ಜೈ ಶ್ರೀರಾಮ್ ಸಮಾಜ ಸೇವಾ ಸಂಸ್ಥೆಯ ದಶಮಾನೋತ್ಸವ: ನಿರ್ಗತಿಕರಿಗೆ ಆಹಾರ ಕಿಟ್, ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

ಹೊಸಂಗಡಿ: ಜೈ ಶ್ರೀರಾಮ್ ಸಮಾಜ ಸೇವಾ ಸಂಸ್ಥೆಯ ದಶಮಾನೋತ್ಸವ ಸಂಭ್ರಮಾಚರಣೆಯ ಅಂಗವಾಗಿ ಹೊಸಂಗಡಿ ಅಯ್ಯಪ್ಪ ಭಜನಾ ಮಂದಿರದಲ್ಲಿ ಸಮಾಜ ಸೇವಾ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ 100 ನಿರ್ಗತಿಕ ಕುಟುಂಬಗಳಿಗೆ ಆಹಾರದ ಕಿಟ್‌ಗಳನ್ನು ಹಾಗೂ 100 ಬಡ ವಿದ್ಯಾರ್ಥಿಗಳಿಗೆ ಪಠ್ಯ ಪುಸ್ತಕಗಳನ್ನು ವಿತರಿಸಲಾಯಿತು. ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆ ನೆರವು ನೀಡುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಸಮಾಜ ಸೇವೆಯ ಮೂಲಕ ಬಡವರ ಜೀವನದಲ್ಲಿ ಬೆಳಕು ತರಲು ಸಂಸ್ಥೆ ನಿರಂತರವಾಗಿ ಪ್ರಯತ್ನಿಸುತ್ತಿದೆ ಎಂದು ಸಂಘಟನೆಯ ಮುಖಂಡರು ತಿಳಿಸಿದ್ದಾರೆ. ದಶಮಾನೋತ್ಸವದ ಅಂಗವಾಗಿ…

Read More

ತಲಪಾಡಿ ಟೋಲ್ ಗೇಟ್ ಬಳಿ ಸ್ಕೂಟರ್ ಸವಾರನಿಗೆ ಹೃದಯಾಘಾತ

ಮಂಜೇಶ್ವರ: ಸ್ಕೂಟರಿನಲ್ಲಿ ಸಂಚರಿಸುತ್ತಿದ್ದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ರಸ್ತೆಯಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ರವಿವಾರ ಬೆಳಿಗ್ಗೆ ತಲಪಾಡಿ ಟೋಲ್ ಗೇಟ್ ಸಮೀಪ ನಡೆದಿದೆ. ಕುಂಬಳೆ ಬಂಬ್ರಾಣದ ಚೂರಿತ್ತಡ್ಕ ನಿವಾಸಿ ಆಶ್ರಫ್ ಯಾನೆ ಎಳೇಪ್ಪಾ ಅಶ್ರಫ್ (58) ಸಾವನ್ನಪ್ಪಿದ ದುರ್ದೈವಿ. ​ರವಿವಾರ ಬೆಳಿಗ್ಗೆ ಸುಮಾರು 6 ಗಂಟೆಗೆ ಆಶ್ರಫ್ ಅವರು ಕುಂಬಳೆಯಿಂದ ಮಂಗಳೂರು ಕಡೆಗೆ ಸ್ಕೂಟರಿನಲ್ಲಿ ತೆರಳುತ್ತಿದ್ದರು. ತಲಪಾಡಿ ಟೋಲ್ ಗೇಟ್ ದಾಟಿದ ಕೂಡಲೇ ತೀವ್ರ ಹೃದಯಾಘಾತ ಸಂಭವಿಸಿ ರಸ್ತೆಯಲ್ಲೇ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಸ್ಥಳೀಯರು ಅವರನ್ನು ಮಂಗಳೂರಿನ ಆಸ್ಪತ್ರೆಗೆ…

Read More

ಪೈವಳಿಕೆ ರಕ್ತಸಾಕ್ಷಿ ಮಂಟಪದಿಂದ ಕೆ.ಆರ್. ಜಯಾನಂದ ಪರ್ಯಟನೆಗೆ ಚಾಲನೆ

ಮಂಜೇಶ್ವರ: ಕೇರಳ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಎಲ್‌ಡಿಎಫ್ ಅಭ್ಯರ್ಥಿ ಕೆ.ಆರ್. ಜಯಾನಂದ ಅವರು ಪೈವಳಿಕೆ ರಕ್ತಸಾಕ್ಷಿ ಮಂಟಪದಿಂದ ತಮ್ಮ ಚುನಾವಣಾ ಪ್ರಚಾರ ಪರ್ಯಟನೆಗೆ ಚಾಲನೆ ನೀಡಿದರು. ಪರ್ಯಟನೆ ಆರಂಭಕ್ಕೂ ಮುನ್ನ ರಕ್ತಸಾಕ್ಷಿ ಸ್ಮಾರಕಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಗೌರವ ನಮನ ಸಲ್ಲಿಸಲಾಯಿತು. ಬಳಿಕ ಕಾರ್ಯಕರ್ತರು ಹಾಗೂ ಪಕ್ಷದ ಮುಖಂಡರ ಸಮ್ಮುಖದಲ್ಲಿ ಪ್ರಚಾರ ಯಾತ್ರೆ ಆರಂಭವಾಯಿತು. ಈ ಸಂದರ್ಭದಲ್ಲಿ ಎಲ್‌ಡಿಎಫ್ ಘಟಕದ ನಾಯಕರು, ವಿವಿಧ ಎಡಪಕ್ಷಗಳ ಕಾರ್ಯಕರ್ತರು ಹಾಗೂ ಬೆಂಬಲಿಗರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದರು. ಈ…

Read More

ಮನ್ ಕೀ ಬಾತ್ ಹೆಚ್ಚು ಬಾರಿ ಆಲಿಸಿದ ಇಬ್ಬರು ಬೂತ್ ಅಧ್ಯಕ್ಷರಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಿಂದ ಅಭಿನಂದನೆ

ಬೆಳ್ಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಜನಪ್ರಿಯ ರೇಡಿಯೋ ಕಾರ್ಯಕ್ರಮ ‘ಮನ್ ಕೀ ಬಾತ್’ ಅನ್ನು ಅತೀ ಹೆಚ್ಚು ಬಾರಿ ಆಲಿಸಿದ ಹಿನ್ನೆಲೆಯಲ್ಲಿ ಬೆಳ್ಳೂರು ಪ್ರದೇಶದ ಇಬ್ಬರು ಬಿಜೆಪಿ ಬೂತ್ ಅಧ್ಯಕ್ಷರನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು ಅಭಿನಂದಿಸಿದ್ದಾರೆ. ಬೆಳ್ಳೂರು ಪಂಚಾಯತ್‌ನ ಹಳೆಯ ಬೂತ್ 90 (ಹೊಸ ಬೂತ್ 104) ಅಧ್ಯಕ್ಷರಾಗಿರುವ ಪುಳಿತ್ತಡಿ ನಿವಾಸಿ ಪ್ರದೀಪ್ ಕುಮಾರ್ ಹಾಗೂ ಹಳೆಯ ಬೂತ್ 91 (ಹೊಸ ಬೂತ್ 108 – ಜಿ.ಹೆಚ್.ಎಸ್ ಬೆಳ್ಳೂರು) ಅಧ್ಯಕ್ಷರಾದ ರಮೇಶ್ ಆಚಾರ್ಯ ಅವರಿಗೆ ಬಿಜೆಪಿ…

Read More

ನಾಲ್ಕು ರಾಜ್ಯಗಳು, ಒಂದು ಕೇಂದ್ರಾಡಳಿತ ಪ್ರದೇಶಕ್ಕೆ ಚುನಾವಣಾ ದಿನಾಂಕ ಘೋಷಣೆ

ನವದೆಹಲಿ: ದೇಶದ ರಾಜಕೀಯ ದಿಕ್ಕನ್ನು ನಿರ್ಧರಿಸಬಲ್ಲ ಬಹುನಿರೀಕ್ಷಿತ ನಾಲ್ಕು ರಾಜ್ಯಗಳು ಹಾಗೂ ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭಾ ಚುನಾವಣೆಯ ದಿನಾಂಕವನ್ನು ಚುನಾವಣಾ ಆಯೋಗ ಪ್ರಕಟಿಸಿದೆ. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ನೇತೃತ್ವದ ಚುನಾವಣಾ ಆಯೋಗ ಭಾನುವಾರ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶ ಪುದುಚೇರಿಯಲ್ಲಿ ನಡೆಯಲಿರುವ ಚುನಾವಣೆಯ ದಿನಾಂಕ ಪ್ರಕಟವಾಗುತ್ತಿದ್ದಂತೆಯೇ ಸಂಬಂಧಿತ ರಾಜ್ಯಗಳಲ್ಲಿ ಮಾದರಿ ನೀತಿ ಸಂಹಿತೆ ಜಾರಿಗೆ ಬಂದಿದೆ. ಪಶ್ಚಿಮ ಬಂಗಾಳವನ್ನು ಹೊರತುಪಡಿಸಿ ಉಳಿದ ರಾಜ್ಯಗಳಲ್ಲಿ…

Read More

ಮಾರ್ಚ್ 28ರಂದು ಕಾಸರಗೋಡಿನಲ್ಲಿ ಜಿಲ್ಲಾ ಮಕ್ಕಳ ಸಾಹಿತ್ಯೋತ್ಸವ ಮತ್ತು ಮಕ್ಕಳ ಕವಿಗೋಷ್ಠಿ

ಕಾಸರಗೋಡು: ಮಕ್ಕಳ ಸಾಹಿತ್ಯವನ್ನು ಪುನಶ್ಚೇತನಗೊಳಿಸಿ ಮಕ್ಕಳಲ್ಲಿ ಅಡಗಿರುವ ಸಾಹಿತ್ಯ ಪ್ರತಿಭೆಯನ್ನು ಬೆಳಗಿಸಲು ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಕೇರಳ ರಾಜ್ಯ ಘಟಕವು ಹಲವು ಸಾಹಿತ್ಯ ಚಟುವಟಿಕೆಗಳನ್ನು ಹಮ್ಮಿಕೊಳ್ಳುತ್ತಿದೆ. 2019ರಲ್ಲಿ ಶಿವರಾಮ ಕಾಸರಗೋಡು ಅವರ ಅಧ್ಯಕ್ಷತೆಯಲ್ಲಿ ಸ್ಥಾಪಿತವಾದ ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಕೇರಳ ರಾಜ್ಯ ಘಟಕವು ಪ್ರಥಮ ಕೇರಳ ರಾಜ್ಯ ಮಕ್ಕಳ ಸಾಹಿತ್ಯ ಸಮ್ಮೇಳನ, ಮಕ್ಕಳ ಸಾಹಿತ್ಯೋತ್ಸವ, ಮಕ್ಕಳ ಕವಿಗೋಷ್ಠಿ ಸೇರಿದಂತೆ ವಿವಿಧ ಕನ್ನಡಪರ ಕಾರ್ಯಕ್ರಮಗಳನ್ನು ನಿರಂತರವಾಗಿ ನಡೆಸುತ್ತ ಬಂದಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ…

Read More

ಯಕ್ಷಗಾನ ಶಿಕ್ಷಕರ ಸಮಾಲೋಚನಾ ಸಭೆಯಕ್ಷ ಶಿಕ್ಷಣ ಫೌಂಡೇಶನ್ ನ ಅಭಿವೃದ್ದಾತ್ಮಕ ಯೋಜನೆ : ಪಟ್ಲ

ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್( ರಿ.) ಮಂಗಳೂರು ಇದರ ಯಕ್ಷಧ್ರುವ ಯಕ್ಷಶಿಕ್ಷಣ ಯೋಜನೆಯಡಿ ಕರ್ತವ್ಯ ನಿರತ ಯಕ್ಷಗಾನ ಶಿಕ್ಷಕರ‌ ಸಮಾಲೋಚನಾ‌ ಸಭೆಯು ಬಲ್ಲಾಲ್ ಭಾಗ್ ಬಳಿ ಇರುವ ಪತ್ತುಮುಡಿ ಸಭಾಂಗಣದಲ್ಲಿ ನಡೆಯಿತು.ಯಕ್ಷಧ್ರುವ ಯಕ್ಷಶಿಕ್ಷಣ ಯೋಜನೆಯ ನಿರ್ದೇಶಕರಾದ ಭಾಗವತ ಪಟ್ಲ ಸತೀಶ್ ಶೆಟ್ಟಿ ಸಭೆಯನ್ನುದ್ದೇಶಿಸಿ ಮಾತನಾಡಿ ಯಕ್ಷಧ್ರುವ ಯಕ್ಷಶಿಕ್ಷಣವು ಪಟ್ಲ ಫೌಂಡೇಶನ್ ನ ಅಭಿವೃದ್ಧಾತ್ಮಕವಾದ ಯೋಜನೆಯಾಗಿದ್ದು ಭವಿತವ್ಯದ ಸುಸಂಸ್ಕೃತ ಪ್ರೇಕ್ಷಕರು ಮತ್ತು ಉತ್ತಮ ಕಲಾವಿದರನ್ನು ತಯಾರುಗೊಳಿಸುವ ನಿಭಾವಣೆಯನ್ನು ಹೊತ್ತ ಯೋಜನೆಯಾಗಿದೆ. ಆ ನಿಟ್ಟಿನಲ್ಲಿ ಎಲ್ಲ ಯಕ್ಷಗಾನ ಶಿಕ್ಷಕರು…

Read More

ಜ್ಞಾನದ ಕೇಂದ್ರ ಪಸರಿಸುತ್ತಿದೆ ಇತಿಹಾಸದ ಹೊಂಗಿರಣ ….. !

ಮಂಗಳೂರು : ಮಂಗಳೂರು ಸಮೀಪದ ಮುಡಿಪು ಗುಡ್ಡದ ಮೇಲಿರುವ ಶ್ರೀಕೃಷ್ಣ ಧ್ಯಾನ ಕೇಂದ್ರವು ಇಂದು ಧ್ಯಾನ, ಆಧ್ಯಾತ್ಮಿಕತೆ ಮತ್ತು ಇತಿಹಾಸವನ್ನು ಒಂದೇ ಸ್ಥಳದಲ್ಲಿ ಪರಿಚಯಿಸುವ ವಿಶಿಷ್ಟ ತಾಣವಾಗಿ ಗುರುತಿಸಿಕೊಂಡಿದೆ. ಪ್ರಕೃತಿಯ ಸೊಬಗು ಮಧ್ಯೆ ನಿರ್ಮಾಣವಾಗಿರುವ ಈ ಭವ್ಯ ಧ್ಯಾನ ಮಂದಿರವು ಭಕ್ತರು ಮತ್ತು ಪ್ರವಾಸಿಗರನ್ನು ಆಕರ್ಷಿಸುತ್ತಿದೆ. ಸಸ್ಯ ಸಿರಿರಾಶಿ ಪ್ರಕೃತಿಯ ನಡುವೆ ಎತ್ತರದ ಗುಡ್ಡದ ಮೇಲೆ ಭವ್ಯವಾಗಿ ವಿರಾಜಮಾನವಾಗಿರುವ ಶ್ರೀಕೃಷ್ಣ ಧ್ಯಾನ ಮಂದಿರವು ತನ್ನ ವಿಶಿಷ್ಟ ವಾಸ್ತುಶೈಲಿಯಿಂದಲೇ ಗಮನ ಸೆಳೆಯುತ್ತದೆ. ಪುರಿ ಜಗನ್ನಾಥ ಮಂದಿರವನ್ನು ಹೋಲುವ ಈ…

Read More

ಡಾ. ವಾಮನ್ ರಾವ್ ಬೇಕಲ್ ಅವರಿಗೆ ರಾಜ್ಯ ಮಟ್ಟದ ‘ಹೊಯ್ಸಳ ಪ್ರಶಸ್ತಿ’

ಕಾಸರಗೋಡು ಕನ್ನಡ ಭವನ ಸಮೂಹ ಸಂಸ್ಥೆಗಳ ರೂವಾರಿ ಹಾಗೂ ಕನ್ನಡ ಭವನದ ಸ್ಥಾಪಕ ಅಧ್ಯಕ್ಷರಾದ ಡಾ. ವಾಮನ್ ರಾವ್ ಬೇಕಲ್ ಅವರಿಗೆ ಕರ್ನಾಟಕದ ಪ್ರತಿಷ್ಠಿತ ರಾಜ್ಯ ಮಟ್ಟದ ‘ಹೊಯ್ಸಳ ಪ್ರಶಸ್ತಿ – 2025’ ಲಭಿಸಿದೆ. ಮೈಸೂರು ನಗರದ ಹೊಯ್ಸಳ ಕನ್ನಡ ಸಂಘ ಮತ್ತು ಸವಿಗನ್ನಡ ಪತ್ರಿಕಾ ಬಳಗವು ಪ್ರತಿವರ್ಷ ನೀಡುವ ಈ ಪ್ರಶಸ್ತಿಗೆ, ಗಡಿನಾಡಿನಲ್ಲಿ ಕನ್ನಡ ಭಾಷೆ ಹಾಗೂ ಸಂಸ್ಕೃತಿಗೆ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಡಾ. ವಾಮನ್ ರಾವ್ ಬೇಕಲ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಹೊಯ್ಸಳ…

Read More

ವಿಟ್ಲ ಪೊಲೀಸ್ ಠಾಣೆಯಲ್ಲಿ ಶಾಂತಿ ಸಭೆ ರಂಜಾನ್ ಹಾಗೂ ಯುಗಾದಿ ಹಬ್ಬ ಶಾಂತಿಯುತವಾಗಿ ಆಚರಿಸಲು ಕರೆ

ವಿಟ್ಲ: ಮುಖಂಡರ ಸಮ್ಮುಖದಲ್ಲಿ ವಿಟ್ಲ ಪೊಲೀಸ್ ಠಾಣೆಯಲ್ಲಿ ಶಾಂತಿ ಸಭೆ ನಡೆಯಿತು. ಮುಂಬರುವ ರಂಜಾನ್ ಹಾಗೂ ಯುಗಾದಿ ಹಬ್ಬಗಳ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎರಡು ಸಮುದಾಯದ ನಾಯಕರು ಪರಸ್ಪರ ಸಹಕಾರದೊಂದಿಗೆ ಶಾಂತಿ ಕಾಪಾಡಿಕೊಳ್ಳುವಂತೆ ಪೊಲೀಸ್ ಸಭ್ ಇನ್ಸ್ ಪೆಕ್ಟರ್ ರಾಮಕೃಷ್ಣ ಇಲಾಖೆಯ ಮೂಲಕ ಸಾರ್ವಜನಿಕರಿಗೆ ಮನವಿ ಮಾಡಿದರು. ಸಭೆಯಲ್ಲಿ ಮಾತನಾಡಿದ ವಿಟ್ಲ ಠಾಣೆಯ ಸಬ್ ಇನ್ಸ್‌ಪೆಕ್ಟರ್ ರಾಮಕೃಷ್ಣ ಅವರು, ಹಬ್ಬದ ಸಂದರ್ಭದಲ್ಲಿ ಮಸೀದಿಗಳಲ್ಲಿ ಕಾರ್ಯಕ್ರಮಗಳು ನಡೆಯುವಾಗ ಸಾರ್ವಜನಿಕರಿಗೆ ಯಾವುದೇ ತೊಂದರೆ ಆಗದಂತೆ ಜಾಗರೂಕತೆ ವಹಿಸಬೇಕು…

Read More
error: Content is protected !!