ಕಾಟು ಮಾವಿನ ಮಿಡಿ ಕೊಯ್ಯದಂತೆ ಇಲಾಖೆಯಿಂದ ಆದೇಶ ಹೊರಡಿಸಿ: ಅರಣ್ಯ‌ಸಚಿವರಿಗೆ‌ಶಾಸಕ ಅಶೋಕ್ ರೈ ಮನವಿ

ಪುತ್ತೂರು: ರಸ್ತೆ ಬದಿ ಹಾಗೂ ಸರಕಾರಿ ಜಾಗದಲ್ಲಿರುವ ಕಾಟು ಮಾವಿನ ಮರದಿಂದ ಮಿಡಿ ಕೊಯ್ಯದಂತೆ ಅರಣ್ಯ ಇಲಾಖೆಯ ಮೂಲಕ ಸರಕಾರ ಆದೇಶ ಹೊರಡಿಸಬೇಕು ಎಂದು ಶಾಸಕ ಅಶೋಕ್ ರೈ ಅರಣ್ಯ ಹಾಗೂ ಪರಿಸರ ಖಾತೆ ಸಚಿವ ಈಶ್ವರಖಂಡ್ರೆಗೆ ಮನವಿ ಸಲ್ಲಿಸಿದ್ದಾರೆ. ಮಂಗಳೂರಿನಲ್ಲಿ ನಡೆದ ಗೇರು ನಿಗಮದ ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕರು ಸರಕಾರಿ ಜಾಗ ಹಾಗೂ ರಸ್ತೆ ಬದಿಯಲ್ಲಿರುವ ಕಾಟು ಮಾವಿನ ಮರದಿಂದ ಯಾವುದೇ ಕಾರಣಕ್ಕೂ ಮಿಡಿ ಕೊಯ್ಯಬಾರದು. ಪ್ರತೀ ಬೇಸಿಗೆಯಲ್ಲಿ ಕೆಲವೊಂದು ಇಲಾಖೆಗಳು ಮಾವಿನ ಮರಗಳನ್ನು ಏಲಂ…

Read More

ಮಾನವೀಯ ಗುಣಗಳಿಂದಾಗಿ ಸೌಹಾರ್ದ ಭಾರತದ ನಿರ್ಮಾಣ ಸಾಧ್ಯ – ರೋಯ್ ಕ್ಯಾಸ್ಟಲಿನೋ

ಜಾತ್ಯಾತೀತ ತತ್ವಗಳ ಅಡಿಪಾಯದಿಂದ ಭವ್ಯ ಭಾರತದ ನಿರ್ಮಾಣವಾಗಿದ್ದರೂ ಇಂದು ಅದೇ ತತ್ವಗಳಿಗೆ ಕೊಡಲಿಪೆಟ್ಟು ನೀಡುವ ಶಕ್ತಿಗಳು ಮೆರೆಯುತ್ತಿದ್ದು,ದೇಶದ ಸಂವಿಧಾನದ ಆಶಯಗಳನ್ನು ಬುಡಮೇಲುಗೊಳಿಸುವಂತಹ ದುಷ್ಕ್ರತ್ಯಗಳು ನಡೆಯುತ್ತಿದೆ.ಮತ್ತೆ ಸೌಹಾರ್ದ ಭಾರತದ ನಿರ್ಮಾಣವಾಗಬೇಕಾದರೆ ಎಳೆಯ ಪ್ರಾಯದ ಮಕ್ಕಳಲ್ಲೇ ಮಾನವೀಯ ಗುಣಗಳನ್ನು ಬೆಳೆಸುವ ಮೂಲಕ ಸೌಹಾರ್ದತೆಯನ್ನು ಕಾಪಾಡಬೇಕಾಗಿದೆ ಎಂದು ಸಂತ ಮದರ್ ತೆರೇಸಾ ವಿಚಾರ ವೇದಿಕೆಯ ಅಧ್ಯಕ್ಷರಾದ ರೋಯ್ ಕ್ಯಾಸ್ಟಲಿನೋ ರವರು ಅಭಿಪ್ರಾಯ ಪಟ್ಟರು. ಅವರು ಕಳೆದ 6 ದಿನಗಳಿಂದ ನಗರದ ಸಂತ ಅಲೋಶಿಯಸ್ ಹೈಸ್ಕೂಲ್ ನಲ್ಲಿ ಜರುಗಿದ ಚಿಣ್ಣರ ಕಲರವ –…

Read More

ಗೇರು ಬೆಳೆ ಅಭಿವೃದ್ಧಿಗೆ ₹1 ಕೋಟಿ ಅನುದಾನ: ಸಚಿವ ಈಶ್ವರ್ ಖಂಡ್ರೆ

ಮಂಗಳೂರು: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಗೇರು ಅಥವಾ ಗೋಡಂಬಿ ಬೆಳೆ ಅಭಿವೃದ್ಧಿಗೆ ಅಪಾರ ಅವಕಾಶವಿದ್ದು, ಗುಣಮಟ್ಟದ ಗೋಡಂಬಿ ಸಸಿಗಳನ್ನು ಬೆಳೆಸಿ ರೈತರಿಗೆ ವಿತರಿಸಲು ಗೇರು ಅಭಿವೃದ್ಧಿ ನಿಗಮಕ್ಕೆ ₹1 ಕೋಟಿ ಅನುದಾನ ನೀಡಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಬಿ. ಖಂಡ್ರೆ ತಿಳಿಸಿದ್ದಾರೆ. ನಗರದ ಕದ್ರಿ ಉದ್ಯಾನವನದಲ್ಲಿ ರವಿವಾರ ಗೇರು ಅಭಿವೃದ್ಧಿ ನಿಗಮ ಹಾಗೂ ಕರ್ನಾಟಕ ಅರಣ್ಯ ಇಲಾಖೆಯ ವತಿಯಿಂದ ಆಯೋಜಿಸಲಾದ ಗೇರು ಮೇಳಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು….

Read More

ಕಾರ್ಕಳ: ನಾರಿಶಕ್ತಿ ಜಾಗೃತಿ ಸಮಾವೇಶ, ಸಾಧಕಿಯರಿಗೆ ಸನ್ಮಾನ

ಕಾರ್ಕಳ: ಮಹಿಳಾ ಸಬಲೀಕರಣ ಎಂದರೆ ಕೇವಲ ಹಕ್ಕುಗಳಿಗಾಗಿ ಸದ್ದು ಮಾಡುವುದಲ್ಲ. ಬದಲಿಗೆ, ಸಮಾಜದಲ್ಲಿ ಸಮಾನತೆ ಮತ್ತು ನ್ಯಾಯಯುತ ಅವಕಾಶಗಳನ್ನು ಪಡೆದುಕೊಳ್ಳುತ್ತಲೇ, ಜವಾಬ್ದಾರಿಯುತ ಸ್ಥಾನಗಳನ್ನು ಅಲಂಕರಿಸಿ ಮುನ್ನಡೆಯುವುದಾಗಿದೆ ಎಂದು ವಾಗ್ಮಿ ಹಾಗೂ ಸಾಮಾಜಿಕ ಕಾರ್ಯಕರ್ತೆ ಸುರಭಿ ಹೊಡಿಗೆರೆ ಪ್ರತಿಪಾದಿಸಿದರು. ಇಲ್ಲಿನ ಮಂಜುನಾಥ ಪೈ ಸಭಾಂಗಣದಲ್ಲಿ ರವಿವಾರ ಹಮ್ಮಿಕೊಳ್ಳಲಾಗಿದ್ದ ನಾರಿಶಕ್ತಿ ಸಾಧಕ ಮಹಿಳೆಯರ ಅಭಿನಂದನಾ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿ ಅವರು ಮಾತನಾಡುತ್ತಿದ್ದರು. ಆಧುನಿಕ ಸಮಾಜದಲ್ಲಿ ಮಹಿಳೆಗೆ ಕೇವಲ ಸುರಕ್ಷತೆ ಅಥವಾ ರಕ್ಷಣೆ ನೀಡಿದರೆ ಸಾಲದು. ಅದಕ್ಕಿಂತ ಹೆಚ್ಚಾಗಿ ಆಕೆಗೆ ಸ್ವತಂತ್ರವಾಗಿ…

Read More

ಸೂರಂಬೈಲು ನಿವಾಸಿ,ಮಾಜಿ ಆಟೋ ಚಾಲಕ ನೇಣು ಬಿಗಿದು ಆತ್ಮಹತ್ಯೆ

ಮಂಜೇಶ್ವರ: ಸೂರಂಬೈಲು ನಿವಾಸಿ, ಮಾಜಿ ಆಟೋ ಚಾಲಕ ಪುರುಷೋತ್ತಮ ಗಟ್ಟಿ (54) ಅವರು ಶನಿವಾರ ಮುಂಜಾನೆ ತಮ್ಮ ಮನೆಯ ಸಿಟೌಟ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ​ಬೆಳಿಗ್ಗೆ ಸುಮಾರು 6:30ರ ವೇಳೆಗೆ ಈ ಘಟನೆ ಬೆಳಕಿಗೆ ಬಂದಿದ್ದು, ತಕ್ಷಣವೇ ಕುಟುಂಬಸ್ಥರು ಅವರನ್ನು ಕುಂಬಳೆ ಜಿಲ್ಲಾ ಸಹಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಪರೀಕ್ಷಿಸಿದ ವೈದ್ಯರು ಅವರು ಅದಾಗಲೇ ಸಾವನ್ನಪ್ಪಿರುವುದಾಗಿ ಘೋಷಿಸಿದ್ದಾರೆ. ಈ ಹಿಂದೆ ಕುಂಬಳೆಯಲ್ಲಿ ಆಟೋ ಚಾಲಕನಾಗಿ ಕೆಲಸ ಮಾಡುತ್ತಿದ್ದ ಪುರುಷೋತ್ತಮ ಗಟ್ಟಿ ಅವರ ಸಾವಿಗೆ ನಿಖರ ಕಾರಣ…

Read More

ಗ್ರಾಮೀಣ ಭಾಗದ ಆರೋಗ್ಯ ಬಲವರ್ಧನೆಗೆ ಸರ್ಕಾರದ ಮಹತ್ವದ ಹೆಜ್ಜೆ:ಆಸ್ಪತ್ರೆಗಳ ಖಾಸಗೀಕರಣದ ಆರೋಪಕ್ಕೆ ಕಿವಿಗೊಡಬೇಡಿ-ಕೆ.ಹರೀಶ್ ಕುಮಾರ್

ರಾಜ್ಯದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ತಳಮಟ್ಟದಿಂದ ಮತ್ತಷ್ಟು ಬಲಪಡಿಸಲು ಹಾಗೂ ಗ್ರಾಮೀಣ ಭಾಗದ ಜನರಿಗೆ ತಜ್ಞ ವೈದ್ಯಕೀಯ ಸೇವೆಗಳನ್ನು ಮನೆಬಾಗಿಲಿಗೇ ತಲುಪಿಸಲು ರಾಜ್ಯ ಸರ್ಕಾರ ಕೈಗೊಂಡಿರುವ ಮಹತ್ವದ ನಿರ್ಧಾರ ಅತ್ಯಂತ ಸ್ವಾಗತಾರ್ಹ. ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಸಮುದಾಯ ಆರೋಗ್ಯ ಕೇಂದ್ರಗಳು ಹಾಗೂ ತಾಲೂಕು ಆಸ್ಪತ್ರೆಗಳಲ್ಲಿ ಗುಣಮಟ್ಟದ ಆರೋಗ್ಯ ಸೇವೆಗಳನ್ನು ವಿಸ್ತರಿಸುವ ಉದ್ದೇಶದಿಂದ ಪ್ರತಿಷ್ಠಿತ ವೈದ್ಯಕೀಯ ಕಾಲೇಜುಗಳೊಂದಿಗೆ ಕರಾರು ಒಪ್ಪಂದ ಮಾಡಿಕೊಳ್ಳಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮುಂದಾಗಿರುವುದು ಶ್ಲಾಘನೀಯ. ಇದರ ಮೂಲಕ ಹೆಚ್ಚುವರಿ ವೈದ್ಯಕೀಯ ಸಿಬ್ಬಂದಿ,…

Read More

ಹಳೆ ಡಿಸಿ ಕಚೇರಿಯಲ್ಲಿ ಹೈಕೋರ್ಟ್ ಸಂಚಾರಿ ಪೀಠಕ್ಕೆ ಸಿದ್ಧತೆ:ಐವನ್ ಡಿ’ಸೋಜಾ ವಿಶ್ವಾಸ

ಮಂಗಳೂರು:ಮಂಗಳೂರಿನಲ್ಲಿ ಹೈಕೋರ್ಟ್‌ನ ಸಂಚಾರಿ ಪೀಠ ಅಥವಾ ಶಾಶ್ವತ ಪೀಠ ಸ್ಥಾಪಿಸಬೇಕೆಂಬ ಬೇಡಿಕೆ ಕೇವಲ ವಕೀಲರದ್ದಲ್ಲ, ಇಡೀ ಕರಾವಳಿ ಭಾಗದ ಸಾರ್ವಜನಿಕರ ನ್ಯಾಯಸಮ್ಮತ ಹಕ್ಕಿನ ಬೇಡಿಕೆಯಾಗಿದ್ದು ಇದಕ್ಕೆ ಮನ್ನಣೆಯನ್ನು ರಾಜ್ಯದ ಮುಖ್ಯ ಮಂತ್ರಿಗಳು ನೀಡಿದ್ದು ಅಕ್ಟೋಬರ್ ತಿಂಗಳ ಒಳಗಾಗಿ ನಗರದ ಹಳೆ ಡಿಸಿ ಕಚೇರಿಯಲ್ಲಿ ಸಂಚಾರಿ ಹೈಕೋರ್ಟ್ ಪೀಠ ಸ್ಥಾಪನೆಯಾಗಲಿದೆ ಎಂದು ವಿಧಾನ ಪರಿಷತ್ ಸದಸ್ಯರು ಹಾಗೂ ಹೈಕೋರ್ಟ್ ಪೀಠ ಹೋರಾಟ ಸಮಿತಿಯ ಸಂಚಾಲಕರಾದ ಐವನ್ ಡಿ’ಸೋಜಾ ತಿಳಿಸಿದರು . ನಗರದ ಮನಪಾ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ…

Read More

ಮಂಗಳೂರು: ಕಾರಿನಲ್ಲಿ ಜಾನುವಾರು ಸಾಗಾಟ – ಇಬ್ಬರು ಬಂಧನ

ಮಂಗಳೂರು: ಐಷಾರಾಮಿ ಕಾರಿನಲ್ಲಿ ಜಾನುವಾರುಗಳನ್ನು ಹಿಂಸಾತ್ಮಕವಾಗಿ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಮೂಡಬಿದ್ರೆ ಪೊಲೀಸರು ಸಿನಿಮಾ ಶೈಲಿಯಲ್ಲಿ ಬೆನ್ನಟ್ಟಿ ಬಂಧಿಸಿದ್ದಾರೆ.ಪಡುಮಾರ್ನಾಡು ಗ್ರಾಮದ ಗುಂಡುಕಲ್ಲು ಕ್ರಾಸ್ ಬಳಿ ಈ ಕಾರ್ಯಾಚರಣೆ ನಡೆದಿದೆ. ಮೂಡಬಿದ್ರೆ ಹಂಡೇಲು ನಿವಾಸಿ ಮಹಮ್ಮದ್ ಆರಿಫ್ ಮತ್ತು ಗಂಟಾಲಕಟ್ಟೆಯ ಇಮ್ರಾನ್ ಅಲಿಯಾಸ್ ಇಬ್ರಾಹಿಂ ಬಂಧಿತ ಆರೋಪಿಗಳು. ಇವರಿಂದ ಮಾರುತಿ ಬ್ರೀಜಾ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಪೊಲೀಸರು ರೌಂಡ್ಸ್‌ನಲ್ಲಿದ್ದಾಗ ಖಚಿತ ಮಾಹಿತಿ ಮೇರೆಗೆ ವಾಹನ ತಪಾಸಣೆ ನಡೆಸುತ್ತಿದ್ದರು. ಈ ವೇಳೆ ವೇಗವಾಗಿ ಬಂದ ಬ್ರೀಜಾ ಕಾರನ್ನು ನಿಲ್ಲಿಸಲು ಸೂಚಿಸಿದಾಗ, ಆರೋಪಿಗಳು…

Read More

ರಮೇಶ್ ಚೆನ್ನಿತ್ತಲಗೆ ಗೃಹ ಸಚಿವರಾಗುವ ಸಾಧ್ಯತೆ? ವಿ.ಡಿ. ಸತೀಶನ್ ಸಂಪುಟದಲ್ಲಿ ಚೆನ್ನಿತ್ತಲಗೆ ಮಹತ್ವದ ಸ್ಥಾನ?

ತಿರುವನಂತಪುರಂ:ರಮೇಶ್ ಚೆನ್ನಿತ್ತಲ್ ಅವರು ವಿ.ಡಿ.ಸತೀಸನ್ ನೇತೃತ್ವದ ನೂತನ ಸಚಿವ ಸಂಪುಟದಲ್ಲಿ ಗೃಹ ಸಚಿವರಾಗುವ ಸಾಧ್ಯತೆಯಿದೆ. ನಿಯೋಜಿತ ಮುಖ್ಯಮಂತ್ರಿ ವಿ.ಡಿ.ಸತೀಸನ್ ಹಾಗೂ ರಮೇಶ್ ಚೆನ್ನಿತ್ತಲ ನಡುವೆ ಮಾತುಕತೆ ನಡೆದ ಬಳಿಕ ಈ ಕುರಿತು ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.ಇದೇ ವೇಳೆ,ವಿ. ಡಿ. ಸತೀಶನ್ ಅವರ ಹಣಕಾಸು ಖಾತೆಯನ್ನು ತಮ್ಮ ಬಳಿಯೇ ಉಳಿಸಿಕೊಳ್ಳುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ಮುಖ್ಯಮಂತ್ರಿ ಸ್ಥಾನವನ್ನು ವಿ. ಡಿ. ಸತೀಶನ್ ಅವರಿಗೆ ನೀಡುವಂತೆ ಹೈಕಮಾಂಡ್ ಘೋಷಿಸಿದ ಬಳಿಕ ರಮೇಶ್ ಚೆನ್ನಿತ್ತಲ ಅಸಮಾಧಾನ ವ್ಯಕ್ತಪಡಿಸಿದ್ದಾರೆ….

Read More

ಬಂಟ್ವಾಳ: ಸ್ಕೂಟರ್ ಸ್ಕಿಡ್ – ಸವಾರ ಮೃತ್ಯು

ಬಂಟ್ವಾಳ: ಸ್ಕೂಟರ್ ಸ್ಕಿಡ್ ಆಗಿ ನಡೆದ ಅಪಘಾತದಲ್ಲಿ ಸವಾರನೋರ್ವ ಮೃತಪಟ್ಟ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ರಸ್ತೆಯ ರಾಮಲ್ ಕಟ್ಟೆ ಟೋಲ್ ಗೇಟ್ ಸಮೀಪ ನಡೆದಿದೆ. ಪಿ.ಸೋಮನಾಥ ಪ್ರಭು( 65) ಎಂಬವರು ಮೃತಪಟ್ಟ ವ್ಯಕ್ತಿ.ಅವರು ಮಂಗಳೂರು ಕಡೆಯಿಂದ ಬಿಸಿರೋಡು ಕಡೆಗೆ ಬರುವ ಸಂದರ್ಭದಲ್ಲಿ ರಾಮಲ್ ಕಟ್ಟೆ ಟೋಲ್ ಗೇಟ್ ಸಮೀಪ ಸ್ಕೂಟರ್ ಸ್ಕಿಡ್ ಆಗಿ ಬಿದ್ದು ತಲೆಗೆ ಗಂಭೀರವಾಗಿ ಗಾಯಗೊಂಡಿದ್ದ ಇವರನ್ನು ತುಂಬೆ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಗಂಭೀರವಾಗಿ ಗಾಯಗೊಂಡಿದ್ದ ಇವರಿಗೆ…

Read More
error: Content is protected !!