ಸನಾತನ ಧರ್ಮದ ವಿರುದ್ಧ ಉದಯನಿಧಿ ಸ್ಟಾಲಿನ್ ಅವರ ವಿಷಪೂರಿತ ಹೇಳಿಕೆ:ವಿಶ್ವ ಹಿಂದೂ ಪರಿಷದ್ ಖಂಡನೆ

ತಮಿಳುನಾಡು ವಿಧಾನಸಭೆಯಂತಹ ಪವಿತ್ರ ಸದನದಲ್ಲಿ ಉದಯನಿಧಿ ಸ್ಟಾಲಿನ್ ಅವರು ಸನಾತನ ಧರ್ಮದ ವಿರುದ್ಧ ನೀಡಿರುವ ಅತ್ಯಂತ ಕೀಳುಮಟ್ಟದ ಮತ್ತು ಪ್ರಚೋದನಾತ್ಮಕ ಹೇಳಿಕೆಯನ್ನು ವಿಶ್ವ ಹಿಂದೂ ಪರಿಷದ್ ತೀವ್ರವಾಗಿ ಖಂಡಿಸುತ್ತದೆ.ರಾಜಕೀಯ ಲಾಭಕ್ಕಾಗಿ ಕೋಟ್ಯಂತರ ಜನರ ನಂಬಿಕೆಯಾಗಿರುವ ಸನಾತನ ಧರ್ಮದ ನಿರ್ಮೂಲನೆಯ ಬಗ್ಗೆ ಮಾತನಾಡುವುದು ಸಂವಿಧಾನ ವಿರೋಧಿ ನಡವಳಿಕೆಯಾಗಿದ್ದು, . ಸದನದ ಗೌರವವನ್ನು ಕಾಪಾಡುವ ದೃಷ್ಟಿಯಿಂದ ಸನಾತನ ಧರ್ಮದ ವಿರುದ್ಧದ ಈ ವಿಷಪೂರಿತ ಮಾತುಗಳನ್ನು ವಿಧಾನಸಭೆಯ ಅಧಿಕೃತ ನಡಾವಳಿಗಳಿಂದ ಕೂಡಲೇ ತೆಗೆದುಹಾಕಲು ತಮಿಳ್ನಾಡು ಸರಕಾರಕ್ಕೆ ಆಗ್ರಹಿಸುತ್ತೇನೆ . ಇತಿಹಾಸದುದ್ದಕ್ಕೂ ಸನಾತನ…

Read More

ಮೇ 17ರಂದು ರಾಶಿ ರಾಜೇಶ್ ಹೆಗ್ಡೆ ಅದ್ದೂರಿ ಭರತನಾಟ್ಯ ರಂಗಪ್ರವೇಶ

ಮಂಗಳೂರು,ಕದ್ರಿ ನೃತ್ಯ ವಿದ್ಯಾನಿಲಯ ಚಾರಿಟೇಬಲ್ ಟ್ರಸ್ಟ್(ರಿ) ನಿರ್ದೇಶಕ ವಿದ್ವಾನ್ ಯು. ಕೆ. ಪ್ರವೀಣ್ ಅವರ ಶಿಷ್ಯೆ ಕುಮಾರಿ ರಾಶಿ ರಾಜೇಶ್ ಹೆಗ್ಡೆ ಅವರ ಭರತನಾಟ್ಯ ರಂಗಪ್ರವೇಶ ಕಾರ್ಯಕ್ರಮ ಮೇ 17ರಂದು ರವಿವಾರ ಸಂಜೆ 4.30ಕ್ಕೆ ಮಂಗಳೂರಿನ ಕುದ್ಮಲ್ ರಂಗರಾವ್ ಪುರಭವನದಲ್ಲಿ ನಡೆಯಲಿದೆ ಎಂದು ವಿದ್ವಾನ್ ಯು. ಕೆ. ಪ್ರವೀಣ್ ತಿಳಿಸಿದರು. ನಗರದ ಪತ್ರಿಕಾಭವನದಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಮಾರು 13 ವರ್ಷಗಳಿಂದ ಭರತನಾಟ್ಯ ಅಭ್ಯಾಸ ಮಾಡುತ್ತಿರುವ ರಾಶಿ ರಾಜೇಶ್ ಹೆಗ್ಡೆ ಅವರು ಪುಷ್ಪಾಂಜಲಿ, ಶ್ಲೋಕ,…

Read More

ಸ್ಪೀಕರ್ ಯು.ಟಿ. ಖಾದರ್‌ಗೆ ಮುತ್ತಿಗೆ ಆರೋಪ: 11 ಮಂದಿ ವಿರುದ್ಧ ಪ್ರಕರಣ

ಮಂಗಳೂರು, ಮೇ 13: ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ ಆರೋಪದಡಿ ಉಳ್ಳಾಲ ಪೊಲೀಸ್ ಠಾಣೆಯಲ್ಲಿ 11 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ. ಕೆಲ ದಿನಗಳ ಹಿಂದೆ ಉಳ್ಳಾಲ ತಾಲೂಕಿನ ಕುತ್ತಾರ್ ಪ್ರದೇಶಕ್ಕೆ ಭೇಟಿ ನೀಡಿದ್ದ ಸ್ಪೀಕರ್ ಯು.ಟಿ. ಖಾದರ್ ಅವರನ್ನು ಸ್ಥಳೀಯರು ವೃತ್ತ ನಿರ್ಮಾಣ ಹಾಗೂ ಇತರ ಸಮಸ್ಯೆಗಳ ಕುರಿತು ಪ್ರಶ್ನಿಸಿ ತಡೆದ ಘಟನೆ ನಡೆದಿತ್ತು. ಸ್ಪೀಕರ್ ಅವರ ವಾಹನವನ್ನು ತಡೆದು ಅಸಭ್ಯವಾಗಿ ವರ್ತಿಸಿ, ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಲಾಗಿದೆ….

Read More

ಪುದುಚೇರಿ ಮುಖ್ಯಮಂತ್ರಿಯಾಗಿ ಎನ್. ರಂಗಸ್ವಾಮಿ ಪ್ರಮಾಣವಚನ

ಪುದುಚೇರಿ, ಮೇ 13: ಅಖಿಲ ಭಾರತ ಎನ್.ಆರ್. ಕಾಂಗ್ರೆಸ್ ನಾಯಕ ಎನ್. ರಂಗಸ್ವಾಮಿ ಅವರು ಬುಧವಾರ ಪುದುಚೇರಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಪುದುಚೇರಿಯ ಲೆಫ್ಟಿನೆಂಟ್ ಗವರ್ನರ್ ಕೆ. ಕೈಲಾಶ್‌ನಾಥನ್ ಅವರು ರಂಗಸ್ವಾಮಿ ಅವರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣವಚನ ಬೋಧಿಸಿದರು.ಭಾರತೀಯ ಜನತಾ ಪಾರ್ಟಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ಬಿನ್ ಅವರ ಸಮ್ಮುಖದಲ್ಲಿ ನಡೆದ ಸಮಾರಂಭದಲ್ಲಿ ಬಿಜೆಪಿ ನಾಯಕ ಎ. ನಮಶಿವಾಯಂ ಕೂಡ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ಪ್ರಮಾಣವಚನ ಸ್ವೀಕಾರದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ರಂಗಸ್ವಾಮಿ, ಜನರಿಗೆ…

Read More

ಪ್ರಧಾನಿ ಅಧಿಕಾರ ತ್ಯಜಿಸಿದರೆ ಜನರಿಗೆ ಸುಖ ಸಿಗುತ್ತದೆ: ಬಿ.ರಮಾನಾಥ ರೈ

ಮಂಗಳೂರು:ಸಂಕಷ್ಟದ ಸಮಯದಲ್ಲಿ ದೇಶದ ಜನರು ತ್ಯಾಗ ಮಾಡಬೇಕು ಎಂದು ಹೇಳುವ ಕೇಂದ್ರ ಸರ್ಕಾರಕ್ಕೆ ಸಾಮಾನ್ಯ ಜನರ ನೋವು ಅರ್ಥವಾಗುತ್ತಿಲ್ಲ. ಜನರು ತ್ಯಾಗ ಮಾಡುವುದಕ್ಕಿಂತ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಅಧಿಕಾರವನ್ನು ತ್ಯಾಗ ಮಾಡಿದರೆ ದೇಶದ ಜನರಿಗೆ ಸುಖ ಸಿಗುತ್ತದೆ ಎಂದು ಮಾಜಿ ಸಚಿವ ಬಿ. ರಮಾನಾಥ ರೈ ತೀವ್ರ ವಾಗ್ದಾಳಿ ನಡೆಸಿದರು. ನಗರದ ಕಾಂಗ್ರೆಸ್ ಭವನದಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಆರ್ಥಿಕ ಹಾಗೂ ಶೈಕ್ಷಣಿಕ ನೀತಿಗಳನ್ನು ತೀವ್ರವಾಗಿ ಟೀಕಿಸಿದರು. “ಅಚ್ಚೇ…

Read More

ಮೋದಿ ಘೋಷಣೆಗಳು ಭಾರತವನ್ನು ಸ್ವಾವಲಂಬಿ ರಾಷ್ಟ್ರದತ್ತ ಕೊಂಡೊಯ್ಯಲಿವೆ: ಸಿ. ಎ. ಎಸ್. ಎಸ್. ನಾಯಕ್

ಮಂಗಳೂರು, ಮೇ 13: ಪ್ರಧಾನಿ ನರೇಂದ್ರ ಮೋದಿ ಅವರು ಮೇ 10ರಂದು ಪ್ರಕಟಿಸಿದ ಘೋಷಣೆಗಳು ಭಾರತದ ಆರ್ಥಿಕತೆಯನ್ನು ಮತ್ತಷ್ಟು ಬಲಿಷ್ಠ, ಸ್ವಾವಲಂಬಿ ಹಾಗೂ ಭವಿಷ್ಯೋನ್ಮುಖವಾಗಿಸುವ ದೂರದೃಷ್ಟಿಯ ಕ್ರಮಗಳಾಗಿವೆ ಎಂದು ಭಾರತೀಯ ಜನತಾ ಪಾರ್ಟಿ ಆರ್ಥಿಕ ಪ್ರಕೋಷ್ಠ ದಕ್ಷಿಣ ಕನ್ನಡ ಜಿಲ್ಲಾ ಸಂಚಾಲಕ ಸಿ. ಎ. ಎಸ್. ಎಸ್. ನಾಯಕ್ ತಿಳಿಸಿದ್ದಾರೆ. ನಗರದ ಪತ್ರಿಕಾಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ಘೋಷಣೆಗಳ ಹಿಂದೆ ಇಂಧನ ಉಳಿತಾಯ, ಅನಗತ್ಯ ಆಮದು ಕಡಿತ ಹಾಗೂ ಸ್ಥಳೀಯ ಉತ್ಪನ್ನಗಳಿಗೆ ಉತ್ತೇಜನ ನೀಡುವ…

Read More

ಭಾವೈಕ್ಯತೆಯ ಬಂಡಿ ಉತ್ಸವ: ಉದ್ಯಾವರ ಅರಸು ಮಂಜೀಷ್ಣಾರ್ ಜಾತ್ರೋತ್ಸವ ಸಂಪನ್ನ

​ಮಂಜೇಶ್ವರ: ತುಳುನಾಡಿನ ಸುಪ್ರಸಿದ್ಧ ಸೌಹಾರ್ದತಾ ತಾಣಗಳಲ್ಲಿ ಒಂದಾದ ಉದ್ಯಾವರ ಅರಸು ಮಂಜೀಷ್ಣಾರ್ ಕ್ಷೇತ್ರದ ವಾರ್ಷಿಕ ಜಾತ್ರೋತ್ಸವವು ಅತ್ಯಂತ ಭಕ್ತಿ, ಶ್ರದ್ಧೆ ಹಾಗೂ ಹಿಂದೂ-ಮುಸ್ಲಿಂ ಭಾವೈಕ್ಯತೆಯೊಂದಿಗೆ ಅದ್ಧೂರಿಯಾಗಿ ನೆರವೇರಿತು. ಈ ಕ್ಷೇತ್ರದ ವಿಶೇಷತೆಯೆಂಬಂತೆ, ಶತಮಾನಗಳ ಪ್ರಾಚೀನ ಪದ್ಧತಿಯನ್ನು ಈ ಬಾರಿಯೂ ಅಚ್ಚುಕಟ್ಟಾಗಿ ಪಾಲಿಸಲಾಯಿತು. ಜಾತ್ರೋತ್ಸವದ ಪ್ರಮುಖ ವಿಧಿವಿಧಾನಗಳ ಸಂದರ್ಭದಲ್ಲಿ ಸಿಂಹಾಸನ ಕಟ್ಟೆಯ ಬಲಭಾಗದಲ್ಲಿ ಕ್ಷೇತ್ರದ ಆಡಳಿತ ವರ್ಗದವರು ಹಾಗೂ ಎಡಭಾಗದಲ್ಲಿ ಮುಸ್ಲಿಂ ಬಾಂಧವರು (ಜಮಾಹತಿನವರು) ಆಸೀನರಾಗಿ ಇಡೀ ಉತ್ಸವವನ್ನು ಕಣ್ತುಂಬಿಕೊಂಡರು. ಧರ್ಮದ ಗಡಿಗಳನ್ನು ಮೀರಿ ಒಂದೇ ವೇದಿಕೆಯಲ್ಲಿ ಸೌಹಾರ್ದತೆಯಿಂದ…

Read More

ಮೇ 15ರಂದು ಮಾಹೆ 33ನೇ ಘಟಿಕೋತ್ಸವ; ಮಂಗಳೂರು ಕ್ಯಾಂಪಸ್‌ನಲ್ಲಿ ಭವ್ಯ ಸಮಾರಂಭ

ಮಂಗಳೂರು,:ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ), ವಿಶ್ವವಿದ್ಯಾಲಯ ಎಂದು ಪರಿಗಣಿತವಾಗಿರುವ ಉತ್ಕೃಷ್ಟ ಸಂಸ್ಥೆಯ 33ನೇ ಘಟಿಕೋತ್ಸವ ಸಮಾರಂಭವು ಶುಕ್ರವಾರ, ಮೇ 15 ರಂದು ಮಧ್ಯಾಹ್ನ 3 ಗಂಟೆಗೆ ಮಂಗಳೂರು ಕ್ಯಾಂಪಸ್‌ ಡಾ. ಟಿ.ಎಂ.ಎ. ಪೈ ಇಂಟರ್‌ನ್ಯಾಷನಲ್ ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆಯಲಿದೆ ಎಂದು ಮಾಹೆ ಮಂಗಳೂರು ಕ್ಯಾಂಪಸ್‌ನ ಸಹ ಕುಲಪತಿ ಡಾ. ದಿಲೀಪ್ ಜಿ. ನಾಯಕ್ ತಿಳಿಸಿದರು . ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ಮೇ 16ರ, ಶನಿವಾರ ಮಧ್ಯಾಹ್ನ 2:30ಕ್ಕೆ ‘ಮಾಹೆ…

Read More

ಕರಾವಳಿಯ ಕ್ರಿಕೆಟ್ ಜಾತ್ರೆಗೆ ಸಜ್ಜಾದ ಬಂಟ್ವಾಳದ ನಂದಾವರ:ಕಾಂಗ್ರೆಸ್ ಟ್ರೋಪಿ–2026ಕ್ಕೆ ಭರ್ಜರಿ ಸಿದ್ಧತೆ

ಬಂಟ್ವಾಳ ತಾಲೂಕಿನಲ್ಲಿ ಅಂಡರ್ ಆರ್ಮ್ ಕ್ರಿಕೆಟ್‌ಗೆ ಹೊಸ ಮೆರುಗು ನೀಡುವ ಬೃಹತ್ ಮಟ್ಟದ “ಕಾಂಗ್ರೆಸ್ ಟ್ರೋಪಿ–2026” ಪಂದ್ಯಾಕೂಟ ಮೇ 16 ಮತ್ತು 17ರಂದು ನಂದಾವರ ಶಾರದ ಹೈಸ್ಕೂಲ್ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಎರಡು ದಿನಗಳ ಕಾಲ ಹೊನಲು ಬೆಳಕಿನ ಆರ್ಹನಿಶಿ ಕ್ರೀಡಾಜಾತ್ರೆಗೆ ವೇದಿಕೆ ಸಜ್ಜಾಗಿದೆ. ಕರಾವಳಿಯ ಕ್ರೀಡಾಭಿಮಾನಿಗಳ ಅಚ್ಚುಮೆಚ್ಚಿನ ಅಂಡರ್ ಆರ್ಮ್ ಕ್ರಿಕೆಟ್ ಅನ್ನು ವೈಭವೀಕರಿಸುವ ಉದ್ದೇಶದಿಂದ ಆಯೋಜಕರು ಅದ್ದೂರಿ ಸಿದ್ಧತೆ ಕೈಗೊಂಡಿದ್ದಾರೆ. ಪಂದ್ಯಾಕೂಟದಲ್ಲಿ ಪ್ರಥಮ ಬಹುಮಾನವಾಗಿ ₹5 ಲಕ್ಷ ನಗದು ಹಾಗೂ ದ್ವಿತೀಯ ಸ್ಥಾನಕ್ಕೆ ₹2.5 ಲಕ್ಷ…

Read More

ಹಂದಿ ಸಾಕಾಣಿಕೆಯಿಂದ ಶಾಲಾ ಮಕ್ಕಳಿಗೆ ತೊಂದರೆ ಆರೋಪ: ಕೇಂದ್ರ ತೆರವಿಗೆ ಒತ್ತಾಯ

ಬಂಟ್ವಾಳ: ಖಾಸಗಿ ಜಮೀನಿನಲ್ಲಿ ನಡೆಯುತ್ತಿರುವ ಹಂದಿ ಸಾಕಾಣಿಕೆಯಿಂದ ಶಾಲಾ ಮಕ್ಕಳು ಹಾಗೂ ಸ್ಥಳೀಯ ನಿವಾಸಿಗಳು ಸಂಕಷ್ಟ ಅನುಭವಿಸುತ್ತಿದ್ದು, ಸಂಬಂಧಿತ ಕೇಂದ್ರವನ್ನು ತಕ್ಷಣ ತೆರವುಗೊಳಿಸಬೇಕು ಎಂದು ಇರ್ಪಾನ್ ಬೋಳಿಯಾರ್ ಒತ್ತಾಯಿಸಿದ್ದಾರೆ. ಬಿಸಿರೋಡಿನ ಪ್ರೆಸ್ ಕ್ಲಬ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂತ ಥೋಮಸ್ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಕೆದೂರು ಚರ್ಚ್ ಸಮೀಪ ಕಾರ್ಯನಿರ್ವಹಿಸುತ್ತಿರುವ ಹಂದಿ ಸಾಕಾಣಿಕೆ ಕೇಂದ್ರದಿಂದ ಪರಿಸರ ಮಾಲಿನ್ಯ ಉಂಟಾಗುತ್ತಿದ್ದು, ಶಾಲಾ ಮಕ್ಕಳ ಆರೋಗ್ಯ ಮತ್ತು ವಿದ್ಯಾಭ್ಯಾಸದ ಮೇಲೆ ದುಷ್ಪರಿಣಾಮ ಬೀರುತ್ತಿದೆ ಎಂದು ಆರೋಪಿಸಿದರು….

Read More
error: Content is protected !!