ತಲೆಗೆ ಚೊಂಬು ಸಿಕ್ಕಿಕೊಂಡು ಪರದಾಡುತ್ತಿದ್ದ ಕೋತಿ ರಕ್ಷಣೆ: ಸ್ಥಳೀಯರ ಕಾರ್ಯಕ್ಕೆ ಮೆಚ್ಚುಗೆ

ಉಡುಪಿ: ಕಳೆದ ಎರಡು–ಮೂರು ದಿನಗಳಿಂದ ತಲೆಗೆ ಚೊಂಬು ಸಿಕ್ಕಿಕೊಂಡು ಪರದಾಡುತ್ತಿದ್ದ ಕೋತಿಯೊಂದನ್ನು ಸ್ಥಳೀಯರು ರಕ್ಷಿಸಿದ ಘಟನೆ ಉಡುಪಿ ಜಿಲ್ಲೆಯ ಪೆರ್ಣಂಕಿಲ ಗ್ರಾಮದ ಚಿತ್ರಬೈಲು ಪ್ರದೇಶದಲ್ಲಿ ನಡೆದಿದೆ. ಪರಿಸರದಲ್ಲಿ ಚೊಂಬು ತಲೆಗೆ ಹಾಕಿಕೊಂಡು ಅಲೆದಾಡುತ್ತಿದ್ದ ಕೋತಿಯನ್ನು ಸ್ಥಳೀಯ ಸಮಾಜಸೇವಕರು ಹಾಗೂ ಪರಿಸರ ಪ್ರೇಮಿ ನವೀನ್ ಕುಮಾರ್ ಚಿತ್ರಬೈಲು ಅವರು ಗಮನಿಸಿದರು. ಈ ವಿಷಯವನ್ನು ತಿಳಿದ ಅವರು ಸುಕೇಶ್, ಹರೀಶ ರಾಮ ಹಾಗೂ ವಿಶ್ವನಾಥ ಅವರೊಂದಿಗೆ ಸೇರಿ ಕೋತಿಯನ್ನು ರಕ್ಷಿಸಲು ಮುಂದಾದರು. ಸ್ಥಳೀಯ ಯುವಕರು ಕೋತಿಯನ್ನು ಎಚ್ಚರಿಕೆಯಿಂದ ಹಗ್ಗದ ಸಹಾಯದಿಂದ…

Read More

ಪಡೀಲ್‌ನಲ್ಲಿ ರಸ್ತೆ ಅಪಘಾತ: ಬೈಕ್‌ಗೆ ಗೂಡ್ಸ್ ಟೆಂಪೋ ಡಿಕ್ಕಿ – ಯುವಕ ಮೃತ್ಯು

ಮಂಗಳೂರು: ಗೂಡ್ಸ್ ಟೆಂಪೋವೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಯುವಕನೊಬ್ಬ ದಾರುಣವಾಗಿ ಮೃತಪಟ್ಟ ಘಟನೆ ಮಂಗಳೂರಿನ ಪಡೀಲ್ ಸಮೀಪ ನಡೆದಿದೆ. ಮೃತರನ್ನು ಸಚ್ಚೇರಿಪೇಟೆ ಕುದ್ರೋಟ್ ನಿವಾಸಿ ಸಜೇಶ್ ಪೂಜಾರಿ ಎಂದು ಗುರುತಿಸಲಾಗಿದೆ. ಅವರು ಮಂಗಳೂರಿನ ಟಾಟಾ ಶೋರೂಮ್‌ನಲ್ಲಿ ಅಕೌಂಟೆಂಟ್ ಆಗಿ ಕೆಲಸ ಮಾಡುತ್ತಿದ್ದರು. ಮಾ. 9ರಂದು ಬೆಳಿಗ್ಗೆ ಸಜೇಶ್ ಅವರು ತಮ್ಮ ಬೈಕ್‌ನಲ್ಲಿ ಕೆಲಸಕ್ಕೆ ತೆರಳುತ್ತಿದ್ದ ವೇಳೆ ಪಡೀಲ್ ಸಮೀಪದ ತಿರುವಿನಲ್ಲಿ ಗೂಡ್ಸ್ ಟೆಂಪೋ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ. ಡಿಕ್ಕಿಯ ಪರಿಣಾಮ ಬೈಕ್ ಸಮೇತ ರಸ್ತೆಗೆ…

Read More

ಮಂಜೇಶ್ವರ ಕರಾವಳಿಯಲ್ಲಿ ಕೃತಕ ಪಾರು ಯೋಜನೆ ಯಶಸ್ವಿ: ಮತ್ಸ್ಯ ಸಂಪತ್ತು ವೃದ್ಧಿಯಿಂದ ಮೀನುಗಾರರ ಮುಖದಲ್ಲಿ ಮಂದಹಾಸ

ಮಂಜೇಶ್ವರ: ಸಮುದ್ರದಲ್ಲಿ ಕ್ಷೀಣಿಸುತ್ತಿರುವ ಮತ್ಸ್ಯ ಸಂಪತ್ತನ್ನು ಮರುಪೂರಣ ಮಾಡುವ ಉದ್ದೇಶದಿಂದ ಮೀನುಗಾರಿಕಾ ಇಲಾಖೆಯು ಮಂಜೇಶ್ವರ ಫಿಷಿಂಗ್ ಹಾರ್ಬರ್ ಸಮೀಪ ಜಾರಿಗೆ ತಂದ ‘ಕೃತಕ ಪಾರು’ ಯೋಜನೆ ಭಾರಿ ಯಶಸ್ಸು ಕಂಡಿದೆ. ಯೋಜನೆಯ ಭಾಗವಾಗಿ ಸಮುದ್ರದಾಳದಲ್ಲಿ ಅಳವಡಿಸಲಾದ ಕಾಂಕ್ರೀಟ್ ಬ್ಲಾಕ್‌ಗಳು ಈಗ ಮೀನುಗಳ ಬೃಹತ್ ಆವಾಸಸ್ಥಾನವಾಗಿ ಮಾರ್ಪಟ್ಟಿದ್ದು, ಕರಾವಳಿಯ ಮೀನುಗಾರರಿಗೆ ಹೊಸ ಆಶಾಕಿರಣವಾಗಿವೆ. ಕೂಂತಳ್ ಮೀನುಗಳ ಲಭ್ಯತೆಯಲ್ಲಿ ಏರಿಕೆ ಸಮುದ್ರದ ಮಲಿನೀಕರಣ ಹಾಗೂ ಹವಾಮಾನ ವೈಪರೀತ್ಯಗಳಿಂದ ನೈಸರ್ಗಿಕ ಹವಳದ ದಿಬ್ಬಗಳು ಕ್ರಮೇಣ ನಾಶವಾಗುತ್ತಿರುವ ಹಿನ್ನೆಲೆಯಲ್ಲಿ ಈ ಮಾನವ ನಿರ್ಮಿತ…

Read More

ಅತ್ತಾವರ 55ನೇ ವಾರ್ಡಿನಲ್ಲಿ ರಸ್ತೆ ಅಗಲೀಕರಣ–ತಡೆಗೋಡೆ ಕಾಮಗಾರಿಗೆ ಭೂಮಿಪೂಜೆ

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಅತ್ತಾವರ 55ನೇ ವಾರ್ಡಿನಲ್ಲಿ ರಸ್ತೆ ಅಗಲೀಕರಣ ಹಾಗೂ ತಡೆಗೋಡೆ ನಿರ್ಮಾಣ ಕಾಮಗಾರಿಗೆ ಇತ್ತೀಚೆಗೆ ಭೂಮಿಪೂಜೆ ನೆರವೇರಿತು. ಸುಮಾರು 40 ಲಕ್ಷ ರೂ. ವೆಚ್ಚದಲ್ಲಿ ಈ ಕಾಮಗಾರಿ ಕೈಗೊಳ್ಳಲಾಗುತ್ತಿದೆ. ಭೂಮಿಪೂಜೆ ಕಾರ್ಯಕ್ರಮವು ಶಾಸಕ ವೇದವ್ಯಾಸ ಕಾಮತ್ ಅವರ ನೇತೃತ್ವದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಈ ಪ್ರದೇಶದಲ್ಲಿ ರಸ್ತೆ ಅಗಲೀಕರಣ ಹಾಗೂ ತಡೆಗೋಡೆ ನಿರ್ಮಾಣ ಅಗತ್ಯವಿದ್ದು, ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲೇ ಈ ಕಾಮಗಾರಿಗೆ ಅನುದಾನ ಮಂಜೂರಾಗಿತ್ತು ಎಂದು ಹೇಳಿದರು….

Read More

ಕುಂಭಮೇಳ ವೈರಲ್ ಗರ್ಲ್ ಮೊನಾಲಿಸಾ ಮದುವೆ: ಕೇರಳದಲ್ಲಿ ಪ್ರೇಮ ವಿವಾಹ

ತಿರುವನಂತಪುರಂ: ಮಹಾಕುಂಭಮೇಳದಲ್ಲಿ ವೈರಲ್ ಆಗಿದ್ದ ಯುವತಿ ಮೊನಾಲಿಸಾ ಭೋಸ್ಲೆ ಮತ್ತೆ ಸುದ್ದಿಯಲ್ಲಿದ್ದು, ತಮ್ಮ ಪ್ರೇಮಿ ಫಾರ್ಮನ್ ಖಾನ್ ಅವರೊಂದಿಗೆ ಕೇರಳದಲ್ಲಿ ವಿವಾಹವಾಗಿದ್ದಾರೆ. ಮೊನಾಲಿಸಾ 2025ರ ಪ್ರಯಾಗರಾಜ್ ಮಹಾಕುಂಭಮೇಳದಲ್ಲಿ ರುದ್ರಾಕ್ಷಿ ಮಾಲೆ ಮಾರಾಟ ಮಾಡುತ್ತಿದ್ದಾಗ ತೆಗೆದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ಅವರು ಜನಪ್ರಿಯರಾಗಿದ್ದರು. ಇತ್ತೀಚೆಗೆ ಅವರು ಕೇರಳದ ತಿರುವನಂತಪುರಂ ಸಮೀಪದ ದೇವಸ್ಥಾನದಲ್ಲಿ ಫಾರ್ಮನ್ ಖಾನ್ ಜೊತೆ ಮದುವೆಯಾದರು. ಮದುವೆ ಕಾರ್ಯಕ್ರಮಕ್ಕೆ ಭಾರೀ ಜನಸ್ತೋಮ ಕೂಡ ಸೇರಿದ್ದರಿಂದ ಪೊಲೀಸರು ಭದ್ರತೆ ಒದಗಿಸಿದ್ದರು ಎಂದು ವರದಿಯಾಗಿದೆ. ಈ ಜೋಡಿ…

Read More

ಕಾರಿನಲ್ಲಿ ಸಾಗಿಸುತ್ತಿದ್ದ 103 ಲೀಟರ್ ಗೋವಾ ಮದ್ಯ ವಶ: ಕುಂಜತ್ತೂರು ನಿವಾಸಿ ಬಂಧನ

ಕಾಸರಗೋಡು: ಕಾರಿನಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವಾ ಮೂಲದ ಮದ್ಯವನ್ನು ಕಾಸರಗೋಡು ಎಕ್ಸೈಸು ಅಧಿಕಾರಿಗಳು ವಶಪಡಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ .ಕಾಸರಗೋಡು ರೇಂಜ್ ಎಕ್ಸೈಸ್ ತಂಡ ಹಾಗು ಕಾಸರಗೋಡು ಎಕ್ಸೈಸು ಇಂಟೆಲಿಜೆನ್ಸ್ ಬ್ಯೂರೋ ಸಂಯುಕ್ತವಾಗಿ ನಡೆಸಿದ ಪರಿಶೀಲನೆಯಲ್ಲಿ, ನೀರ್ಚಾಲ್ ಭಾಗದತ್ತ ಮದ್ಯ ಸಾಗಿಸುತ್ತಿದ್ದ KL 57 A 5775 ಸಂಖ್ಯೆಯ ಸ್ವಿಫ್ಟ್ ಕಾರನ್ನು ತಡೆದು ಪರಿಶೀಲನೆ ನಡೆಸಿದರು. ಈ ವೇಳೆ ಕಾರಿನಲ್ಲಿ ಸಾಗಿಸುತ್ತಿದ್ದ 103.68 ಲೀಟರ್ ಗೋವಾ ಮೂಲದ ಅನ್ಯ ರಾಜ್ಯದ IMFL ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ. ಈ ಪ್ರಕರಣದಲ್ಲಿ ಮಂಜೇಶ್ವರಂ…

Read More

ಕಾಸರಗೋಡು: ಕೆ. ಪುರುಷೋತ್ತಮ ಮಾಸ್ತರ್ ಸ್ಮಾರಕ ಗ್ರಂಥಾಲಯದ ರಜತ ಮಹೋತ್ಸವ ಅಂಗವಾಗಿ ಸಾಹಿತ್ಯೋತ್ಸವ

ಕಾಸರಗೋಡು: ಕಾಸರಗೋಡು ಕನ್ನಡ ಗ್ರಾಮದಲ್ಲಿರುವ ಕೆ. ಪುರುಷೋತ್ತಮ ಮಾಸ್ತರ್ ಸ್ಮಾರಕ ಗ್ರಂಥಾಲಯದ ರಜತ ಮಹೋತ್ಸವ ವರ್ಷ (2000–2026) ಅಂಗವಾಗಿ “25 ಸರಣಿ ದತ್ತಿ ಉಪನ್ಯಾಸ ಮಾಲಿಕೆ” ಹಾಗೂ “ಕಾಸರಗೋಡು ಸಾಹಿತ್ಯೋತ್ಸವ – ಕನ್ನಡೋತ್ಸವ” ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಕಾಸರಗೋಡು ಜಿಲ್ಲೆಯಲ್ಲಿ ಖಾಸಗಿ ನೆಲೆಯಲ್ಲಿ ಬೃಹತ್ ಕನ್ನಡ ಪುಸ್ತಕಗಳ ಸಂಗ್ರಹವನ್ನು ಹೊಂದಿರುವ ಈ ಗ್ರಂಥಾಲಯವು ಲೇಖಕರು, ಸಾಹಿತಿಗಳು, ಕವಿಗಳು, ಮಾಧ್ಯಮದವರು, ಶಿಕ್ಷಣ ತಜ್ಞರು, ಸಂಶೋಧಕರು ಮತ್ತು ಕಲಾವಿದರಿಗೆ ಅಧ್ಯಯನಕ್ಕೆ ಅಗತ್ಯವಾದ ವಿವಿಧ ಭಾಷೆ, ಸಾಹಿತ್ಯ, ಸಂಸ್ಕೃತಿ ಹಾಗೂ ಇತಿಹಾಸಕ್ಕೆ ಸಂಬಂಧಿಸಿದ…

Read More

ಪುತ್ತೂರು: ಸೇಡಿಯಾಪಿನಲ್ಲಿ ಸರಕಾರಿ ಮೆಡಿಕಲ್ ಕಾಲೇಜು ಹಾಗೂ 300 ಹಾಸಿಗೆಗಳ ಆಸ್ಪತ್ರೆ – ವಿರೋಧದ ಮಧ್ಯೆಯೇ ಯೋಜನೆಗೆ ಬೆಂಬಲ

ಪುತ್ತೂರು: ಬನ್ನೂರು ಗ್ರಾಮದ ಸೇಡಿಯಾಪು ಪ್ರದೇಶದಲ್ಲಿ ಸರಕಾರಿ ಮೆಡಿಕಲ್ ಕಾಲೇಜು ಮತ್ತು 300 ಹಾಸಿಗೆಗಳ ಆಸ್ಪತ್ರೆ ಆರಂಭಿಸಲು ರಾಜ್ಯ ಸರ್ಕಾರ ಈಗಾಗಲೇ ಅನುಮತಿ ನೀಡಿದೆ ಎಂದು ಕೋಡಿಂಬಾಡಿ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ಜಯಪ್ರಕಾಶ್ ಬದಿನಾರು ಹೇಳಿದರು. ಈ ಯೋಜನೆಗೆ ಬಿಜೆಪಿಯವರು ಅನಗತ್ಯವಾಗಿ ವಿರೋಧ ವ್ಯಕ್ತಪಡಿಸುತ್ತಿದ್ದು “ಮೊಸರಲ್ಲಿ ಕಲ್ಲು ಹುಡುಕುವ ಕೆಲಸ” ಮಾಡುತ್ತಿದ್ದಾರೆ ಎಂದು ಅವರು ಆರೋಪಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿಗಳು ಬಜೆಟ್‌ನಲ್ಲಿ ಪುತ್ತೂರಿಗೆ ಮೆಡಿಕಲ್ ಕಾಲೇಜು ಘೋಷಣೆ ಮಾಡಿದ್ದು, ಶಾಸಕ ಅಶೋಕ್ ಕುಮಾರ್ ರೈ…

Read More

ಕಣ್ವತೀರ್ಥದಲ್ಲಿ ಉಚಿತ ನೇತ್ರ ತಪಾಸಣಾ ಹಾಗೂ ಆಯುರ್ವೇದ ಚಿಕಿತ್ಸಾ ಶಿಬಿರ

ಬೆಂಗ್ರೆ ಕಣ್ವತೀರ್ಥ: ಶ್ರೀ ದೇವಿ ಕೃಪಾ ಫ್ರೆಂಡ್ಸ್ ಕ್ಲಬ್ (ರಿ) ಬೆಂಗ್ರೆ ಕಣ್ವತೀರ್ಥ, ಶ್ರೀ ಭಗವತಿ ಕೃಪಾ ಬಾಲಾಂಜನೇಯ ವ್ಯಾಯಾಮ ಶಾಲೆ (ರಿ) ಬೆಂಗ್ರೆ ಕಣ್ವತೀರ್ಥ, ಜಗದ್ಗುರು ಶ್ರೀ ನಿತ್ಯಾನಂದ ಮಹಾ ಪೀಠಮ್ ಚಾರಿಟೇಬಲ್ ಟ್ರಸ್ಟ್ (ರಿ) ಕೊಂಡೇವೂರು ಇವರ ಸಂಯುಕ್ತ ಆಶ್ರಯದಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ ಮತ್ತು ಉಚಿತ ಆಯುರ್ವೇದ ಚಿಕಿತ್ಸಾ ಶಿಬಿರವನ್ನು ಆಯೋಜಿಸಲಾಗಿದೆ. ಈ ಶಿಬಿರಕ್ಕೆ ಒನ್ ಸೈಟ್ ಎಸ್ಪಿಲೋರ್ ಲಕೋಟಿಕಾ ಫೌಂಡೇಶನ್, ಬೆಂಗಳೂರು, ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಮಂಗಳೂರು,…

Read More

ಮಂಗಳೂರು ಜಂಕ್ಷನ್‌ನಲ್ಲಿ ಭರ್ಜರಿ ಕಾರ್ಯಾಚರಣೆ: 10 ಲಕ್ಷ ಮೌಲ್ಯದ 201 ಮೊಬೈಲ್ ವಶ

ಮಂಗಳೂರು: ಕೇರಳ ವಿಧಾನಸಭೆ ಚುನಾವಣೆಯ ಹಿನ್ನೆಲೆ ರೈಲುಗಳಲ್ಲಿ ತಪಾಸಣೆ ಬಿಗಿಗೊಳಿಸಿರುವ ರೈಲ್ವೇ ಪೊಲೀಸರು ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿ ಸುಮಾರು ರೂ.10 ಲಕ್ಷ ಮೌಲ್ಯದ 201 ಮೊಬೈಲ್‌ಗಳನ್ನು ವಶಕ್ಕೆ ಪಡೆದಿದ್ದಾರೆ. ಮಾರ್ಚ್ 9ರಂದು ಮುಂಜಾನೆ ಸುಮಾರು 3 ಗಂಟೆಯ ವೇಳೆಗೆ ಮಂಗಳೂರು ಜಂಕ್ಷನ್ ರೈಲು ನಿಲ್ದಾಣಕ್ಕೆ ಆಗಮಿಸಿದ ಜಾಮ್‌ನಗರ–ತಿರುನೆಲ್ವೇಲಿ ಜಂಕ್ಷನ್ ಎಕ್ಸ್‌ಪ್ರೆಸ್ ರೈಲುದಲ್ಲಿ ತಪಾಸಣೆ ನಡೆಸಲಾಯಿತು. ಈ ವೇಳೆ ರೈಲಿನ ಸಾಮಾನ್ಯ ಬೋಗಿಯ ಮೇಲಿನ ಲಗೇಜ್ ರಾಕ್‌ನಲ್ಲಿ ವಾರೀಸುದಾರರು ಇಲ್ಲದ ಮೂರು ಬ್ಯಾಗ್‌ಗಳು…

Read More
error: Content is protected !!