತ ವ್ಯಕ್ತಿಯ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ. ಮೃತದೇಹವನ್ನು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದ್ದು, ವಾರಿಸುದಾರರ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ. ಈ ವ್ಯಕ್ತಿಯನ್ನು ಯಾರಾದರೂ ಗುರುತಿಸಿದಲ್ಲಿ ಸಮೀಪದ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ ಮಾಡಲಾಗಿದೆ.

Read More

ಆಶ್ರಮದಲ್ಲಿ ಮಹಿಳೆಯ ಆತ್ಮಹತ್ಯೆ: ಬಂಟ್ವಾಳದಲ್ಲಿ ದಾರುಣ ಘಟನೆ

ಬಂಟ್ವಾಳ: ಆಶ್ರಮದಲ್ಲಿ ವಾಸ್ತವ್ಯ ಇದ್ದ ಮಹಿಳೆಯೊರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.ಬಂಟ್ವಾಳ ತಾಲೂಕಿನ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಅರಳ ಗ್ರಾಮದ ಗುಡ್ಡೆಯಂಗಡಿ ಸ್ನೇಹ ಭಾರತಿ ವಿದ್ಯಾಸಂಸ್ಥೆಯ ಅಧೀನದಲ್ಲಿರುವ ” ನಮ್ಮ ಹಿರಿಯರ ಮನೆ” ಅನಾಥಶ್ರಮದಲ್ಲಿ ವಾಸ್ತವ್ಯ ಇದ್ದ ಉಡುಪಿ ಜಿಲ್ಲೆಯ ಪಡು ಗ್ರಾಮದ ಉಮ್ಮರ್ ಎಂಬವರ ಪತ್ನಿ ಲಕ್ಮೀ ( 67) ಆತ್ಮಹತ್ಯೆ ಮಾಡಿಕೊಂಡ ಮಹಿಳೆಯಾಗಿದ್ದಾರೆ. ಮಾನಸಿಕವಾಗಿ ನೊಂದುಕೊಂಡು ವಾಸ್ತವ್ಯದಲ್ಲಿ ಇದ್ದ ಮಹಿಳೆ ಆಶ್ರಮದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ಅನಾಥಶ್ರಮದ…

Read More

ಅಕ್ರಮ ಮರಳು ಸಾಗಾಟ. ಪಿಕ್ ಅಪ್ ವಾಹನ ವಶಕ್ಕೆ: ವಿಟ್ಲ ಎಸ್. ಐ.ರಾಮಕೃಷ್ಣ ನೇತ್ರತ್ವದಲ್ಲಿ ದಾಳಿ.

ಬಂಟ್ವಾಳ: ಹೊಳೆಯಿಂದ ಮರಳು ತೆಗೆದು ಪಿಕಪ್ ವಾಹನದ ಮೂಲಕ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಆರೋಪದ ಮೇಲೆ ವಾಹನ ಸಹಿತ ಮರಳು ವಶಕ್ಕೆ ಪಡೆದುಕೊಂಡ ಘಟನೆ ವಿಟ್ಲ ಪೋಲೀಸ್ ಠಾಣಾ ವ್ಯಾಪ್ತಿಯ ಕನ್ಯಾನದಲ್ಲಿ ನಡೆದಿದೆ.ವಾಹನದ ಚಾಲಕ ಬಂಟ್ವಾಳ ಕೊಳ್ನಾಡು ನಿವಾಸಿ ರೆನೋಲ್ ಮೆಲ್ರೋಯ್ ಡಿಸೋಜ (31) ಎಂಬಾತ ಅಕ್ರಮ ಮರಳು ಸಾಗಾಟ ಮಾಡುತ್ತಿದ್ದ ಆರೋಪಿಯಾಗಿದ್ದಾನೆ. ವಿಟ್ಲ ಕುಡ್ತಮುಗೇರು ಎಂಬಲ್ಲಿರುವ ಹೊಳೆಯಿಂದ ಪಿಕ್ ಅಪ್ ವಾಹನದಲ್ಲಿ ಅಕ್ರಮವಾಗಿ ಮರಳು ಸಾಗಿಸುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ವಿಟ್ಲ ಪೋಲೀಸ್ ಠಾಣೆಯ…

Read More

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆಗಳು ಬೀಡುಬಿಟ್ಟಿದೆ ; ಹಿಂದೂ ಮುಖಂಡ ಶರಣ್ ಪಂಪ್ವೆಲ್

ಮಂಗಳೂರು: ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾನೂನನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವ ಮೂಲಕ ಕರಾವಳಿಯಲ್ಲಿನ ಶಾಂತಿ ಹಾಗೂ ಸುವ್ಯವಸ್ಥೆಯನ್ನು ಕಾಪಾಡಬೇಕು ಎಂದು ವಿಶ್ವ ಹಿಂದೂ ಪರಿಷತ್ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್ವೆಲ್ ಆಗ್ರಹಿಸಿದರು . ಅವರು ಕದ್ರಿಯ “ವಿಶ್ವಶ್ರೀ” ಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿಯನ್ನು ನೀಡಿ , ಕಳೆದ ಒಂದು ವರ್ಷದಿಂದ ದಕ್ಷಿಣ ಕನ್ನಡ ಹಾಗೂ ಉಡುಪಿ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಯ ಕಟ್ಟುನಿಟ್ಟಿನ ಹಾಗೂ ಪರಿಣಾಮಕಾರಿ ಕ್ರಮಗಳಿಂದ ಶಾಂತಿಯುತ ವಾತಾವರಣ…

Read More

ಮಂಗಳೂರು: ಪ್ರಚೋದನಾತ್ಮಕ ಭಾಷಣ ಆರೋಪ – ಎಸ್‌ಡಿಪಿಐ ಮುಖಂಡನ ವಿರುದ್ಧ ಕಠಿಣ ಕ್ರಮಕ್ಕೆ ವಿಎಚ್‌ಪಿ ಆಗ್ರಹ

ಮಂಗಳೂರು: ಕೋಮು ಸಂಘರ್ಷಕ್ಕೆ ಪ್ರಚೋದನೆ ನೀಡಿರುವ ಆರೋಪದಡಿ ಎಸ್‌ಡಿಪಿಐ ಮುಖಂಡನ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ವಿಶ್ವ ಹಿಂದೂ ಪರಿಷತ್ ಆಗ್ರಹಿಸಿದೆ. ಈ ಕುರಿತು ವಿಶ್ವ ಹಿಂದೂ ಪರಿಷತ್ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್ವೆಲ್ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಬಂಟ್ವಾಳ ತಾಲೂಕಿನ ಗೂಡಿನ ಬಳಿ ನಡೆದ ಉರುಸ್ ಕಾರ್ಯಕ್ರಮದಲ್ಲಿ ಎಸ್‌ಡಿಪಿಐ ಮುಖಂಡನೊಬ್ಬ ಪ್ರಚೋದನಾತ್ಮಕ ಭಾಷಣ ಮಾಡಿರುವುದಾಗಿ ಆರೋಪಿಸಿದರು. “ಗೋಮಾಂಸ ತಿನ್ನುವುದು ನಮ್ಮ ಹಕ್ಕು” ಎಂದು ಭಾಷಣದಲ್ಲಿ ಹೇಳಿರುವುದಲ್ಲದೆ, “ಇದನ್ನು ಪ್ರಶ್ನಿಸಲು ಯಾರಾದರೂ ಬಂದರೆ ಕೈಕಟ್ಟಿ…

Read More

ಮಂಗಳೂರು: ‘ಸರಯೂ ಸಪ್ತಾಹ–2026’ ಮೇ 25ರಿಂದ ಕದ್ರಿ ದೇವಳದಲ್ಲಿ ಆರಂಭ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪ್ರಪ್ರಥಮ ಮಕ್ಕಳ ಮೇಳ ‘ಸರಯೂ ಬಾಲ ಯಕ್ಷ ವೃಂದ’ ಕೋಡಿಕಲ್ ತಂಡದ ಆಶ್ರಯದಲ್ಲಿ ಆಯೋಜಿಸಲಾಗುತ್ತಿರುವ ಬಹುನಿರೀಕ್ಷಿತ ‘ಸರಯೂ ಸಪ್ತಾಹ–2026’ ಕಾರ್ಯಕ್ರಮವು ಮೇ 25ರಿಂದ ಜೂನ್ 1ರವರೆಗೆ ಶ್ರೀ ಕ್ಷೇತ್ರ ಕದ್ರಿ ಮಂಜುನಾಥ ಸ್ವಾಮಿ ದೇವಳದ ರಾಜಾಂಗಣದಲ್ಲಿ ಪ್ರತಿದಿನ ಸಂಜೆ 5.30ರಿಂದ ರಾತ್ರಿ 10 ಗಂಟೆಯವರೆಗೆ ನಡೆಯಲಿದೆ ಎಂದು ಸಂಸ್ಥೆಯ ನಿರ್ದೇಶಕ ವರ್ಕಾಡಿ ರವಿ ಅಲೆವೂರಾಯ ತಿಳಿಸಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಾರಪೂರ್ತಿ…

Read More

ಕ್ರೀಡಾ ಅಂಕಣಕಾರ ಎಸ್. ಜಗದೀಶ್ಚಂದ್ರ ಅಂಚನ್ ಗೆ ” ಜಾನಪದ ರತ್ನ – 2026″ ಪ್ರಶಸ್ತಿ

ಮಂಗಳೂರು: ಗಡಿ ಭಾಗದ ಕನ್ನಡ ಸಂಸ್ಕೃತಿ, ಜಾನಪದ ಕಲೆ ಹಾಗೂ ಸಾಹಿತ್ಯ ಪರಂಪರೆಯನ್ನು ಒಗ್ಗೂಡಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರದ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ, ಬೆಂಗಳೂರು, ಕರ್ನಾಟಕ ಜಾನಪದ ಪರಿಷತ್ತು, ಬೆಂಗಳೂರು ಹಾಗೂ ಕೇರಳ ಗಡಿನಾಡ ಘಟಕ, ಕಾಸರಗೋಡು ಇವರ ಸಂಯುಕ್ತ ಆಶ್ರಯದಲ್ಲಿ ನಾಟ್ಯರತ್ನಂ ಕಣ್ಣನ್ ಪಾಟಾಳಿ ಸ್ಮಾರಕ ಕಥಕಳಿ ಟ್ರಸ್ಟ್ ಸಂಯೋಜನೆಯಲ್ಲಿ ನಡೆದ ‘ಸಮನ್ವಯ’ ಜಾನಪದ ಉತ್ಸವದ ಸಂದರ್ಭದಲ್ಲಿ ಘೋಷಿಸಲಾದ ‘ಜಾನಪದ ರತ್ನ – 2026’ ಪ್ರಶಸ್ತಿಯನ್ನು ಕ್ರೀಡಾ ಅಂಕಣಕಾರ ಎಸ್. ಜಗದೀಶ್ಚಂದ್ರ ಅಂಚನ್…

Read More

ಬಸ್ ಮುಷ್ಕರಕ್ಕೆ ತಾತ್ಕಾಲಿಕ ತಡೆಸಾರಿಗೆ ಸೇವೆ ಸ್ಥಗಿತ ಆತಂಕ ದೂರ; ಪ್ರಯಾಣಿಕರಿಗೆ ನೆಮ್ಮದಿ

ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ರಸ್ತೆ ಸಾರಿಗೆ ನೌಕರರು ನಾಳೆಯಿಂದ ನಡೆಸಲು ಉದ್ದೇಶಿಸಿದ್ದ ಅನಿರ್ದಿಷ್ಟಾವಧಿ ಬಸ್ ಮುಷ್ಕರಕ್ಕೆ ಹೈಕೋರ್ಟ್ ತಾತ್ಕಾಲಿಕ ತಡೆ ನೀಡಿದೆ. ಸಾರ್ವಜನಿಕರ ಹಿತದೃಷ್ಟಿಯನ್ನು ಪರಿಗಣಿಸಿದ ನ್ಯಾಯಾಲಯ, ಯಾವುದೇ ರೀತಿಯ ಮುಷ್ಕರ ನಡೆಸದಂತೆ ಸಾರಿಗೆ ಸಂಘಟನೆಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದು, ನಾಳೆ ಎಂದಿನಂತೆ ರಾಜ್ಯಾದ್ಯಂತ ಬಸ್ ಸಂಚಾರ ಮುಂದುವರಿಯಲಿದೆ ಎಂದು ಸ್ಪಷ್ಟಪಡಿಸಿದೆ. ರಾಜ್ಯ ರಸ್ತೆ ಸಾರಿಗೆ ನೌಕರರ ಒಕ್ಕೂಟವು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿತ್ತು. ಈ ಹಿನ್ನೆಲೆಯಲ್ಲಿ…

Read More

ಬ್ಯಾಂಕ್ ಸೆಕ್ಯೂರಿಟಿ ನೌಕರನ ಹತ್ಯೆ; ಇಬ್ಬರು ಆರೋಪಿಗಳ ಬಂಧನ

​ ಮಂಜೇಶ್ವರ: ಕುಂಬಡಾಜೆ ಸೇವಾ ಸಹಕಾರಿ ಬ್ಯಾಂಕಿನ ಮಾರ್ಪನಡ್ಕ ಶಾಖೆಯ ಭದ್ರತಾ ಸಿಬ್ಬಂದಿ ಸುರೇಶ್ ಬಿ.ಕೆ. (45) ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿರಣ್ (30) ಮತ್ತು ಅಖಿಲೇಷ್ (25) ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ. ​ಕಳೆದ ಭಾನುವಾರ ರಾತ್ರಿ ಬ್ಯಾಂಕ್ ಪರಿಸರದಲ್ಲಿ ಈ ಕೃತ್ಯ ನಡೆದಿತ್ತು. ಕುಂದ್ಲಾಜೆ ಮೈದಾನದಲ್ಲಿ ನಡೆದಿದ್ದ ಕ್ರಿಕೆಟ್ ಪಂದ್ಯಾಟದ ವೇಳೆ ಉಂಟಾದ ಸಣ್ಣ ಮಾತಿನ ಚಕಮಕಿಯೇ ಈ ಹತ್ಯೆಗೆ ಮೂಲ ಕಾರಣ ಎನ್ನಲಾಗಿದೆ. ಕೃತ್ಯದ ಬಳಿಕ ಬೈಕ್ ಬಿಟ್ಟು ಪರಾರಿಯಾಗಿದ್ದ ಆರೋಪಿಗಳು, ಏತಡ್ಕ…

Read More
error: Content is protected !!