ಮುಲ್ಕಿ ಸುಂದರರಾಮ ಶೆಟ್ಟಿ ಸ್ಮಾರಕ ಟ್ರಸ್ಟ್ ವತಿಯಿಂದ 300 ಕುಟುಂಬಗಳಿಗೆ 50 ಲಕ್ಷ ರೂ. ಸಹಾಯ ಹಸ್ತ
ಮುಲ್ಕಿ: ಸಮಾಜದ ಉತ್ಕರ್ಷಕ್ಕಾಗಿ ಜೀವನವನ್ನೇ ಸಮರ್ಪಿಸಿದ್ದ ವಿಜಯ ಬ್ಯಾಂಕಿನ ವಿಜಯಶಿಲ್ಪಿ ಮುಲ್ಕಿ ಸುಂದರರಾಮ ಶೆಟ್ಟಿ ಅವರ ನೆನಪಿನಲ್ಲಿ ಮುಲ್ಕಿ ಸುಂದರರಾಮ ಶೆಟ್ಟಿ ಸ್ಮಾರಕ ಚಾರಿಟೇಬಲ್ ಟ್ರಸ್ಟ್ ವತಿಯಿಂದ 300ಕ್ಕೂ ಹೆಚ್ಚು ಕುಟುಂಬಗಳಿಗೆ ಒಟ್ಟು ಸುಮಾರು 50 ಲಕ್ಷ ರೂ. ಮೌಲ್ಯದ ಸಹಾಯ ಹಸ್ತ ನೀಡಲಾಗುತ್ತಿದೆ. ಉನ್ನತ ಹುದ್ದೆ ಮತ್ತು ಅಧಿಕಾರದಲ್ಲಿದ್ದರೂ ಸಮಾಜದ ಸಂಪರ್ಕವನ್ನು ಉಳಿಸಿಕೊಂಡು ಸಮುದಾಯದ ಅಭಿವೃದ್ಧಿಗೆ ಶ್ರಮಿಸಿದವರು ಮುಲ್ಕಿ ಸುಂದರರಾಮ ಶೆಟ್ಟಿ. ರಾಷ್ಟ್ರೀಕೃತ ವಿಜಯ ಬ್ಯಾಂಕಿನಲ್ಲಿ ಕರಾವಳಿ ಭಾಗದ ಅನೇಕ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸಿ, ಆ…