ಮಗಳ ಹುಟ್ಟುಹಬ್ಬದ ಮುನ್ನವೇ ತಂದೆ ಸಾವಿಗೆ ಬಲಿ – ಬಂಟ್ವಾಳದಲ್ಲಿ ದುರ್ಘಟನೆ

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪಾಣೆಮಂಗಳೂರಿನಲ್ಲಿ ರಾತ್ರಿ ಸಂಭವಿಸಿದ ಎರಡು ಬೈಕ್‌ಗಳ ನಡುವಿನ ಭೀಕರ ಅಪಘಾತದಲ್ಲಿ ಪ್ರತಿಭಾವಂತ ಯುವ ಛಾಯಾಗ್ರಾಹಕರೊಬ್ಬರು ದುರ್ಮ*ಣಕ್ಕೀಡಾಗಿದ್ದಾರೆ. ಶಂಭೂರು ನಿವಾಸಿಯಾದ ರಕ್ಷಿತ್ ಶೆಟ್ಟಿ (43) ಮೃ*ಪಟ್ಟ ದುರ್ದೈವಿ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದರೂ, ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದಿದ್ದಾರೆ. ಬಂಟ್ವಾಳ ವಲಯದ ಛಾಯಾಗ್ರಾಹಕ ಸಂಘದ ಸಕ್ರಿಯ ಸದಸ್ಯರಾಗಿದ್ದ ರಕ್ಷಿತ್ ಶೆಟ್ಟಿ ಅವರು ವೃತ್ತಿಯಲ್ಲಿ ಅತ್ಯುತ್ತಮ ವಿಡಿಯೋಗ್ರಾಫರ್ ಆಗಿ ಗುರುತಿಸಿಕೊಂಡಿದ್ದರು. ಇಡೀ ಘಟನೆಯಲ್ಲಿ ಅತ್ಯಂತ ನೋವಿನ ಸಂಗತಿಯೆಂದರೆ,…

Read More

​ಪೊಲೀಸರ ಮೇಲೆಯೇ ಪೈಶಾಚಿಕ ದಾಳಿ: ಹನಿಟ್ರ್ಯಾಪ್ ಆರೋಪಿಯ ಬಂಧನ ವೇಳೆ ಮಂಜೇಶ್ವರದಲ್ಲಿ ಹೈಡ್ರಾಮಾ!

​ಮಂಜೇಶ್ವರ: ಹೊಸಂಗಡಿಯ ಲಾಡ್ಜ್‌ವೊಂದರಲ್ಲಿ ಪ್ರೇಮಿಗಳನ್ನು ಬೆದರಿಸಿ ನಗ್ನ ವಿಡಿಯೋ ಚಿತ್ರೀಕರಿಸಿದ ‘ಹನಿಟ್ರ್ಯಾಪ್’ ಪ್ರಕರಣದ ಪ್ರಮುಖ ಆರೋಪಿಯನ್ನು ಬಂಧಿಸಲು ಹೋದ ಪೊಲೀಸರ ಮೇಲೆ ಅಮಾನವೀಯವಾಗಿ ಕಲ್ಲು ತೂರಾಟ ನಡೆಸಿದ ಘಟನೆ ಮಚ್ಚಂಪಾಡಿಯಲ್ಲಿ ನಡೆದಿದೆ. ಕಾನೂನು ರಕ್ಷಕರ ಮೇಲೆಯೇ ನಡೆದ ಈ ದಾಳಿಯಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದು, ಮಂಜೇಶ್ವರದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ​ಕಳೆದ ಜನವರಿ 14ರಂದು ಹೊಸಂಗಡಿಯ ಲಾಡ್ಜ್‌ಗೆ ಅತಿಕ್ರಮಿಸಿ ಪ್ರೇಮಿಗಳನ್ನು ಬೆದರಿಸಿ, ಅವರ ನಗ್ನ ವಿಡಿಯೋ ಮಾಡಿ ಹಣ ವಸೂಲಿ ಮಾಡಿದ್ದ ತಂಡದಲ್ಲಿ ಮಚ್ಚಂಪಾಡಿಯ ಹೈದರ್…

Read More

ಕಾಸರಗೋಡು ಬ್ಲಾಕ್ ಪಂಚಾಯತ್ ಆಡಳಿತ ಸಮಿತಿ ಆಯೋಜಿಸಿದ ಇಫ್ತಾರ್ ಸ್ನೇಹ ಆತಿಥ್ಯ

ಕಾಸರಗೋಡು: ಕಾಸರಗೋಡು ಬ್ಲಾಕ್ ಪಂಚಾಯತ್ ಆಡಳಿತ ಸಮಿತಿ ಪಂಚಾಯತ್ ಆವರಣದಲ್ಲಿ ಆಯೋಜಿಸಿದ್ದ ಇಫ್ತಾರ್ ಸ್ನೇಹ ಆತಿಥ್ಯದಲ್ಲಿ ವಿವಿಧ ಕ್ಷೇತ್ರಗಳ ಗಣ್ಯರ ಉಪಸ್ಥಿತಿಯಿಂದ ಗಮನಾರ್ಹವಾಗಿ ನಡೆಯಿತು. ಇಂತಹ ಕೂಟಗಳು ಸಮಾಜದಲ್ಲಿ ಸೌಹಾರ್ದ ಮತ್ತು ಸ್ನೇಹವನ್ನು ಬೆಳೆಸಲು ಇಂದಿನ ಕಾಲದಲ್ಲಿ ಬಹಳ ಮಹತ್ವದ್ದಾಗಿದೆ ಎಂದು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಎಂಎಲ್‌ಎ ಎನ್.ಎ.ನೆಲ್ಲಿಕುನ್ನು ಅವರು ಹೇಳಿದರು.ಬ್ಲಾಕ್ ಪಂಚಾಯತ್ ಅಧ್ಯಕ್ಷ ಕೆ. ಅಬ್ದುಲ್ಲ ಕುಂಞ ಚೆರ್ಕಳ ಅಧ್ಯಕ್ಷತೆ ವಹಿಸಿದರು.ಅಭಿವೃದ್ಧಿ ಕಾರ್ಯಗಳ ಸ್ಥಾಯಿ ಸಮಿತಿ ಅಧ್ಯಕ್ಷ ಅಶ್ರಫ್ ಕರ್ಳ ಸ್ವಾಗತಿಸಿದರು. ಕಲ್ಲಟ್ರ ಮಹೀನ್ ಹಾಜಿ,…

Read More

​ಹೊಸಂಗಡಿಯ ‘ಸಂಗಮ’ ಕೊಂಡಿ ಕಳಚಿತು: ಜನಪ್ರಿಯ ಹೋಟೆಲ್ ಉದ್ಯಮಿ ಮಾಧವ ಇನ್ನಿಲ್ಲ

​ಮಂಜೇಶ್ವರ: ಹೊಸಂಗಡಿ ಪೇಟೆಯ ಅಸ್ಮಿತೆಯಂತಿದ್ದ, ಹಿರಿಯ ಹೋಟೆಲ್ ಉದ್ಯಮಿ ಮತ್ತು ಸಾಮಾಜಿಕ ಹೋರಾಟಗಾರ ಬಿ. ಎಂ. ಮಾಧವ ಸಂಗಮ್ (74) ಅವರು ನಿನ್ನೆ ಇಹಲೋಕ ತ್ಯಜಿಸಿದ್ದಾರೆ. ಅವರ ನಿಧನದೊಂದಿಗೆ ಮಂಜೇಶ್ವರದ ಒಂದು ಸುದೀರ್ಘ ಸಾಮಾಜಿಕ ಪರ್ವ ಅಂತ್ಯಗೊಂಡಂತಾಗಿದೆ.ಕೇವಲ ಹೋಟೆಲ್ ಆಗಿರಲಿಲ್ಲ ‘ಸಂಗಮ್’ ಬಿ. ಎಂ. ನಾರಾಯಣ ಅವರಿಂದ ಬಳುವಳಿಯಾಗಿ ಬಂದ ‘ಸಂಗಮ್ ಹೋಟೆಲ್’ ಅನ್ನು ಮಾಧವ ಅವರು ಕೇವಲ ಒಂದು ಉಪಾಹಾರ ಗೃಹವಾಗಿ ಉಳಿಸಲಿಲ್ಲ. ಅದು ನಾಡಿನ ಹಿರಿಯರು, ಕಿರಿಯರು ಒಟ್ಟಾಗಿ ಕುಳಿತು ಚರ್ಚಿಸುವ, ಸಾಮಾಜಿಕ ವಿಷಯಗಳ…

Read More

ಬೆಂಗಳೂರು : ತುಳು ಚಿತ್ರ ‘ಕಟ್ಟೆಮಾರ್’ 50 ದಿನಗಳ ಸಂಭ್ರಮ: ಹಾಗೂ ಕನ್ನಡದಲ್ಲಿ ಬಿಡುಗಡೆಗೊಳ್ಳಲಿರುವ ಕಟ್ಟೆಮಾರ್ ಚಿತ್ರದ ಸೆಲೆಬ್ರೆಟಿ ಶೋ

ತುಳು ಚಿತ್ರರಂಗದಲ್ಲಿ ಭರ್ಜರಿ ಯಶಸ್ಸು ಕಂಡ “ಕಟ್ಟೆಮಾರ್” ಚಿತ್ರದ 50 ದಿನಗಳ ಸಂಭ್ರಮವನ್ನು ಅದ್ದೂರಿಯಾಗಿ ಆಚರಿಸಲಾಯಿತು. ಚಿತ್ರದ ನಿರ್ಮಾಪಕರು ಲಂಚುಲಾಲ್ ಕೆ .ಎಸ್ ,ಕನ್ನಡ ಚಲನಚಿತ್ರದ ಖ್ಯಾತ ಹಿರಿಯ ನಟ ಸುಂದರ್ ರಾಜ್, ಪ್ರಮೀಳಾ ಜೋಶಿ, ಕನ್ನಡ ನಟಿ ತಾರಾ, ವಾಣಿಶ್ರೀ ಸೇರಿದಂತೆ ಹಲವು ಕಲಾವಿದರು ಹಾಗೂ ಅಭಿಮಾನಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಚಿತ್ರತಂಡದ ಸದಸ್ಯರು, ಕಲಾವಿದರು ಹಾಗೂ ಅಭಿಮಾನಿಗಳು ಸೇರಿಕೊಂಡು ಬೆಂಗಳೂರಿನಲ್ಲಿ ಕೇಕ್ ಕತ್ತರಿಸಿ ಈ ಯಶಸ್ಸನ್ನು ಸಂಭ್ರಮಿಸಿದರು. ಕಾರ್ಯಕ್ರಮದಲ್ಲಿ ಚಿತ್ರತಂಡದ ಪ್ರಮುಖರು ಭಾಗವಹಿಸಿ, ಪ್ರೇಕ್ಷಕರ ಬೆಂಬಲವೇ…

Read More

ಶಾಸಕ ವೇದವ್ಯಾಸ ಕಾಮತ್ ನೇತೃತ್ವದಲ್ಲಿ ದೈವರಾಜ ಕೋಟೆದ ಬಬ್ಬುಸ್ವಾಮಿ ದೈವಸ್ಥಾನ, ಬೊಳ್ಕಲ್ ಗ್ರಾಮ, ಅತ್ತಾವರ ದೈವಸ್ಥಾನದ ಮೇಲ್ಛಾವಣಿ ಕಾಮಗಾರಿಯ ಗುದ್ದಲಿ ಪೂಜೆ

ದೈವರಾಜ ಕೋಟೆದ ಬಬ್ಬುಸ್ವಾಮಿ ದೈವಸ್ಥಾನ, ಬೊಳ್ಕಲ್ ಗ್ರಾಮ, ಅತ್ತಾವರ ದೈವಸ್ಥಾನದ ಮೇಲ್ಛಾವಣಿ ಕಾಮಗಾರಿಯ ಗುದ್ದಲಿ ಪೂಜೆಯು ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ನಡೆಯಿತು. ಈ ವೇಳೆ ಮಾತನಾಡಿದ ಶಾಸಕರು, ಮಂಗಳೂರು ನಗರ ದಕ್ಷಿಣ ಕ್ಷೇತ್ರದ ಹಲವಾರು ಬಬ್ಬುಸ್ವಾಮಿ ದೈವಸ್ಥಾನದ ಜೀರ್ಣೋದ್ದಾರಕ್ಕೆ, ಅಭಿವೃದ್ಧಿಗೆ ಹೆಗಲು ಕೊಡುವ ಯೋಗ ಲಭಿಸಿರುವುದು ನನ್ನ ಪಾಲಿನ ಸೌಭಾಗ್ಯವೆಂದೇ ಭಾವಿಸುತ್ತೇನೆ. ಶೀಘ್ರದಲ್ಲಿ ಇಲ್ಲಿನ ಮೇಲ್ಛಾವಣಿ ಕಾಮಗಾರಿಯು ಪೂರ್ಣಗೊಳ್ಳಲಿ ಎಂದು ಹಾರೈಸಿದರು. ಈ ಸಂದರ್ಭದಲ್ಲಿ ಮೋಹನ್ ಪೂಜಾರಿ, ರವಿಶಂಕರ್ ಮಿಜಾರ್, ನಿತಿನ್ ಕುಮಾರ್, ಲಲೇಶ್…

Read More

ಪೈವಳಿಕೆ ಕಮ್ಯೂನಿಸ್ಟ್ ನೇತಾರರ ಕೂಟ ನೇತೃತ್ವದಲ್ಲಿ ಇಫ್ತಾರ್ ಸಂಗಮ

ಪೈವಳಿಕೆ: ಪೈವಳಿಕೆ ಕಮ್ಯೂನಿಸ್ಟ್ ನೇತಾರರ ಕೂಟದ ನೇತೃತ್ವದಲ್ಲಿ ಇಫ್ತಾರ್ ಸಂಗಮವನ್ನು ಆಯೋಜಿಸಲಾಯಿತು. ಪೈವಳಿಕೆಯ ಲಾಲ್‌ಬಾಗ್‌ನಲ್ಲಿ ನಡೆದ ಈ ಇಫ್ತಾರ್ ಕಾರ್ಯಕ್ರಮದಲ್ಲಿ ಹಲವರು ಭಾಗವಹಿಸಿ ಸೌಹಾರ್ದತೆಯ ಸಂದೇಶವನ್ನು ಹಂಚಿಕೊಂಡರು. ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳ ಮುಖಂಡರು ಮತ್ತು ಸ್ಥಳೀಯರು ಉಪಸ್ಥಿತರಿದ್ದು, ಪರಸ್ಪರ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು.ಕೆ.ಆರ್. ಜಯಾನಂದ, ಪುರುಷೋತ್ತಮ ಬಳ್ಳೂರು, ಹಾರಿಸ್ ಪೈವಳಿಕೆ, ಬಶೀರ್ ಬಿ.ಎ., ವಿನಯ್ ಬಾಯರ್, ಸತ್ತಾರ್ ಬಳ್ಳೂರು, ಅಶೋಕ್ ಭಂಡಾರಿ, ಚಂದ್ರ ನಾಯ್ಕ್ ಸೇರಿದಂತೆ ಹಲವರು ಈ ಇಫ್ತಾರ್ ಸಂಗಮದಲ್ಲಿ ಪಾಲ್ಗೊಂಡಿದ್ದರು.

Read More

ಚಿರತೆ ಭೀತಿಯಿಂದ ಗ್ರಾಮಸ್ಥರಲ್ಲಿ ಆತಂಕ – ಅರಣ್ಯ ಇಲಾಖೆಗೆ ಮನವಿ ಸಲ್ಲಿಕೆ

ಕುಂದಾಪುರ: ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಇನ್ನಂಜೆ ಹಾಗೂ ಸುತ್ತಮುತ್ತಲಿನ ಗ್ರಾಮ ಪ್ರದೇಶಗಳಲ್ಲಿ ಇತ್ತೀಚಿನ ದಿನಗಳಲ್ಲಿ ಚಿರತೆಗಳ ಸಂಚರಣೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಲ್ಲಿ ಭಾರೀ ಆತಂಕದ ವಾತಾವರಣ ನಿರ್ಮಾಣವಾಗಿದೆ. ಈ ಕುರಿತು ತುಳುನಾಡ ರಕ್ಷಣಾ ವೇದಿಕೆ ವತಿಯಿಂದ ಉಡುಪಿ ವಿಭಾಗದ ಅರಣ್ಯ ಇಲಾಖೆಯ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಶುಕ್ರವಾರ (13-03-2026) ಬೆಳಿಗ್ಗೆ 11.30ಕ್ಕೆ ಮನವಿ ಸಲ್ಲಿಸಲಾಯಿತು. ಇತ್ತೀಚಿನ ದಿನಗಳಲ್ಲಿ ಇನ್ನಂಜೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ರಾತ್ರಿ ವೇಳೆಯಲ್ಲಿ ವಾಸಸ್ಥಾನಗಳ ಹತ್ತಿರ ಚಿರತೆ ಕಾಣಿಸಿಕೊಳ್ಳುತ್ತಿರುವ ಘಟನೆಗಳು ಹಲವು ಬಾರಿ…

Read More

ಡಿ. 29ರಂದು ಬೇಕಲ್ ಫೆಸ್ಟ್ ವೇಳೆ ರೈಲು ಬಡಿದು ಮಗ ಮೃತಪಟ್ಟ ಖಿನ್ನತೆಯಿಂದ ಸಾವಿಗೆ ಶರಣಾದ ದಂಪತಿ

ಕಾಸರಗೋಡು: ಬೇಕಲ ಬೀಚ್ ಫೆಸ್ಟ್ ವೇಳೆ ರೈಲು ಢಿಕ್ಕಿ ಹೊಡೆದು ಮೃತಪಟ್ಟ ಇಂಜಿನಿಯರಿಂಗ್ ವಿದ್ಯಾರ್ಥಿಯ ತಂದೆ, ತಾಯಿ ಮನೆಯೊಳಗೆ ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಪೊಯಿನಾಚಿಪರಂಬ್‌ನ ವೇಣುಗೋಪಾಲನ್ ನಾಯರ್ (55), ಪತ್ನಿ ಸ್ಮಿತಾ (45) ಎಂಬಿವರು ಮೃತಪಟ್ಟವರಾಗಿದ್ದಾರೆ. ನಿನ್ನೆ ಬೆಳಿಗ್ಗೆ ಮನೆಯ ಸೆಂಟ್ರಲ್ ಹಾಲ್‌ನಲ್ಲಿ ಮೃತದೇಹಗಳು ಕಂಡು ಬಂದಿವೆ. ವಿಷಯ ತಿಳಿದು ಮೇಲ್ಪರಂಬ ಪೊಲೀಸರು ಸ್ಥಳಕ್ಕೆ ತಲುಪಿ ಪರಿಶೀಲನೆ ಆರಂಭಿಸಿದ್ದಾರೆ. ವೇಣುಗೋಪಾಲನ್ ನಾಯರ್- ಸ್ಮಿತಾ ದಂಪತಿಯ ಏಕೈಕ ಪುತ್ರನೂ, ಮಂಗಳೂರಿನಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿಯಾಗಿದ್ದ ಎಂ. ಶಿವನಂದನ್ (19) ಡಿಸೆಂಬರ್…

Read More

ಗುರುಪುರ ಜಂಕ್ಷನ್‌ನಲ್ಲಿ ನಿಯಂತ್ರಣ ತಪ್ಪಿದ ಲಾರಿ – ಬೇಕರಿ, ಮೊಬೈಲ್ ಅಂಗಡಿಗೆ ಡಿಕ್ಕಿ

ಗುರುಪುರ: ಕೆಂಪು ಬಾಕ್ಸೈಟ್ ತುಂಬಿಕೊಂಡು ಬರುತ್ತಿದ್ದ ಲಾರಿ ಗುರುಪುರ ಜಂಕ್ಷನ್‌ನಲ್ಲಿ ನಿಯಂತ್ರಣ ತಪ್ಪಿ ಅಂಗಡಿಗಳಿಗೆ ಗುದ್ದಿದ ಘಟನೆ ಇಂದು ಸಂಭವಿಸಿದೆ. ಲಾರಿ ನಿಯಂತ್ರಣ ತಪ್ಪಿ ಜಂಕ್ಷನ್ ಬಳಿ ಇರುವ ಮಿನಿ ಬಜಾರ್ ಬೇಕರಿ ಹಾಗೂ ಸಮೀಪದ ಮೊಬೈಲ್ ಅಂಗಡಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ಪರಿಣಾಮ ಅಂಗಡಿಗಳ ಮುಂಭಾಗಕ್ಕೆ ಹಾನಿ ಉಂಟಾಗಿದೆ ಎಂದು ತಿಳಿದುಬಂದಿದೆ. ಘಟನೆಯ ವೇಳೆ ಅಂಗಡಿಗಳಲ್ಲಿ ಹೆಚ್ಚಿನ ಜನಸಂದಣಿ ಇರದ ಕಾರಣ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸ್ಥಳೀಯರು ತಕ್ಷಣ ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ನಿಯಂತ್ರಿಸಲು ಸಹಕರಿಸಿದರು.

Read More
error: Content is protected !!