ಹಿಜಾಬ್ ಪ್ರೇಮಿ ರಾಜ್ಯಸರಕಾರದ ವಿರುದ್ಧ ಯುವಶಕ್ತಿ ಬೀದಿಗಿಳಿದು ಹೋರಾಟ ಮಾಡಬೇಕಾಗಿದೆ – ವಿಶ್ವ ಹಿಂದೂ ಪರಿಷದ್

ಕರ್ನಾಟಕ ಸರಕಾರದ ಹಿಜಾಬ್ ಮೇಲಿನ ನಿಷೇಧವನ್ನು ಹಿಂಪಡೆಯುವ ಆದೇಶ ಖಂಡನೀಯ, ಶಾಲಾ ಕಾಲೇಜುಗಳು, ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಸಮಾನತೆಯ ಕೇಂದ್ರಗಳಾಗಿರಬೇಕು, ಶಾಲಾ ಕಾಲೇಜುಗಳ ಪಾವಿತ್ರ್ಯತೆಯನ್ನು ಕಾಪಾಡಬೇಕಾದ ಸರಕಾರವೇ ಮತಾಂಧತೆಯನ್ನು ಶಾಲಾ ಕಾಲೇಜುಗಳ ಒಳಗೆ ತರುತ್ತಿರುವುದು ಅಕ್ಷಮ್ಯ ಅಪರಾಧ. ಇದು ಕೇವಲ ಹಿಜಾಬ್ ಗೆ ನೀಡಿದ ಆದೇಶವಲ್ಲ ಬದಲಿಗೆ ಶಿಸ್ತುಬದ್ಧ ಶಿಕ್ಷಣ ವ್ಯವಸ್ಥೆಯನ್ನು ಅಂತ್ಯಗೊಳಿಸುವುದೇ ಸರಕಾರದ ಉದ್ದೇಶವಾಗಿದೆ. ಇದು ಓಲೈಕೆ ರಾಜಕಾರಣದ ಪರಮಾವಧಿ. ವಿದ್ಯಾರ್ಥಿಗಳ ನಡುವೆ ವಿಷಬೀಜ ಬಿತ್ತುತ್ತಿರುವ ಹಿಜಾಬ್ ಪ್ರೇಮಿ ಕರ್ನಾಟಕ ಸರಕಾರದ ಈ ನಿರ್ಧಾರವನ್ನು ಯುವಜನತೆ…

Read More

ಇಂಧನ ದುಬಾರಿ ಆದರೆ ಬದುಕು ಮತ್ತಷ್ಟು ಕಷ್ಟ: ಜನರಲ್ಲಿ ಆತಂಕ

ಹೊಸದಿಲ್ಲಿ:ಅಡುಗೆ ಅನಿಲ ದುಬಾರಿಯಾದ ಬೆನ್ನಲ್ಲೇ ಅಟೋ ಗ್ಯಾಸ್ ದರ ಏರಿಕೆಯಾಯಿತು. ನಿನ್ನೆ ಮಧ್ಯರಾತ್ರಿ ಸಿ.ಎನ್.ಜಿ. ದರವೂ ಏರಿಕೆಯಾಗಿದೆ. ಇದರ ಬೆನ್ನಲ್ಲೇ ಪಳೆಯುಳಿಕೆ ಇಂಧನಗಳಾದ ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳವಾಗಲಿದೆ. ಚಿನ್ನ ಖರೀದಿ ಮುಂದೂಡಿ, ಪ್ರಯಾಣ ಹೋಗಬೇಡಿ, ಇಂಧನ ಉಳಿಸಿ ಎಂಬ ಕೋರಿಕೆ ಸಹಿತ ಏಳು ಸಲಹೆ, ಮನವಿಗಳನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಮುಂದಿಟ್ಟಿದ್ದರು. ಮಂಗಳೂರಿನ ಡಾ.ಅನಂತ ಪ್ರಭು ಸಹಿತ ಅನೇಕ ಗಣ್ಯರು ನಿಮ್ಮ ಜೊತೆ ಸಾಗುವ ಬೆಂಗಾವಲು ವಾಹನಗಳ ಸಂಖ್ಯೆ ಕಡಿಮೆ ಮಾಡಿ ಎಂದು…

Read More

ನೀಟ್-ಯುಜಿ ಪರೀಕ್ಷೆ ರದ್ದತಿಗೆ ಕೇಂದ್ರ ಸರ್ಕಾರದ ವೈಫಲ್ಯವೇ ಕಾರಣ: ಸೌರಭ್ ಬಲ್ಲಾಳ್ ಆರೋಪ

ಉಡುಪಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಭಾರೀ ಅಕ್ರಮಗಳಿಂದಾಗಿ ನೀಟ್-ಯುಜಿ ಪರೀಕ್ಷೆ ರದ್ದಾಗಲು ಕೇಂದ್ರ ಸರ್ಕಾರದ ವೈಫಲ್ಯವೇ ಕಾರಣ ಎಂದು ಎನ್‌ಎಸ್‌ಯುಐ ಉಡುಪಿ ಜಿಲ್ಲಾ ಸಮಿತಿ ಅಧ್ಯಕ್ಷ ಸೌರಭ್ ಬಲ್ಲಾಳ್ ಆರೋಪಿಸಿದರು.ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ನೇತೃತ್ಯದ ಕೇಂದ್ರ ಸರ್ಕಾರದಡಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ನಡೆಸಿದ ನೀಟ್-ಯುಜಿ 2026 ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಭಾರೀ ಅಕ್ರಮಗಳಿಂದಾಗಿ ರದ್ದಾಗಿದೆ. 3 ವರ್ಷದಲ್ಲಿ 2ನೇ ಬಾರಿ ಕಷ್ಟಪಟ್ಟು ಓದಿದ ವಿದ್ಯಾರ್ಥಿಗಳ ಕನಸುಗಳನ್ನು ಕೋಚಿಂಗ್ ಮಾಫಿಯಾ ಹಾಗೂ…

Read More

‘ಚುನ್ಯಾಚೊ ಫೊಂಡ್’ ಕೊಂಕಣಿ ಕವನ ಸಂಕಲನ ಬಿಡುಗಡೆ

ಮಂಗಳೂರು:ಖ್ಯಾತ ಪತ್ರಕರ್ತ ಹಾಗೂ ಸಾಹಿತಿ ರೇಮಂಡ್ ಡಿಕುನ್ಹಾ ತಾಕೊಡೆ ಅವರು ರಚಿಸಿರುವ ಕನ್ನಡ ಮತ್ತು ದೇವನಾಗರಿ ಲಿಪಿಯಲ್ಲಿನ ಕೊಂಕಣಿ ಕವನ ಸಂಕಲನ ‘ಚುನ್ಯಾಚೊ ಫೊಂಡ್’ ’ ಕೃತಿಯ ಬಿಡುಗಡೆ ಸಮಾರಂಭವು ಮಂಗಳೂರಿನ ನಗರದ ಪತ್ರಿಕಾಭವನದಲ್ಲಿ ನಡೆಯಿತು. ಕೃತಿಯನ್ನು ‘ಮೈಕಲ್ ಡಿಸೋಜಾ ವಿಷನ್ ಕೊಂಕಣಿ’ ಸಂಸ್ಥೆಯ ಸಂಸ್ಥಾಪಕ, ಅನಿವಾಸಿ ಭಾರತೀಯ ಉದ್ಯಮಿ ಹಾಗೂ ಸಮಾಜಸೇವಕರಾದ ಮೈಕಲ್ ಡಿಸೋಜಾ ಬಿಡುಗಡೆಗೊಳಿಸಿದರು. ಪುಸ್ತಕ ಬಿಡುಗಡೆಗೊಳಿಸಿ ಮಾತನಾಡಿದ ಮೈಕಲ್ ಡಿಸೋಜಾ, ‘ಮೈಕಲ್ ಡಿಸೋಜಾ ವಿಷನ್ ಕೊಂಕಣಿ’ ಸಂಸ್ಥೆಯ ಮೂಲಕ ಮಾತೃಭಾಷೆಯಲ್ಲಿ ಕೃತಿ ಪ್ರಕಟಿಸುವ…

Read More

ಕಾಂಗ್ರೆಸ್ ಸರಕಾರದಿಂದ ಉಡುಪಿ ಜಿಲ್ಲೆಯ ನಿರ್ಲಕ್ಷ್ಯ: ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ- ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ

ಉಡುಪಿ: ಉಡುಪಿ ಜಿಲ್ಲೆಯನ್ನು ನಿರ್ಲಕ್ಷ್ಯ ಮಾಡುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ಧೋರಣೆಯನ್ನು ಖಂಡಿಸಿ ಮೇ 16ರಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ ಹೇಳಿದ್ದಾರೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ದಿನದಿಂದ ಉಡುಪಿ ಜಿಲ್ಲೆಯ ಅಭಿವೃದ್ಧಿಯಲ್ಲಿ ಮಲತಾಯಿ ಧೋರಣೆ ತೋರಿ ಜಿಲ್ಲೆಯ ಜನರಿಗೆ ಅನ್ಯಾಯ ಮಾಡುತ್ತಿದೆ. 2013ರಲ್ಲಿ ಉಡುಪಿ ನಗರ ಭಾಗಕ್ಕೆ ಆರಂಭಗೊಂಡ…

Read More

ಸರಕಾರಿ ಆಸ್ಪತ್ರೆಗಳ ಖಾಸಗೀಕರಣ ಕೈ ಬಿಡಿ : ಸರಕಾರಕ್ಕೆ ಸಿಪಿಐಎಂ ಆಗ್ರಹ

ದಕ್ಷಿಣ ಕನ್ನಡ ಜಿಲ್ಲೆಯ ನಾಲಕ್ಕು ಸರಕಾರಿ ಆಸ್ಪತ್ರೆಗಳನ್ನು ಖಾಸಗಿ ವೈದ್ಯಕೀಯ ಕಾಲೇಜುಗಳಿಗೆ ಹಸ್ತಾಂತರಿಸುವ ಆರೋಗ್ಯ ಇಲಾಖೆಯ ಆದೇಶವನ್ನು ಹಿಂಪಡೆಯಲು ಆಗ್ರಹಿಸಿ ಸಿಪಿಐಎಂ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಮಂಗಳೂರಿನಲ್ಲಿ ಬೃಹತ್ ಮೆರವಣಿಗೆ ಹಾಗು ಪ್ರತಿಭಟನಾ ಸಭೆ ನಡೆಸಿತು. ಡಾ. ಬಿ ಆರ್ ಅಂಬೆಡ್ಕರ್ ವೃತ್ತದಿಂದ ಹೊರಟ ಮೆರವಣಿಗೆಯಲ್ಲಿ ದೊಡ್ಡ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸಿದ್ದರು, ಮೆರವಣಿಗೆಯ ಉದ್ದಕ್ಕೂ ಆರೋಗ್ಯ ಸಚಿವರೂ ಆಗಿರುವ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ವಿರುದ್ದ ಘೋಷಣೆಗಳು ಮೊಳಗಿದವು. ಮಿನಿ ವಿಧಾನ ಸೌಧದ ಮುಂಭಾಗ ಪ್ರತಿಭಟನಾ…

Read More

ಕಾಂಗ್ರೆಸ್ ನಿಂದ ಶೈಕ್ಷಣಿಕ ಕ್ಷೇತ್ರದಲ್ಲೂ ಒಡೆದು ಆಳುವ ನೀತಿ :- ಶಾಸಕ ಕಾಮತ್

ಶೈಕ್ಷಣಿಕ ಕೇಂದ್ರಗಳಲ್ಲಿ ಸಮಾನತೆ ಹಾಗೂ ಮಕ್ಕಳಲ್ಲಿ ಏಕತೆ ತರುವ ಉದ್ದೇಶದಿಂದ ಹಿಂದಿನ ಬಿಜೆಪಿ ಸರ್ಕಾರ ಜಾರಿಗೊಳಿಸಿದ್ದ ಶಿಸ್ತುಬದ್ಧ ಸಮವಸ್ತ್ರ ನಿಯಮವನ್ನು ರಾಜ್ಯ ಕಾಂಗ್ರೆಸ್ ಸರ್ಕಾರವು ಹಿಂಪಡೆಯುವ ಮೂಲಕ ಶಾಲಾ-ಕಾಲೇಜುಗಳ ಶೈಕ್ಷಣಿಕ ವಾತಾವರಣವನ್ನು ಹಾಳುಗೆಡವಲು ಮುಂದಾಗಿದೆ ಎಂದು ಶಾಸಕ ವೇದವ್ಯಾಸ ಕಾಮತ್ ರವರು ಆಕ್ರೋಶ ವ್ಯಕ್ತಪಡಿಸಿದರು. ಸಮವಸ್ತ್ರದ ಮೂಲ ಉದ್ದೇಶವೇ ವಿದ್ಯಾರ್ಥಿಗಳಲ್ಲಿ ಜಾತಿ-ಮತ-ಭೇದ ಮರೆಸಿ ಸಮಾನತೆಯ ಭಾವ ಮೂಡಿಸುವುದು. ಆದರೆ ಓಲೈಕೆ ರಾಜಕಾರಣಕ್ಕಾಗಿ ರಾಜ್ಯ ಸರ್ಕಾರವೇ, ಧರ್ಮದ ಆಧಾರದ ಮೇಲೆ ವಿದ್ಯಾರ್ಥಿಗಳನ್ನು ವಿಭಜಿಸುತ್ತಿರುವುದು ಎಷ್ಟು ಸರಿ? ಈ ಹಿಂದೆ…

Read More

ಬನ್ನಡ್ಕ ಸರಣಿ ಅಪಘಾತಗಳಿಗೆ ಕಿಡಿಕಾರಿದ ಬಿಜೆಪಿ ಕಾರ್ಯಕರ್ತರು: ಸಂಸದ ಬ್ರಿಜೇಶ್ ಚೌಟ ವಿರುದ್ಧ ಆಕ್ರೋಶ

ಮಂಗಳೂರು :ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ವಿರುದ್ಧ ಕಾರ್ಯಕರ್ತರು ಗರಂ ಆದ ಘಟನೆ ನಡೆದಿದೆ.ಇದು‘ಇಂಥವರು ನಮ್ಮ ಜನಪ್ರತಿನಿಧಿಯಾಗಿದ್ದು ನಮ್ಮ ದುರಂತ ‘ ಎಂದು ಹೇಳುವಲ್ಲಿಗೆ ತಲುಪಿದೆ. ಬಿಜೆಪಿ ಮಂಡಲ ಉಪಾಧ್ಯಕ್ಷರೇ ಸಂಸದರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.ಸೋಶಿಯಲ್ ಮೀಡಿಯಾದಲ್ಲಿ ಅಸಮಾಧಾನದ ಪೋಸ್ಟ್ ಹರಿದಾಡತೊಡಗಿದೆ.ರಸ್ತೆ ಸಮಸ್ಯೆಗೆ ಪರಿಹಾರ ಕೇಳಲು ಹೋದ ಬಿಜೆಪಿ ಮುಖಂಡರಿಗೆ ಅಧಿಕಾರಿಗಳ ಎದುರು ಅವಮಾನ ಮಾಡಲಾಗಿದೆ ಎಂದು ಆರೋಪಿಸಲಾಗುತ್ತಿದೆ.ಇದು ಸಾಮಾಜಿಕ ಜಾಲತಾಣಗಳಲ್ಲಿ ಸಂಸದ ಬ್ರಿಜೇಶ್ ಚೌಟ ವಿರುದ್ಧ ಆಕ್ರೋಶದ ಕಿಚ್ಚು ಹರಡಲು ಪ್ರೇರಣೆ ನೀಡುತ್ತಿದೆ. ಮೂಲ್ಕಿ…

Read More

ಮಳೆಗೆ ಜೀವಂತಗೊಂಡ ನೇತ್ರಾವತಿ; ಎ.ಎಂ.ಆರ್ ಡ್ಯಾಂನಿಂದ ನೀರು ಬಿಡುಗಡೆ ಹಿನ್ನೆಲೆ ನದಿ ಭರ್ತಿ

ಬಂಟ್ವಾಳ: ಉರಿ ಬಿಸಿಲಿನ ತಾಪಕ್ಕೆ ಬತ್ತಿ ಹೋಗಿ ಕಲ್ಲು ಬಂಡೆಗಳು ಕಾಣಿಸುತ್ತಿದ್ದ ನೇತ್ರಾವತಿ ನದಿ ಇದೀಗ ಮತ್ತೆ ಜಲಾವೃತಗೊಂಡು ತುಂಬಿ ಹರಿಯುತ್ತಿರುವ ದೃಶ್ಯ ಜನರಲ್ಲಿ ನಿರಾಳತೆ ಮೂಡಿಸಿದೆ. ಕೆಲವು ವಾರಗಳ ಹಿಂದೆ ನೇತ್ರಾವತಿ ನದಿಯಲ್ಲಿ ನೀರಿನ ಮಟ್ಟ ತೀವ್ರ ಕುಸಿತ ಕಂಡಿದ್ದು, ಒಳಹರಿವು ಕೂಡ ಕ್ಷೀಣವಾಗಿತ್ತು. ಇದರ ಪರಿಣಾಮ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಜನರಿಗೆ ಕುಡಿಯುವ ನೀರಿನ ಅಭಾವ ಎದುರಾಗುವ ಭೀತಿ ಉಂಟಾಗಿತ್ತು. ಆದರೆ ಕಳೆದ ಮೂರು–ನಾಲ್ಕು ದಿನಗಳಿಂದ ಘಟ್ಟ ಪ್ರದೇಶ ಹಾಗೂ ತಾಲೂಕಿನ ವಿವಿಧ…

Read More

ಬೆದ್ರಾಳದಲ್ಲಿ ಮಲತ್ಯಾಜ್ಯ ಘಟಕ ಆಗಿಯೇ ಆಗುತ್ತದೆ: ಮಹಮ್ಮದ್ ಆಲಿ ಸ್ಪಷ್ಟನೆ

ಪುತ್ತೂರು :ಪುತ್ತೂರಿನ ಬೆದ್ರಾಳದ ಬಡಾವಣೆಯ ಬಗ್ಗೆ ಪುತ್ತೂರಿನ ನಗರಸಭೆ ಮಾಜಿ ವಿಪಕ್ಷ ನಾಯಕ, ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಮಹಮ್ಮದ್ ಆಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ, ಬೆದ್ರಾಳದಲ್ಲಿ ಮಲತ್ಯಾಜ್ಯ ಘಟಕ ಅಲ್ಲಿ ಅಗಿಯೇ ಆಗುತ್ತದೆ. ಯಾರು ಏನು ಬೇಕಾದರೂ ಮಾಡಲಿ. ಆದರೆ ಸರಕಾರ ವಿರುದ್ದ ಹೋಗಲು ಯಾರಿಗೂ ಸಾಧ್ಯವಿಲ್ಲ. ಮಲತ್ಯಾಜ್ಯ ಘಟಕಕ್ಕೆ ರಸ್ತೆ ನಿರ್ಮಾಣಕ್ಕೆ ಖಾಸಗಿ ಉದ್ಯಮಿ ಭೂ ಸ್ವಾಧೀನಕ್ಕೆ ನಗರ ಸಭೆಗೆ ಆದೇಶವಾಗಿದ್ದು ಇದರ ಪ್ರಕ್ರಿಯ ಆರಂಭವಾಗಿದೆ. ಕಾನೂನು ಬಾಹಿರ ಬಡಾವಣೆ ನಿರ್ಮಾಣಕ್ಕೆ ಮಾತ್ರ ನನ್ನ…

Read More
error: Content is protected !!