ಹೃದಯಾಘಾತದಿಂದ ನಟ ದಿಲೀಪ್ ರಾಜ್ ನಿಧನ: ಕನ್ನಡ ಚಿತ್ರರಂಗಕ್ಕೆ ಆಘಾತ

ಬೆಂಗಳೂರು: ಕನ್ನಡ ಚಿತ್ರರಂಗ ಹಾಗೂ ಕಿರುತೆರೆಯಲ್ಲಿ ಎರಡು ದಶಕಗಳಿಗೂ ಹೆಚ್ಚು ಕಾಲ ಸಕ್ರಿಯರಾಗಿದ್ದ ನಟ ಮತ್ತು ನಿರ್ಮಾಪಕದಿಲೀಪ್ ರಾಜ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಇಂದು ಬೆಳಗಿನ ಜಾವ ಮನೆಯಲ್ಲೇ ಅವರಿಗೆ ಹೃದಯಾಘಾತ ಸಂಭವಿಸಿದ್ದು, ತಕ್ಷಣ ಕುಟುಂಬಸ್ಥರು ಆಸ್ಪತ್ರೆಗೆ ಕರೆದೊಯ್ದರಾದರೂ ವೈದ್ಯರು ಅವರು ಈಗಾಗಲೇ ಮೃತಪಟ್ಟಿದ್ದಾರೆ ಎಂದು ಘೋಷಿಸಿದ್ದಾರೆ. ಅವರ ಮೃತದೇಹವನ್ನು ನಗರದ ಅಪೋಲೋ ಆಸ್ಪತ್ರೆಯಲ್ಲಿ ಇರಿಸಲಾಗಿದ್ದು, ಚಿತ್ರರಂಗದ ಅನೇಕ ಕಲಾವಿದರು, ನಿರ್ದೇಶಕರು ಹಾಗೂ ಅಭಿಮಾನಿಗಳು ಭೇಟಿ ನೀಡಿ ಅಂತಿಮ ನಮನ ಸಲ್ಲಿಸುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿಯೂ ಅಭಿಮಾನಿಗಳು ಮತ್ತು ಸಿನಿತಾರೆಯರು…

Read More

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ₹167.89 ಕೋಟಿ ಆದಾಯ: ಸತತ 15ನೇ ವರ್ಷ ರಾಜ್ಯದ ನಂ.1 ಮುಜರಾಯಿ ದೇವಾಲಯ

ಕರ್ನಾಟಕದ ಮುಜರಾಯಿ ಇಲಾಖೆಯಡಿಯಲ್ಲಿ ಕಾರ್ಯನಿರ್ವಹಿಸುವ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನವು 2025–26ರ ಸಾಲಿನ ಆರ್ಥಿಕ ವರ್ಷದಲ್ಲಿ ಮತ್ತೊಮ್ಮೆ ರಾಜ್ಯದಲ್ಲಿ ಅತಿ ಹೆಚ್ಚು ಆದಾಯ ಗಳಿಸುವ ದೇವಸ್ಥಾನವಾಗಿ ಹೊರಹೊಮ್ಮಿದೆ. ದೇವಸ್ಥಾನವು ಒಟ್ಟು 167.89 ಕೋಟಿ ರೂ. ಆದಾಯವನ್ನು ವರದಿ ಮಾಡಿದೆ, ಸತತ 15 ನೇ ವರ್ಷವೂ ಕರ್ನಾಟಕದ ನಂ. 1 ಮುಜರಾಯಿ ದೇವಸ್ಥಾನವಾಗಿ ತನ್ನ ಸ್ಥಾನವನ್ನು ಪಡೆಯುವ ಮೂಲಕ ಹೆಗ್ಗಳಿಕೆಗೆ ಪಾತ್ರವಾಗಿದೆ. ಅಧಿಕೃತ ದಾಖಲೆಗಳ ಪ್ರಕಾರ, ದೇವಾಲಯವು ಏಪ್ರಿಲ್ 1, 2025 ರಿಂದ ಮಾರ್ಚ್ 31, 2026 ರವರೆಗೆ 167,89,09,080.77…

Read More

ಕರಾವಳಿಯಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಎಚ್ಚರಿಕೆ

ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆಗಳಲ್ಲಿ ರಾತ್ರಿ ಮಳೆ ಸುರಿಯಿತು. ಮಂಗಳೂರು ನಗರದಲ್ಲಿ ರಾತ್ರಿ ವೇಳೆ ಕೆಲವು ಕಾಲ ಉತ್ತಮ ಮಳೆ ಸುರಿಯಿತು. ಉಳಿದಂತೆ, ಬೆಳ್ತಂಗಡಿ, ವೇಣೂರು, ಉಜಿರೆ, ಶಿರ್ಲಾಲು, ಗುರಿಪಳ್ಳ, ಸುಳ್ಯ, ನಿಂತಿಕಲ್ಲು, ಐವರ್ನಾಡು, ಬೆಳ್ಳಾರೆ, ಬಂಟ್ವಾಳ, ಪುತ್ತೂರು ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಳೆಯಾದ ವರದಿಯಾಗಿದೆ. ಮಂಗಳೂರಿನಲ್ಲಿ 34.8 ಡಿ. ಸೆ. ಗರಿಷ್ಠ ತಾಪಮಾನ ಮತ್ತು 25.1 ಡಿ. ಸೆ. ಕನಿಷ್ಠ ತಾಪಮಾನ ದಾಖಲಾಗಿತ್ತು. ಬೆಳಗ್ಗೆ ಮೋಡದ ವಾತಾವರಣ ಇತ್ತು. ಬಳಿಕ ಉರಿ ಬಿಸಿಲು ಮತ್ತು…

Read More

ಮುಲ್ಕಿಯಲ್ಲಿ ಹೈಡ್ರೊವಿಡ್ ಗಾಂಜಾ ಜಾಲ ಭೇದನೆ: BCA ವಿದ್ಯಾರ್ಥಿನಿ ಬಂಧನ, ₹35 ಲಕ್ಷ ಮೌಲ್ಯದ ಮಾದಕ ವಸ್ತು ವಶ

ಹೈಡ್ರೊವಿಡ್ ಗಾಂಜಾ ಮಾದಕ ದ್ರವ್ಯವನ್ನು ಮಾರಾಟಕ್ಕೆ ಯತ್ನಿಸಿದ ಆರೋಪಿತೆಯನ್ನು ಬಂಧಿಸಿ 35,00,000/- ಮೌಲ್ಯದ ಸುಮಾರು 1 ಕೆಜಿ 42 ಗ್ರಾಮ್ ಹೈಡ್ರೊವಿಡ್ ಗಾಂಜಾ ಮಾದಕ ದ್ರವ್ಯವನ್ನು ಮಂಗಳೂರು ನಗರದ ಮುಲ್ಕಿ ಪೊಲೀಸರು ವಶಪಡಿಸಿಕೊಂಡಿದ್ದಾರೆ.ನಿನ್ನೆ ಮುಲ್ಕಿ ಠಾಣಾ ವ್ಯಾಪ್ತಿಯ ಮುಲ್ಕಿ ರೈಲ್ವೇ ಸ್ಟೇಷನ್ ರಸ್ತೆಯಲ್ಲಿ ಹೈಡ್ರೊವಿಡ್ ಗಾಂಜಾ ಮಾದಕ ದ್ರವ್ಯವನ್ನು ಮಾರಾಟ ಮಾಡಲು ಸಾಗಾಟ ಮಾಡುತ್ತಿದ್ದ ಆರೋಪಿತೆ ಶಿವಮೊಗ್ಗದ ಸುಹಾನ ಎಂಬಾಕೆಯನ್ನು ವಶಕ್ಕೆ ಪಡೆದು ಅವಳ ಬಳಿ ಇದ್ದ ಸುಮಾರು 35,00,000ಮೌಲ್ಯದ ಸುಮಾರು 1 ಕೆಜಿ 42 ಗ್ರಾಂ…

Read More

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡನೀಯ, ವಿದ್ಯಾರ್ಥಿಗಳ ಭವಿಷ್ಯದೊಂದಿಗೆಚೆಲ್ಲಾಟ: ಹಿಂದಿನ CET ವ್ಯವಸ್ಥೆ ಜಾರಿಗೆ ಒತ್ತಾಯ

ನೀಟ್-ಯುಜಿ 2026 ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ದೇಶದಾದ್ಯಂತ ವಿದ್ಯಾರ್ಥಿಗಳು ಹಾಗೂ ಪೋಷಕರಲ್ಲಿ ಗಂಭೀರ ಆತಂಕ ಸೃಷ್ಟಿಸಿದ್ದು, ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟವಾಡಿದಂತಾಗಿದೆ ಎಂದು ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷರಾದ ಶ್ರೀ.ಕುಳಾಲು ಸುಬಾಶ್ಚಂದ್ರ ಶೆಟ್ಟಿ ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿದ ಅವರು, ಕರ್ನಾಟಕದಲ್ಲಿ ಹಲವು ವರ್ಷಗಳಿಂದ ಯಶಸ್ವಿಯಾಗಿ ನಡೆಯುತ್ತಿದ್ದ CET ವ್ಯವಸ್ಥೆಯನ್ನು ರದ್ದುಪಡಿಸಿ NEET ಜಾರಿಗೊಳಿಸಿದ ಪರಿಣಾಮ ರಾಜ್ಯದ ಸಾವಿರಾರು ವಿದ್ಯಾರ್ಥಿ ವಿದ್ಯಾರ್ಥಿನಿಯರು ಅವಕಾಶ ವಂಚಿತರಾಗಿದ್ದಾರೆ. ವಿಶೇಷವಾಗಿ ಗ್ರಾಮೀಣ ಭಾಗದ ಹಾಗೂ ಕನ್ನಡ ಮಾಧ್ಯಮದ ವಿದ್ಯಾರ್ಥಿಗಳಿಗೆ ಇದರಿಂದ ಹೆಚ್ಚಿನ…

Read More

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡನೆ: ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟ:ಕೇಂದ್ರದ ವಿರುದ್ಧ ಅಸ್ಮ ಹಸೈನಾರ್ ಆಕ್ರೋಶ

ನೀಟ್-ಯುಜಿ 2026 ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ದೇಶದಾದ್ಯಂತ ವಿದ್ಯಾರ್ಥಿಗಳು ಹಾಗೂ ಪೋಷಕರಲ್ಲಿ ತೀವ್ರ ಆತಂಕ ಮತ್ತು ಗೊಂದಲಕ್ಕೆ ಕಾರಣವಾಗಿದ್ದು, ಕೇಂದ್ರ ಸರಕಾರದ ಶಿಕ್ಷಣ ವ್ಯವಸ್ಥೆಯ ಮೇಲಿನ ನಂಬಿಕೆಗೆ ಧಕ್ಕೆ ತಂದಿದೆ ಎಂದು ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮುಖಂಡೆ K. A. ಅಸ್ಮ ಹಸೈನಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿದ ಅವರು, “ಈ ಹಿಂದೆ ರಾಜ್ಯದಲ್ಲಿ ಯಶಸ್ವಿಯಾಗಿ ನಡೆಯುತ್ತಿದ್ದ CET ವ್ಯವಸ್ಥೆಯನ್ನು ಕಡೆಗಣಿಸಿ ಕೇಂದ್ರ ಸರಕಾರ NEET ಪರೀಕ್ಷೆ ಜಾರಿಗೊಳಿಸಿದ ಸಂದರ್ಭದಲ್ಲೇ ಹಲವು…

Read More

ಉಪ್ಪಳದ ಕೊಂಡೆವೂರು ಆಶ್ರಮದಲ್ಲಿ 132 ಅಪರೂಪದ ಕಾಸರಗೋಡು ಕುಳ್ಳನ್ ಹಸುಗಳ ಸಂರಕ್ಷಣೆ

ಉಪ್ಪಳ: ಕಾಸರಗೋಡು ಜಿಲ್ಲೆಯ ಕೊಂಡೆವೂರು ನಿತ್ಯಾನಂದಮಠ ಆಶ್ರಮ ಕೇವಲ ಆಧ್ಯಾತ್ಮಿಕ ಕೇಂದ್ರವಷ್ಟೇ ಅಲ್ಲ, ಅಪರೂಪದ ನಾಡುಜಾತಿ ಪಶು ಸಂರಕ್ಷಣೆ ಹಾಗೂ ಪ್ರಕೃತಿ ಸ್ನೇಹಿ ಜೀವನಶೈಲಿಗೆ ಮಾದರಿಯಾಗಿಯೂ ಗಮನ ಸೆಳೆಯುತ್ತಿದೆ. ವಂಶನಾಶದ ಅಂಚಿನಲ್ಲಿದ್ದ ಅಪರೂಪದ ಕಾಸರಗೋಡು ಕುಳ್ಳನ್ ಹಸು ಜಾತಿಯ 132 ಹಸುಗಳನ್ನು ಆಶ್ರಮದಲ್ಲಿ ಸಂರಕ್ಷಿಸಿ ಪೋಷಿಸಲಾಗುತ್ತಿದೆ. ಒಮ್ಮೆ ಕಾಸರಗೋಡು ಗ್ರಾಮೀಣ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಕಂಡುಬರುತ್ತಿದ್ದ ಈ ನಾಡುಜಾತಿ ಹಸುಗಳು, ಜೀವನಶೈಲಿಯ ಬದಲಾವಣೆ, ಅರಣ್ಯ ನಾಶ ಹಾಗೂ ಸಂಕರ ಜಾತಿಯ ಹಸುಗಳ ಪ್ರಭಾವದಿಂದ ನಿಧಾನವಾಗಿ ನಾಶದ ಅಂಚಿಗೆ ತಲುಪಿದ್ದವು….

Read More

ಆ.21ರಿಂದ ‘ಸಮಾಧಾನ ಸಮಾರೋಹ್-2026’ ವಿಶೇಷ ಲೋಕ ಅದಾಲತ್

ಮಂಗಳೂರು:ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇರುವ ರಾಜಿ ಸಂಧಾನ ಮಾಡಿಕೊಳ್ಳಬಹುದಾದ ಪ್ರಕರಣಗಳನ್ನು ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿಯೇ ಇತ್ಯರ್ಥಪಡಿಸುವ ಉದ್ದೇಶದಿಂದ ಆ.21ರಿಂದ 23ರವರೆಗೆ ‘ಸಮಾಧಾನ ಸಮಾರೋಹ್-2026’ ಹೆಸರಿನಲ್ಲಿ ವಿಶೇಷ ಲೋಕ ಅದಾಲತ್ ಹಮ್ಮಿಕೊಳ್ಳಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಬಸವರಾಜ ತಿಳಿಸಿದ್ದಾರೆ. ಮಂಗಳವಾರ ಜಿಲ್ಲಾ ನ್ಯಾಯಾಲಯದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇರುವ 43 ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸುವ ಗುರಿ ಹೊಂದಲಾಗಿದೆ ಎಂದು ಹೇಳಿದರು. ಅಗತ್ಯವಿದ್ದರೆ…

Read More

ಕಾನ-ಜೋಕಟ್ಟೆ ರಸ್ತೆ ದುರಸ್ಥಿಗೆ ಆಗ್ರಹಿಸಿ ರಸ್ತೆ ತಡೆ ಪ್ರತಿಭಟನೆ

ಸುರತ್ಕಲ್ :ಕಾನ -ತೋಕೂರು -ಜೋಕಟ್ಟೆ ಮುಖ್ಯ ರಸ್ತೆ ಸಂಪೂರ್ಣ ಹದಗೆಟ್ಟಿದ್ದು ಕೂಡಲೇ ಕಾಮಗಾರಿ ನಡೆಸಿ ದುರಸ್ಥಿ ಮಾಡುವಂತೆ ಒತ್ತಾಯಿಸಿ ಇಂದು ಕಾನ ಜಂಕ್ಷನ್ ಬಳಿ ಡಿವೈಎಫ್ಐ ಕಾನ ಘಟಕ, ಆಟೋ ರಿಕ್ಷಾ ಚಾಲಕರ ಸಂಘ (ಸಿಐಟಿಯು) ನಾಗರಿಕ ಹೋರಾಟ ಸಮಿತಿ ಕಾನ ನೇತೃತ್ವದಲ್ಲಿ ರಸ್ತೆ ತಡೆ ಪ್ರತಿಭಟನೆ ನಡೆಯಿತು. ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಡಿವೈಎಫ್ಐ ಜಿಲ್ಲಾಧ್ಯಕ್ಷ ಬಿ.ಕೆ ಇಮ್ತಿಯಾಜ್ ಮಾತನಾಡಿ ಎಂ.ಎಸ್.ಇ.ಝಡ್‌ ಮತ್ತು ಎಂ.ಆರ್.ಪಿ.ಎಲ್. ಕಂಪೆನಿಗಳು ನಿರ್ವಹಿಸಬೇಕಾದ ಮುಖ್ಯ ರಸ್ತೆ ನಿರ್ಲಕ್ಷ್ಯಕ್ಕೆ ಒಳಗಾಗಿದೆ. ಜನಪ್ರತಿನಿದಿನಗಳು ಕಂಪೆನಿಯವರ ಕಿವಿ…

Read More

ಕೋಳಿಮಾಂಸ ದರ ಏರಿಕೆಯಿಂದ ಗ್ರಾಹಕರಿಗೆ ಶಾಕ್: ಹೋಟೆಲ್ ದರವೂ ಗಗನಕ್ಕೇರಿ ಜನರ ಆಕ್ರೋಶ

ಕೇರಳ : ಕೋಳಿಮಾಂಸದ ಬೆಲೆ ಏರಿಕೆಯಿಂದ ಕೇರಳದಲ್ಲಿ ಗ್ರಾಹಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೆಲ ತಿಂಗಳುಗಳ ಹಿಂದೆ ₹90ರಷ್ಟಿದ್ದ ಚಿಕನ್ ದರ ಇದೀಗ ₹180ರಿಂದ ₹185ಕ್ಕೆ ಏರಿಕೆಯಾಗಿ ಸಾಮಾನ್ಯ ಜನರಿಗೆ ಹೊರೆ ತಂದಿದೆ. ಮಾರುಕಟ್ಟೆಯಲ್ಲಿ ದರ ಏರಿಕೆಯಿಂದ ಹೋಟೆಲ್‌ಗಳಲ್ಲಿ ಚಿಕನ್ ಖಾದ್ಯಗಳ ಬೆಲೆಯೂ ಭಾರೀ ಪ್ರಮಾಣದಲ್ಲಿ ಹೆಚ್ಚಳವಾಗಿದೆ. ಹೋಟೆಲ್‌ಗಳಿಗೆ ತೆರಳುವುದೇ ಕಷ್ಟಕರ ಪರಿಸ್ಥಿತಿ ನಿರ್ಮಾಣವಾಗಿದ್ದು, ಅಡುಗೆ ಅನಿಲದ ದರ ಏರಿಕೆ, ಕೋಳಿಮಾಂಸದ ಬೆಲೆ ಹೆಚ್ಚಳ ಸೇರಿದಂತೆ ವಿವಿಧ ಕಾರಣಗಳಿಂದ ಆಹಾರ ಪದಾರ್ಥಗಳ ದರ ಗಗನಕ್ಕೇರಿದೆ ಎಂದು ಹೋಟೆಲ್ ಮಾಲೀಕರು…

Read More
error: Content is protected !!