‘ಯುವಜನರು ತಂತ್ರಜ್ಞಾನ ಬೆಳವಣಿಗೆಗೆ ಸಂಶೋಧನೆಗೆ ಒತ್ತು ನೀಡಬೇಕು”
ಮಂಗಳೂರು,ಭಾರತದಲ್ಲಿ ತಂತ್ರಜ್ಞಾನ ಅತೀ ವೇಗವಾಗಿ ಬೆಳೆಯುತ್ತಿದ್ದು, ಅದರಂತೆ ಸಮಾಜ ಬದಲಾಗಬೇಕಾಗಿದೆ. ದೇಶದ ಅಭಿವೃದ್ಧಿಗೆ ತಂತ್ರಜ್ಞಾನ ಬೆಳೆವಣಿಗೆ ಹೆಚ್ಚು ಪ್ರಾಮುಖ್ಯತೆ ವಹಿಸಿದ್ದು ಯುವಜನರು ಇನ್ನಷ್ಟು ತಂತ್ರಜ್ಞಾನದಲ್ಲಿ ಸಂಶೋಧನೆ ಮಾಡಿ ಹೊಸ ಆವಿಷ್ಕಾರ ಮಾಡಬೇಕಾಗಿದೆ ಎಂದು ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯದ ಉಪ ನಿರ್ದೇಶಕ ಉಲ್ಲಾಸ್ ಕೆ.ಟಿ ಹೇಳಿದರು. ಅವರು ಭಾರತ ಸರಕಾರ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ, ಮೇರಾ ಯುವ ಭಾರತ್ ದಕ್ಷಿಣ ಕನ್ನಡ, ವಿವೇಕಾನಂದ ಇಂಜಿನಿಯರಿಂಗ್ ಕಾಲೇಜು ಪುತ್ತೂರು, ರಾಷ್ಟ್ರೀಯ ಸೇವಾ ಯೋಜನೆ ಮತ್ತು…