ಮಂಗಳೂರಿನಲ್ಲಿ ಸೌಹಾರ್ದ ಇಫ್ತಾರ್ ಕೂಟ: “ಪ್ರೀತಿ ಹರಡಲಿ ಎಲ್ಲೆಡೆ” ಸಂದೇಶ

ಮಂಗಳೂರು: ಸಂತ ಮದರ್ ತೆರೇಸಾ ವಿಚಾರ ವೇದಿಕೆ ಮಂಗಳೂರು ಇದರ ನೇತೃತ್ವದಲ್ಲಿ “ಪ್ರೀತಿ ಹರಡಲಿ ಎಲ್ಲೆಡೆ” ಎಂಬ ಘೋಷವಾಕ್ಯದೊಂದಿಗೆ ರಮಝಾನ್ ಹಬ್ಬದ ಪ್ರಯುಕ್ತ ಸೌಹಾರ್ದ ಇಫ್ತಾರ್ ಕೂಟವು ಸಂತ ಅಲೋಶಿಯಸ್ ಕಾಲೇಜಿನ ಆವರಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಅಝೀಝ್ ದಾರಿಮಿ ಚೊಕ್ಕಬೆಟ್ಟು ಹಾಗೂ ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ಸಹ ಕುಲಪತಿ ಫಾ. ಮೆಲ್ವಿನ್ ಡಿಕುನ್ಹಾ ಎಸ್.ಜೆ. ಭಾಗವಹಿಸಿದ್ದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವೇದಿಕೆಯ ಅಧ್ಯಕ್ಷ ರೊಯ್ ಕ್ಯಾಸ್ತೆಲಿನೊ, ಖ್ಯಾತ ಸಾಹಿತಿ ಮತ್ತು ನಿವೃತ್ತ ಶಿಕ್ಷಕಿ…

Read More

ಮುಂಡೋಳಿ ನಿವಾಸಿ ಕೃಷಿಕ ಬೈಕ್ ಅಪಘಾತದಲ್ಲಿ ದಾರುಣ ಸಾವು

ಉಳ್ಳಾಲ: ಕುತಾರ್ ಸಮೀಪದ ಮದನಿ ನಗರ ಮುಖ್ಯ ರಸ್ತೆಯಲ್ಲಿ ನಡೆದ ಬೈಕ್ ಅಪಘಾತದಲ್ಲಿ ಪಾದಚಾರಿಯಾಗಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ದಾರುಣ ಘಟನೆ ನಡೆದಿದೆ. ಮುಂಡೋಳಿ ನಿವಾಸಿ ದಿನೇಶ್ ಗಟ್ಟಿ (50) ಮೃತಪಟ್ಟವರು. ಅವರು ರಸ್ತೆ ದಾಟುತ್ತಿದ್ದ ವೇಳೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡರು. ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಮೃತ ದಿನೇಶ್ ಗಟ್ಟಿ ಅವರು ಕೃಷಿಕರಾಗಿದ್ದು, ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಈ ಸಂಬಂಧ ಸ್ಥಳೀಯ ಪೊಲೀಸ್…

Read More

ಸ್ತನ ಹಾಗೂ ಬಾಯಿ ಕ್ಯಾನ್ಸರ್ ಜಾಗೃತಿ ಮತ್ತು ತಪಾಸಣಾ ಶಿಬಿರ

ಉಪ್ಪಳ , ಮಾ.11: ಬೀಡಿ ಕಾರ್ಮಿಕರು ಹಾಗೂ ಅಸಂಘಟಿತ ಕಾರ್ಮಿಕರಿಗಾಗಿ ಸ್ತನ ಮತ್ತು ಬಾಯಿ ಕ್ಯಾನ್ಸರ್ ಜಾಗೃತಿ ಹಾಗೂ ತಪಾಸಣಾ ಶಿಬಿರವನ್ನು ಇಂದು ಬೇಕುರಿನಲ್ಲಿ ಆಯೋಜಿಸಲಾಯಿತು.ಬೇಕುರು ಸಮೀಪದ ಸುಬಾಶ್ ನಗರದಲ್ಲಿರುವ ಯುವಶಕ್ತಿ ಫ್ರೆಂಡ್ಸ್ ಸರ್ಕಲ್ ಲೈಬ್ರರಿಯಲ್ಲಿ ಮಧ್ಯಾಹ್ನ 1.30 ಕ್ಕೆ ಶಿಬಿರ ನಡೆಯಿತು.ಈ ಶಿಬಿರವನ್ನು ಬಿಡಬ್ಲ್ಯುಡಬ್ಲ್ಯುಎಫ್ (BWWF) ಡಿಸ್ಪೆನ್ಸರಿ ಮಂಜೇಶ್ವರ ಮತ್ತು ಎಲ್‌ಡಬ್ಲ್ಯುಒ ಕೇರಳಂ ವತಿಯಿಂದ, ಕೇಂದ್ರ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದ ಆಶ್ರಯದಲ್ಲಿ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಡಾ. ನಿವೇದಾ ಬಿ.ಆರ್ (MBBS), ಎಂಎಸ್ ಜನರಲ್…

Read More

ಆಟೋ ಗ್ಯಾಸ್ ದರ ಏರಿಕೆ ಆರೋಪ: ರಿಕ್ಷಾ ಚಾಲಕರ ಹಠಾತ್ ಪ್ರತಿಭಟನೆ

ಬಂಟ್ವಾಳ: ಇಲ್ಲಿನ ತಲಪಾಡಿ ಪ್ರದೇಶದಲ್ಲಿರುವ ಆಟೋ ಗ್ಯಾಸ್ ಪಂಪ್‌ನಲ್ಲಿ ಏಕಾಏಕಿ ಯಾವುದೇ ಸೂಚನೆ ನೀಡದೇ ರೂ.10 ಹೆಚ್ಚಳ ಮಾಡಲಾಗಿದೆ ಎಂದು ಆರೋಪಿಸಿ ರಿಕ್ಷಾ ಚಾಲಕರು ಹಠಾತ್ ಪ್ರತಿಭಟನೆ ನಡೆಸಿದ ಘಟನೆ ಇಂದು ನಡೆದಿದೆ. ಬಂಟ್ವಾಳ ತಾಲೂಕಿನ ಕೈಕಂಬ ಸಮೀಪದ ತಲಪಾಡಿ ಮಹಾಲಕ್ಷ್ಮಿ ಆಟೋ ಗ್ಯಾಸ್ ಪಂಪ್‌ನಲ್ಲಿ ಕೆ.ಜಿ.ಗೆ ನಿಗದಿತ ದರಕ್ಕಿಂತ ರೂ.10 ಹೆಚ್ಚುವರಿಯಾಗಿ ವಸೂಲಿ ಮಾಡಲಾಗುತ್ತಿದೆ ಎಂದು ಆರೋಪಿಸಿ ರಿಕ್ಷಾ ಚಾಲಕರ-ಮಾಲಕರ ಒಕ್ಕೂಟದ ಅಧ್ಯಕ್ಷ ವಿಶ್ವನಾಥ ಚೆಂಡ್ತಿಮಾರ್ ಅವರ ನೇತೃತ್ವದಲ್ಲಿ ಚಾಲಕರು ಪಂಪ್ ಎದುರು ಪ್ರತಿಭಟನೆ ನಡೆಸಿದರು….

Read More

ಗುರುತು ಸಿಗದ ವ್ಯಕ್ತಿ ಸಾವು: ಮಾಹಿತಿ ನೀಡುವಂತೆ ಕಡಬ ಪೊಲೀಸರ ಮನವಿ

ಕಡಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುರುತು ಸಿಗದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ನಡೆದಿದ್ದು, ಮೃತರ ಗುರುತು ಪತ್ತೆ ಮಾಡಲು ಸಾರ್ವಜನಿಕರ ಸಹಕಾರವನ್ನು ಕಡಬ ಪೊಲೀಸರು ಕೋರಿದ್ದಾರೆ. ಪೊಲೀಸ್ ಮಾಹಿತಿಯ ಪ್ರಕಾರ, ಮಾರ್ಚ್ 6ರಂದು ಮಧ್ಯಾಹ್ನ ಸುಮಾರು 1.20 ಗಂಟೆಯ ವೇಳೆಗೆ ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ಬಿಳಿನೆಲೆ ಜಂಕ್ಷನ್ ಸಮೀಪದ ಅಂಗಡಿಯ ಬಳಿ ಒಬ್ಬ ವ್ಯಕ್ತಿ ಅಸ್ವಸ್ಥಗೊಂಡು ಮಲಗಿರುವ ಸ್ಥಿತಿಯಲ್ಲಿ ಕಂಡುಬಂದಿದ್ದರು. ಸ್ಥಳೀಯರ ಸಹಾಯದಿಂದ ಅವರನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು…

Read More

ಸರಕಾರಿ ಅಧಿಕಾರಿಗಳ ಕೇಸರಿ ನಡಿಗೆ ಸಂವಿಧಾನ ವಿರೋಧಿ: ಎಸ್‌ಡಿಪಿಐ ಆಕ್ರೋಶ”

ಮಂಗಳೂರು: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಅಧೀನ ಸಂಸ್ಥೆಯಾಗಿರುವ ಭಾರತೀಯ ಮಜ್ದೂರು ಸಂಘದ ಕಾರ್ಯಕ್ರಮದಲ್ಲಿ ದ.ಕ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಚ್. ಆರ್. ತಿಮ್ಮಯ್ಯ ಹಾಗೂ ತಾಲೂಕು ಆರೋಗ್ಯ ಅಧಿಕಾರಿ ಡಾ.ಅಶೋಕ್ ರೈ ಭಾಗವಹಿಸಿರುವುದನ್ನು ಎಸ್‌ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯದರ್ಶಿ ಅಶ್ರಫ್ ತಲಪಾಡಿ ತೀವ್ರವಾಗಿ ಖಂಡಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, “ಸರಕಾರಿ ಅಧಿಕಾರಿಗಳು ಸಂವಿಧಾನಬದ್ಧವಾಗಿ ತಮ್ಮ ಕರ್ತವ್ಯ ನಿರ್ವಹಿಸಬೇಕೇ ಹೊರತು, ನಿರ್ದಿಷ್ಟ ಸಿದ್ಧಾಂತದ ಸಂಘಟನೆಗಳ ಕಾರ್ಯಕ್ರಮಗಳಲ್ಲಿ ಭಾಗವಹಿಸಿ…

Read More

ಕಡಬ : ಬಾವಿ ತೋಡಲು ಸ್ಪೋಟಕ ಬಳಕೆ, ಸಮೀಪದ ಮನೆಗಳಿಗೆ ಹಾನಿ -ದೂರು

ರಾಮಕುಂಜ : ಬಾವಿ ತೋಡುವ ಸಂದರ್ಭದಲ್ಲಿ ಸ್ಪೋಟಕ ಬಳಕೆ ಮಾಡಿರುವುದರಿಂದ ಸಮೀಪದ ಮನೆಗಳಿಗೆ ಹಾನಿಯಾಗಿರುವ ಘಟನೆ ಕಡಬ ತಾಲೂಕಿನ ರಾಮಕುಂಜ ಗ್ರಾಮದ ಕಂಪ ಎಂಬಲ್ಲಿ ಮಾ.8 ರಂದು ನಡೆದಿದೆ. ಈ ಮಧ್ಯೆ ಸ್ಪೋಟವಾಗದೆ ಬಾವಿಯೊಳಗೆ ಉಳಿದಿರುವ ಮದ್ದುಗುಂಡುಗಳನ್ನು ಬಾಂಬ್ ನಿಷ್ಕ್ರಿಯದಳದ ಸಿಬ್ಬಂದಿ ತೆರವುಗೊಳಿಸುವ ಕಾರ್ಯಾಚರಣೆ ಮಾ. 10 ರಂದು ಬೆಳಿಗ್ಗೆ ಆರಂಭಿಸಿದ್ದಾರೆ. ರಾಮಕುಂಜ ಗ್ರಾಮದ ಕಂಪ ಎಂಬಲ್ಲಿ ಮೈಸೂರು ನಿವಾಸಿ ಸೋಮಶೇಖರ ಎಂಬವರು ತಮ್ಮ ಸಂಬಂಧಿಕರಿಂದ 23 ಸೆಂಟ್ಸ್ ಜಾಗ ಖರೀದಿಸಿದ್ದು ಅದರಲ್ಲಿ ಅಡಿಕೆ ಮರಗಳಿವೆ. ಈ…

Read More

​ಪಿರಾರ ಮೂಲೆ: ಅಬೂಬಕ್ಕರ್ ಸಿದ್ದೀಖ್ ಮಸೀದಿ ಹಾಗೂ ನೂರುಲ್ ಹುದಾ ಮದ್ರಸ ಸಹಯೋಗದಲ್ಲಿ ಅದ್ದೂರಿ ಇಫ್ತಾರ್ ಸಂಗಮ

​ಮಂಜೇಶ್ವರ: ಸೌಹಾರ್ದತೆ ಮತ್ತು ಸಹಬಾಳ್ವೆಯ ಸಂದೇಶ ಸಾರುವ ನಿಟ್ಟಿನಲ್ಲಿ, ಪಿರಾರ ಮೂಲೆಯ ಅಬೂಬಕ್ಕರ್ ಸಿದ್ದೀಖ್ ಜುಮಾ ಮಸೀದಿ ಹಾಗೂ ನೂರುಲ್ ಹುದಾ ಮದ್ರಸ ಗೌಸಿಯಾ ನಗರ ಇವುಗಳ ಜಂಟಿ ಆಶ್ರಯದಲ್ಲಿ ಸಾರ್ವಜನಿಕ ‘ಗ್ರ್ಯಾಂಡ್ ಇಪ್ತಾರ್ ಸಂಗಮ’ ಅತ್ಯಂತ ಯಶಸ್ವಿಯಾಗಿ ನಡೆಯಿತು. ​ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಮಂಜೇಶ್ವರ ಶಾಸಕ ಎ. ಕೆ. ಎಂ. ಅಶ್ರಫ್ ಅವರು ಮಾತನಾಡಿ, “ರಂಜಾನ್ ಮಾಸವು ತ್ಯಾಗ ಮತ್ತು ಸಮಾನತೆಯ ಸಂಕೇತವಾಗಿದೆ. ಇಂತಹ ಇಫ್ತಾರ್ ಕೂಟಗಳು ಸಮಾಜದಲ್ಲಿ ಪರಸ್ಪರ ಪ್ರೀತಿ ಮತ್ತು ವಿಶ್ವಾಸವನ್ನು…

Read More

ಉಳ್ಳಾಲ ನಗರಸಭೆ ಅಧ್ಯಕ್ಷರ ಕಾರು ಚಾಲಕ ಅಶೋಕ್ ಉಳ್ಳಾಲಬೈಲ್ ನಿಧನ

ಉಳ್ಳಾಲ ನಗರಸಭೆಯ ಅಧ್ಯಕ್ಷರ ಕಾರು ಚಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದ ಹಾಗೂ ಕಾಂಗ್ರೆಸ್ ಪಕ್ಷದ ಸಕ್ರಿಯ ಸದಸ್ಯರಾಗಿದ್ದ ಅಶೋಕ್ ಉಳ್ಳಾಲಬೈಲ್ (64) ಅವರು ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. ಮೃತರು ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಅವರ ನಿಧನಕ್ಕೆ ರಾಜಕೀಯ ಹಾಗೂ ಸಾಮಾಜಿಕ ವಲಯದಲ್ಲಿ ಶೋಕ ವ್ಯಕ್ತವಾಗಿದೆ. ಕರ್ನಾಟಕ ರಾಜ್ಯ ವಿಧಾನಸಭೆಯ ಸಭಾಧ್ಯಕ್ಷ ಯು.ಟಿ. ಖಾದರ್, ಮಂಗಳೂರು ಮುಡಾ ಅಧ್ಯಕ್ಷ ಸದಾಶಿವ ಉಳ್ಳಾಲ, ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಶೆಟ್ಟಿ ಬೋಳಿಯಾರ್, ಸಭಾಧ್ಯಕ್ಷರ ಆಪ್ತ ಸಹಾಯಕ ಮನ್ಸೂರ್ ಮಂಚಿಲ್, ದಿನೇಶ್ ರೈ, ಸುರೇಶ್…

Read More

ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಶವವಾಗಿ ಪತ್ತೆ: ಸೋಮೇಶ್ವರದ ಗದಾತೀರ್ಥ ಕೆರೆಯಲ್ಲಿ ಕೊಳೆತ ಸ್ಥಿತಿಯಲ್ಲಿ ದೇಹ ಪತ್ತೆ

ಉಳ್ಳಾಲ: ಮಾ.11ಕಳೆದ ಸೋಮವಾರ ಬೆಳಿಗ್ಗೆ ಮನೆಯಿಂದ ಕೆಲಸಕ್ಕೆ ತೆರಳಿ ನಾಪತ್ತೆಯಾಗಿದ್ದ ಕೊಣಾಜೆಯ ಯುವಕನೊಬ್ಬನ ಶವವು ಇಂದು ಬೆಳಿಗ್ಗೆ ಸೋಮೇಶ್ವರದ ಸೋಮನಾಥ ಕ್ಷೇತ್ರದ ಗದಾತೀರ್ಥ ಕೆರೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಪತ್ನಿಯಿಂದ ವಿಚ್ಛೇದನಗೊಂಡಿದ್ದ ಖಿನ್ನತೆಯಲ್ಲಿ ಯುವಕ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಉಳ್ಳಾಲ ತಾಲೂಕಿನ ಕೊಣಾಜೆಯ ಮುಚ್ಚಿಲ ಕೋಡಿ ನಿವಾಸಿ ದಿನೇಶ್ ಶೆಟ್ಟಿಗಾರ್ ಅವರ ಪುತ್ರ ವಿವೇಕ್ ಶೆಟ್ಟಿಗಾರ್ (32) ಮೃತ ಯುವಕನಾಗಿದ್ದಾನೆ. ಮಂಗಳೂರಿನ ಕದ್ರಿಯ ವೇದ ಮೋಟಾರ್ಸ್‌ನಲ್ಲಿ ಉದ್ಯೋಗದಲ್ಲಿದ್ದ ವಿವೇಕ್ ಸೋಮವಾರ ಬೆಳಿಗ್ಗೆ ಮನೆಯಿಂದ ಕೆಲಸಕ್ಕೆ…

Read More
error: Content is protected !!