ಒಲವಿನಹಳ್ಳಿ ಆಶ್ರಮದಲ್ಲಿ ವಿಶ್ವ ಪರಿಸರ ದಿನಾಚರಣೆ; ವೃಕ್ಷಾರೋಪಣ, ಸಂಗೀತ ಕಾರ್ಯಕ್ರಮ ಹಾಗೂ ಸೇವಾ ಕಾರ್ಯ

ಮಂಗಳೂರು: ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ SUEZ Projects Pvt. Ltd. ಹಾಗೂ ಹಾರ್ಮೋನಿ ವೈಬ್ಸ್ ಸಂಗೀತ ಬಳಗದ ಸಂಯುಕ್ತ ಆಶ್ರಯದಲ್ಲಿ ಒಲವಿನಹಳ್ಳಿ ಆಶ್ರಮದಲ್ಲಿ ಪರಿಸರ ಸಂರಕ್ಷಣೆ ಮತ್ತು ಸಾಮಾಜಿಕ ಸೇವೆಗೆ ಒತ್ತು ನೀಡುವ ವಿಶೇಷ ಕಾರ್ಯಕ್ರಮ ನಡೆಯಿತು. SUEZ Projects‌ನ ಆಡಳಿತ ವ್ಯವಸ್ಥಾಪಕ ರಾಕೇಶ್ ಶೆಟ್ಟಿ ಬಿ.ಎಸ್. ಅವರ ನೇತೃತ್ವದಲ್ಲಿ ಹಾಗೂ ಹಾರ್ಮೋನಿ ವೈಬ್ಸ್ ಬಳಗದ ಗೋಪಾಲಕೃಷ್ಣ ಕುಂದರ್ ಅವರ ಸಹಯೋಗದಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಡಾ. ಅನಂತ ಪ್ರಭು ಜಿ., ಶೇಖ್ ಸಲೀಂ ಮತ್ತು ಸತೀಶ್…

Read More

ಪ್ರಿಯದರ್ಶಿನಿ ಯೋಜನೆ ಜಾರಿ: ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಚಾಲನೆ

ಕಾಸರಗೋಡು, ಕೇರಳದ ಯುಡಿಎಫ್ ಸರ್ಕಾರದ ಮಹತ್ವಾಕಾಂಕ್ಷಿ ‘ಪ್ರಿಯದರ್ಶಿನಿ’ ಯೋಜನೆಯಡಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯಕ್ಕೆ ಸೋಮವಾರ ಚಾಲನೆ ದೊರೆಯಿತು. ಉಪ್ಪಳ ಬಸ್ ನಿಲ್ದಾಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಂಜೇಶ್ವರ ಶಾಸಕ ಎ.ಕೆ.ಎಂ. ಅಶ್ರಫ್ ಯೋಜನೆಗೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯ ಜೆ. ಸೋಮಶೇಖರ ಸೇರಿದಂತೆ ಯುಡಿಎಫ್ ಜನಪ್ರತಿನಿಧಿಗಳು, ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು. ರಾಜ್ಯಮಟ್ಟದ ಉದ್ಘಾಟನಾ ಕಾರ್ಯಕ್ರಮವು ತಿರುವನಂತಪುರದಲ್ಲಿ ನಡೆಯಿದ್ದು, ಮುಖ್ಯಮಂತ್ರಿ ವಿ.ಡಿ. ಸತೀಶನ್ ಮಹಿಳಾ ಪ್ರಯಾಣಿಕರೊಬ್ಬರಿಗೆ ‘ಶೂನ್ಯ ದರ’ದ…

Read More

ಕೇರಳದಲ್ಲಿ ಮಹಿಳೆಯರು, ತೃತೀಯಲಿಂಗಿಗಳಿಗೆ ಉಚಿತ ಬಸ್ ಪ್ರಯಾಣ; ‘ಪ್ರಿಯದರ್ಶಿನಿ’ ಯೋಜನೆಗೆ ಚಾಲನೆ

ತಿರುವನಂತಪುರ: ಮಹಿಳೆಯರು ಹಾಗೂ ತೃತೀಯಲಿಂಗಿಗಳ ಸಬಲೀಕರಣದ ಉದ್ದೇಶದಿಂದ ಕೇರಳ ಸರ್ಕಾರ ಜಾರಿಗೆ ತಂದಿರುವ ‘ಪ್ರಿಯದರ್ಶಿನಿ’ ಉಚಿತ ಬಸ್ ಪ್ರಯಾಣ ಯೋಜನೆಗೆ ಸೋಮವಾರ ಅಧಿಕೃತ ಚಾಲನೆ ನೀಡಲಾಗಿದೆ. ತಂಬಾನೂರು ಕೇಂದ್ರ ಬಸ್ ನಿಲ್ದಾಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ವಿ.ಡಿ. ಸತೀಶನ್ ಮಹಿಳೆಯರು ಹಾಗೂ ತೃತೀಯಲಿಂಗಿಗಳ ಪ್ರತಿನಿಧಿಗಳಿಗೆ ಶೂನ್ಯ ಟಿಕೆಟ್‌ಗಳನ್ನು ಹಸ್ತಾಂತರಿಸುವ ಮೂಲಕ ಯೋಜನೆಯನ್ನು ಉದ್ಘಾಟಿಸಿದರು. ಬಳಿಕ ಪಪ್ಪನಂಕೋಡ್ ಡಿಪೋದಿಂದ ತಂಬಾನೂರು ಮೂಲಕ ಪೆರುಮಾತುರವರೆಗೆ ವಿಶೇಷ ಬಸ್ ಪ್ರಯಾಣ ನಡೆಸಲಾಯಿತು. ಮುಖ್ಯಮಂತ್ರಿ ಸೇರಿದಂತೆ 20ಕ್ಕೂ ಹೆಚ್ಚು ಗಣ್ಯರು ಈ ಪ್ರಯಾಣದಲ್ಲಿ…

Read More

ಹೊಂಡಮಯ ರಸ್ತೆಗೆ ಸ್ಥಳೀಯರಿಂದ ಶ್ರಮದಾನ; ಮಣ್ಣು-ಜಲ್ಲಿ ತುಂಬಿಸಿ ಸಂಚಾರಕ್ಕೆ ಅನುಕೂಲ

ಕಡಬ: ಕೊಯಿಲ ಮತ್ತು ರಾಮಕುಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಳಿತ್ತಡಿ–ಏಣಿತ್ತಡ್ಕ–ಕುದುಲೂರು ಸಂಪರ್ಕ ರಸ್ತೆಯಲ್ಲಿನ ಹೊಂಡಗಳನ್ನು ಸ್ಥಳೀಯರು ಶ್ರಮದಾನದ ಮೂಲಕ ಮುಚ್ಚಿಸಿ ಸಂಚಾರಕ್ಕೆ ಅನುಕೂಲ ಕಲ್ಪಿಸಿರುವ ಘಟನೆ ಭಾನುವಾರ ನಡೆದಿದೆ. ಗೋಳಿತ್ತಡಿಯಿಂದ ತ್ರಿವೇಣಿ ಸರ್ಕಲ್‌ವರೆಗೆ ಸುಮಾರು 2.5 ಕಿ.ಮೀ. ರಸ್ತೆ ಸಂಪೂರ್ಣ ಹೊಂಡಮಯಗೊಂಡು ವಾಹನ ಸಂಚಾರಕ್ಕೆ ಅಸಮರ್ಪಕವಾಗಿತ್ತು. ಈ ಹಿನ್ನೆಲೆಯಲ್ಲಿ ಕೊಯಿಲ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಚಿದಾನಂದ ಪಾನ್ಯಾಲು ಅವರ ನೇತೃತ್ವದಲ್ಲಿ ವಾಟ್ಸ್ಆ್ಯಪ್‌ ಗುಂಪು ರಚಿಸಿ ರಸ್ತೆ ದುರಸ್ತಿಗೆ ಸಾರ್ವಜನಿಕರಿಂದ ಆರ್ಥಿಕ ನೆರವು ಸಂಗ್ರಹಿಸಲಾಯಿತು. ಹಲವು ದಾನಿಗಳು…

Read More

ಹೊಂಡಮಯ ರಸ್ತೆಗೆ ಸ್ಥಳೀಯರಿಂದ ಶ್ರಮದಾನ; ಮಣ್ಣು-ಜಲ್ಲಿ ತುಂಬಿಸಿ ಸಂಚಾರಕ್ಕೆ ಅನುಕೂಲ

ಕಡಬ: ಕೊಯಿಲ ಮತ್ತು ರಾಮಕುಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಳಿತ್ತಡಿ–ಏಣಿತ್ತಡ್ಕ–ಕುದುಲೂರು ಸಂಪರ್ಕ ರಸ್ತೆಯಲ್ಲಿನ ಹೊಂಡಗಳನ್ನು ಸ್ಥಳೀಯರು ಶ್ರಮದಾನದ ಮೂಲಕ ಮುಚ್ಚಿಸಿ ಸಂಚಾರಕ್ಕೆ ಅನುಕೂಲ ಕಲ್ಪಿಸಿರುವ ಘಟನೆ ಭಾನುವಾರ ನಡೆದಿದೆ. ಗೋಳಿತ್ತಡಿಯಿಂದ ತ್ರಿವೇಣಿ ಸರ್ಕಲ್‌ವರೆಗೆ ಸುಮಾರು 2.5 ಕಿ.ಮೀ. ರಸ್ತೆ ಸಂಪೂರ್ಣ ಹೊಂಡಮಯಗೊಂಡು ವಾಹನ ಸಂಚಾರಕ್ಕೆ ಅಸಮರ್ಪಕವಾಗಿತ್ತು. ಈ ಹಿನ್ನೆಲೆಯಲ್ಲಿ ಕೊಯಿಲ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಚಿದಾನಂದ ಪಾನ್ಯಾಲು ಅವರ ನೇತೃತ್ವದಲ್ಲಿ ವಾಟ್ಸ್ಆ್ಯಪ್‌ ಗುಂಪು ರಚಿಸಿ ರಸ್ತೆ ದುರಸ್ತಿಗೆ ಸಾರ್ವಜನಿಕರಿಂದ ಆರ್ಥಿಕ ನೆರವು ಸಂಗ್ರಹಿಸಲಾಯಿತು. ಹಲವು ದಾನಿಗಳು…

Read More

ಇಂದಿರಾ ಲಂಕೇಶ್ ನಿಧನ; ಸಾಹಿತ್ಯ, ಮಾಧ್ಯಮ ಕ್ಷೇತ್ರಕ್ಕೆ ಅಪಾರ ನಷ್ಟ

ಬೆಂಗಳೂರು: ಖ್ಯಾತ ಪತ್ರಕರ್ತ, ಸಾಹಿತಿ ಹಾಗೂ ‘ಲಂಕೇಶ್ ಪತ್ರಿಕೆ’ಯ ಸಂಸ್ಥಾಪಕ ದಿವಂಗತ ಪಿ. ಲಂಕೇಶ್ ಅವರ ಪತ್ನಿ ಇಂದಿರಾ ಲಂಕೇಶ್ ಅವರು ಸೋಮವಾರ ಹೃದಯಾಘಾತದಿಂದ ನಿಧನರಾದರು. ಬೆಂಗಳೂರಿನ ಉತ್ತರಹಳ್ಳಿಯಲ್ಲಿರುವ ಪುತ್ರಿ ಕವಿತಾ ಲಂಕೇಶ್ ಅವರ ನಿವಾಸದಲ್ಲಿ ಅವರು ಕೊನೆಯುಸಿರೆಳೆದರು. ಇಂದಿರಾ ಲಂಕೇಶ್ ಅವರು ದಿವಂಗತ ಪತ್ರಕರ್ತೆ ಮತ್ತು ಚಿಂತಕಿ ಗೌರಿ ಲಂಕೇಶ್, ಚಲನಚಿತ್ರ ನಿರ್ದೇಶಕಿ ಕವಿತಾ ಲಂಕೇಶ್ ಹಾಗೂ ನಟ-ನಿರ್ದೇಶಕ ಇಂದ್ರಜಿತ್ ಲಂಕೇಶ್ ಅವರ ತಾಯಿಯಾಗಿದ್ದರು. ಇಂದಿರಾ ಲಂಕೇಶ್ ಅವರ ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ…

Read More

ಅಕ್ರಮ ಜಾನುವಾರು ಸಾಗಾಟದ ಪಿಕಪ್ ಪಲ್ಟಿ; ಪ್ರಕರಣ ದಾಖಲು

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ವಾಹನ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದದಲ್ಲಿ ಜೂನ್ 13ರಂದು ರಾತ್ರಿ ಸಂಭವಿಸಿದೆ. ಮಾಹಿತಿಯ ಪ್ರಕಾರ, ಹೋರಿಗಳನ್ನು ಅಕ್ರಮವಾಗಿ ಪಿಕಪ್ ವಾಹನದಲ್ಲಿ ಸಾಗಿಸಲಾಗುತ್ತಿತ್ತು. ವಾಹನವು ಕುಲ್ಕುಂದ ದಾಟಿ ಸಾಗುತ್ತಿದ್ದ ವೇಳೆ ತಿರುವೊಂದರಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ. ಪಿಕಪ್‌ನಲ್ಲಿ ಎರಡು ಹೋರಿಗಳನ್ನು ಸಾಗಿಸಲಾಗುತ್ತಿದ್ದು, ಅವುಗಳ ಕಾಲುಗಳನ್ನು ಕಟ್ಟಿ ಹಾಕಲಾಗಿತ್ತು ಎನ್ನಲಾಗಿದೆ. ವಾಹನ ಪಲ್ಟಿಯಾದ ಬಳಿಕ ಜಾನುವಾರುಗಳ ಕೈಕಾಲುಗಳನ್ನು ಬಿಚ್ಚಿ ಸ್ಥಳದಿಂದ ಕರೆದೊಯ್ಯಲು ಯತ್ನಿಸಲಾಗಿದೆ ಎಂದು ತಿಳಿದುಬಂದಿದೆ….

Read More

ಪಂತಡ್ಕ ರಸ್ತೆ ಬದಿಯಲ್ಲಿ ತ್ಯಾಜ್ಯ ರಾಶಿ; ಕಸ ಎಸೆಯುವವರ ವಿರುದ್ಧ ಕಠಿಣ ಕ್ರಮಕ್ಕೆ ಸಾರ್ವಜನಿಕರ ಆಗ್ರಹ

ಬಂಟ್ವಾಳ: ನೆಟ್ಲ ಮುಡ್ನೂರು ಗ್ರಾ.ಪಂ ವ್ಯಾಪ್ತಿಯ ಪಂತಡ್ಕದ ರಸ್ತೆ ಬದಿಯಲ್ಲಿ ತ್ಯಾಜ್ಯ ರಾಶಿ ಬಿದ್ದಿದ್ದು, ಎಲ್ಲೆಂದರಲ್ಲಿ ಕಸ ಎಸೆಯುವವರ ವಿರುದ್ಧ ಪಂಚಾಯಿತಿಯು ಕಠಿಣ ಕ್ರಮ ಕೈಗೊಳ್ಳಬೇಕು ಎಂಬ ಆಗ್ರಹ ಸಾರ್ವಜನಿಕ ವಲಯದಿಂದ ಕೇಳಿಬರುತ್ತಿದೆ. ಸಾರ್ವಜನಿಕ ಪ್ರದೇಶಗಳಲ್ಲಿ ಪ್ಲಾಸ್ಟಿಕ್ ಕಸ, ಕೊಳೆತ ಹಣ್ಣು, ತರಕಾರಿ ಮತ್ತು ಹೋಟೆಲ್ ಗಳ ಉಳಿಕೆ ಆಹಾರವನ್ನು ಎಸೆಯಲಾಗುತ್ತಿದೆ. ತ್ಯಾಜ್ಯ ರಾಶಿ ದುರ್ವಾಸನೆ ಬೀರುತ್ತಿದ್ದರೂ ಗ್ರಾಪಂ ಅಧಿಕಾರಿಗಳಾಗಲಿ, ಜನಪ್ರತಿನಿಧಿಗಳಾಗಲಿ ಗಮನ ಹರಿಸಿಲ್ಲ ಎಂದು ಸ್ಥಳೀಯರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ದುರ್ವಾಸನೆ ಈ ಪ್ರದೇಶ ವ್ಯಾಪಿಸಿ…

Read More

ಶ್ರೀರಾಮ ಕುರಿತು ಪ್ರೊ. ಕೆ.ಎಸ್. ಭಗವಾನ್ ಹೇಳಿಕೆ ಖಂಡನೆ; ಸುಮೊಟೊ ಪ್ರಕರಣಕ್ಕೆ ಶಾಸಕ ಅಶೋಕ್ ಕುಮಾರ್ ರೈ ಆಗ್ರಹ

ಪುತ್ತೂರು: ಪ್ರಭು ಶ್ರೀರಾಮಚಂದ್ರರ ಕುರಿತು ಪ್ರೊ. ಕೆ.ಎಸ್. ಭಗವಾನ್ ನೀಡಿರುವ ಅವಹೇಳನಕಾರಿ ಹೇಳಿಕೆಯನ್ನು ಖಂಡಿಸಿರುವ ಪುತ್ತೂರು ಕಾಂಗ್ರೆಸ್ ಶಾಸಕ ಅಶೋಕ್ ಕುಮಾರ್ ರೈ, ಅವರ ವಿರುದ್ಧ ಕೂಡಲೇ ಸುಮೊಟೊ ಪ್ರಕರಣ ದಾಖಲಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಪ್ರೊ. ಭಗವಾನ್ ಯಾವ ಧರ್ಮವನ್ನು ನಂಬುತ್ತಾರೆ ಎಂಬುದು ನಮಗೆ ತಿಳಿದಿಲ್ಲ. ಆದರೆ ಅವರು ಪದೇಪದೇ ಹಿಂದೂ ಧರ್ಮದ ಭಾವನೆಗಳಿಗೆ ಧಕ್ಕೆ ಉಂಟುಮಾಡುವ ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಇಂತಹ ಹೇಳಿಕೆಗಳಿಂದ ಸಮಾಜದಲ್ಲಿ ಅಶಾಂತಿ…

Read More

ಬಿಹಾರ ಪೊಲೀಸ್ ನೇಮಕಾತಿ ಪರೀಕ್ಷೆ: ರೈಲು ಸೌಲಭ್ಯ ಕೊರತೆಗೆ ಅಭ್ಯರ್ಥಿಗಳ ಪ್ರತಿಭಟನೆ

ಪಾಟ್ನಾ: ಬಿಹಾರ ಪೊಲೀಸ್ ನೇಮಕಾತಿ ಪರೀಕ್ಷೆಗೆ ತೆರಳಲು ಸಮರ್ಪಕ ರೈಲು ವ್ಯವಸ್ಥೆ ಕಲ್ಪಿಸದಿರುವುದನ್ನು ಖಂಡಿಸಿ ಸಾವಿರಾರು ಅಭ್ಯರ್ಥಿಗಳು ಪಾಟಲಿಪುತ್ರ ರೈಲು ನಿಲ್ದಾಣದಲ್ಲಿ ಭಾನುವಾರ ಭಾರಿ ಪ್ರತಿಭಟನೆ ನಡೆಸಿದರು. ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದ ಅಭ್ಯರ್ಥಿಗಳು ರೈಲು ಹಳಿಗಳ ಮೇಲೆ ನಿಂತು ರೈಲು ಸಂಚಾರ ತಡೆದು ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಕೆಲವರು ಕಲ್ಲು ತೂರಾಟ ನಡೆಸಿದ ಪರಿಣಾಮ ನಿಲ್ದಾಣದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಯಿತು. ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಅಶ್ರುವಾಯು ಸಿಡಿಸಿದ್ದು, ಪರಿಸ್ಥಿತಿಯನ್ನು ನಿಯಂತ್ರಿಸಲು ಗಾಳಿಯಲ್ಲಿ ಗುಂಡು ಹಾರಿಸಿರುವುದಾಗಿ ವರದಿಯಾಗಿದೆ….

Read More
error: Content is protected !!